ಏಪ್ರಿಲ್ 3ಕ್ಕಾಗಿ ಕಾದಿದ್ದಾರೆ ಕೃತಿ ಶೆಟ್ಟಿ; ಇದಕ್ಕಿದೆ ಮಹತ್ವದ ಕಾರಣ
ಕೃತಿ ಶೆಟ್ಟಿಗೆ ಏಪ್ರಿಲ್ 3 ವಿಶೇಷವಾಗಲು ಕಾರಣ ಏನು? ಆ ದಿನದಂದು ಅಂತಹ ವಿಶೇಷತೆ ಏನಿದೆ ಎನ್ನುವ ಕುತೂಹಲ ಮೂಡಬಹುದು. ಅದಕ್ಕೂ ಉತ್ತರ ಇದೆ.
Updated on: Apr 01, 2022 | 6:00 AM

ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಕ್ಕಿದೆ. ಬ್ಯಾಕ್ ಟು ಬ್ಯಾಕ್ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ. ಈಗ ಅವರು ಏಪ್ರಿಲ್ 3ಕ್ಕಾಗಿ ಕಾದಿದ್ದಾರೆ.

ಕೃತಿ ಶೆಟ್ಟಿಗೆ ಏಪ್ರಿಲ್ 3 ವಿಶೇಷವಾಗಲು ಕಾರಣ ಏನು? ಆ ದಿನದಂದು ಅಂತಹ ವಿಶೇಷತೆ ಏನಿದೆ ಎನ್ನುವ ಕುತೂಹಲ ಮೂಡಬಹುದು. ಅದಕ್ಕೂ ಉತ್ತರ ಇದೆ. ಸೂರ್ಯ ನಟನೆಯ 41ನೇ ಸಿನಿಮಾಗೆ ನಾಯಕಿ ಆಗಿದ್ದಾರೆ ಕೃತಿ. ಈ ಚಿತ್ರದ ಮೊದಲ ದಿನದ ಶೂಟಿಂಗ್ ಏಪ್ರಿಲ್ 3ರಂದು ಆರಂಭವಾಗಲಿದೆ.

ಬಾಲ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಸಿದ್ಧಪಡಿಸಲಾಗುತ್ತಿದೆ. ಈ ಚಿತ್ರ ತೆಲುಗಿಗೂ ಡಬ್ ಆಗಿ ತೆರೆಕಾಣುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಏಪ್ರಿಲ್ 3 ಯಾಕೆ ವಿಶೇಷ ಎಂದು ಕೃತಿ ಹೇಳಿಕೊಂಡಿದ್ದಾರೆ.

‘ನಾನು ಸೂರ್ಯ ಅವರ ದೊಡ್ಡ ಫ್ಯಾನ್. ಈಗ ಅವರ ಜತೆ ನಟಿಸುತ್ತಿದ್ದೇನೆ. ಏನೋ ಒಂದು ಭಯ ಕಾಡುತ್ತಿದೆ. ಏಪ್ರಿಲ್ 3ರಂದು ಶೂಟಿಂಗ್ ಆರಂಭಗೊಳ್ಳಲಿದೆ. ಮೊದಲ ದಿನವನ್ನು ಹೇಗೆ ನಿಭಾಯಿಸಬೇಕೋ ತಿಳಿದಿಲ್ಲ. ಆ ದಿನಕ್ಕಾಗಿ ಕಾಯುತ್ತಿದ್ದೇನೆ’ ಎಂದಿದ್ದಾರೆ ಅವರು. ಏಪ್ರಿಲ್ 3ರಂದು ಕನ್ಯಾಕುಮಾರಿಯಲ್ಲಿ ಈ ಚಿತ್ರದ ಶೂಟಿಂಗ್ ಆರಂಭಗೊಳ್ಳಲಿದೆ.

‘ಉಪ್ಪೇನಾ’ ಕೃತಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ‘ಶ್ಯಾಮ್ ಸಿಂಗ ರಾಯ್’ ಚಿತ್ರ ಕೂಡ ಗೆಲುವು ಕಂಡಿದೆ.

TV9 Kannada
Read More



