Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ 2024: ಕುಟುಂಬ ಸಮೇತ ಮತ ಚಲಾಯಿಸಿದ ರಾಜಕೀಯ ನಾಯಕರು, ಇಲ್ಲಿವೆ ಫೋಟೋಸ್

ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು(ಏ.26) ರಾಜ್ಯದಲ್ಲಿ ಮೊದಲ ಹಂತದ ಮತದಾನ ಭರ್ಜರಿಯಾಗಿ ನಡೆದಿದೆ. ಅದರಂತೆ ಸಿಎಂ ಸಿದ್ದರಾಮಯ್ಯ, ಹೆಚ್​.ಡಿ ಕುಮಾರಸ್ವಾಮಿ, ಡಿಕೆ ಸುರೇಶ್​ ಹಾಗೂ ಡಿಕೆ ಶಿವಕುಮಾರ್​ ಸೇರಿದಂತೆ ಹಲವು ರಾಜಕೀಯ ನಾಯಕರುಗಳು ತಮ್ಮ ಕುಟುಂಬ ಸಮೇತ ಮತಗಟ್ಟೆಗೆ ತೆರಳಿ ಮತದಾನ ಚಲಾಯಿಸಿದರು. ಇಲ್ಲಿದೆ ಅದರ ಝಲಕ್.​

ಕಿರಣ್ ಹನುಮಂತ್​ ಮಾದಾರ್
|

Updated on: Apr 26, 2024 | 3:08 PM

ಮೈಸೂರು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನ ಹುಂಡಿ ಶಾಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಗ ಯತಿಂದ್ರ ಸಿದ್ದರಾಮಯ್ಯ ಅವರು ತೆರಳಿ ಮತದಾನ ಚಲಾಯಿಸಿದರು. ಇನ್ನು ಈ ಗ್ರಾಮ
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ.

ಮೈಸೂರು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನ ಹುಂಡಿ ಶಾಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಗ ಯತಿಂದ್ರ ಸಿದ್ದರಾಮಯ್ಯ ಅವರು ತೆರಳಿ ಮತದಾನ ಚಲಾಯಿಸಿದರು. ಇನ್ನು ಈ ಗ್ರಾಮ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ.

1 / 6
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ಕೇತಗಾನಹಳ್ಳಿಯ ಮತಗಟ್ಟೆಗೆ ಪತ್ನಿ, ಮಗ-ಸೊಸೆಯೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಜೊತೆಗೆ ಈ ಬಾರಿ ರಾಜ್ಯದಲ್ಲಿ ಅತೀ ಮಂಡ್ಯದಿಂದ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ಕೇತಗಾನಹಳ್ಳಿಯ ಮತಗಟ್ಟೆಗೆ ಪತ್ನಿ, ಮಗ-ಸೊಸೆಯೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಜೊತೆಗೆ ಈ ಬಾರಿ ರಾಜ್ಯದಲ್ಲಿ ಅತೀ ಮಂಡ್ಯದಿಂದ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

2 / 6
ಇನ್ನು ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿಕೆ ಸುರೇಶ್​ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕುಟುಂಬ ಸಮೇತ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್​ ಶಾಲೆ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.

ಇನ್ನು ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿಕೆ ಸುರೇಶ್​ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕುಟುಂಬ ಸಮೇತ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್​ ಶಾಲೆ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.

3 / 6
ಮೈಸೂರಿನ ವಿಜಯನಗರದ ಮತಗಟ್ಟೆ ಸಂಖ್ಯೆ 106 ರಲ್ಲಿ ಬಿಜೆಪಿ ಸಂಸದ ಪ್ರತಾಪ್​ ಸಿಂಹ ಮತ ಚಲಾಯಿಸಿದರು. ಈ ವೇಳೆ ಮಾತನಾಡಿ, ‘ ಶಿವಮೊಗ್ಗ ಹೊರತುಪಡಿಸಿ ಹಳೆ ಮೈಸೂರು ಪ್ರಾಂತ್ಯದ ಎಲ್ಲಾ ಕಡೆ ಚುನಾವಣೆ ನಡೆಯುತ್ತಿದೆ. ಜೆ.ಡಿ.ಎಸ್, ಬಿಜೆಪಿ ಮೈತ್ರಿಯಾಗಿರುವುದರಿಂದ ಎಲ್ಲಾ ಸ್ಥಾನಗಳಲ್ಲು ಗೆಲ್ಲುತ್ತೇವೆ ಎಂದರು.

ಮೈಸೂರಿನ ವಿಜಯನಗರದ ಮತಗಟ್ಟೆ ಸಂಖ್ಯೆ 106 ರಲ್ಲಿ ಬಿಜೆಪಿ ಸಂಸದ ಪ್ರತಾಪ್​ ಸಿಂಹ ಮತ ಚಲಾಯಿಸಿದರು. ಈ ವೇಳೆ ಮಾತನಾಡಿ, ‘ ಶಿವಮೊಗ್ಗ ಹೊರತುಪಡಿಸಿ ಹಳೆ ಮೈಸೂರು ಪ್ರಾಂತ್ಯದ ಎಲ್ಲಾ ಕಡೆ ಚುನಾವಣೆ ನಡೆಯುತ್ತಿದೆ. ಜೆ.ಡಿ.ಎಸ್, ಬಿಜೆಪಿ ಮೈತ್ರಿಯಾಗಿರುವುದರಿಂದ ಎಲ್ಲಾ ಸ್ಥಾನಗಳಲ್ಲು ಗೆಲ್ಲುತ್ತೇವೆ ಎಂದರು.

4 / 6
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಗಿರಿನಗರದ ವಿಜಯ ಭಾರತಿ ಸ್ಕೂಲ್​ನಲ್ಲಿ ಮತ ಚಲಾಯಿಸಿದರು. ಇದೇ ವೇಳೆ ಶಾಸಕ ರವಿಸುಬ್ರಮಣ್ಯ ಕೂಡ ಮತದಾನ ಮಾಡಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಗಿರಿನಗರದ ವಿಜಯ ಭಾರತಿ ಸ್ಕೂಲ್​ನಲ್ಲಿ ಮತ ಚಲಾಯಿಸಿದರು. ಇದೇ ವೇಳೆ ಶಾಸಕ ರವಿಸುಬ್ರಮಣ್ಯ ಕೂಡ ಮತದಾನ ಮಾಡಿದರು.

5 / 6
ಇಂದು ಲೋಕಸಭಾ ಚುನಾವಣೆ ಹಿನ್ನೆಲೆ ಪತ್ನಿಯೊಂದಿಗೆ ಬಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಮತ ಚಲಾಯಿಸಿದರು. ಸ್ವಗ್ರಾಮ ಜೆಸಿ ಪುರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಮಾಧುಸ್ವಾಮಿ, ‘ದೇಶದ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲರು ಮತ ಚಲಾಯಿಸಬೇಕು. ದೇಶದ ಆಡಳಿತ ಚುಕ್ಕಾಣಿಯನ್ನ ಯಾರು ಹಿಡಿಯಬೇಕು ಎನ್ನುವುದನ್ನ ಆರಿಸೋದಕ್ಕೆ ಇದೊಂದೇ ಮಾರ್ಗ ಎಂದರು.

ಇಂದು ಲೋಕಸಭಾ ಚುನಾವಣೆ ಹಿನ್ನೆಲೆ ಪತ್ನಿಯೊಂದಿಗೆ ಬಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಮತ ಚಲಾಯಿಸಿದರು. ಸ್ವಗ್ರಾಮ ಜೆಸಿ ಪುರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಮಾಧುಸ್ವಾಮಿ, ‘ದೇಶದ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲರು ಮತ ಚಲಾಯಿಸಬೇಕು. ದೇಶದ ಆಡಳಿತ ಚುಕ್ಕಾಣಿಯನ್ನ ಯಾರು ಹಿಡಿಯಬೇಕು ಎನ್ನುವುದನ್ನ ಆರಿಸೋದಕ್ಕೆ ಇದೊಂದೇ ಮಾರ್ಗ ಎಂದರು.

6 / 6
Follow us
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ