AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸೇತುವೆ ಕಾಮಗಾರಿ ವೇಳೆ ನದಿಯಲ್ಲಿ ಕೃಷ್ಣನ ವಿಗ್ರಹ, ಶಿವಲಿಂಗ ಪತ್ತೆ

ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ. ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.

ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ|

Updated on:Feb 06, 2024 | 8:21 AM

Share
Krishna Idol, Shivalinga found in Krishna River at Raichur

ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ.

1 / 9
Krishna Idol, Shivalinga found in Krishna River at Raichur

ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.

2 / 9
Krishna Idol, Shivalinga found in Krishna River at Raichur

ಕೃಷ್ಣಾ ನದಿಯಲ್ಲಿ ಶ್ರೀಕೃಷ್ಣನ ದಶಾವತಾರದ ವಿಗ್ರಹ ಹಾಗೂ ಶಿವನ ಲಿಂಗ ಪತ್ತೆಯಾಗಿದೆ. ಈ ವಿಗ್ರಹಗಳನ್ನು ಸಿಬ್ಬಂದಿ ಸುರಕ್ಷಿತವಾಗಿ ನದಿಯಿಂದ ಹೊರತೆಗೆದಿದ್ದಾರೆ.

3 / 9
Krishna Idol, Shivalinga found in Krishna River at Raichur

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪುರಾತತ್ವ ಇಲಾಖೆಗೆ ಸಿಬ್ಬಂದಿ ವಿಗ್ರಹಗಳನ್ನು ಪರಿಶೀಲಿಸಿ ತಮ್ಮ ಸುಪರ್ದಿಗೆ ಪಡೆದಿದ್ದಾರೆ.

4 / 9
Krishna Idol, Shivalinga found in Krishna River at Raichur

ದೇವಸ್ಥಾನಗಳ ಧ್ವಂಸದ ವೇಳೆ ಮತಾಂದರ ಕೈಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ಅಂದಿನ ಜನರು ವಿಗ್ರಹಗಳನ್ನು ನದಿಯಲ್ಲಿ ಮುಳುಗಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

5 / 9
Krishna Idol, Shivalinga found in Krishna River at Raichur

ಈ ಹಿಂದೆ ಇಲ್ಲಿ ಅನೇಕ ರಾಜ ಮನೆತನಗಳಿದ್ದವು. ರಾಯಚೂರು ಭಾಗದಲ್ಲಿ ಬರೊಬ್ಬರಿ 163 ಯುದ್ಧಗಳು ನಡೆದಿವೆ. ಬಹುಮನಿಸುಲ್ತಾನರು ಹಾಗೂ ಆದಿಲ್ ಶಾಹಿಗಳ ದಾಳಿಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ನದಿಗೆ ಹಾಕಲಾಗಿದೆ.

6 / 9
Krishna Idol, Shivalinga found in Krishna River at Raichur

ಈ ವಿಗ್ರಹಗಳ ಬಗ್ಗೆ ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಮಾತನಾಡಿ, ಬಹುಮನಿ ಸುಲ್ತಾನರ ಅವಧಿಯಲ್ಲಿ ಗರ್ಭ ಗುಡಿಯಲ್ಲಿ ಮೂರ್ತಿಗಳನ್ನು ಕೃಷ್ಣಾ ನದಿಗೆ ಬೀಸಾಡಿರಬಹುದು. ಇದೀಗ ಕಾಮಗಾರಿ ವೇಳೆ ವಿಗ್ರಹಗಳು ದೊರೆತಿವೆ.

7 / 9
Krishna Idol, Shivalinga found in Krishna River at Raichur

ಸದ್ಯ ದೊರೆತದ್ದು ಹಸಿರು ಮಿಶ್ರಿತ ಶಿಲೆ. ಈ ಮಾದರಿಯ ಶಿಲೆಗಳನ್ನು ಕಲ್ಯಾಣ ಚಾಲುಕ್ಯರು ಬಳಸುತ್ತಿದ್ದರು.

8 / 9
Krishna Idol, Shivalinga found in Krishna River at Raichur

ಹೀಗಾಗಿ ಈ ವಿಗ್ರಹಗಳು 11ನೇ ಶತಮಾನದ ಕಲ್ಯಾಣ ಚಾಲುಕ್ಯರಿಗೆ ಸೇರಿವೆ ಎಂದು ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಹೇಳಿದ್ದಾರೆ. ಅಲ್ಲದೆ ಈ ಬಗ್ಗೆ ಸಂಶೋಧನೆ ನಡೆಸಬೇಕಿದೆ ಎಂದರು.

9 / 9

Published On - 8:17 am, Tue, 6 February 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ