AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದ ನೀರು: ನಡುಗಡ್ಡೆಯಲ್ಲಿರುವವರ ಎದೆಬಡಿತ ಹೆಚ್ಚಳ

ಕೊಪ್ಪಳ, ಆಗಸ್ಟ್ 1: ತುಂಗಭದ್ರಾ ನದಿ ಮಲೆನಾಡಿನ ಮಳೆಗೆ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡುತ್ತಿರುವುದರಿಂದ, ಡ್ಯಾಂ ಕೆಳಬಾಗದಲ್ಲಿನ ಜನರಿಗೆ ಸಂಕಷ್ಟ ಆರಂಭವಾಗಿದೆ. ನದಿದಡಲ್ಲಿರುವ ಅನೇಕ ಸುಪ್ರಸಿದ್ದ ದೇವಸ್ಥಾನಗಳ ಸ್ನಾನಘಟ್ಟಗಳು ಜಲಾವೃತಗೊಂಡಿದ್ದರೆ, ಇನ್ನೊಂದಡೆ ನಡುಗಡ್ಡೆಯಲ್ಲಿ ಅನೇಕರಿದ್ದು, ಅವರಿಗೂ ಕೂಡಾ ಇದೀಗ ಸಂಕಷ್ಟ ಆರಂಭವಾಗಿದೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on: Aug 01, 2024 | 2:02 PM

Share
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿಯಿರೋ ಋಷ್ಯಮುಕ, ಕೊಪ್ಪಳ ತಾಲೂಕಿನ ಹುಲಗಿಯಲ್ಲಿರುವ ಸುಪ್ರಸಿದ್ದ ಹುಲಿಗೆಮ್ಮ ದೇವಸ್ಥಾನದಲ್ಲಿ ಅನೇಕ ಕಡೆ ಅಂಗಡಿಗಳು, ಸ್ನಾನಘಟ್ಟಗಳು ಜಲಾವೃತಗೊಂಡಿವೆ. ಇನ್ನು ಹಲವಡೆ ನಡುಗಡ್ಡೆಗಳಿದ್ದು, ನಡುಗಡ್ಡೆಯಲ್ಲಿರೋ ಜನರಿಗೆ, ಹೆಚ್ಚುತ್ತಿರುವ ನೀರಿನ ಪ್ರಮಾಣ ಆತಂಕ ಹುಟ್ಟಿಸಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿಯಿರೋ ಋಷ್ಯಮುಕ, ಕೊಪ್ಪಳ ತಾಲೂಕಿನ ಹುಲಗಿಯಲ್ಲಿರುವ ಸುಪ್ರಸಿದ್ದ ಹುಲಿಗೆಮ್ಮ ದೇವಸ್ಥಾನದಲ್ಲಿ ಅನೇಕ ಕಡೆ ಅಂಗಡಿಗಳು, ಸ್ನಾನಘಟ್ಟಗಳು ಜಲಾವೃತಗೊಂಡಿವೆ. ಇನ್ನು ಹಲವಡೆ ನಡುಗಡ್ಡೆಗಳಿದ್ದು, ನಡುಗಡ್ಡೆಯಲ್ಲಿರೋ ಜನರಿಗೆ, ಹೆಚ್ಚುತ್ತಿರುವ ನೀರಿನ ಪ್ರಮಾಣ ಆತಂಕ ಹುಟ್ಟಿಸಿದೆ.

1 / 5
ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟೂಬಿಡದೇ ಮಳೆ ಸುರಿಯುತ್ತಿದೆ. ಇದರಿಂದ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರೋ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಡ್ಯಾಂ ನಿಂದ ಜಲಾಶಯಕ್ಕೆ ಅಪಾರ ಪ್ರಮಾಣದ ನೀರನ್ನು ಬಿಡಲಾಗುತ್ತಿದೆ. ತುಂಗಭದ್ರಾ ಜಲಾಶಯಕ್ಕೆ ಒಂದುವರೆ ಲಕ್ಷ ಕ್ಯೂಸೆಕ್ ಗೂ ಹೆಚ್ಚು ಒಳಹರಿವು ಇರೋದರಿಂದ, ಸದ್ಯ ಡ್ಯಾಂನಲ್ಲಿ ನೀರು ಸಂಗ್ರಹಮಾಡದೇ ನೇರವಾಗಿ ನದಿಗೆ ಬಿಡಲಾಗುತ್ತಿದೆ.

ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟೂಬಿಡದೇ ಮಳೆ ಸುರಿಯುತ್ತಿದೆ. ಇದರಿಂದ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರೋ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಡ್ಯಾಂ ನಿಂದ ಜಲಾಶಯಕ್ಕೆ ಅಪಾರ ಪ್ರಮಾಣದ ನೀರನ್ನು ಬಿಡಲಾಗುತ್ತಿದೆ. ತುಂಗಭದ್ರಾ ಜಲಾಶಯಕ್ಕೆ ಒಂದುವರೆ ಲಕ್ಷ ಕ್ಯೂಸೆಕ್ ಗೂ ಹೆಚ್ಚು ಒಳಹರಿವು ಇರೋದರಿಂದ, ಸದ್ಯ ಡ್ಯಾಂನಲ್ಲಿ ನೀರು ಸಂಗ್ರಹಮಾಡದೇ ನೇರವಾಗಿ ನದಿಗೆ ಬಿಡಲಾಗುತ್ತಿದೆ.

2 / 5
ಇಷ್ಟು ದಿನ ಡ್ಯಾಂಗೆ ಹರಿದು ಬರ್ತಿದ್ದ ನೀರನ್ನು ನೋಡಿ ಸಂತಸಪಟ್ಟಿದ್ದ ಡ್ಯಾಂ ಕೆಳಬಾಗದ ಜನರು, ಇದೀಗ ಸಂಕಷ್ಟ ಪಡುವಂತಾಗಿದೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳ ತಾಲೂಕಿನ ಹುಲಗಿಯಲ್ಲಿರುವ ಸುಪ್ರಸಿದ್ದ ಹುಲಿಗೆಮ್ಮ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಇನ್ನೊಂದಡೆ ನದಿ ದಡದಲ್ಲಿರುವ ಕೇಶಮುಂಡನ ಮಾಡೋ ಕೋಣೆ ಕೂಡಾ ಜಲಾವೃತಗೊಂಡಿದೆ. ಇನ್ನು ನೀರಿನ ಪ್ರಮಾಣ ಹೆಚ್ಚಾದ್ರೆ ಅನೇಕ ಅಂಗಡಿಗಳು ಕೂಡಾ ಸಂಪೂರ್ಣವಾಗಿ ಜಲಾವೃತಗೊಳ್ಳುವ ಆತಂಕ ಎದುರಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ನದಿಗೆ ಭಕ್ತರ ಸ್ನಾನಕ್ಕೆ  ನಿರ್ಬಂಧ ವಿಧಿಸಲಾಗಿದೆ.

ಇಷ್ಟು ದಿನ ಡ್ಯಾಂಗೆ ಹರಿದು ಬರ್ತಿದ್ದ ನೀರನ್ನು ನೋಡಿ ಸಂತಸಪಟ್ಟಿದ್ದ ಡ್ಯಾಂ ಕೆಳಬಾಗದ ಜನರು, ಇದೀಗ ಸಂಕಷ್ಟ ಪಡುವಂತಾಗಿದೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳ ತಾಲೂಕಿನ ಹುಲಗಿಯಲ್ಲಿರುವ ಸುಪ್ರಸಿದ್ದ ಹುಲಿಗೆಮ್ಮ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಇನ್ನೊಂದಡೆ ನದಿ ದಡದಲ್ಲಿರುವ ಕೇಶಮುಂಡನ ಮಾಡೋ ಕೋಣೆ ಕೂಡಾ ಜಲಾವೃತಗೊಂಡಿದೆ. ಇನ್ನು ನೀರಿನ ಪ್ರಮಾಣ ಹೆಚ್ಚಾದ್ರೆ ಅನೇಕ ಅಂಗಡಿಗಳು ಕೂಡಾ ಸಂಪೂರ್ಣವಾಗಿ ಜಲಾವೃತಗೊಳ್ಳುವ ಆತಂಕ ಎದುರಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ನದಿಗೆ ಭಕ್ತರ ಸ್ನಾನಕ್ಕೆ ನಿರ್ಬಂಧ ವಿಧಿಸಲಾಗಿದೆ.

3 / 5
ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ತುಂಗಭದ್ರಾ ನದಿ ಹರಿಯುವ ಪಾತ್ರದಲ್ಲಿ ಅನೇಕ ನಡುಗಡ್ಡೆಗಳಿವೆ. ಅನೇಕ ಐತಿಹಾಸಿಕ ಸ್ಥಳಗಳು ಇವೆ. ಐತಿಹಾಸಿಕ ಸ್ಥಳಗಳು ಜಲಾವೃತಗೊಂಡಿದ್ದರೆ, ನಡುಗೆಡ್ಡೆಯಲ್ಲಿರುವ ಜನರಿಗೆ ಇದೀಗ ಸಂಕಷ್ಟ ಆರಂಭವಾಗಿದೆ. ಹೌದು ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿಯಿರೋ ಐತಿಹಾಸಿಕ ಋಷ್ಯಮುಖ ಪರ್ವತದಲ್ಲಿ ಹರಿದಾಸ್ ಬಾಬಾ, ಆನಂದಗಿರಿ ಬಾಬಾ ಸೇರಿ ನಾಲ್ವರು ವಾಸವಾಗಿದ್ದಾರೆ. ಪರ್ವತದಲ್ಲಿರುವ ರಾಮ, ಸೀತೆ, ಆಂಜನೇಯ ದೇವರ ದೇವಸ್ಥಾನಗಳಿಗೆ ಪೂಜೆ ಸಲ್ಲಿಸುವ ಇವರೆಲ್ಲಾ ಪರ್ವತದಲ್ಲಿಯೇ ವಾಸವಿದ್ದಾರೆ. ಆದರೆ ಇದೀಗ ಇಡೀ ಪರ್ವತವನ್ನು ತುಂಗಭದ್ರಾ ನದಿ ನೀರು ಆವರಿಸಿಕೊಂಡಿದೆ. ಹೀಗಾಗಿ ನಡುಗಡ್ಡೆಯಲ್ಲಿರುವ ನಾಲ್ವರಿಗೆ ಆತಂಕ ಆರಂಭವಾಗಿದೆ. ನೀರಿನ ಪ್ರಮಾಣ ಇನ್ನು ಹೆಚ್ಚಾದ್ರೆ ರುಷ್ಯಮುಖ ಪರ್ವತಕ್ಕೆ ನೀರು ನುಗ್ಗುವ ಆತಂಕ ಎದುರಾಗಿದೆ. ಸದ್ಯ ತಮಗೆ ಯಾವುದೇ ಸಮಸ್ಯೆ ಇಲ್ಲ. ಎರಡು ತಿಂಗಳಿಗೆ ಆಗುವಷ್ಟು ನಮ್ಮಲ್ಲಿ ದವಸ ಧಾನ್ಯಗಳು ಇವೆ. ನಾವು ಇಲ್ಲಿಯೇ ಸುರಕ್ಷಿತವಾಗಿದ್ದೇವೆ ಅಂತ ನಡುಗಡ್ಡೆಯಲ್ಲಿರುವ ಬಾಬಾಗಳು ಹೇಳುತ್ತಿದ್ದಾರೆ. ಆದರೆ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಅವರು ಹೊರಗೆ ಬರೋದು ಕಷ್ಟವಾಗಲಿದೆ.

ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ತುಂಗಭದ್ರಾ ನದಿ ಹರಿಯುವ ಪಾತ್ರದಲ್ಲಿ ಅನೇಕ ನಡುಗಡ್ಡೆಗಳಿವೆ. ಅನೇಕ ಐತಿಹಾಸಿಕ ಸ್ಥಳಗಳು ಇವೆ. ಐತಿಹಾಸಿಕ ಸ್ಥಳಗಳು ಜಲಾವೃತಗೊಂಡಿದ್ದರೆ, ನಡುಗೆಡ್ಡೆಯಲ್ಲಿರುವ ಜನರಿಗೆ ಇದೀಗ ಸಂಕಷ್ಟ ಆರಂಭವಾಗಿದೆ. ಹೌದು ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿಯಿರೋ ಐತಿಹಾಸಿಕ ಋಷ್ಯಮುಖ ಪರ್ವತದಲ್ಲಿ ಹರಿದಾಸ್ ಬಾಬಾ, ಆನಂದಗಿರಿ ಬಾಬಾ ಸೇರಿ ನಾಲ್ವರು ವಾಸವಾಗಿದ್ದಾರೆ. ಪರ್ವತದಲ್ಲಿರುವ ರಾಮ, ಸೀತೆ, ಆಂಜನೇಯ ದೇವರ ದೇವಸ್ಥಾನಗಳಿಗೆ ಪೂಜೆ ಸಲ್ಲಿಸುವ ಇವರೆಲ್ಲಾ ಪರ್ವತದಲ್ಲಿಯೇ ವಾಸವಿದ್ದಾರೆ. ಆದರೆ ಇದೀಗ ಇಡೀ ಪರ್ವತವನ್ನು ತುಂಗಭದ್ರಾ ನದಿ ನೀರು ಆವರಿಸಿಕೊಂಡಿದೆ. ಹೀಗಾಗಿ ನಡುಗಡ್ಡೆಯಲ್ಲಿರುವ ನಾಲ್ವರಿಗೆ ಆತಂಕ ಆರಂಭವಾಗಿದೆ. ನೀರಿನ ಪ್ರಮಾಣ ಇನ್ನು ಹೆಚ್ಚಾದ್ರೆ ರುಷ್ಯಮುಖ ಪರ್ವತಕ್ಕೆ ನೀರು ನುಗ್ಗುವ ಆತಂಕ ಎದುರಾಗಿದೆ. ಸದ್ಯ ತಮಗೆ ಯಾವುದೇ ಸಮಸ್ಯೆ ಇಲ್ಲ. ಎರಡು ತಿಂಗಳಿಗೆ ಆಗುವಷ್ಟು ನಮ್ಮಲ್ಲಿ ದವಸ ಧಾನ್ಯಗಳು ಇವೆ. ನಾವು ಇಲ್ಲಿಯೇ ಸುರಕ್ಷಿತವಾಗಿದ್ದೇವೆ ಅಂತ ನಡುಗಡ್ಡೆಯಲ್ಲಿರುವ ಬಾಬಾಗಳು ಹೇಳುತ್ತಿದ್ದಾರೆ. ಆದರೆ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಅವರು ಹೊರಗೆ ಬರೋದು ಕಷ್ಟವಾಗಲಿದೆ.

4 / 5
ಮಲೆನಾಡಿನಲ್ಲಿ ಮಳೆ ಹೀಗೆಯೇ ಮುಂದುವರಿದರೆ ಡ್ಯಾಂಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತದೆ. ಇದರಿಂದ ಡ್ಯಾಂ ಕೆಳೆಬಾಗದಲ್ಲಿರೋ ಜನರಿಗೆ ಆತಂಕ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಡುಗಡ್ಡೆಯಲ್ಲಿರುವವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಮಲೆನಾಡಿನಲ್ಲಿ ಮಳೆ ಹೀಗೆಯೇ ಮುಂದುವರಿದರೆ ಡ್ಯಾಂಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತದೆ. ಇದರಿಂದ ಡ್ಯಾಂ ಕೆಳೆಬಾಗದಲ್ಲಿರೋ ಜನರಿಗೆ ಆತಂಕ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಡುಗಡ್ಡೆಯಲ್ಲಿರುವವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

5 / 5
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ