AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಪಂಚೆ, ಶರ್ಟು, ಸೀರೆ, ದಾವಣಿ ತೊಟ್ಟು ಮಿಂಚಿದ ಕಾನೂನು ವಿದ್ಯಾರ್ಥಿಗಳು

ಅವರೆಲ್ಲ ಕಾನೂನು ವಿದ್ಯಾರ್ಥಿಗಳು. ಪ್ರತಿದಿನ ಕಾನೂನು, ಸೆಕ್ಷನ್, ವಾದ-ಪ್ರತಿವಾದ ಅಂತೆಲ್ಲ ಶಿಕ್ಷಣ ಪಡೆಯುವವರು. ಆದರೆ, ಆ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಫನ್ ವೀಕ್ ಆಚರಿಸಲಾಗುತ್ತಿದೆ. ಅದರ ಅಂಗವಾಗಿ ಇಂದು(ಗುರುವಾರ) ನಡೆದ ದಿನ ವಿಲೇಜ್ ಡೇ. ಒಂದು ದಿನ ಎಲ್ಲ ವಿದ್ಯಾರ್ಥಿಗಳು ರೈತರ ಹೆಸರಿನಲ್ಲಿ ಸಾಂಪ್ರದಾಯಿಕ ದಿನವನ್ನು ಆಚರಿಸಿದ್ದಾರೆ. ಹೇಗಿತ್ತು ವಿಲೇಜ್ ಡೇ ಹವಾ ಅಂತೀರಾ? ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Aug 01, 2024 | 6:19 PM

Share
 ಧಾರವಾಡ ನಗರದ ಸರ್. ಸಿದ್ದಪ್ಪ ಕಂಬಳಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು, ಪಂಚೆ, ಶರ್ಟು, ಸೀರೆ, ಲಂಗಾ, ದಾವಣಿ ತೊಟ್ಟು ಸಾಂಪ್ರದಾಯಿಕ ವಸ್ತ್ರಗಳಲ್ಲಿ ಮಿಂಚಿದ್ದಾರೆ. ಈ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಫನ್ ವೀಕ್ ಆಚರಿಸಲಾಗುತ್ತಿದೆ. ಅದರ ಅಂಗವಾಗಿ ಇಂದು ವಿಲೇಜ್ ಡೇ ನಡೆದಿದೆ.

ಧಾರವಾಡ ನಗರದ ಸರ್. ಸಿದ್ದಪ್ಪ ಕಂಬಳಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು, ಪಂಚೆ, ಶರ್ಟು, ಸೀರೆ, ಲಂಗಾ, ದಾವಣಿ ತೊಟ್ಟು ಸಾಂಪ್ರದಾಯಿಕ ವಸ್ತ್ರಗಳಲ್ಲಿ ಮಿಂಚಿದ್ದಾರೆ. ಈ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಫನ್ ವೀಕ್ ಆಚರಿಸಲಾಗುತ್ತಿದೆ. ಅದರ ಅಂಗವಾಗಿ ಇಂದು ವಿಲೇಜ್ ಡೇ ನಡೆದಿದೆ.

1 / 6
ಈ ದಿನ ಎಲ್ಲ ವಿದ್ಯಾರ್ಥಿಗಳು ತರಗತಿ ಹಾಗೂ ಅಭ್ಯಾಸವನ್ನು ಬದಿಗಿಟ್ಟು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು. ಮೊದಲಿಗೆ ಕಾಲೇಜು ಮುಂಭಾಗದಲ್ಲಿ ತಳಿರು-ತೋರಣ ಕಟ್ಟಿ, ರಂಗೋಲಿ ಹಾಕಿ ಅಲಂಕಾರ ಮಾಡಿದ್ದರು.

ಈ ದಿನ ಎಲ್ಲ ವಿದ್ಯಾರ್ಥಿಗಳು ತರಗತಿ ಹಾಗೂ ಅಭ್ಯಾಸವನ್ನು ಬದಿಗಿಟ್ಟು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು. ಮೊದಲಿಗೆ ಕಾಲೇಜು ಮುಂಭಾಗದಲ್ಲಿ ತಳಿರು-ತೋರಣ ಕಟ್ಟಿ, ರಂಗೋಲಿ ಹಾಕಿ ಅಲಂಕಾರ ಮಾಡಿದ್ದರು.

2 / 6
ಬಳಿಕ ಕಾಲೇಜಿನಲ್ಲಿ ಗಣಪತಿ ಪೂಜೆ ಮಾಡಿ ಭಕ್ತಿಯನ್ನು ಮೆರೆದರು. ಈ ವೇಳೆ ಒಬ್ಬರಿಗಿಂತ ಒಬ್ಬರು ಗಮನ ಸೆಳೆಯುವ ರೀತಿಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

ಬಳಿಕ ಕಾಲೇಜಿನಲ್ಲಿ ಗಣಪತಿ ಪೂಜೆ ಮಾಡಿ ಭಕ್ತಿಯನ್ನು ಮೆರೆದರು. ಈ ವೇಳೆ ಒಬ್ಬರಿಗಿಂತ ಒಬ್ಬರು ಗಮನ ಸೆಳೆಯುವ ರೀತಿಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

3 / 6
ಅಲ್ಲದೇ ಕಾಲೇಜಿನಲ್ಲಿ ಟ್ರ್ಯಾಕ್ಟರ್ ಮತ್ತು ಚಕ್ಕಡಿಯನ್ನೂ ತೆಗೆದುಕೊಂಡು ಬಂದು, ವಿದ್ಯಾರ್ಥಿಗಳು ಅವುಗಳಲ್ಲಿ ಕುಳಿತು ಒಂದು ಸುತ್ತು ಹಾದು ಬಂದರು. ಇನ್ನು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಆಚರಣೆ ಮಾಡಿದ ಈ ವಿಲೇಜ್ ಡೇ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಕೂಡ ಭಾಗವಹಿಸಿದರು.

ಅಲ್ಲದೇ ಕಾಲೇಜಿನಲ್ಲಿ ಟ್ರ್ಯಾಕ್ಟರ್ ಮತ್ತು ಚಕ್ಕಡಿಯನ್ನೂ ತೆಗೆದುಕೊಂಡು ಬಂದು, ವಿದ್ಯಾರ್ಥಿಗಳು ಅವುಗಳಲ್ಲಿ ಕುಳಿತು ಒಂದು ಸುತ್ತು ಹಾದು ಬಂದರು. ಇನ್ನು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಆಚರಣೆ ಮಾಡಿದ ಈ ವಿಲೇಜ್ ಡೇ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಕೂಡ ಭಾಗವಹಿಸಿದರು.

4 / 6
ಈ ದಿನವನ್ನು ರೈತರಿಗಾಗಿ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಸಮರ್ಪಿಸಿದ್ದು ವಿಶೇಷವಾಗಿತ್ತು. ಹಳ್ಳಿಗರ ಹಾಗೂ ರೈತರ ಹೆಸರಿನಲ್ಲಿ ಈ ದಿನ ಎಲ್ಲ ವಿದ್ಯಾರ್ಥಿಗಳು ಸಾಂಪ್ರದಾಯಿಕ ದಿನ ಆಚರಿಸಿದ್ದು, ಖುಷಿ ತಂದಿತು ಎಂದು ವಿದ್ಯಾರ್ಥಿನಿಯರು ಅಭಿಪ್ರಾಯ ಹಂಚಿಕೊಂಡರು.

ಈ ದಿನವನ್ನು ರೈತರಿಗಾಗಿ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಸಮರ್ಪಿಸಿದ್ದು ವಿಶೇಷವಾಗಿತ್ತು. ಹಳ್ಳಿಗರ ಹಾಗೂ ರೈತರ ಹೆಸರಿನಲ್ಲಿ ಈ ದಿನ ಎಲ್ಲ ವಿದ್ಯಾರ್ಥಿಗಳು ಸಾಂಪ್ರದಾಯಿಕ ದಿನ ಆಚರಿಸಿದ್ದು, ಖುಷಿ ತಂದಿತು ಎಂದು ವಿದ್ಯಾರ್ಥಿನಿಯರು ಅಭಿಪ್ರಾಯ ಹಂಚಿಕೊಂಡರು.

5 / 6
ಒಟ್ಟಾರೆ ಕಾನೂನು ಕಾಲೇಜಿನಲ್ಲಿ ನಡೆದ ‘ಫನ್ ವೀಕ್’ ವಿದ್ಯಾರ್ಥಿಗಳಿಗೆ ಹೊಸ ಬಗೆಯ ಜಗತ್ತಿನ ಪರಿಚಯ ಮಾಡಿಸಿದರೆ, ಇಂದು ನಡೆದ ವಿಲೇಜ್ ಡೇ ಮಾತ್ರ ಹಳ್ಳಿಗರ ಬದುಕನ್ನು ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಟ್ಟಿತು. ಕಾನೂನು ಓದುವ ಎಲ್ಲ ವಿದ್ಯಾರ್ಥಿಗಳು ಒಂದು ದಿನ ಗ್ರಾಮೀಣ ಸಂಪ್ರದಾಯದ ಉಡುಗೆ ಧರಿಸಿದ್ದು ಎಲ್ಲರ ಗಮನ ಸೆಳೆದಿದ್ದಂತೂ ನಿಜ.

ಒಟ್ಟಾರೆ ಕಾನೂನು ಕಾಲೇಜಿನಲ್ಲಿ ನಡೆದ ‘ಫನ್ ವೀಕ್’ ವಿದ್ಯಾರ್ಥಿಗಳಿಗೆ ಹೊಸ ಬಗೆಯ ಜಗತ್ತಿನ ಪರಿಚಯ ಮಾಡಿಸಿದರೆ, ಇಂದು ನಡೆದ ವಿಲೇಜ್ ಡೇ ಮಾತ್ರ ಹಳ್ಳಿಗರ ಬದುಕನ್ನು ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಟ್ಟಿತು. ಕಾನೂನು ಓದುವ ಎಲ್ಲ ವಿದ್ಯಾರ್ಥಿಗಳು ಒಂದು ದಿನ ಗ್ರಾಮೀಣ ಸಂಪ್ರದಾಯದ ಉಡುಗೆ ಧರಿಸಿದ್ದು ಎಲ್ಲರ ಗಮನ ಸೆಳೆದಿದ್ದಂತೂ ನಿಜ.

6 / 6
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ