Kannada News Photo gallery Lok Sabha Election 2024 News in Kannada: Karadi Sanganna Join Congress and Akhanda Srinivas Murthy joined BJP See Photos
ಪಕ್ಷಾಂತರ ಪರ್ವ: ಸಂಗಣ್ಣ ಕರಡಿ ಕಾಂಗ್ರೆಸ್ಗೆ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿಗೆ, ಫೋಟೋಸ್ ನೋಡಿ
ಪ್ರತಿ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಾಮಾನ್ಯ. ಈ ಬಾರಿಯ ಲೋಕಸಭೆ ಚುನಾವಣೆ ಸಮಯದಲ್ಲಿ ಒಂದಡೆ ಸಂಗಣ್ಣ ಕರಡಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರಿಕೊಂಡರೆ, ಇತ್ತ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕೈ ಬಿಟ್ಟು ಕಮಲ ಪಾಳಯ ಸೇರಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಪಕ್ಷಾಂತರ ಜೋರಾಗಿದೆ. ಬಿಜೆಪಿಯ ಹಾಲಿ ಸಂಸದ ಕಾಂಗ್ರೆಸ್ ಸೇರಿದ್ದರೇ, ಕಾಂಗ್ರೆಸ್ನ ಮಾಜಿ ಶಾಸಕ ಕಮಲ ಪಾಳಯವನ್ನು ಸೇರಿಕೊಂಡಿದ್ದಾರೆ.
1 / 8
ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕರಡಿ ಸಂಗಣ್ಣ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಂಸತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
2 / 8
ಬಿಜೆಪಿ ಹೊಸಮುಖ ಡಾ. ಬಸವರಾಜ್ ಕ್ಯಾವಟರ್ ಅವರಿಗೆ ಕೊಪ್ಪಳ ಕ್ಷೇತ್ರದ ಟಿಕೆಟ್ ನೀಡಿದ್ದು, ಇದರಿಂದ ಕರಡಿ ಸಂಗಣ್ಣ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
3 / 8
ಇಂದು (ಏ.17) ಕೆಪಿಸಿಸಿ ಕಚೇರಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕರಡಿ ಸಂಗಣ್ಣ ಕಾಂಗ್ರೆಸ್ ಪಡೆ ಸೇರಿಕೊಂಡರು.
4 / 8
ಬಿಜೆಪಿಯ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಿದರೆ ಕಾಂಗ್ರೆಸ್ನ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿ ಸೇರಿದ್ದಾರೆ.
5 / 8
ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಕೆಲ ದಿನಗಳ ಹಿಂದೆಯಷ್ಟೇ ಅಖಂಡ ಶ್ರೀನಿವಾಸ್ಮೂರ್ತಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.
6 / 8
ಇಂದು (ಏ.17) ಅಖಂಡ ಶ್ರೀನಿವಾಸಮೂರ್ತಿಯವರು ಬಿಜೆಪಿ ಪಕ್ಷಕ್ಕೆ ಸೇರುವುದರಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರಿಗೆ ಅನುಕೂಲ ಆಗಲಿದೆ.
7 / 8
2020ರಲ್ಲಿ ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದಿದ್ದ ಗಲಭೆ ವೇಳೆ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಲಾಗಿತ್ತು.