AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2025: ಕೃಷ್ಣ ಜನ್ಮಾಷ್ಟಮಿ ದಿನ ತಪ್ಪದೇ ಭೇಟಿ ನೀಡಲೇಬೇಕಾದ ಕೃಷ್ಣ ದೇವಾಲಯಗಳಿವು

ಪ್ರತಿವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯ ದಿನ ಕೃಷ್ಣಾಷ್ಟಮಿಯನ್ನು ಆಚರಿಸಲಾಗುತ್ತದೆ. ಈ ಬಾರಿಯ ಕೃಷ್ಣ ಜನ್ಮಾಷ್ಟಮಿಗೆ ಕ್ಷಣಗಣನೆ ಶುರುವಾಗಿದೆ. ದೇಶಾದ್ಯಂತ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇನ್ನೂ ಈ ಹಬ್ಬದ ದಿನ ಹಲವರು ಮನೆಯಲ್ಲಿಯೇ ಕೃಷ್ಣನನ್ನು ಪೂಜಿಸಿದರೆ, ಇನ್ನೂ ಅನೇಕರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ನೀವು ಸಹ ಈ ಹಬ್ಬದ ದಿನ ದೇವಾಲಯಗಳಿಗೆ ಹೋಗುವ ಯೋಜನೆ ಹಾಕಿಕೊಂಡಿದ್ದರೆ, ನಮ್ಮ ಕರ್ನಾಟಕದಲ್ಲಿರುವ ಈ ಕೆಲವು ಕೃಷ್ಣನಿಗೆ ಅರ್ಪಿತವಾದ ದೇವಾಲಯಗಳಿಗೆ ಹೋಗಲು ಮರೆಯದಿರಿ. ಶ್ರೀಕೃಷ್ಣನ ಈ ಸುಂದರ ದೇವಾಲಯಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ಮಾಲಾಶ್ರೀ ಅಂಚನ್​
|

Updated on: Aug 14, 2025 | 9:00 AM

Share
ಹಿಮವತ್‌ ಗೋಪಾಲ ಸ್ವಾಮಿ ದೇಗುಲ: ಕರ್ನಾಟಕದಲ್ಲಿರು ಕೃಷ್ಣ ದೇವಾಲಯಗಳಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಹಿಮವತ್‌ ಗೋಪಾಲಸ್ವಾಮಿ ದೇಗುಲ ಕೂಡ ಒಂದು. ಈ ದೇವಾಲಯವನ್ನು 14 ನೇ ಶತಮಾನದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತದೆ.

ಹಿಮವತ್‌ ಗೋಪಾಲ ಸ್ವಾಮಿ ದೇಗುಲ: ಕರ್ನಾಟಕದಲ್ಲಿರು ಕೃಷ್ಣ ದೇವಾಲಯಗಳಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಹಿಮವತ್‌ ಗೋಪಾಲಸ್ವಾಮಿ ದೇಗುಲ ಕೂಡ ಒಂದು. ಈ ದೇವಾಲಯವನ್ನು 14 ನೇ ಶತಮಾನದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತದೆ.

1 / 8
ಉಡುಪಿ ಕೃಷ್ಣ ಮಠ: ದಕ್ಷಿಣ ಭಾರತದಲ್ಲಿನ ಕೃಷ್ಣ ದೇವಾಲಯಗಳ ಪೈಕಿ ಉಡುಪಿಯ ಕೃಷ್ಣ ಮಠ ಪ್ರಮುಖವಾದುದು. 13 ನೇ ಶತಮಾನದಲ್ಲಿ ವೈಷ್ಣವ ಸಂತರಾದ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಈ ಸುಂದರ ಕಡಗೋಲು ಕೃಷ್ಣ ದೇವಾಲಯಕ್ಕೆ  ಕೃಷ್ಣ ಜನ್ಮಾಷ್ಟಮಿಯ ದಿನ ನೀವು ಭೇಟಿ ನೀಡಬಹುದು.

ಉಡುಪಿ ಕೃಷ್ಣ ಮಠ: ದಕ್ಷಿಣ ಭಾರತದಲ್ಲಿನ ಕೃಷ್ಣ ದೇವಾಲಯಗಳ ಪೈಕಿ ಉಡುಪಿಯ ಕೃಷ್ಣ ಮಠ ಪ್ರಮುಖವಾದುದು. 13 ನೇ ಶತಮಾನದಲ್ಲಿ ವೈಷ್ಣವ ಸಂತರಾದ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಈ ಸುಂದರ ಕಡಗೋಲು ಕೃಷ್ಣ ದೇವಾಲಯಕ್ಕೆ ಕೃಷ್ಣ ಜನ್ಮಾಷ್ಟಮಿಯ ದಿನ ನೀವು ಭೇಟಿ ನೀಡಬಹುದು.

2 / 8
ಇಸ್ಕಾನ್ ದೇಗುಲ ಬೆಂಗಳೂರು: ಬೆಂಗಳೂರಿನಲ್ಲಿರುವ ಇಸ್ಕಾನ್‌ ದೇಗುಲವು ಕರ್ನಾಟಕದಲ್ಲಿರುವ ಅತ್ಯಂತ ಜನಪ್ರಿಯ ಕೃಷ್ಣ ದೇಗುಲಗಳಲ್ಲಿ ಒಂದಾಗಿದೆ. ಈ ದೇಗುಲದಲ್ಲಿ ಕೃಷ್ಣನ ಜೊತೆಗೆ ರಾಧೆಯನ್ನೂ ಕಾಣಬಹುದು. ಸುಂದರ ಉದ್ಯಾನವನ, ಅದ್ಭುತ ವಾಸ್ತುಶಿಲ್ಪಗಳಿಂದ ಸುತ್ತುವರೆದಿರುವ ಈ ದೇವಾಲಯಕ್ಕೆ ಬೆಂಗಳೂರಿನ ಸುತ್ತಮುತ್ತಲಿರುವವರು ಕೃಷ್ಣಾಷ್ಟಮಿಯ ದಿನ ಭೇಟಿ ನೀಡಲೇಬೇಕು.

ಇಸ್ಕಾನ್ ದೇಗುಲ ಬೆಂಗಳೂರು: ಬೆಂಗಳೂರಿನಲ್ಲಿರುವ ಇಸ್ಕಾನ್‌ ದೇಗುಲವು ಕರ್ನಾಟಕದಲ್ಲಿರುವ ಅತ್ಯಂತ ಜನಪ್ರಿಯ ಕೃಷ್ಣ ದೇಗುಲಗಳಲ್ಲಿ ಒಂದಾಗಿದೆ. ಈ ದೇಗುಲದಲ್ಲಿ ಕೃಷ್ಣನ ಜೊತೆಗೆ ರಾಧೆಯನ್ನೂ ಕಾಣಬಹುದು. ಸುಂದರ ಉದ್ಯಾನವನ, ಅದ್ಭುತ ವಾಸ್ತುಶಿಲ್ಪಗಳಿಂದ ಸುತ್ತುವರೆದಿರುವ ಈ ದೇವಾಲಯಕ್ಕೆ ಬೆಂಗಳೂರಿನ ಸುತ್ತಮುತ್ತಲಿರುವವರು ಕೃಷ್ಣಾಷ್ಟಮಿಯ ದಿನ ಭೇಟಿ ನೀಡಲೇಬೇಕು.

3 / 8
ವೇಣುಗೋಪಾಲ ಸ್ವಾಮಿ ದೇವಸ್ಥಾನ, ಮೈಸೂರು: ಕರ್ನಾಟಕದ ಪ್ರಮುಖ ಕೃಷ್ಣ ದೇಗುಲಗಳ ಪೈಕಿ ಮೈಸೂರಿನ ವೇಣು ಗೋಪಾಲ ಸ್ವಾಮಿ ದೇವಾಲಯ ಕೂಡ ಒಂದು. ಕೆಆರ್‌ಎಸ್‌ ಹಿನ್ನೀರಿನಲ್ಲಿ ನೆಲೆಗೊಂಡಿರುವ ಈ ಸುಂದರ ದೇವಾಲಯವನ್ನು 12 ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದು, ಇದು ಮೈಸೂರಿನ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾಗಿದೆ.

ವೇಣುಗೋಪಾಲ ಸ್ವಾಮಿ ದೇವಸ್ಥಾನ, ಮೈಸೂರು: ಕರ್ನಾಟಕದ ಪ್ರಮುಖ ಕೃಷ್ಣ ದೇಗುಲಗಳ ಪೈಕಿ ಮೈಸೂರಿನ ವೇಣು ಗೋಪಾಲ ಸ್ವಾಮಿ ದೇವಾಲಯ ಕೂಡ ಒಂದು. ಕೆಆರ್‌ಎಸ್‌ ಹಿನ್ನೀರಿನಲ್ಲಿ ನೆಲೆಗೊಂಡಿರುವ ಈ ಸುಂದರ ದೇವಾಲಯವನ್ನು 12 ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದು, ಇದು ಮೈಸೂರಿನ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾಗಿದೆ.

4 / 8
ಬಾಲಕೃಷ್ಣ ದೇವಾಲಯ, ಹಂಪಿ: ಹಂಪಿಯ ಬಾಲಕೃಷ್ಣ ಮಂದಿರ ಐತಿಹಾಸಿಕ ಮಹತ್ವವನ್ನು ಪಡೆದಿರುವ ಕರ್ನಾಟಕದ ಪ್ರಮುಖ ದೇವಾಲಯವಾಗಿದೆ. 15 ನೇ ಶತಮಾನದಲ್ಲಿ ವಿಜಯ ನಗರ ಸಾಮ್ರಾಜ್ಯದ ಅರಸರ ಆಳ್ವಿಕೆಯ ಸಮಯದಲ್ಲಿ ನಿರ್ಮಾಣಗೊಂಡ ಈ ದೇವಾಲಕ್ಕೆ ಕೃಷ್ಣ ಜನ್ಮಾಷ್ಟಮಿಯ ದಿನ ನೀವು ಭೇಟಿ ನೀಡಬಹುದು.  ಈ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ವಿಜಯನಗರ ಸಾಮ್ರಾಜ್ಯದ ಸಮಯದ  ಕೆತ್ತನೆಗಳು, ವಾಸ್ತುಶಿಲ್ಪ ಮತ್ತು ಭವ್ಯತೆಯನ್ನು ಕಣ್ತುಂಬಿಕೊಳ್ಳಬಹುದು.

ಬಾಲಕೃಷ್ಣ ದೇವಾಲಯ, ಹಂಪಿ: ಹಂಪಿಯ ಬಾಲಕೃಷ್ಣ ಮಂದಿರ ಐತಿಹಾಸಿಕ ಮಹತ್ವವನ್ನು ಪಡೆದಿರುವ ಕರ್ನಾಟಕದ ಪ್ರಮುಖ ದೇವಾಲಯವಾಗಿದೆ. 15 ನೇ ಶತಮಾನದಲ್ಲಿ ವಿಜಯ ನಗರ ಸಾಮ್ರಾಜ್ಯದ ಅರಸರ ಆಳ್ವಿಕೆಯ ಸಮಯದಲ್ಲಿ ನಿರ್ಮಾಣಗೊಂಡ ಈ ದೇವಾಲಕ್ಕೆ ಕೃಷ್ಣ ಜನ್ಮಾಷ್ಟಮಿಯ ದಿನ ನೀವು ಭೇಟಿ ನೀಡಬಹುದು. ಈ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ವಿಜಯನಗರ ಸಾಮ್ರಾಜ್ಯದ ಸಮಯದ ಕೆತ್ತನೆಗಳು, ವಾಸ್ತುಶಿಲ್ಪ ಮತ್ತು ಭವ್ಯತೆಯನ್ನು ಕಣ್ತುಂಬಿಕೊಳ್ಳಬಹುದು.

5 / 8
ಬೇಲೂರು ಚೆನ್ನಕೇಶವ ದೇವಾಲಯ: ಕೃಷ್ಣನ ಪುರಾತನ ದೇವಾಲಯಗಳ ಪೈಕಿ ಹಾಸನ ಜಿಲ್ಲೆಯಲ್ಲಿರುವ ಬೇಲೂರು ಚೆನ್ನಕೇಶವ ದೇಗುಲ ಕೂಡ ಒಂದು. ಹೊಯ್ಸಳರ ಕಾಲದಲ್ಲಿ ನಿರ್ಮಾಣವಾದ ಈ ದೇವಾಲಯ ಅದರ ವಾಸ್ತುಶಿಲ್ಪ ಮತ್ತು ಭವ್ಯತೆಗೆ ಹೆಸರುವಾಸಿಯಾಗಿದೆ. ಕೃಷ್ಣಾಷ್ಟಮಿ ದಿನ ನೀವು ಈ ದೇಗುಲಕ್ಕೂ ಭೇಟಿ ನೀಡಬಹುದು.

ಬೇಲೂರು ಚೆನ್ನಕೇಶವ ದೇವಾಲಯ: ಕೃಷ್ಣನ ಪುರಾತನ ದೇವಾಲಯಗಳ ಪೈಕಿ ಹಾಸನ ಜಿಲ್ಲೆಯಲ್ಲಿರುವ ಬೇಲೂರು ಚೆನ್ನಕೇಶವ ದೇಗುಲ ಕೂಡ ಒಂದು. ಹೊಯ್ಸಳರ ಕಾಲದಲ್ಲಿ ನಿರ್ಮಾಣವಾದ ಈ ದೇವಾಲಯ ಅದರ ವಾಸ್ತುಶಿಲ್ಪ ಮತ್ತು ಭವ್ಯತೆಗೆ ಹೆಸರುವಾಸಿಯಾಗಿದೆ. ಕೃಷ್ಣಾಷ್ಟಮಿ ದಿನ ನೀವು ಈ ದೇಗುಲಕ್ಕೂ ಭೇಟಿ ನೀಡಬಹುದು.

6 / 8
ಶ್ರೀ ಗೋಪಾಲ ಕೃಷ್ಣ ದೇವಸ್ಥಾನ, ಮಂಗಳೂರು: ಮಂಗಳೂರಿನ ಅತ್ಯಂತ ಜನಪ್ರಿಯ ಕೃಷ್ಣ ದೇಗುಲವೆಂದರೆ ಶ್ರೀ ಗೋಪಾಲ ಕೃಷ್ಣ ದೇವಾಲಯ. ಇಲ್ಲಿ ಕೃಷ್ಣಾಷ್ಟಮಿಯನ್ನು ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೃಷ್ಣಾಷ್ಟಮಿಯಂದು ನೀವು ಇಲ್ಲಿಗೆ ತಪ್ಪದೆ ಭೇಟಿ ನೀಡಬೇಕು.

ಶ್ರೀ ಗೋಪಾಲ ಕೃಷ್ಣ ದೇವಸ್ಥಾನ, ಮಂಗಳೂರು: ಮಂಗಳೂರಿನ ಅತ್ಯಂತ ಜನಪ್ರಿಯ ಕೃಷ್ಣ ದೇಗುಲವೆಂದರೆ ಶ್ರೀ ಗೋಪಾಲ ಕೃಷ್ಣ ದೇವಾಲಯ. ಇಲ್ಲಿ ಕೃಷ್ಣಾಷ್ಟಮಿಯನ್ನು ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೃಷ್ಣಾಷ್ಟಮಿಯಂದು ನೀವು ಇಲ್ಲಿಗೆ ತಪ್ಪದೆ ಭೇಟಿ ನೀಡಬೇಕು.

7 / 8
ಅಪ್ರಮೇಯ ಅಂಬೆಗಾಲು ಕೃಷ್ಣ ದೇವಾಲಯ: ಚನ್ನಪಟ್ಟಣ ತಾಲೂಕಿನ ಮಾಳೂರು ಗ್ರಾಮದಲ್ಲಿರುವ  ಅಪ್ರಮೇಯ ಅಂಬೆಗಾಲು ಕೃಷ್ಣ ದೇವಾಲಯಕ್ಕೂ ನೀವು ಕೃಷ್ಣಜನ್ಮಾಷ್ಟಮಿಯ ದಿನ ಭೇಟಿ ನೀಡಬಹುದು.

ಅಪ್ರಮೇಯ ಅಂಬೆಗಾಲು ಕೃಷ್ಣ ದೇವಾಲಯ: ಚನ್ನಪಟ್ಟಣ ತಾಲೂಕಿನ ಮಾಳೂರು ಗ್ರಾಮದಲ್ಲಿರುವ ಅಪ್ರಮೇಯ ಅಂಬೆಗಾಲು ಕೃಷ್ಣ ದೇವಾಲಯಕ್ಕೂ ನೀವು ಕೃಷ್ಣಜನ್ಮಾಷ್ಟಮಿಯ ದಿನ ಭೇಟಿ ನೀಡಬಹುದು.

8 / 8
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!