AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸೇತುವೆ ಕಾಮಗಾರಿ ವೇಳೆ ನದಿಯಲ್ಲಿ ಕೃಷ್ಣನ ವಿಗ್ರಹ, ಶಿವಲಿಂಗ ಪತ್ತೆ

ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ. ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.

ಭೀಮೇಶ್​​ ಪೂಜಾರ್
| Edited By: |

Updated on:Feb 06, 2024 | 8:21 AM

Share
Krishna Idol, Shivalinga found in Krishna River at Raichur

ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ.

1 / 9
Krishna Idol, Shivalinga found in Krishna River at Raichur

ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.

2 / 9
Krishna Idol, Shivalinga found in Krishna River at Raichur

ಕೃಷ್ಣಾ ನದಿಯಲ್ಲಿ ಶ್ರೀಕೃಷ್ಣನ ದಶಾವತಾರದ ವಿಗ್ರಹ ಹಾಗೂ ಶಿವನ ಲಿಂಗ ಪತ್ತೆಯಾಗಿದೆ. ಈ ವಿಗ್ರಹಗಳನ್ನು ಸಿಬ್ಬಂದಿ ಸುರಕ್ಷಿತವಾಗಿ ನದಿಯಿಂದ ಹೊರತೆಗೆದಿದ್ದಾರೆ.

3 / 9
Krishna Idol, Shivalinga found in Krishna River at Raichur

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪುರಾತತ್ವ ಇಲಾಖೆಗೆ ಸಿಬ್ಬಂದಿ ವಿಗ್ರಹಗಳನ್ನು ಪರಿಶೀಲಿಸಿ ತಮ್ಮ ಸುಪರ್ದಿಗೆ ಪಡೆದಿದ್ದಾರೆ.

4 / 9
Krishna Idol, Shivalinga found in Krishna River at Raichur

ದೇವಸ್ಥಾನಗಳ ಧ್ವಂಸದ ವೇಳೆ ಮತಾಂದರ ಕೈಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ಅಂದಿನ ಜನರು ವಿಗ್ರಹಗಳನ್ನು ನದಿಯಲ್ಲಿ ಮುಳುಗಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

5 / 9
Krishna Idol, Shivalinga found in Krishna River at Raichur

ಈ ಹಿಂದೆ ಇಲ್ಲಿ ಅನೇಕ ರಾಜ ಮನೆತನಗಳಿದ್ದವು. ರಾಯಚೂರು ಭಾಗದಲ್ಲಿ ಬರೊಬ್ಬರಿ 163 ಯುದ್ಧಗಳು ನಡೆದಿವೆ. ಬಹುಮನಿಸುಲ್ತಾನರು ಹಾಗೂ ಆದಿಲ್ ಶಾಹಿಗಳ ದಾಳಿಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ನದಿಗೆ ಹಾಕಲಾಗಿದೆ.

6 / 9
Krishna Idol, Shivalinga found in Krishna River at Raichur

ಈ ವಿಗ್ರಹಗಳ ಬಗ್ಗೆ ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಮಾತನಾಡಿ, ಬಹುಮನಿ ಸುಲ್ತಾನರ ಅವಧಿಯಲ್ಲಿ ಗರ್ಭ ಗುಡಿಯಲ್ಲಿ ಮೂರ್ತಿಗಳನ್ನು ಕೃಷ್ಣಾ ನದಿಗೆ ಬೀಸಾಡಿರಬಹುದು. ಇದೀಗ ಕಾಮಗಾರಿ ವೇಳೆ ವಿಗ್ರಹಗಳು ದೊರೆತಿವೆ.

7 / 9
Krishna Idol, Shivalinga found in Krishna River at Raichur

ಸದ್ಯ ದೊರೆತದ್ದು ಹಸಿರು ಮಿಶ್ರಿತ ಶಿಲೆ. ಈ ಮಾದರಿಯ ಶಿಲೆಗಳನ್ನು ಕಲ್ಯಾಣ ಚಾಲುಕ್ಯರು ಬಳಸುತ್ತಿದ್ದರು.

8 / 9
Krishna Idol, Shivalinga found in Krishna River at Raichur

ಹೀಗಾಗಿ ಈ ವಿಗ್ರಹಗಳು 11ನೇ ಶತಮಾನದ ಕಲ್ಯಾಣ ಚಾಲುಕ್ಯರಿಗೆ ಸೇರಿವೆ ಎಂದು ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಹೇಳಿದ್ದಾರೆ. ಅಲ್ಲದೆ ಈ ಬಗ್ಗೆ ಸಂಶೋಧನೆ ನಡೆಸಬೇಕಿದೆ ಎಂದರು.

9 / 9

Published On - 8:17 am, Tue, 6 February 24

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?