ಮಳೆಯಲ್ಲೂ ಲಾಲ್‌ಬಾಗ್ ಫ್ಲವರ್ ಶೋಗೆ ಭರ್ಜರಿ ಸ್ಪಂದನೆ: ಗಂಗರ ಸುವರ್ಣ ವೈಭವ ಕಣ್ತುಂಬಿಕೊಂಡವರೆಷ್ಟು ಗೊತ್ತಾ?

Updated on: Aug 07, 2026 | 10:51 PM

Lalbagh Flower Show 2026: ಸ್ವಾತಂತ್ರ್ಯೋತ್ಸವ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಲಕ್ಷಾಂತರ ಹೂಗಳಲ್ಲಿ ಗಂಗರ ಚರಿತ್ರೆ ಅನಾವರಣಗೊಂಡಿದೆ. ಸದ್ಯ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದ್ದು, ಎರಡು ದಿನಗಳಲ್ಲಿ 60,000ಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಫೋಟೋಸ್​ ಇಲ್ಲಿವೆ ನೋಡಿ.

1 / 6
ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ನಲ್ಲಿ ವೈಭವದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಸಿಕ್ಕಿದ್ದು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಇದನ್ನು ವೀಕ್ಷಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ನಲ್ಲಿ ವೈಭವದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಸಿಕ್ಕಿದ್ದು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಇದನ್ನು ವೀಕ್ಷಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

2 / 6
ಗಂಗರ ಆಡಳಿತ, ಚೋಳರ ಇತಿಹಾಸ ಹಾಗೂ ಕಾವೇರಿ ತೀರದ ಹೋರಾಟಗಳ ವಿಷಯಾಧಾರಿತವಾಗಿ ವಿನ್ಯಾಸಗೊಂಡಿರುವ ಈ ಬಾರಿಯ ಮನಮೋಹಕ ಫಲಪುಷ್ಪ ಪ್ರದರ್ಶನವನ್ನು, ಸಿಲಿಕಾನ್ ಸಿಟಿ ಮಂದಿ ಜಿಟಿ ಜಿಟಿ ಮಳೆಯ ನಡುವೆಯೂ ಕಣ್ತುಂಬಿಕೊಳ್ಳುತ್ತಿದ್ದಾರೆ.

ಗಂಗರ ಆಡಳಿತ, ಚೋಳರ ಇತಿಹಾಸ ಹಾಗೂ ಕಾವೇರಿ ತೀರದ ಹೋರಾಟಗಳ ವಿಷಯಾಧಾರಿತವಾಗಿ ವಿನ್ಯಾಸಗೊಂಡಿರುವ ಈ ಬಾರಿಯ ಮನಮೋಹಕ ಫಲಪುಷ್ಪ ಪ್ರದರ್ಶನವನ್ನು, ಸಿಲಿಕಾನ್ ಸಿಟಿ ಮಂದಿ ಜಿಟಿ ಜಿಟಿ ಮಳೆಯ ನಡುವೆಯೂ ಕಣ್ತುಂಬಿಕೊಳ್ಳುತ್ತಿದ್ದಾರೆ.

3 / 6
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವು ಜನರನ್ನು ಸೆಳೆಯುತ್ತಿದ್ದು, ಪ್ರದರ್ಶನ ಆರಂಭವಾದ ಕೇವಲ ಎರಡೇ ದಿನಗಳಲ್ಲಿ ಬರೋಬ್ಬರಿ 60 ಸಾವಿರಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ.

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವು ಜನರನ್ನು ಸೆಳೆಯುತ್ತಿದ್ದು, ಪ್ರದರ್ಶನ ಆರಂಭವಾದ ಕೇವಲ ಎರಡೇ ದಿನಗಳಲ್ಲಿ ಬರೋಬ್ಬರಿ 60 ಸಾವಿರಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ.

4 / 6
ಕೆಂಪೇಗೌಡರು ಬೆಂಗಳೂರು ಕಟ್ಟಿದರೆ, ಹೈದರಾಲಿ ಹಾಗೂ ಬ್ರಿಟಿಷರು ಲಾಲ್‌ಬಾಗ್ ಅಭಿವೃದ್ಧಿಪಡಿಸಿದರು ಎಂದ ಸಿಎಂ, ನಗರದಾದ್ಯಂತ ಹಸಿರು ವಲಯ ಹೆಚ್ಚಿಸಲು ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ತಿಳಿಸಿದರು.

ಕೆಂಪೇಗೌಡರು ಬೆಂಗಳೂರು ಕಟ್ಟಿದರೆ, ಹೈದರಾಲಿ ಹಾಗೂ ಬ್ರಿಟಿಷರು ಲಾಲ್‌ಬಾಗ್ ಅಭಿವೃದ್ಧಿಪಡಿಸಿದರು ಎಂದ ಸಿಎಂ, ನಗರದಾದ್ಯಂತ ಹಸಿರು ವಲಯ ಹೆಚ್ಚಿಸಲು ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ತಿಳಿಸಿದರು.

5 / 6
ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿಯಲ್ಲೇ ಮೂರು ಬೃಹತ್ ಉದ್ಯಾನವನಗಳನ್ನು ನಿರ್ಮಿಸಲು ಜಾಗ ಗುರುತಿಸಲಾಗಿದ್ದು, ಈ ಸಂಬಂಧ ಕೇಂದ್ರ ರಕ್ಷಣಾ ಸಚಿವರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಶೀಘ್ರದಲ್ಲೇ ಮಾತುಕತೆ ನಡೆಸಲಾಗುವುದು ಎಂದಿದ್ದಾರೆ.

ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿಯಲ್ಲೇ ಮೂರು ಬೃಹತ್ ಉದ್ಯಾನವನಗಳನ್ನು ನಿರ್ಮಿಸಲು ಜಾಗ ಗುರುತಿಸಲಾಗಿದ್ದು, ಈ ಸಂಬಂಧ ಕೇಂದ್ರ ರಕ್ಷಣಾ ಸಚಿವರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಶೀಘ್ರದಲ್ಲೇ ಮಾತುಕತೆ ನಡೆಸಲಾಗುವುದು ಎಂದಿದ್ದಾರೆ.

6 / 6
ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 15 ರಂದು ರಾಜ್ಯಾದ್ಯಂತ ಹಸಿರು ಬೆಳೆಸುವ ಅಭಿಯಾನ ಹಾಗೂ ರೈತರ ಬದುಕಿಗೆ ಉತ್ತೇಜನ ನೀಡುವ 100 ದಿನಗಳ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸರ್ಕಾರ ರೂಪರೇಖೆ ಸಿದ್ಧಪಡಿಸುತ್ತಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 15 ರಂದು ರಾಜ್ಯಾದ್ಯಂತ ಹಸಿರು ಬೆಳೆಸುವ ಅಭಿಯಾನ ಹಾಗೂ ರೈತರ ಬದುಕಿಗೆ ಉತ್ತೇಜನ ನೀಡುವ 100 ದಿನಗಳ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸರ್ಕಾರ ರೂಪರೇಖೆ ಸಿದ್ಧಪಡಿಸುತ್ತಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

Loading...
Unable to load recommendations.
Follow Us