Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಸಿದ್ದೇಶ್ವರ ಜಾತ್ರಾ ಮಹಾದಾಸೋಹದಲ್ಲಿ ಸಾವಯವ ಬೆಲ್ಲದಿಂದ 14 ಲಕ್ಷ ಜಿಲೇಬಿ ತಯಾರು

ಕೊಪ್ಪಳದ ಗವಿಮಠ ಜಾತ್ರೆಗೆ ಬರುವ ಲಕ್ಷಾಂತರ ಭಕ್ತರು ಜಿಲೇಬಿ ಸವಿಯಲಿದ್ದಾರೆ. ರಾಯಚೂರಿನ ಸಿಂಧನೂರಿನ ವಿಜಯಕುಮಾರ್ ಮತ್ತು ಅವರ ತಂಡ ಜಿಲೇಬಿ ತಯಾರಿಸುತ್ತಿದೆ. 12-14 ಲಕ್ಷ ಜಿಲೇಬಿಗಳನ್ನು ತಯಾರಿಸಲಾಗುತ್ತಿದೆ. 50 ಕ್ವಿಂಟಲ್ ಹಿಟ್ಟು, 130 ಕ್ವಿಂಟಲ್ ಬೆಲ್ಲ, ಹಾಗೂ ಇತರ ಅನೇಕ ಪದಾರ್ಥಗಳನ್ನು ಬಳಸಲಾಗುತ್ತಿದೆ. 120 ಬಾಣಸಿಗರು ಮತ್ತು 150 ಸಹಾಯಕರು ಈ ದೊಡ್ಡ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Jan 15, 2025 | 7:44 AM

ದಕ್ಷಿಣ ಭಾರತದ ಕುಂಭಮೇಳವೆಂದೆ ಪ್ರಖ್ಯಾತಿ ಪಡೆದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಧಾರ್ಮಿಕ ಸಾಮಾಜಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂಗಮ. ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ನಾಡಿನ ಅನೇಕ ಭಕ್ತರು ವಿವಿಧ ವಿಶಿಷ್ಟ ಭಕ್ತಿ ಸೇವೆಗಳನ್ನು ಸಲ್ಲಿಸುವುದರ ಮೂಲಕ ಭಕ್ತಿ ಅರ್ಪಿಸುವದು ಅಪ್ಯಾಯಮಾನ.

ದಕ್ಷಿಣ ಭಾರತದ ಕುಂಭಮೇಳವೆಂದೆ ಪ್ರಖ್ಯಾತಿ ಪಡೆದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಧಾರ್ಮಿಕ ಸಾಮಾಜಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂಗಮ. ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ನಾಡಿನ ಅನೇಕ ಭಕ್ತರು ವಿವಿಧ ವಿಶಿಷ್ಟ ಭಕ್ತಿ ಸೇವೆಗಳನ್ನು ಸಲ್ಲಿಸುವುದರ ಮೂಲಕ ಭಕ್ತಿ ಅರ್ಪಿಸುವದು ಅಪ್ಯಾಯಮಾನ.

1 / 6
ರಾಯಚೂರು ಜಿಲ್ಲೆಯ ಸಿಂಧನೂರಿನ ವಿಜಯಕುಮಾರ್ ಹಾಗೂ ಗೆಳೆಯರ ಬಳಗದ ಹತ್ತು ಜನರ ತಂಡ ನಿರಂತರವಾಗಿ ಸಮಾಜ ಸೇವೆ ಕಾರ್ಯವನ್ನು ಮಾಡುತ್ತಿದ್ದು, ಪ್ರತಿ ವರ್ಷವೂ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಸೇವೆ ಮಾಡಿಕೊಂಡು ಬರುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೆಳೆಯರ ಬಳಗ ವಿಶೇಷವಾಗಿ ಮಹಾದಾಸೋಹಕ್ಕೆ ಸೇವೆಯನ್ನು ಸಲ್ಲಿಸುತ್ತಿದೆ.

ರಾಯಚೂರು ಜಿಲ್ಲೆಯ ಸಿಂಧನೂರಿನ ವಿಜಯಕುಮಾರ್ ಹಾಗೂ ಗೆಳೆಯರ ಬಳಗದ ಹತ್ತು ಜನರ ತಂಡ ನಿರಂತರವಾಗಿ ಸಮಾಜ ಸೇವೆ ಕಾರ್ಯವನ್ನು ಮಾಡುತ್ತಿದ್ದು, ಪ್ರತಿ ವರ್ಷವೂ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಸೇವೆ ಮಾಡಿಕೊಂಡು ಬರುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೆಳೆಯರ ಬಳಗ ವಿಶೇಷವಾಗಿ ಮಹಾದಾಸೋಹಕ್ಕೆ ಸೇವೆಯನ್ನು ಸಲ್ಲಿಸುತ್ತಿದೆ.

2 / 6
ಬುಧವಾರ ಜನವರಿ15 ರಥೋತ್ಸವ ಹಾಗೂ 16ರಿಂದ ಎರಡು ದಿನಗಳ ಕಾಲ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಜಿಲೇಬಿಯನ್ನು ತಯಾರು ಮಾಡಿ ಬಡಿಸುವ ಸೇವಾ ಕೈಂಕರ್ಯಕ್ಕೆ ಮುಂದಾಗಿದೆ. ಈ ತಂಡ ಈಗಾಗಲೇ ಜಿಲೇಬಿ ತಯಾರು ಮಾಡುವ ಸೇವೆಯಲ್ಲಿ ತೊಡಗಿಸಿಕೊಂಡಿದೆ.

ಬುಧವಾರ ಜನವರಿ15 ರಥೋತ್ಸವ ಹಾಗೂ 16ರಿಂದ ಎರಡು ದಿನಗಳ ಕಾಲ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಜಿಲೇಬಿಯನ್ನು ತಯಾರು ಮಾಡಿ ಬಡಿಸುವ ಸೇವಾ ಕೈಂಕರ್ಯಕ್ಕೆ ಮುಂದಾಗಿದೆ. ಈ ತಂಡ ಈಗಾಗಲೇ ಜಿಲೇಬಿ ತಯಾರು ಮಾಡುವ ಸೇವೆಯಲ್ಲಿ ತೊಡಗಿಸಿಕೊಂಡಿದೆ.

3 / 6
ಜಿಲೇಬಿ ತಯಾರಿಕೆಗೆ ಸುಮಾರು 50 ಕ್ವಿಂಟಲ್ ಮೈದಾ ಹಿಟ್ಟು, 130 ಕ್ವಿಂಟಲ್ ಸಾವಯವ ಬೆಲ್ಲ, 1600 ಲೀಟರ್ ಎಣ್ಣೆ, 300 ಲೀಟರ್ ತುಪ್ಪ, 20 ಕೆಜಿ ಯಾಲಕ್ಕಿ, 150 ಲೀಟರ್ ಮೊಸರನ್ನು ಬಳಸಲಾಗಿದೆ.

ಜಿಲೇಬಿ ತಯಾರಿಕೆಗೆ ಸುಮಾರು 50 ಕ್ವಿಂಟಲ್ ಮೈದಾ ಹಿಟ್ಟು, 130 ಕ್ವಿಂಟಲ್ ಸಾವಯವ ಬೆಲ್ಲ, 1600 ಲೀಟರ್ ಎಣ್ಣೆ, 300 ಲೀಟರ್ ತುಪ್ಪ, 20 ಕೆಜಿ ಯಾಲಕ್ಕಿ, 150 ಲೀಟರ್ ಮೊಸರನ್ನು ಬಳಸಲಾಗಿದೆ.

4 / 6
ಕಳೆದ ಎರಡು ದಿನಗಳ ಕಾಲ ಸುಮಾರು 450 ಕ್ವಿಂಟಲ್ ಜಿಲೇಬಿಯನ್ನು ತಯಾರಿಸಲಾಗಿ. ಸುಮಾರು 12 ರಿಂದ 14 ಲಕ್ಷ ಜಿಲೇಬಿ ತಯಾರಾಗಬಹುದು ಎಂದು ಬಾಣಸಿಗರು ಹೇಳಿದ್ದಾರೆ. ಜಿಲೇಬಿ ಮಾಡುವ ಕಾರ್ಯಕ್ಕೆ 120 ಬಾಣಸಿಗರು, ಅವರಿಗೆ ಸಹಾಯ ಮಾಡಲು 150 ಜನ ಹಾಗೂ ಕಾರ್ಯಕರ್ತರು ನಿರಂತರವಾಗಿ ಸೇವೆಯನ್ನು ಮಾಡುತ್ತಿದ್ದಾರೆ.

ಕಳೆದ ಎರಡು ದಿನಗಳ ಕಾಲ ಸುಮಾರು 450 ಕ್ವಿಂಟಲ್ ಜಿಲೇಬಿಯನ್ನು ತಯಾರಿಸಲಾಗಿ. ಸುಮಾರು 12 ರಿಂದ 14 ಲಕ್ಷ ಜಿಲೇಬಿ ತಯಾರಾಗಬಹುದು ಎಂದು ಬಾಣಸಿಗರು ಹೇಳಿದ್ದಾರೆ. ಜಿಲೇಬಿ ಮಾಡುವ ಕಾರ್ಯಕ್ಕೆ 120 ಬಾಣಸಿಗರು, ಅವರಿಗೆ ಸಹಾಯ ಮಾಡಲು 150 ಜನ ಹಾಗೂ ಕಾರ್ಯಕರ್ತರು ನಿರಂತರವಾಗಿ ಸೇವೆಯನ್ನು ಮಾಡುತ್ತಿದ್ದಾರೆ.

5 / 6
ಈ ಜಿಲೇಬಿಗಳನ್ನು ತಯಾರಿಸಿದ ನಂತರ ವ್ಯವಸ್ಥಿತವಾಗಿಡಲು 1300 ಟ್ರೇಗಳನ್ನು ಸಿಂಧನೂರಿನ ಮಹಾನಂದಿ ಪ್ಲಾಸ್ಟಿಕ್ ಮಾಲೀಕರಾದ ಲಕ್ಷ್ಮಣ್ ಶೆಟ್ಟಿ ಅವರು ಉಚಿತವಾಗಿ ನೀಡಿದ್ದಾರೆ. ಈ ಎರಡು ದಿನಗಳ ಕಾಲ ಜಾತ್ರಾ ಮಹಾ ದಾಸೋಹದಲ್ಲಿ ಜಾತ್ರೆಗೆ ಆಗಮಿಸಿದ ಭಕ್ತರು ಜಿಲೇಬಿಯನ್ನು ಸವಿಯಲಿದ್ದಾರೆ.

ಈ ಜಿಲೇಬಿಗಳನ್ನು ತಯಾರಿಸಿದ ನಂತರ ವ್ಯವಸ್ಥಿತವಾಗಿಡಲು 1300 ಟ್ರೇಗಳನ್ನು ಸಿಂಧನೂರಿನ ಮಹಾನಂದಿ ಪ್ಲಾಸ್ಟಿಕ್ ಮಾಲೀಕರಾದ ಲಕ್ಷ್ಮಣ್ ಶೆಟ್ಟಿ ಅವರು ಉಚಿತವಾಗಿ ನೀಡಿದ್ದಾರೆ. ಈ ಎರಡು ದಿನಗಳ ಕಾಲ ಜಾತ್ರಾ ಮಹಾ ದಾಸೋಹದಲ್ಲಿ ಜಾತ್ರೆಗೆ ಆಗಮಿಸಿದ ಭಕ್ತರು ಜಿಲೇಬಿಯನ್ನು ಸವಿಯಲಿದ್ದಾರೆ.

6 / 6

Published On - 7:41 am, Wed, 15 January 25

Follow us
ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!