AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಕಾಂತಿ ಜೊತೆ ಫೋಟೋಗಾಗಿ ಮುಗಿಬಿದ್ದ ಜನ, ಲಾಸ್ ತುಂಬಿಕೊಳ್ಳಲು‌ ಹೊಸ ಐಡಿಯಾ ಕಂಡುಕೊಂಡ ರೈತ

ಚಾಮರಾಜನಗರ ಜಿಲ್ಲೆಯಲ್ಲಿ ಈ ಬಾರಿ ಪೂರ್ವಮುಂಗಾರು ಮಳೆ ಉತ್ತಮವಾಗಿದೆ. ಹಾಗಾಗಿ ಗುಂಡ್ಲುಪೇಟೆ ತಾಲೂಕಿನಲ್ಲಿ ಭರ್ಜರಿ ಸೂರ್ಯಕಾಂತಿ,ಚೆಂಡು ಹೂ ಬೆಳೆದು ನಿಂತಿದೆ. ಅದರಲ್ಲೂ ಗುಂಡ್ಲುಪೇಟೆಯಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 67 ಹಾಗೂ ಇನ್ನೊಂದೆಡೆ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 ರ ಇಕ್ಕೆಲದ ಜಮೀನುಗಳಲ್ಲಿ ರೈತರು ಬೆಳೆದಿರುವ ಸೂರ್ಯಕಾಂತಿ ಬೆಳೆ ಸೌಂದರ್ಯದ ಲೋಕದಂತೆ ಕಂಗೊಳಿಸುತ್ತಿವೆ. ಕೂಡ ಸೂರ್ಯಕಾಂತಿ ಹೂವು ಅರಳಿ ನಿಂತಿರುವುದನ್ನು ನೋಡಿದರೆ ಮನಸ್ಸಿಗೆ ಮುದ ನೀಡುತ್ತದೆ. ಹಾಗಾಗಿ ಪ್ರವಾಸಿಗರೆಲ್ಲ ಸೂರ್ಯಕಾಂತಿ ಬೆಳೆದಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯ ಸೂರ್ಯಕಾಂತಿ ಜಮೀನುಗಳಿಗೆ ಅತಿಕ್ರಮವಾಗಿ ಪ್ರವೇಶಿಸಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಹೀಗಾಗಿ ಜಮೀನಿನ ಮಾಲೀಕ ಫೋಟೋ ಕ್ಲಿಕ್ಕಿಸಿಕೊಳ್ಳಲು ದರ ನಿಗದಿ ಮಾಡಿದ್ದಾರೆ.

TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jun 01, 2023 | 12:21 PM

Share
ಚಾಮರಾಜನಗರ ಜಿಲ್ಲೆಯಲ್ಲಿ ಈ ಬಾರಿ ಪೂರ್ವಮುಂಗಾರು ಮಳೆ ಉತ್ತಮವಾಗಿದೆ. ಹಾಗಾಗಿ ಗುಂಡ್ಲುಪೇಟೆ ತಾಲೂಕಿನಲ್ಲಿ ಭರ್ಜರಿ ಸೂರ್ಯಕಾಂತಿ,ಚೆಂಡು ಹೂ ಬೆಳೆದು ನಿಂತಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಈ ಬಾರಿ ಪೂರ್ವಮುಂಗಾರು ಮಳೆ ಉತ್ತಮವಾಗಿದೆ. ಹಾಗಾಗಿ ಗುಂಡ್ಲುಪೇಟೆ ತಾಲೂಕಿನಲ್ಲಿ ಭರ್ಜರಿ ಸೂರ್ಯಕಾಂತಿ,ಚೆಂಡು ಹೂ ಬೆಳೆದು ನಿಂತಿದೆ.

1 / 11
ಮೈಸೂರು-ಊಟಿ-ಕೇರಳ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜಮೀನಿನಲ್ಲಿ ಈ ರೈತ ಸೂರ್ಯಕಾಂತಿ ಬೆಳೆ ಬೆಳೆದಿದ್ದು, ಇದು ಈಗ ಸುಂದರವಾದ ಹೂ ಬಿಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಮೈಸೂರು-ಊಟಿ-ಕೇರಳ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜಮೀನಿನಲ್ಲಿ ಈ ರೈತ ಸೂರ್ಯಕಾಂತಿ ಬೆಳೆ ಬೆಳೆದಿದ್ದು, ಇದು ಈಗ ಸುಂದರವಾದ ಹೂ ಬಿಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

2 / 11
ಪ್ರವಾಸಿಗರೆಲ್ಲ ಸೂರ್ಯಕಾಂತಿ ಬೆಳೆದಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯ ಸೂರ್ಯಕಾಂತಿ ಜಮೀನುಗಳಿಗೆ ಅತಿಕ್ರಮವಾಗಿ ಪ್ರವೇಶಿಸಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ.

ಪ್ರವಾಸಿಗರೆಲ್ಲ ಸೂರ್ಯಕಾಂತಿ ಬೆಳೆದಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯ ಸೂರ್ಯಕಾಂತಿ ಜಮೀನುಗಳಿಗೆ ಅತಿಕ್ರಮವಾಗಿ ಪ್ರವೇಶಿಸಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ.

3 / 11
 ಸೂರ್ಯಕಾಂತಿ ಹೊಲದಲ್ಲಿ  ಫೋಟೋ ಕ್ಲಿಕ್ಕಿಸಿಕೊಳ್ಳಲು ಜಮೀನಿನ ಮಾಲೀಕ ದರ ನಿಗದಿ ಮಾಡಿದ್ದಾರೆ.

ಸೂರ್ಯಕಾಂತಿ ಹೊಲದಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಜಮೀನಿನ ಮಾಲೀಕ ದರ ನಿಗದಿ ಮಾಡಿದ್ದಾರೆ.

4 / 11
ಫೋಟೋ ಕ್ಲಿಕ್ಕಿಸಿಕೊಳ್ಳಲು ಬರುತ್ತಿರುವ ಪ್ರತಿಯೊಬ್ಬರಿಗೂ 10 ರೂ ಸಂಗ್ರಹ ಮಾಡುತ್ತಿರುವ ಜಮೀನು ಮಾಲೀಕ.

ಫೋಟೋ ಕ್ಲಿಕ್ಕಿಸಿಕೊಳ್ಳಲು ಬರುತ್ತಿರುವ ಪ್ರತಿಯೊಬ್ಬರಿಗೂ 10 ರೂ ಸಂಗ್ರಹ ಮಾಡುತ್ತಿರುವ ಜಮೀನು ಮಾಲೀಕ.

5 / 11
ಇನ್ನೂ ಪ್ರವಾಸಿಗರು ಸೆಲ್ಪಿ ಹೊಡೆದುಕೊಳ್ಳುವ ವೇಳೆ ಗಿಡಗಳು  ಹಾನಿಗೀಡಾಗುವ ಸಂಭವವಿದೆ. ಫೋಟೋ ಹಾಗೂ ಸೆಲ್ಪಿ ತೆಗೆದುಕೊಳ್ಳುಲು ಬರುವವರಿಂದ ಸೂರ್ಯಕಾಂತಿ ಗಿಡಗಳು ಮುರಿದು ಹಾಳಾಗಿ ರೈತರಿಗೆ ನಷ್ಟವಾಗುವ ಸಂಭವ ಇದೆ. ಹಾಗಾಗಿ ಈ ನಷ್ಟ ತಪ್ಪಿಸಿಕೊಳ್ಳಲು ರೈತರು ಉಪಾಯವೊಂದನ್ನು ಕಂಡುಕೊಂಡಿದ್ದಾರೆ.

ಇನ್ನೂ ಪ್ರವಾಸಿಗರು ಸೆಲ್ಪಿ ಹೊಡೆದುಕೊಳ್ಳುವ ವೇಳೆ ಗಿಡಗಳು ಹಾನಿಗೀಡಾಗುವ ಸಂಭವವಿದೆ. ಫೋಟೋ ಹಾಗೂ ಸೆಲ್ಪಿ ತೆಗೆದುಕೊಳ್ಳುಲು ಬರುವವರಿಂದ ಸೂರ್ಯಕಾಂತಿ ಗಿಡಗಳು ಮುರಿದು ಹಾಳಾಗಿ ರೈತರಿಗೆ ನಷ್ಟವಾಗುವ ಸಂಭವ ಇದೆ. ಹಾಗಾಗಿ ಈ ನಷ್ಟ ತಪ್ಪಿಸಿಕೊಳ್ಳಲು ರೈತರು ಉಪಾಯವೊಂದನ್ನು ಕಂಡುಕೊಂಡಿದ್ದಾರೆ.

6 / 11
ಯಾರೇ ಆಗಲಿ ಸೂರ್ಯಕಾಂತಿ ಹೊಲದಲ್ಲಿ ಫೋಟೋ ಅಥವಾ ಸೆಲ್ಪಿ ತೆಗೆದುಕೊಳ್ಳಲು ಜಮೀನಿನ ರೈತನಿಗೆ ತಲಾ ಹತ್ತು ರೂಪಾಯಿ ನೀಡಬೇಕು.

ಯಾರೇ ಆಗಲಿ ಸೂರ್ಯಕಾಂತಿ ಹೊಲದಲ್ಲಿ ಫೋಟೋ ಅಥವಾ ಸೆಲ್ಪಿ ತೆಗೆದುಕೊಳ್ಳಲು ಜಮೀನಿನ ರೈತನಿಗೆ ತಲಾ ಹತ್ತು ರೂಪಾಯಿ ನೀಡಬೇಕು.

7 / 11
ಸೆಲ್ಪಿಗೆ ದರ ನಿಗಧಿಪಡಿಸಿರುವುದರಿಂದ ಒಂದೆಡೆ ರೈತರಿಗೆ ವರಮಾನವೂ ಬಂದಂತೆ ಆಗುತ್ತಿದೆ.

ಸೆಲ್ಪಿಗೆ ದರ ನಿಗಧಿಪಡಿಸಿರುವುದರಿಂದ ಒಂದೆಡೆ ರೈತರಿಗೆ ವರಮಾನವೂ ಬಂದಂತೆ ಆಗುತ್ತಿದೆ.

8 / 11
ಇನ್ನೊಂದೆಡೆ ರೈತರಿಗೆ ತಮ್ಮ ಬೆಳೆಯನ್ನು ಕಾದು ರಕ್ಷಣೆ ಮಾಡಿದಂತೆ ಆಗುತ್ತಿದೆ

ಇನ್ನೊಂದೆಡೆ ರೈತರಿಗೆ ತಮ್ಮ ಬೆಳೆಯನ್ನು ಕಾದು ರಕ್ಷಣೆ ಮಾಡಿದಂತೆ ಆಗುತ್ತಿದೆ

9 / 11
ಈ ಬಾರಿ ಉತ್ತಮವಾಗಿ ಬೆಳೆದಿರುವ ಸೂರ್ಯಕಾಂತಿ ಬೆಳೆ ತನ್ನ ಅಂದ ಚಂದದಿಂದ ಪ್ರವಾಸಿಗರಿಗೆ ಮುದ ನೀಡಿದರೆ, ಬೆವರು ಸುರಿಸಿ ಬೆಳೆದ ರೈತನಿಗೂ ಲಾಭ ಮಾಡಿಕೊಡುತ್ತಿದೆ..

ಈ ಬಾರಿ ಉತ್ತಮವಾಗಿ ಬೆಳೆದಿರುವ ಸೂರ್ಯಕಾಂತಿ ಬೆಳೆ ತನ್ನ ಅಂದ ಚಂದದಿಂದ ಪ್ರವಾಸಿಗರಿಗೆ ಮುದ ನೀಡಿದರೆ, ಬೆವರು ಸುರಿಸಿ ಬೆಳೆದ ರೈತನಿಗೂ ಲಾಭ ಮಾಡಿಕೊಡುತ್ತಿದೆ..

10 / 11
ಒಟ್ಟಾರೆ ಕರ್ನಾಟಕ, ತಮಿಳುನಾಡು ಹಾಗು ಕೇರಳ ರಾಜ್ಯಗಳಿಗೆ ಈ ಹೆದ್ದಾರಿಗಳಲ್ಲಿ ಸಂಚರಿಸುವಾಗ ರಸ್ತೆಯ ಎರಡು ಕಡೆ ಹೂವಿನ ಚೆಲುವನ್ಬು ಸವಿಯದ ಪ್ರವಾಸಿಗನಿಲ್ಲ, ಮನಸ್ಸಿನಲ್ಲಿ ಎಷ್ಟೆ ಬೇಸರವಿದ್ದರು ಹೂವಿನ ಬಣ್ಣ  ಸುವಾಸನೆ ಸೆಳೆದು ಬಿಡುತ್ತದೆ. ಪ್ರವಾಸಿಗರ ಮನಸ್ಸನ್ನು ಉಲ್ಲಾಸಗೊಳಿಸಿ ಯಾವುದೋ ಬೇರೆ ಲೋಕಕ್ಕೆ ಕರೆದುಕೊಂಡು ಹೋಗುತ್ತದೆ  ಪ್ರವಾಸಿಗರನ್ನು ಸೂರ್ಯಕಾಂತಿ ತನ್ನ ಅಂದಚಂದದಿಂದ ಕೈ ಬೀಸಿ ಕರೆಯುತ್ತಿದೆ

ಒಟ್ಟಾರೆ ಕರ್ನಾಟಕ, ತಮಿಳುನಾಡು ಹಾಗು ಕೇರಳ ರಾಜ್ಯಗಳಿಗೆ ಈ ಹೆದ್ದಾರಿಗಳಲ್ಲಿ ಸಂಚರಿಸುವಾಗ ರಸ್ತೆಯ ಎರಡು ಕಡೆ ಹೂವಿನ ಚೆಲುವನ್ಬು ಸವಿಯದ ಪ್ರವಾಸಿಗನಿಲ್ಲ, ಮನಸ್ಸಿನಲ್ಲಿ ಎಷ್ಟೆ ಬೇಸರವಿದ್ದರು ಹೂವಿನ ಬಣ್ಣ ಸುವಾಸನೆ ಸೆಳೆದು ಬಿಡುತ್ತದೆ. ಪ್ರವಾಸಿಗರ ಮನಸ್ಸನ್ನು ಉಲ್ಲಾಸಗೊಳಿಸಿ ಯಾವುದೋ ಬೇರೆ ಲೋಕಕ್ಕೆ ಕರೆದುಕೊಂಡು ಹೋಗುತ್ತದೆ ಪ್ರವಾಸಿಗರನ್ನು ಸೂರ್ಯಕಾಂತಿ ತನ್ನ ಅಂದಚಂದದಿಂದ ಕೈ ಬೀಸಿ ಕರೆಯುತ್ತಿದೆ

11 / 11
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ