AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಪಂಚೆ, ಶರ್ಟು, ಸೀರೆ, ದಾವಣಿ ತೊಟ್ಟು ಮಿಂಚಿದ ಕಾನೂನು ವಿದ್ಯಾರ್ಥಿಗಳು

ಅವರೆಲ್ಲ ಕಾನೂನು ವಿದ್ಯಾರ್ಥಿಗಳು. ಪ್ರತಿದಿನ ಕಾನೂನು, ಸೆಕ್ಷನ್, ವಾದ-ಪ್ರತಿವಾದ ಅಂತೆಲ್ಲ ಶಿಕ್ಷಣ ಪಡೆಯುವವರು. ಆದರೆ, ಆ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಫನ್ ವೀಕ್ ಆಚರಿಸಲಾಗುತ್ತಿದೆ. ಅದರ ಅಂಗವಾಗಿ ಇಂದು(ಗುರುವಾರ) ನಡೆದ ದಿನ ವಿಲೇಜ್ ಡೇ. ಒಂದು ದಿನ ಎಲ್ಲ ವಿದ್ಯಾರ್ಥಿಗಳು ರೈತರ ಹೆಸರಿನಲ್ಲಿ ಸಾಂಪ್ರದಾಯಿಕ ದಿನವನ್ನು ಆಚರಿಸಿದ್ದಾರೆ. ಹೇಗಿತ್ತು ವಿಲೇಜ್ ಡೇ ಹವಾ ಅಂತೀರಾ? ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: Aug 01, 2024 | 6:19 PM

Share
 ಧಾರವಾಡ ನಗರದ ಸರ್. ಸಿದ್ದಪ್ಪ ಕಂಬಳಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು, ಪಂಚೆ, ಶರ್ಟು, ಸೀರೆ, ಲಂಗಾ, ದಾವಣಿ ತೊಟ್ಟು ಸಾಂಪ್ರದಾಯಿಕ ವಸ್ತ್ರಗಳಲ್ಲಿ ಮಿಂಚಿದ್ದಾರೆ. ಈ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಫನ್ ವೀಕ್ ಆಚರಿಸಲಾಗುತ್ತಿದೆ. ಅದರ ಅಂಗವಾಗಿ ಇಂದು ವಿಲೇಜ್ ಡೇ ನಡೆದಿದೆ.

ಧಾರವಾಡ ನಗರದ ಸರ್. ಸಿದ್ದಪ್ಪ ಕಂಬಳಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು, ಪಂಚೆ, ಶರ್ಟು, ಸೀರೆ, ಲಂಗಾ, ದಾವಣಿ ತೊಟ್ಟು ಸಾಂಪ್ರದಾಯಿಕ ವಸ್ತ್ರಗಳಲ್ಲಿ ಮಿಂಚಿದ್ದಾರೆ. ಈ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಫನ್ ವೀಕ್ ಆಚರಿಸಲಾಗುತ್ತಿದೆ. ಅದರ ಅಂಗವಾಗಿ ಇಂದು ವಿಲೇಜ್ ಡೇ ನಡೆದಿದೆ.

1 / 6
ಈ ದಿನ ಎಲ್ಲ ವಿದ್ಯಾರ್ಥಿಗಳು ತರಗತಿ ಹಾಗೂ ಅಭ್ಯಾಸವನ್ನು ಬದಿಗಿಟ್ಟು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು. ಮೊದಲಿಗೆ ಕಾಲೇಜು ಮುಂಭಾಗದಲ್ಲಿ ತಳಿರು-ತೋರಣ ಕಟ್ಟಿ, ರಂಗೋಲಿ ಹಾಕಿ ಅಲಂಕಾರ ಮಾಡಿದ್ದರು.

ಈ ದಿನ ಎಲ್ಲ ವಿದ್ಯಾರ್ಥಿಗಳು ತರಗತಿ ಹಾಗೂ ಅಭ್ಯಾಸವನ್ನು ಬದಿಗಿಟ್ಟು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು. ಮೊದಲಿಗೆ ಕಾಲೇಜು ಮುಂಭಾಗದಲ್ಲಿ ತಳಿರು-ತೋರಣ ಕಟ್ಟಿ, ರಂಗೋಲಿ ಹಾಕಿ ಅಲಂಕಾರ ಮಾಡಿದ್ದರು.

2 / 6
ಬಳಿಕ ಕಾಲೇಜಿನಲ್ಲಿ ಗಣಪತಿ ಪೂಜೆ ಮಾಡಿ ಭಕ್ತಿಯನ್ನು ಮೆರೆದರು. ಈ ವೇಳೆ ಒಬ್ಬರಿಗಿಂತ ಒಬ್ಬರು ಗಮನ ಸೆಳೆಯುವ ರೀತಿಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

ಬಳಿಕ ಕಾಲೇಜಿನಲ್ಲಿ ಗಣಪತಿ ಪೂಜೆ ಮಾಡಿ ಭಕ್ತಿಯನ್ನು ಮೆರೆದರು. ಈ ವೇಳೆ ಒಬ್ಬರಿಗಿಂತ ಒಬ್ಬರು ಗಮನ ಸೆಳೆಯುವ ರೀತಿಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

3 / 6
ಅಲ್ಲದೇ ಕಾಲೇಜಿನಲ್ಲಿ ಟ್ರ್ಯಾಕ್ಟರ್ ಮತ್ತು ಚಕ್ಕಡಿಯನ್ನೂ ತೆಗೆದುಕೊಂಡು ಬಂದು, ವಿದ್ಯಾರ್ಥಿಗಳು ಅವುಗಳಲ್ಲಿ ಕುಳಿತು ಒಂದು ಸುತ್ತು ಹಾದು ಬಂದರು. ಇನ್ನು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಆಚರಣೆ ಮಾಡಿದ ಈ ವಿಲೇಜ್ ಡೇ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಕೂಡ ಭಾಗವಹಿಸಿದರು.

ಅಲ್ಲದೇ ಕಾಲೇಜಿನಲ್ಲಿ ಟ್ರ್ಯಾಕ್ಟರ್ ಮತ್ತು ಚಕ್ಕಡಿಯನ್ನೂ ತೆಗೆದುಕೊಂಡು ಬಂದು, ವಿದ್ಯಾರ್ಥಿಗಳು ಅವುಗಳಲ್ಲಿ ಕುಳಿತು ಒಂದು ಸುತ್ತು ಹಾದು ಬಂದರು. ಇನ್ನು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಆಚರಣೆ ಮಾಡಿದ ಈ ವಿಲೇಜ್ ಡೇ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಕೂಡ ಭಾಗವಹಿಸಿದರು.

4 / 6
ಈ ದಿನವನ್ನು ರೈತರಿಗಾಗಿ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಸಮರ್ಪಿಸಿದ್ದು ವಿಶೇಷವಾಗಿತ್ತು. ಹಳ್ಳಿಗರ ಹಾಗೂ ರೈತರ ಹೆಸರಿನಲ್ಲಿ ಈ ದಿನ ಎಲ್ಲ ವಿದ್ಯಾರ್ಥಿಗಳು ಸಾಂಪ್ರದಾಯಿಕ ದಿನ ಆಚರಿಸಿದ್ದು, ಖುಷಿ ತಂದಿತು ಎಂದು ವಿದ್ಯಾರ್ಥಿನಿಯರು ಅಭಿಪ್ರಾಯ ಹಂಚಿಕೊಂಡರು.

ಈ ದಿನವನ್ನು ರೈತರಿಗಾಗಿ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಸಮರ್ಪಿಸಿದ್ದು ವಿಶೇಷವಾಗಿತ್ತು. ಹಳ್ಳಿಗರ ಹಾಗೂ ರೈತರ ಹೆಸರಿನಲ್ಲಿ ಈ ದಿನ ಎಲ್ಲ ವಿದ್ಯಾರ್ಥಿಗಳು ಸಾಂಪ್ರದಾಯಿಕ ದಿನ ಆಚರಿಸಿದ್ದು, ಖುಷಿ ತಂದಿತು ಎಂದು ವಿದ್ಯಾರ್ಥಿನಿಯರು ಅಭಿಪ್ರಾಯ ಹಂಚಿಕೊಂಡರು.

5 / 6
ಒಟ್ಟಾರೆ ಕಾನೂನು ಕಾಲೇಜಿನಲ್ಲಿ ನಡೆದ ‘ಫನ್ ವೀಕ್’ ವಿದ್ಯಾರ್ಥಿಗಳಿಗೆ ಹೊಸ ಬಗೆಯ ಜಗತ್ತಿನ ಪರಿಚಯ ಮಾಡಿಸಿದರೆ, ಇಂದು ನಡೆದ ವಿಲೇಜ್ ಡೇ ಮಾತ್ರ ಹಳ್ಳಿಗರ ಬದುಕನ್ನು ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಟ್ಟಿತು. ಕಾನೂನು ಓದುವ ಎಲ್ಲ ವಿದ್ಯಾರ್ಥಿಗಳು ಒಂದು ದಿನ ಗ್ರಾಮೀಣ ಸಂಪ್ರದಾಯದ ಉಡುಗೆ ಧರಿಸಿದ್ದು ಎಲ್ಲರ ಗಮನ ಸೆಳೆದಿದ್ದಂತೂ ನಿಜ.

ಒಟ್ಟಾರೆ ಕಾನೂನು ಕಾಲೇಜಿನಲ್ಲಿ ನಡೆದ ‘ಫನ್ ವೀಕ್’ ವಿದ್ಯಾರ್ಥಿಗಳಿಗೆ ಹೊಸ ಬಗೆಯ ಜಗತ್ತಿನ ಪರಿಚಯ ಮಾಡಿಸಿದರೆ, ಇಂದು ನಡೆದ ವಿಲೇಜ್ ಡೇ ಮಾತ್ರ ಹಳ್ಳಿಗರ ಬದುಕನ್ನು ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಟ್ಟಿತು. ಕಾನೂನು ಓದುವ ಎಲ್ಲ ವಿದ್ಯಾರ್ಥಿಗಳು ಒಂದು ದಿನ ಗ್ರಾಮೀಣ ಸಂಪ್ರದಾಯದ ಉಡುಗೆ ಧರಿಸಿದ್ದು ಎಲ್ಲರ ಗಮನ ಸೆಳೆದಿದ್ದಂತೂ ನಿಜ.

6 / 6
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!