AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2025: ಕೃಷ್ಣ ಜನ್ಮಾಷ್ಟಮಿ ದಿನ ತಪ್ಪದೇ ಭೇಟಿ ನೀಡಲೇಬೇಕಾದ ಕೃಷ್ಣ ದೇವಾಲಯಗಳಿವು

ಪ್ರತಿವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯ ದಿನ ಕೃಷ್ಣಾಷ್ಟಮಿಯನ್ನು ಆಚರಿಸಲಾಗುತ್ತದೆ. ಈ ಬಾರಿಯ ಕೃಷ್ಣ ಜನ್ಮಾಷ್ಟಮಿಗೆ ಕ್ಷಣಗಣನೆ ಶುರುವಾಗಿದೆ. ದೇಶಾದ್ಯಂತ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇನ್ನೂ ಈ ಹಬ್ಬದ ದಿನ ಹಲವರು ಮನೆಯಲ್ಲಿಯೇ ಕೃಷ್ಣನನ್ನು ಪೂಜಿಸಿದರೆ, ಇನ್ನೂ ಅನೇಕರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ನೀವು ಸಹ ಈ ಹಬ್ಬದ ದಿನ ದೇವಾಲಯಗಳಿಗೆ ಹೋಗುವ ಯೋಜನೆ ಹಾಕಿಕೊಂಡಿದ್ದರೆ, ನಮ್ಮ ಕರ್ನಾಟಕದಲ್ಲಿರುವ ಈ ಕೆಲವು ಕೃಷ್ಣನಿಗೆ ಅರ್ಪಿತವಾದ ದೇವಾಲಯಗಳಿಗೆ ಹೋಗಲು ಮರೆಯದಿರಿ. ಶ್ರೀಕೃಷ್ಣನ ಈ ಸುಂದರ ದೇವಾಲಯಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ಮಾಲಾಶ್ರೀ ಅಂಚನ್​
|

Updated on: Aug 14, 2025 | 9:00 AM

Share
ಹಿಮವತ್‌ ಗೋಪಾಲ ಸ್ವಾಮಿ ದೇಗುಲ: ಕರ್ನಾಟಕದಲ್ಲಿರು ಕೃಷ್ಣ ದೇವಾಲಯಗಳಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಹಿಮವತ್‌ ಗೋಪಾಲಸ್ವಾಮಿ ದೇಗುಲ ಕೂಡ ಒಂದು. ಈ ದೇವಾಲಯವನ್ನು 14 ನೇ ಶತಮಾನದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತದೆ.

ಹಿಮವತ್‌ ಗೋಪಾಲ ಸ್ವಾಮಿ ದೇಗುಲ: ಕರ್ನಾಟಕದಲ್ಲಿರು ಕೃಷ್ಣ ದೇವಾಲಯಗಳಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಹಿಮವತ್‌ ಗೋಪಾಲಸ್ವಾಮಿ ದೇಗುಲ ಕೂಡ ಒಂದು. ಈ ದೇವಾಲಯವನ್ನು 14 ನೇ ಶತಮಾನದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತದೆ.

1 / 8
ಉಡುಪಿ ಕೃಷ್ಣ ಮಠ: ದಕ್ಷಿಣ ಭಾರತದಲ್ಲಿನ ಕೃಷ್ಣ ದೇವಾಲಯಗಳ ಪೈಕಿ ಉಡುಪಿಯ ಕೃಷ್ಣ ಮಠ ಪ್ರಮುಖವಾದುದು. 13 ನೇ ಶತಮಾನದಲ್ಲಿ ವೈಷ್ಣವ ಸಂತರಾದ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಈ ಸುಂದರ ಕಡಗೋಲು ಕೃಷ್ಣ ದೇವಾಲಯಕ್ಕೆ  ಕೃಷ್ಣ ಜನ್ಮಾಷ್ಟಮಿಯ ದಿನ ನೀವು ಭೇಟಿ ನೀಡಬಹುದು.

ಉಡುಪಿ ಕೃಷ್ಣ ಮಠ: ದಕ್ಷಿಣ ಭಾರತದಲ್ಲಿನ ಕೃಷ್ಣ ದೇವಾಲಯಗಳ ಪೈಕಿ ಉಡುಪಿಯ ಕೃಷ್ಣ ಮಠ ಪ್ರಮುಖವಾದುದು. 13 ನೇ ಶತಮಾನದಲ್ಲಿ ವೈಷ್ಣವ ಸಂತರಾದ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಈ ಸುಂದರ ಕಡಗೋಲು ಕೃಷ್ಣ ದೇವಾಲಯಕ್ಕೆ ಕೃಷ್ಣ ಜನ್ಮಾಷ್ಟಮಿಯ ದಿನ ನೀವು ಭೇಟಿ ನೀಡಬಹುದು.

2 / 8
ಇಸ್ಕಾನ್ ದೇಗುಲ ಬೆಂಗಳೂರು: ಬೆಂಗಳೂರಿನಲ್ಲಿರುವ ಇಸ್ಕಾನ್‌ ದೇಗುಲವು ಕರ್ನಾಟಕದಲ್ಲಿರುವ ಅತ್ಯಂತ ಜನಪ್ರಿಯ ಕೃಷ್ಣ ದೇಗುಲಗಳಲ್ಲಿ ಒಂದಾಗಿದೆ. ಈ ದೇಗುಲದಲ್ಲಿ ಕೃಷ್ಣನ ಜೊತೆಗೆ ರಾಧೆಯನ್ನೂ ಕಾಣಬಹುದು. ಸುಂದರ ಉದ್ಯಾನವನ, ಅದ್ಭುತ ವಾಸ್ತುಶಿಲ್ಪಗಳಿಂದ ಸುತ್ತುವರೆದಿರುವ ಈ ದೇವಾಲಯಕ್ಕೆ ಬೆಂಗಳೂರಿನ ಸುತ್ತಮುತ್ತಲಿರುವವರು ಕೃಷ್ಣಾಷ್ಟಮಿಯ ದಿನ ಭೇಟಿ ನೀಡಲೇಬೇಕು.

ಇಸ್ಕಾನ್ ದೇಗುಲ ಬೆಂಗಳೂರು: ಬೆಂಗಳೂರಿನಲ್ಲಿರುವ ಇಸ್ಕಾನ್‌ ದೇಗುಲವು ಕರ್ನಾಟಕದಲ್ಲಿರುವ ಅತ್ಯಂತ ಜನಪ್ರಿಯ ಕೃಷ್ಣ ದೇಗುಲಗಳಲ್ಲಿ ಒಂದಾಗಿದೆ. ಈ ದೇಗುಲದಲ್ಲಿ ಕೃಷ್ಣನ ಜೊತೆಗೆ ರಾಧೆಯನ್ನೂ ಕಾಣಬಹುದು. ಸುಂದರ ಉದ್ಯಾನವನ, ಅದ್ಭುತ ವಾಸ್ತುಶಿಲ್ಪಗಳಿಂದ ಸುತ್ತುವರೆದಿರುವ ಈ ದೇವಾಲಯಕ್ಕೆ ಬೆಂಗಳೂರಿನ ಸುತ್ತಮುತ್ತಲಿರುವವರು ಕೃಷ್ಣಾಷ್ಟಮಿಯ ದಿನ ಭೇಟಿ ನೀಡಲೇಬೇಕು.

3 / 8
ವೇಣುಗೋಪಾಲ ಸ್ವಾಮಿ ದೇವಸ್ಥಾನ, ಮೈಸೂರು: ಕರ್ನಾಟಕದ ಪ್ರಮುಖ ಕೃಷ್ಣ ದೇಗುಲಗಳ ಪೈಕಿ ಮೈಸೂರಿನ ವೇಣು ಗೋಪಾಲ ಸ್ವಾಮಿ ದೇವಾಲಯ ಕೂಡ ಒಂದು. ಕೆಆರ್‌ಎಸ್‌ ಹಿನ್ನೀರಿನಲ್ಲಿ ನೆಲೆಗೊಂಡಿರುವ ಈ ಸುಂದರ ದೇವಾಲಯವನ್ನು 12 ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದು, ಇದು ಮೈಸೂರಿನ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾಗಿದೆ.

ವೇಣುಗೋಪಾಲ ಸ್ವಾಮಿ ದೇವಸ್ಥಾನ, ಮೈಸೂರು: ಕರ್ನಾಟಕದ ಪ್ರಮುಖ ಕೃಷ್ಣ ದೇಗುಲಗಳ ಪೈಕಿ ಮೈಸೂರಿನ ವೇಣು ಗೋಪಾಲ ಸ್ವಾಮಿ ದೇವಾಲಯ ಕೂಡ ಒಂದು. ಕೆಆರ್‌ಎಸ್‌ ಹಿನ್ನೀರಿನಲ್ಲಿ ನೆಲೆಗೊಂಡಿರುವ ಈ ಸುಂದರ ದೇವಾಲಯವನ್ನು 12 ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದು, ಇದು ಮೈಸೂರಿನ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾಗಿದೆ.

4 / 8
ಬಾಲಕೃಷ್ಣ ದೇವಾಲಯ, ಹಂಪಿ: ಹಂಪಿಯ ಬಾಲಕೃಷ್ಣ ಮಂದಿರ ಐತಿಹಾಸಿಕ ಮಹತ್ವವನ್ನು ಪಡೆದಿರುವ ಕರ್ನಾಟಕದ ಪ್ರಮುಖ ದೇವಾಲಯವಾಗಿದೆ. 15 ನೇ ಶತಮಾನದಲ್ಲಿ ವಿಜಯ ನಗರ ಸಾಮ್ರಾಜ್ಯದ ಅರಸರ ಆಳ್ವಿಕೆಯ ಸಮಯದಲ್ಲಿ ನಿರ್ಮಾಣಗೊಂಡ ಈ ದೇವಾಲಕ್ಕೆ ಕೃಷ್ಣ ಜನ್ಮಾಷ್ಟಮಿಯ ದಿನ ನೀವು ಭೇಟಿ ನೀಡಬಹುದು.  ಈ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ವಿಜಯನಗರ ಸಾಮ್ರಾಜ್ಯದ ಸಮಯದ  ಕೆತ್ತನೆಗಳು, ವಾಸ್ತುಶಿಲ್ಪ ಮತ್ತು ಭವ್ಯತೆಯನ್ನು ಕಣ್ತುಂಬಿಕೊಳ್ಳಬಹುದು.

ಬಾಲಕೃಷ್ಣ ದೇವಾಲಯ, ಹಂಪಿ: ಹಂಪಿಯ ಬಾಲಕೃಷ್ಣ ಮಂದಿರ ಐತಿಹಾಸಿಕ ಮಹತ್ವವನ್ನು ಪಡೆದಿರುವ ಕರ್ನಾಟಕದ ಪ್ರಮುಖ ದೇವಾಲಯವಾಗಿದೆ. 15 ನೇ ಶತಮಾನದಲ್ಲಿ ವಿಜಯ ನಗರ ಸಾಮ್ರಾಜ್ಯದ ಅರಸರ ಆಳ್ವಿಕೆಯ ಸಮಯದಲ್ಲಿ ನಿರ್ಮಾಣಗೊಂಡ ಈ ದೇವಾಲಕ್ಕೆ ಕೃಷ್ಣ ಜನ್ಮಾಷ್ಟಮಿಯ ದಿನ ನೀವು ಭೇಟಿ ನೀಡಬಹುದು. ಈ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ವಿಜಯನಗರ ಸಾಮ್ರಾಜ್ಯದ ಸಮಯದ ಕೆತ್ತನೆಗಳು, ವಾಸ್ತುಶಿಲ್ಪ ಮತ್ತು ಭವ್ಯತೆಯನ್ನು ಕಣ್ತುಂಬಿಕೊಳ್ಳಬಹುದು.

5 / 8
ಬೇಲೂರು ಚೆನ್ನಕೇಶವ ದೇವಾಲಯ: ಕೃಷ್ಣನ ಪುರಾತನ ದೇವಾಲಯಗಳ ಪೈಕಿ ಹಾಸನ ಜಿಲ್ಲೆಯಲ್ಲಿರುವ ಬೇಲೂರು ಚೆನ್ನಕೇಶವ ದೇಗುಲ ಕೂಡ ಒಂದು. ಹೊಯ್ಸಳರ ಕಾಲದಲ್ಲಿ ನಿರ್ಮಾಣವಾದ ಈ ದೇವಾಲಯ ಅದರ ವಾಸ್ತುಶಿಲ್ಪ ಮತ್ತು ಭವ್ಯತೆಗೆ ಹೆಸರುವಾಸಿಯಾಗಿದೆ. ಕೃಷ್ಣಾಷ್ಟಮಿ ದಿನ ನೀವು ಈ ದೇಗುಲಕ್ಕೂ ಭೇಟಿ ನೀಡಬಹುದು.

ಬೇಲೂರು ಚೆನ್ನಕೇಶವ ದೇವಾಲಯ: ಕೃಷ್ಣನ ಪುರಾತನ ದೇವಾಲಯಗಳ ಪೈಕಿ ಹಾಸನ ಜಿಲ್ಲೆಯಲ್ಲಿರುವ ಬೇಲೂರು ಚೆನ್ನಕೇಶವ ದೇಗುಲ ಕೂಡ ಒಂದು. ಹೊಯ್ಸಳರ ಕಾಲದಲ್ಲಿ ನಿರ್ಮಾಣವಾದ ಈ ದೇವಾಲಯ ಅದರ ವಾಸ್ತುಶಿಲ್ಪ ಮತ್ತು ಭವ್ಯತೆಗೆ ಹೆಸರುವಾಸಿಯಾಗಿದೆ. ಕೃಷ್ಣಾಷ್ಟಮಿ ದಿನ ನೀವು ಈ ದೇಗುಲಕ್ಕೂ ಭೇಟಿ ನೀಡಬಹುದು.

6 / 8
ಶ್ರೀ ಗೋಪಾಲ ಕೃಷ್ಣ ದೇವಸ್ಥಾನ, ಮಂಗಳೂರು: ಮಂಗಳೂರಿನ ಅತ್ಯಂತ ಜನಪ್ರಿಯ ಕೃಷ್ಣ ದೇಗುಲವೆಂದರೆ ಶ್ರೀ ಗೋಪಾಲ ಕೃಷ್ಣ ದೇವಾಲಯ. ಇಲ್ಲಿ ಕೃಷ್ಣಾಷ್ಟಮಿಯನ್ನು ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೃಷ್ಣಾಷ್ಟಮಿಯಂದು ನೀವು ಇಲ್ಲಿಗೆ ತಪ್ಪದೆ ಭೇಟಿ ನೀಡಬೇಕು.

ಶ್ರೀ ಗೋಪಾಲ ಕೃಷ್ಣ ದೇವಸ್ಥಾನ, ಮಂಗಳೂರು: ಮಂಗಳೂರಿನ ಅತ್ಯಂತ ಜನಪ್ರಿಯ ಕೃಷ್ಣ ದೇಗುಲವೆಂದರೆ ಶ್ರೀ ಗೋಪಾಲ ಕೃಷ್ಣ ದೇವಾಲಯ. ಇಲ್ಲಿ ಕೃಷ್ಣಾಷ್ಟಮಿಯನ್ನು ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೃಷ್ಣಾಷ್ಟಮಿಯಂದು ನೀವು ಇಲ್ಲಿಗೆ ತಪ್ಪದೆ ಭೇಟಿ ನೀಡಬೇಕು.

7 / 8
ಅಪ್ರಮೇಯ ಅಂಬೆಗಾಲು ಕೃಷ್ಣ ದೇವಾಲಯ: ಚನ್ನಪಟ್ಟಣ ತಾಲೂಕಿನ ಮಾಳೂರು ಗ್ರಾಮದಲ್ಲಿರುವ  ಅಪ್ರಮೇಯ ಅಂಬೆಗಾಲು ಕೃಷ್ಣ ದೇವಾಲಯಕ್ಕೂ ನೀವು ಕೃಷ್ಣಜನ್ಮಾಷ್ಟಮಿಯ ದಿನ ಭೇಟಿ ನೀಡಬಹುದು.

ಅಪ್ರಮೇಯ ಅಂಬೆಗಾಲು ಕೃಷ್ಣ ದೇವಾಲಯ: ಚನ್ನಪಟ್ಟಣ ತಾಲೂಕಿನ ಮಾಳೂರು ಗ್ರಾಮದಲ್ಲಿರುವ ಅಪ್ರಮೇಯ ಅಂಬೆಗಾಲು ಕೃಷ್ಣ ದೇವಾಲಯಕ್ಕೂ ನೀವು ಕೃಷ್ಣಜನ್ಮಾಷ್ಟಮಿಯ ದಿನ ಭೇಟಿ ನೀಡಬಹುದು.

8 / 8
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?