ಲೋಕಸಭೆ ಚುನಾವಣೆ ಫಲಿತಾಂಶ 2024: ಸಚಿವರ ಮಕ್ಕಳಲ್ಲಿ ಯಾರ್ಯಾರು ಗೆದ್ರು? ಯಾರು ಸೋತ್ರು?

Lok Sabha Election 2024 Result: 2024ರ ಲೋಕಸಭೆ ಚುನಾವಣೆ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಗಿತ್ತು. ಇದೀಗ, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಇನ್ನು ಕರ್ನಾಟಕದಲ್ಲಿ ಸಚಿವರ ಮಕ್ಕಳೂ ಕೂಡ ಸ್ಪರ್ಧಿಸಿದ್ದು, ಅವರ ರಾಜಕೀಯ ಭವಿಷ್ಯ ಬಹಿರಂಗಗೊಂಡಿದೆ. ಯಾರು ಗೆದ್ದರು, ಯಾರು ಸೋತರು ಇಲ್ಲಿದೆ ಓದಿ..

|

Updated on:Jun 04, 2024 | 3:31 PM

Mrunal Hebbalkar to Soumya Reddy next generations of current Karnataka Government Ministers to continue in Lok Sabha Elections

ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ,​ ಯುವ ಮುಖ ಸಂಯಕ್ತಾ ಪಾಟೀಲ್​ (Samyukta Shivanand Patil) ಅವರನ್ನು ಅಖಾಡಕ್ಕಿಳಿಸಿತ್ತು. ಆದರೆ ಸಂಯುಕ್ತ ಪಾಟೀಲ್​ ಅವರಿಗೆ ಸೋಲಾಗಿದೆ.

1 / 5
Mrunal Hebbalkar to Soumya Reddy next generations of current Karnataka Government Ministers to continue in Lok Sabha Elections

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಅವರು ಕಣದಲ್ಲಿದ್ದರು. ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು, ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿದ್ದಾರೆ.

2 / 5
Mrunal Hebbalkar to Soumya Reddy next generations of current Karnataka Government Ministers to continue in Lok Sabha Elections

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಣದಲ್ಲಿದ್ದರು. ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆಲುವಿನ ವಿಶ್ವಾಸ ಹೊಂದಿತ್ತು. ಆದರೆ ಅನುಭವಿ ರಾಜಕಾರಣಿ ಜಗದೀಶ್​ ಶೆಟ್ಟರ್​ ಅವರ ವಿರುದ್ಧ ಸೋಲು ಕಂಡಿದ್ದಾರೆ.

3 / 5
Mrunal Hebbalkar to Soumya Reddy next generations of current Karnataka Government Ministers to continue in Lok Sabha Elections

ಬೀದರ್​ ಲೋಕಸಭಾ ಕ್ಷೇತ್ರದಲ್ಲಿ 1991ರಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೆ ಬಿಜೆಪಿ ಇಲ್ಲಿ ಹಿಡಿತ ಸಾಧಿಸಿಕೊಂಡು ಬಂದಿದೆ. ಹೀಗಾಗಿ ಈ ಬಾರಿ ಸಚಿವ ಈಶ್ವರ್ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಮೂಲಕ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲ್ಲುವ ಕನಸು ಕಂಡಿತ್ತು. ಈ ಕನಸು ನನಸಾಗಿದ್ದು, ಸಾಗರ ಖಂಡ್ರೆ ಅವರು ವಿಜಯಶಾಲಿಯಾಗಿದ್ದಾರೆ.

4 / 5
Mrunal Hebbalkar to Soumya Reddy next generations of current Karnataka Government Ministers to continue in Lok Sabha Elections

2023 ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತಗಳಿಂದ ಸೋತಿದ್ದ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಆದರೆ ಸೌಮ್ಯಾ ರೆಡ್ಡಿ ಅವರು ಸೋಲುಂಡಿದ್ದಾರೆ.

5 / 5

Published On - 3:29 pm, Tue, 4 June 24

Follow us
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು