ರಾಯಚೂರು: ಸೇತುವೆ ಕಾಮಗಾರಿ ವೇಳೆ ನದಿಯಲ್ಲಿ ಕೃಷ್ಣನ ವಿಗ್ರಹ, ಶಿವಲಿಂಗ ಪತ್ತೆ
ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ. ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.
ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ.
1 / 9
ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.
2 / 9
ಕೃಷ್ಣಾ ನದಿಯಲ್ಲಿ ಶ್ರೀಕೃಷ್ಣನ ದಶಾವತಾರದ ವಿಗ್ರಹ ಹಾಗೂ ಶಿವನ ಲಿಂಗ ಪತ್ತೆಯಾಗಿದೆ. ಈ ವಿಗ್ರಹಗಳನ್ನು ಸಿಬ್ಬಂದಿ ಸುರಕ್ಷಿತವಾಗಿ ನದಿಯಿಂದ ಹೊರತೆಗೆದಿದ್ದಾರೆ.
3 / 9
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪುರಾತತ್ವ ಇಲಾಖೆಗೆ ಸಿಬ್ಬಂದಿ ವಿಗ್ರಹಗಳನ್ನು ಪರಿಶೀಲಿಸಿ ತಮ್ಮ ಸುಪರ್ದಿಗೆ ಪಡೆದಿದ್ದಾರೆ.
4 / 9
ದೇವಸ್ಥಾನಗಳ ಧ್ವಂಸದ ವೇಳೆ ಮತಾಂದರ ಕೈಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ಅಂದಿನ ಜನರು ವಿಗ್ರಹಗಳನ್ನು ನದಿಯಲ್ಲಿ ಮುಳುಗಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
5 / 9
ಈ ಹಿಂದೆ ಇಲ್ಲಿ ಅನೇಕ ರಾಜ ಮನೆತನಗಳಿದ್ದವು. ರಾಯಚೂರು ಭಾಗದಲ್ಲಿ ಬರೊಬ್ಬರಿ 163 ಯುದ್ಧಗಳು ನಡೆದಿವೆ. ಬಹುಮನಿಸುಲ್ತಾನರು ಹಾಗೂ ಆದಿಲ್ ಶಾಹಿಗಳ ದಾಳಿಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ನದಿಗೆ ಹಾಕಲಾಗಿದೆ.
6 / 9
ಈ ವಿಗ್ರಹಗಳ ಬಗ್ಗೆ ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಮಾತನಾಡಿ, ಬಹುಮನಿ ಸುಲ್ತಾನರ ಅವಧಿಯಲ್ಲಿ ಗರ್ಭ ಗುಡಿಯಲ್ಲಿ ಮೂರ್ತಿಗಳನ್ನು ಕೃಷ್ಣಾ ನದಿಗೆ ಬೀಸಾಡಿರಬಹುದು. ಇದೀಗ ಕಾಮಗಾರಿ ವೇಳೆ ವಿಗ್ರಹಗಳು ದೊರೆತಿವೆ.
7 / 9
ಸದ್ಯ ದೊರೆತದ್ದು ಹಸಿರು ಮಿಶ್ರಿತ ಶಿಲೆ. ಈ ಮಾದರಿಯ ಶಿಲೆಗಳನ್ನು ಕಲ್ಯಾಣ ಚಾಲುಕ್ಯರು ಬಳಸುತ್ತಿದ್ದರು.
8 / 9
ಹೀಗಾಗಿ ಈ ವಿಗ್ರಹಗಳು 11ನೇ ಶತಮಾನದ ಕಲ್ಯಾಣ ಚಾಲುಕ್ಯರಿಗೆ ಸೇರಿವೆ ಎಂದು ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಹೇಳಿದ್ದಾರೆ. ಅಲ್ಲದೆ ಈ ಬಗ್ಗೆ ಸಂಶೋಧನೆ ನಡೆಸಬೇಕಿದೆ ಎಂದರು.