AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC: ತಿಂಗಳಾಂತ್ಯಕ್ಕೆ ರಸ್ತೆಗೆ ಇಳಿಯಲಿವೆ ಐರಾವತ ಕ್ಲಬ್ ಕ್ಲಾಸ್ 2.0 ಬಸ್​ಗಳು​​

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ)ಯ ಹೊಸ 20 ಬಸ್ಸುಗಳು ಈ ತಿಂಗಳ ಕೊನೆಯ ವಾರದಲ್ಲಿ ನಿಗಮಕ್ಕೆ ಸೇರ್ಪಡೆಗೊಳ್ಳಲಿವೆ. ಒಂದು ಬಸ್ಸಿನ ದರ ರೂ.1.78 ಕೋಟಿ ರೂಪಾಯಿ ಆಗಿದೆ.

ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Oct 08, 2024 | 7:47 AM

Share
KSRTC Set to launch Airavata Club Class 2.0 buses

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ರಸ್ತೆಗೆ ಇಳಿಸುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಕೆಎಸ್​ಆರ್​​ಟಿಸಿ ಬಸ್​ಗಳು ದೇಶದಲ್ಲೇ ಅತ್ಯಂತ ಆಕರ್ಷಣೀಯ ಬಸ್​​ಗಳಾಗಿವೆ.

1 / 5
KSRTC Set to launch Airavata Club Class 2.0 buses

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ)ಯ ಹೊಸ 20 ಬಸ್ಸುಗಳು ಈ ತಿಂಗಳ ಕೊನೆಯ ವಾರದಲ್ಲಿ ಸೇರ್ಪಡೆಗೊಳ್ಳಲಿವೆ. ಒಂದು ಬಸ್ಸಿನ ದರ ರೂ.1.78 ಕೋಟಿ ರೂಪಾಯಿ ಆಗಿದೆ.

2 / 5
KSRTC Set to launch Airavata Club Class 2.0 buses

ಕೆಎಸ್​ಆರ್​ಟಿಸಿ ನಿಗಮದಲ್ಲಿ ಒಟ್ಟು 443 ಐಷಾರಾಮಿ ಬಸ್ಸುಗಳಿದ್ದು, ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ ಬಸ್​ಗಳು ಹೆಚ್ಚು ವಿಶೇಷತೆ ಹೊಂದಿವೆ. ಈ ಬಸ್ಸಿನಲ್ಲಿ ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿದೆ.

3 / 5
KSRTC Set to launch Airavata Club Class 2.0 buses

ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. ಉಳಿದ ಬಸ್​​ಗಳಿಗಿಂತ ಈ ಹೊಸ ಬಸ್ಸಿನ ಉದ್ದ ಶೇ3.5 ರಷ್ಟು ಮತ್ತು ಎತ್ತರದಲ್ಲಿ ಶೇ5.6 ಹೆಚ್ಚಳ ಇರುವುದರಿಂದ ಸೀಟ್​ಗಳ ನಡುವಿನ ಅಂತರ ಮತ್ತು ಹೆಚ್ಚಿನ ಹೆಡ್‌ ರೂಂ ಇರುತ್ತದೆ. ಜೊತೆಗೆ USB+ C ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಉತ್ತಮ ಎಸಿ, ಫೈರ್ ಅಲಾರ್ಮ್, ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ.

4 / 5
KSRTC Set to launch Airavata Club Class 2.0 buses

ಈ ನೂತನ ಬಸ್​ಗಳನ್ನು ಸಾರಿಗೆ ಸಚಿವ ರಾಮಲಿಂಗರೆಡ್ಡಿ,KSRTC ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ ಅವರು ಹೊಸಕೋಟೆ ಬಳಿ ಇರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ಪರಿವೀಕ್ಷಿಸಿದರು.

5 / 5

Published On - 7:47 am, Tue, 8 October 24

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ