AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಡ್ಯಾಂ ಗೇಟ್​ನ ಚೈನ್​ ಕಟ್​: ದುರಸ್ತಿ ಕಾರ್ಯಕ್ಕೆ ಬೇಕು 1 ವಾರ, ಅಷ್ಟೊತ್ತಿಗೆ 60% ನೀರು ಖಾಲಿ?

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿ ಗೇಟ್​​​ ಕಿತ್ತುಕೊಂಡು ಹೋಗಿದೆ. ಇದರಿಂದಾಗಿ ಅಪಾರ ಪ್ರಮಾಣದ ನೀರು ನದಿ ಪಾತ್ರಕ್ಕೆ ಬಿಡಲಾಗಿದೆ. ದುರಸ್ತಿ ಕಾರ್ಯಕ್ಕೆ 1 ವಾರ ಸಮಯ ಬೇಕು ಎಂದು ಹೇಳಲಾಗಿದೆ.

ವಿವೇಕ ಬಿರಾದಾರ
|

Updated on:Jul 07, 2025 | 11:00 AM

Share
Koppal Tungabhadra Dam Gate chain Cut: Need 1 week for repair work

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿ ಗೇಟ್​​​ ಕಿತ್ತುಕೊಂಡು ಹೋಗಿದೆ. ಇದರಿಂದಾಗಿ ಅಪಾರ ಪ್ರಮಾಣದ ನೀರು ನದಿ ಪಾತ್ರಕ್ಕೆ ಬಿಡಲಾಗಿದೆ. ಒಟ್ಟು 105 ಟಿಎಂಸಿ ಸಾಮರ್ಥ್ಯ ಹೊಂದಿರುವ ತುಂಗಭದ್ರಾ ಜಲಾಶಯದ ಚೈನ್​ ಕಟ್ಟಾಗಿದ್ದು ಇತಿಹಾಸದಲ್ಲೆ ಇದೇ ಮೊದಲಬಾರಿಗೆ.

1 / 8
Koppal Tungabhadra Dam Gate chain Cut: Need 1 week for repair work

ತುಂಗಭದ್ರಾ ಡ್ಯಾಂ ದೇಶದ ಅತಿದೊಡ್ಡ ಕಲ್ಲಿನ ಡ್ಯಾಂ ಎಂಬ ಕೀರ್ತಿ ಪಡೆದಿದೆ. ಸಿಮೆಂಟ್​ ಇಲ್ಲದೇ ಸುಣ್ಣದ ಕಲ್ಲು, ಸುರ್ಕಿ ಗಾರೆಯಿಂದ ಡ್ಯಾಂ ನಿರ್ಮಾಣ ಮಾಡಲಾಗಿದೆ. ಜಲಾಶಯದ ನಿರ್ವಹಣೆಯನ್ನು ಎರಡು ರಾಜ್ಯಗಳು ನೋಡಿಕೊಳ್ಳುತ್ತವೆ. ತುಂಗಭದ್ರಾ ಜಲಾಶಯ ಕರ್ನಾಟಕದಲ್ಲಿದ್ದರೂ ಇದರ ನಿರ್ವಹಣೆ ಮಾತ್ರ ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳು ಮಾಡುತ್ತವೆ.

2 / 8
Koppal Tungabhadra Dam Gate chain Cut: Need 1 week for repair work

ಜಲಾಶಯ ಮತ್ತು ಜಲಾಶಯನ ಹಿಂಬಾಗದ ಉಸ್ತುವಾರಿ ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ತುಂಗಭದ್ರಾ ಜಲಾಶಯ ಮಂಡಳಿ ನೋಡಿಕೊಳ್ಳುತ್ತದೆ. ತುಂಗಭದ್ರಾ ಜಲಾಶಯ ಮಂಡಳಿ​ಗೆ ಐಎಎಸ್ ಅಧಿಕಾರಿ ಕಾರ್ಯದರ್ಶಿಯಾಗಿದ್ದಾರೆ. ತುಂಗಭದ್ರಾ ಜಲಾಶಯ ಮಂಡಳಿ ಕಚೇರಿ ಹೊಸಪೇಟೆ ಬಳಿ ಇದೆ.

3 / 8
Koppal Tungabhadra Dam Gate chain Cut: Need 1 week for repair work

ಜಲಾಶಯದ ಮುಂಬಾಗದ ವ್ಯಾಪ್ತಿ ಕರ್ನಾಟಕ ನೀರಾವರಿ ನಿಗಮಕ್ಕೆ ಸೇರಿದೆ. ಕಾಲುವೆಗಳ ನಿರ್ವಹಣೆ, ರಿಪೇರಿ ಮಾಡುದಷ್ಟೇ ನಿಗಮಕ್ಕೆ ಸೇರಿದೆ. ತುಂಗಭದ್ರಾ ವಲಯ ಕಚೇರಿ ಮುನಿರಾಬಾದ್​ನಲ್ಲಿದೆ. ಸಿಇ ಸೇರಿದಂತೆ ಅನೇಕ ಅಧಿಕಾರಿಗಳು ಇದ್ದಾರೆ.

4 / 8
Koppal Tungabhadra Dam Gate chain Cut: Need 1 week for repair work

ಈ ಹಿಂದೆ 2019 ರಲ್ಲಿ ಎಲ್​​ಎಲ್​ಸಿ ಕಾಲುವೆಯ ಚೈನ್ ತುಂಡಾಗಿ ಗೇಟ್ ಕಿತ್ತುಕೊಂಡು ಹೋಗಿತ್ತು. ಆಗ ಕೂಡ ಕೆಲ ದಿನಗಳ ಕಾಲ ಆತಂಕ ಮನೆ ಮಾಡಿತ್ತು. ಕಾಲುವೆಗೆ ಅಪಾರ ಪ್ರಮಾಣದ ನೀರು ಹರಿದು ಬಂದಿತ್ತು. ವಾರಗಳ ಕಾಲ ಅದನ್ನು ರಿಪೇರಿ ಮಾಡಲಾಗಿತ್ತು. ಆದರೆ ಡ್ಯಾಂ ನಿರ್ಮಾಣವಾದ ನಂತರ ಮೊದಲ ಬಾರಿಗೆ ಕ್ರಸ್ಟ್ ಗೇಟ್ ಕಿತ್ತುಕೊಂಡು ಹೋಗಿದೆ.

5 / 8
Koppal Tungabhadra Dam Gate chain Cut: Need 1 week for repair work

ತುಂಡಾಗಿರು ಚೈನ್​ ರಿಪೇರಿ ಮಾಡಿ, ಹೊಸ ಗೇಟ್​ ಕೂಡಿಸಬೇಕೆಂದರೆ ಜಲಾಶಯದಲ್ಲಿನ ಸರಿ ಸುಮಾರು 65 ಟಿಎಂಸಿ ನೀರು ಖಾಲಿ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ಡ್ಯಾಂನಲ್ಲಿನ ನೀರು ಖಾಲಿಯಾಗಬೇಕಾದರೆ 4-5 ದಿನ ಬೇಕಾಗಬಹುದು. ಇದಕ್ಕೆ ಪ್ರತಿದಿನ 2 ಲಕ್ಷ ಕ್ಯೂಸೆಕ್ ನೀರು ನದಿ ಪಾತ್ರಕ್ಕೆ ಬಿಡಬೇಕಾಗುತ್ತದೆ. ಒಂದು ವೇಳೆ ಇಷ್ಟು ನೀರು ಹೊರಕ್ಕೆ ಬಿಟ್ಟರೆ ಜಲಾಶಯ ಶೇ 60 ರಷ್ಟು ಖಾಲಿಯಾಗಲಿದೆ.

6 / 8
Koppal Tungabhadra Dam Gate chain Cut: Need 1 week for repair work

ಗೇಟ್ ದುರಸ್ಥಿಗೆ ಒಂದು ವಾರಕ್ಕೂ ಹೆಚ್ಚು ಸಮಯದ ಅವಶ್ಯಕತೆ ಇದೆ. ಹೈದರಾಬಾದ್ ಮೂಲದ ಕಂಪನಿಯಿಂದ ಹೊಸ ಗೇಟ್​ನ್ನು ತಂದು ಅಳವಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಈಗಾಗಲೇ ಗೇಟ್‌ ಡಿಸೈನ್ ಅನ್ನು ಅಧಿಕಾರಿಗಳು ಕಂಪನಿಗೆ ಕಳುಹಿಸಿದ್ದಾರೆ. ಆದರೆ ‌ಹೊಸ‌ಗೇಟ್ ಸಿದ್ಧವಾಗಿ, ಅಳವಡಿಸಬೇಕಾದರೆ ವಾರಕ್ಕೂ ಹೆಚ್ಚು ಸಮಯ ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಸ್ತಿ ಕಾರ್ಯ ವಿಳಂಭವಾದಷ್ಟು ನೀರು ಖಾಲಿಯಾಗುವ ಆತಂಕ ಶುರುವಾಗಿದೆ.

7 / 8
Koppal Tungabhadra Dam Gate chain Cut: Need 1 week for repair work

ತುಂಗಭದ್ರಾ ಜಲಾಶಯ ಮುಂದಿನ ಕಿರು ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳಲು ಬರುತ್ತಿರುವ ಜನರನ್ನು ಪೊಲೀಸರು ವಾಪಸ್​ ಕಳುಹಿಸುತ್ತಿದ್ದಾರೆ.

8 / 8

Published On - 9:49 am, Sun, 11 August 24

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ