AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಡೌನ್​ನಲ್ಲಿ ಕೊಳೆಯುತ್ತಿದೆ ಕೋಮುಲ್​ನ ಹಾಲಿನ ಪೌಡರ್ ಮತ್ತು ಬೆಣ್ಣೆ

ಕೋಲಾರ ಜಿಲ್ಲೆಯಲ್ಲಿ ಹೈನೋದ್ಯಮದ ರಾಜ್ಯದಲ್ಲಿ ಹೆಸರು ಮಾಡಿದೆ. ಕೋಮುಲ್ ಹಾಲು ಒಕ್ಕೂಟದಲ್ಲಿ 2100 ಟನ್ ಹಾಲಿನ ಪುಡಿ ಮತ್ತು 800 ಟನ್ ಬೆಣ್ಣೆ ಮಾರಾಟವಾಗದೆ ಉಳಿದಿದ್ದು, 80 ಕೋಟಿ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ. ಹಾಲು ಉತ್ಪಾದರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ ಕೂಡ ಸಿಗುತ್ತಿಲ್ಲ. ಹೀಗಾಗಿ, ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on: Feb 02, 2025 | 8:24 AM

Share
ಕೋಲಾರ ಜಿಲ್ಲೆಯಲ್ಲಿ ಹೈನೋದ್ಯಮವನ್ನು ನಂಬಿ‌‌ ಸಾವಿರಾರು ಕುಟುಂಬಗಳು ಬದುಕನ್ನು ಕಟ್ಟಿಕೊಂಡಿವೆ.  ಎಂತಹ ಕಷ್ಟದ ಸಮಯದಲ್ಲೂ ಹೈನೋದ್ಯಮ ಜಿಲ್ಲೆಯ ರೈತರ ಕೈ ಬಿಟ್ಟಿಲ್ಲ. ಕೋಲಾರ ಹೈನೋದ್ಯಮ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದುಕೊಂಡಿದೆ. ಆದರೆ, ಸದ್ಯ ಹಾಲು ಒಕ್ಕೂಟಗಳು ನಷ್ಟದತ್ತ ಸಾಗುತ್ತಿವೆ ಎಂದು ಹೇಳಲಾಗುತ್ತಿದೆ.

ಕೋಲಾರ ಜಿಲ್ಲೆಯಲ್ಲಿ ಹೈನೋದ್ಯಮವನ್ನು ನಂಬಿ‌‌ ಸಾವಿರಾರು ಕುಟುಂಬಗಳು ಬದುಕನ್ನು ಕಟ್ಟಿಕೊಂಡಿವೆ. ಎಂತಹ ಕಷ್ಟದ ಸಮಯದಲ್ಲೂ ಹೈನೋದ್ಯಮ ಜಿಲ್ಲೆಯ ರೈತರ ಕೈ ಬಿಟ್ಟಿಲ್ಲ. ಕೋಲಾರ ಹೈನೋದ್ಯಮ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದುಕೊಂಡಿದೆ. ಆದರೆ, ಸದ್ಯ ಹಾಲು ಒಕ್ಕೂಟಗಳು ನಷ್ಟದತ್ತ ಸಾಗುತ್ತಿವೆ ಎಂದು ಹೇಳಲಾಗುತ್ತಿದೆ.

1 / 8
ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಸರಿ ಸುಮಾರು 1200ಕ್ಕೂ ಹೆಚ್ಚು ಹಾಲು ಉತ್ಪಾದಕರ ಸ್ವಸಹಾಯ ಸಂಘಗಳಿವೆ. ಲಕ್ಷಾಂತರ ಕುಟುಂಬಗಳು ಹೈನೋದ್ಯಮದ ಮೇಲೆ ಅವಲಂಭಿತವಾಗಿದ್ದು ಜಿಲ್ಲೆಯಲ್ಲಿ ನಿತ್ಯ ಸುಮಾರು 6 ಲಕ್ಷ ಲೀಟರ್​ಗೂ ಹೆಚ್ಚು ಹಾಲು ಉತ್ಪಾದನೆ ಯಾಗುತ್ತಿದೆ. ಹೀಗಿರುವಾಗ, ಕೋಮುಲ್​ನ​​​ ಹಾಲಿನ ಪೌಡರ್ ಹಾಗೂ ಬೆಣ್ಣೆ ಮಾರಾಟವಾಗದೆ ಟನ್​ ಗಟ್ಟಲೆ ಕೆಎಂಎಫ್​ನ ಗೋಡೋನ್​ನಲ್ಲಿ ಕೊಳೆಯುತ್ತಿದೆ.

ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಸರಿ ಸುಮಾರು 1200ಕ್ಕೂ ಹೆಚ್ಚು ಹಾಲು ಉತ್ಪಾದಕರ ಸ್ವಸಹಾಯ ಸಂಘಗಳಿವೆ. ಲಕ್ಷಾಂತರ ಕುಟುಂಬಗಳು ಹೈನೋದ್ಯಮದ ಮೇಲೆ ಅವಲಂಭಿತವಾಗಿದ್ದು ಜಿಲ್ಲೆಯಲ್ಲಿ ನಿತ್ಯ ಸುಮಾರು 6 ಲಕ್ಷ ಲೀಟರ್​ಗೂ ಹೆಚ್ಚು ಹಾಲು ಉತ್ಪಾದನೆ ಯಾಗುತ್ತಿದೆ. ಹೀಗಿರುವಾಗ, ಕೋಮುಲ್​ನ​​​ ಹಾಲಿನ ಪೌಡರ್ ಹಾಗೂ ಬೆಣ್ಣೆ ಮಾರಾಟವಾಗದೆ ಟನ್​ ಗಟ್ಟಲೆ ಕೆಎಂಎಫ್​ನ ಗೋಡೋನ್​ನಲ್ಲಿ ಕೊಳೆಯುತ್ತಿದೆ.

2 / 8
ಕೋಮುಲ್​ ಕಳೆದ 8 ತಿಂಗಳಿಂದ ನಷ್ಟಕ್ಕೆ ಸಿಲಿಕಿದೆ. ಇದರ ಬೆನ್ನಲ್ಲೇ ಕೋಮುಲ್​ನ​ 2100 ಟನ್ ಹಾಲಿನ ಪೌಡರ್ ಹಾಗೂ 800 ಟನ್ ಬೆಣ್ಣೆ ಮಾರಾಟವಾಗಿಲ್ಲ. 2100 ಟನ್ ಹಾಲಿನ ಪೌಡರ್​ನ ಒಟ್ಟು ಮೌಲ್ಯ 50 ಕೋಟಿ‌ ಆಗಿದ್ದು, 800 ಟನ್ ಬೆಣ್ಣೆಯ ಮೌಲ್ಯ ಬರೋಬ್ಬರಿ 30 ಕೋಟಿಯಷ್ಟಿದೆ. ಸುಮಾರು 80 ಕೋಟಿಯಷ್ಟು ಮೌಲ್ಯದ ಹಾಲಿಪುಡಿ ಮತ್ತು ಬೆಣ್ಣೆ ಮಾರಾಟವಾಗದೆ ಇರುವುದು ಕೋಮುಲ್​ ಆಡಳಿತ ಮಂಡಳಿಯ ಚಿಂತೆಗೆ ಕಾರಣವಾಗಿದೆ. ಇದು ಕೇವಲ ಕೋಮುಲ್​ನ ಕಥೆಯಲ್ಲ, ರಾಜ್ಯದ ಎಲ್ಲ ಒಕ್ಕೂಟದಲ್ಲೂ ಇದೇ ಪರಿಸ್ಥಿತಿ ಇದೆ.

ಕೋಮುಲ್​ ಕಳೆದ 8 ತಿಂಗಳಿಂದ ನಷ್ಟಕ್ಕೆ ಸಿಲಿಕಿದೆ. ಇದರ ಬೆನ್ನಲ್ಲೇ ಕೋಮುಲ್​ನ​ 2100 ಟನ್ ಹಾಲಿನ ಪೌಡರ್ ಹಾಗೂ 800 ಟನ್ ಬೆಣ್ಣೆ ಮಾರಾಟವಾಗಿಲ್ಲ. 2100 ಟನ್ ಹಾಲಿನ ಪೌಡರ್​ನ ಒಟ್ಟು ಮೌಲ್ಯ 50 ಕೋಟಿ‌ ಆಗಿದ್ದು, 800 ಟನ್ ಬೆಣ್ಣೆಯ ಮೌಲ್ಯ ಬರೋಬ್ಬರಿ 30 ಕೋಟಿಯಷ್ಟಿದೆ. ಸುಮಾರು 80 ಕೋಟಿಯಷ್ಟು ಮೌಲ್ಯದ ಹಾಲಿಪುಡಿ ಮತ್ತು ಬೆಣ್ಣೆ ಮಾರಾಟವಾಗದೆ ಇರುವುದು ಕೋಮುಲ್​ ಆಡಳಿತ ಮಂಡಳಿಯ ಚಿಂತೆಗೆ ಕಾರಣವಾಗಿದೆ. ಇದು ಕೇವಲ ಕೋಮುಲ್​ನ ಕಥೆಯಲ್ಲ, ರಾಜ್ಯದ ಎಲ್ಲ ಒಕ್ಕೂಟದಲ್ಲೂ ಇದೇ ಪರಿಸ್ಥಿತಿ ಇದೆ.

3 / 8
ಕೋಲಾರ ಜಿಲ್ಲೆಯಲ್ಲಿ ನಿತ್ಯ ಸರಿ ಸುಮಾರು ಆರು ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಸರಾಸರಿ 11 ಲಕ್ಷ ಲೀಟರ್ ಹಾಲು ಪ್ರತಿನಿತ್ಯ ಉತ್ಪಾದನೆಯಾಗುತ್ತಿತ್ತು. ಇಂಥಹ ಸಂದರ್ಭದಲ್ಲಿ ಒಕ್ಕೂಟಕ್ಕೆ ಬಂದ ನೂರರಷ್ಟು ಹಾಲು ಮಾರಾಟವಾಗುತ್ತಿರಲಿಲ್ಲ.

ಕೋಲಾರ ಜಿಲ್ಲೆಯಲ್ಲಿ ನಿತ್ಯ ಸರಿ ಸುಮಾರು ಆರು ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಸರಾಸರಿ 11 ಲಕ್ಷ ಲೀಟರ್ ಹಾಲು ಪ್ರತಿನಿತ್ಯ ಉತ್ಪಾದನೆಯಾಗುತ್ತಿತ್ತು. ಇಂಥಹ ಸಂದರ್ಭದಲ್ಲಿ ಒಕ್ಕೂಟಕ್ಕೆ ಬಂದ ನೂರರಷ್ಟು ಹಾಲು ಮಾರಾಟವಾಗುತ್ತಿರಲಿಲ್ಲ.

4 / 8
ಹಾಲು, ಮೊಸಲು, ಬೆಣ್ಣೆ, ಹಾಗೂ ಯುಹೆಚ್​ಟಿ ಮಿಲ್ಕ್​ಗೆ ಹೋಗಿ ಸರಿಸುಮಾರು ಒಂದುವರೆ ಲಕ್ಷ ಲೀಟರ್​ನಷ್ಟು ಹಾಲು ಉಳಿಯುತ್ತಿತ್ತು. ಈ ವೇಳೆ ಒಕ್ಕೂಟದ ನಷ್ಟದ ಸುಳಿಗೆ ಸಿಲುಕುವುದನ್ನು ತಪ್ಪಿಸಿಕೊಳ್ಳಲು ಉಳಿದ ಹಾಲನ್ನು ಪೌಡರ್​ ಮಾಡಲಾಗುತ್ತಿತ್ತು. ಆದರೆ. ಸದ್ಯದ ಪರಿಸ್ಥಿತಿಯಲ್ಲಿ ಹಾಲಿನ ಪೌಡರ್​ಗೆ ಬೇಡಿಕೆ ಇಲ್ಲದೆ ಕಾರಣ ಪೌಡರ್ ಗೋಡೌನ್​ನಲ್ಲಿ ಹಾಗೆ ಉಳಿದಿದೆ.

ಹಾಲು, ಮೊಸಲು, ಬೆಣ್ಣೆ, ಹಾಗೂ ಯುಹೆಚ್​ಟಿ ಮಿಲ್ಕ್​ಗೆ ಹೋಗಿ ಸರಿಸುಮಾರು ಒಂದುವರೆ ಲಕ್ಷ ಲೀಟರ್​ನಷ್ಟು ಹಾಲು ಉಳಿಯುತ್ತಿತ್ತು. ಈ ವೇಳೆ ಒಕ್ಕೂಟದ ನಷ್ಟದ ಸುಳಿಗೆ ಸಿಲುಕುವುದನ್ನು ತಪ್ಪಿಸಿಕೊಳ್ಳಲು ಉಳಿದ ಹಾಲನ್ನು ಪೌಡರ್​ ಮಾಡಲಾಗುತ್ತಿತ್ತು. ಆದರೆ. ಸದ್ಯದ ಪರಿಸ್ಥಿತಿಯಲ್ಲಿ ಹಾಲಿನ ಪೌಡರ್​ಗೆ ಬೇಡಿಕೆ ಇಲ್ಲದೆ ಕಾರಣ ಪೌಡರ್ ಗೋಡೌನ್​ನಲ್ಲಿ ಹಾಗೆ ಉಳಿದಿದೆ.

5 / 8
ಒಂದು ಕೆ.ಜಿ ಹಾಲಿನ ಪೌಡರ್​ ತಯಾರಿಸಲು 240 ರೂಪಾಯಿ ಖರ್ಚು ಆಗುತ್ತದೆ. ಉತ್ಪಾದನೆಗಿಂತ ಕಡಿಮೆ ಬೆಲೆಗೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಇನ್ನು, ಬೆಣ್ಣೆಯಿಂದ ತುಪ್ಪ ತಯಾರಿಸುವುದು ಕೂಡ ಒಕ್ಕೂಟಕ್ಕೆ ದುಬಾರಿಯಾಗಿದೆ.

ಒಂದು ಕೆ.ಜಿ ಹಾಲಿನ ಪೌಡರ್​ ತಯಾರಿಸಲು 240 ರೂಪಾಯಿ ಖರ್ಚು ಆಗುತ್ತದೆ. ಉತ್ಪಾದನೆಗಿಂತ ಕಡಿಮೆ ಬೆಲೆಗೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಇನ್ನು, ಬೆಣ್ಣೆಯಿಂದ ತುಪ್ಪ ತಯಾರಿಸುವುದು ಕೂಡ ಒಕ್ಕೂಟಕ್ಕೆ ದುಬಾರಿಯಾಗಿದೆ.

6 / 8
ಒಕ್ಕೂಟಗಳು ನಷ್ಟದ ಸುಳಿಗೆ ಸಿಲುಕುತ್ತಿರುವ ಬೆನ್ನಲ್ಲೇ ಸರ್ಕಾರ ಈಗಾಗಲೇ ಎರಡು ಬಾರಿ ರೈತರ  ಹಾಲಿನ ದರ ಏರಿಕೆ ಮಾಡಿದೆ. ಜೊತೆಗೆ, ಸರ್ಕಾರ ಕಳೆದ 5 ತಿಂಗಳಿನಿಂದ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿಲ್ಲ. ಕೋಲಾರ ಜಿಲ್ಲೆಯೊಂದರಲ್ಲೇ ಸುಮಾರು 44 ಕೋಟಿ ರೂಪಾಯಿ ಪ್ರೋತ್ಸಾಹ ಧನ ಬಾಕಿ ಬರಬೇಕಾಗಿದೆ.

ಒಕ್ಕೂಟಗಳು ನಷ್ಟದ ಸುಳಿಗೆ ಸಿಲುಕುತ್ತಿರುವ ಬೆನ್ನಲ್ಲೇ ಸರ್ಕಾರ ಈಗಾಗಲೇ ಎರಡು ಬಾರಿ ರೈತರ ಹಾಲಿನ ದರ ಏರಿಕೆ ಮಾಡಿದೆ. ಜೊತೆಗೆ, ಸರ್ಕಾರ ಕಳೆದ 5 ತಿಂಗಳಿನಿಂದ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿಲ್ಲ. ಕೋಲಾರ ಜಿಲ್ಲೆಯೊಂದರಲ್ಲೇ ಸುಮಾರು 44 ಕೋಟಿ ರೂಪಾಯಿ ಪ್ರೋತ್ಸಾಹ ಧನ ಬಾಕಿ ಬರಬೇಕಾಗಿದೆ.

7 / 8
ಸರ್ಕಾರ ಕೂಡಲೇ ಹಾಲು ಒಕ್ಕೂಟಗಳನ್ನು ನಷ್ಟದ ಸುಳಿಯಿಂದ ಪಾರು ಮಾಡಲು ಬೇಕಾದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುವುದು ಹಾಲು ಉತ್ಪಾದಕರ ಆಗ್ರಹವಾಗಿದೆ.

ಸರ್ಕಾರ ಕೂಡಲೇ ಹಾಲು ಒಕ್ಕೂಟಗಳನ್ನು ನಷ್ಟದ ಸುಳಿಯಿಂದ ಪಾರು ಮಾಡಲು ಬೇಕಾದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುವುದು ಹಾಲು ಉತ್ಪಾದಕರ ಆಗ್ರಹವಾಗಿದೆ.

8 / 8
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!