AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜಾಧ್ವನಿ 2.O ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ: ಕುರುಡುಮಲೆ ಸನ್ನಿಧಿಯಿಂದ ಕೈಪಡೆ ರಣಕಹಳೆ

ಲೋಕಸಭೆ ಚುನಾವಣೆಯಲ್ಲಿ 20 ಕ್ಷೇತ್ರ ಗೆಲ್ಲಲು ಪಣ ತೊಟ್ಟಿರುವ ಕಾಂಗ್ರೆಸ್ ಇಂದಿನಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದೆ. ಕೋಲಾರದ ಕುರುಡುಮಲೆಯಿಂದ ರಣಕಹಳೆ ಊದಿದೆ. ಹಾಗಾದರೆ, ಕುರುಡುಮಲೆಯಿಂದಲೇ ಚುನಾವಣೆಗೆ ಪಾಂಚಜನ್ಯ ಮೊಳಗಿಸಿದ್ದೇಕೆ? ಕಾಂಗ್ರೆಸ್ ನಾಯಕರು ಕುರುಡುಮಲೆಯಿಂದ ಪ್ರಚಾರ ಆರಂಭಿಸಿದ್ದೇಕೆ? ಇಲ್ಲಿದೆ ವಿವರ.

ಗಣಪತಿ ಶರ್ಮಾ
|

Updated on: Apr 06, 2024 | 2:44 PM

Share
ಬಿಜೆಪಿ ಜೆಡಿಎಸ್ ಮೈತ್ರಿ ರಣತಂತ್ರಗಳನ್ನು ಬುಡಮೇಲು ಮಾಡಿ ರಾಜ್ಯದ 20 ಕ್ಷೇತ್ರದಲ್ಲಿ ಗೆಲುವಿನ ಬಾವುಟ ಹಾರಿಸಲು ಕೈ ಪಡೆ ನಾಯಕರು ಇನ್ನಿಲ್ಲದ ಕಸರತ್ತು ಮಾಡ್ತಿದ್ದಾರೆ. ಇದರ ಭಾಗವಾಗಿಯೇ ಇವತ್ತು ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕ ದೇವಸ್ಥಾನದಿಂದ ಪ್ರಚಾರಕ್ಕೆ ಅಧಿಕೃತ ಜಾಲನೆ ನೀಡಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿ ರಣತಂತ್ರಗಳನ್ನು ಬುಡಮೇಲು ಮಾಡಿ ರಾಜ್ಯದ 20 ಕ್ಷೇತ್ರದಲ್ಲಿ ಗೆಲುವಿನ ಬಾವುಟ ಹಾರಿಸಲು ಕೈ ಪಡೆ ನಾಯಕರು ಇನ್ನಿಲ್ಲದ ಕಸರತ್ತು ಮಾಡ್ತಿದ್ದಾರೆ. ಇದರ ಭಾಗವಾಗಿಯೇ ಇವತ್ತು ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕ ದೇವಸ್ಥಾನದಿಂದ ಪ್ರಚಾರಕ್ಕೆ ಅಧಿಕೃತ ಜಾಲನೆ ನೀಡಿದ್ದಾರೆ.

1 / 7
ಲೋಕಸಭೆ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪಡೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದೆ. ಕೋಲಾರದ ಮುಳಬಾಗಿಲು ಬಳಿ ಇರೋ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಚಾರಕ್ಕೆ ಪಾಂಚಜನ್ಯ ಮೊಳಗಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರಚಾರಕ್ಕೆ ಚಾಲನೆ ನೀಡಲಾಗಿದ್ದು, ಪೂಜೆ ಬಳಿಕ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ಲೋಕಸಭೆ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪಡೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದೆ. ಕೋಲಾರದ ಮುಳಬಾಗಿಲು ಬಳಿ ಇರೋ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಚಾರಕ್ಕೆ ಪಾಂಚಜನ್ಯ ಮೊಳಗಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರಚಾರಕ್ಕೆ ಚಾಲನೆ ನೀಡಲಾಗಿದ್ದು, ಪೂಜೆ ಬಳಿಕ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

2 / 7
ವಿನಾಯಕನಿಗೆ ಪೂಜೆ ಸಲ್ಲಿಸಿದ ಬಳಿಕ ಮುಳಬಾಗಿಲು ನಗರದ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ಸರ್ಕಲ್‌ವರೆಗೆ ಭರ್ಜರಿ ರೋಡ್‌ ಶೋ ನಡೆಸಿದ ಸಿದ್ದು, ಡಿಕೆ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಮತಬೇಟೆಯಾಡಿದರು. ತೆರೆದ ವಾಹನದಲ್ಲಿ 1 ಕಿಲೋ ಮೀಟರ್ ಱಲಿ ನಡೆಸಿ ಮತಯಾಚಿಸಿದರು.

ವಿನಾಯಕನಿಗೆ ಪೂಜೆ ಸಲ್ಲಿಸಿದ ಬಳಿಕ ಮುಳಬಾಗಿಲು ನಗರದ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ಸರ್ಕಲ್‌ವರೆಗೆ ಭರ್ಜರಿ ರೋಡ್‌ ಶೋ ನಡೆಸಿದ ಸಿದ್ದು, ಡಿಕೆ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಮತಬೇಟೆಯಾಡಿದರು. ತೆರೆದ ವಾಹನದಲ್ಲಿ 1 ಕಿಲೋ ಮೀಟರ್ ಱಲಿ ನಡೆಸಿ ಮತಯಾಚಿಸಿದರು.

3 / 7
ಪ್ರಚಾರಕ್ಕೂ ಮುನ್ನ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈಗಾಗಲೇ ಪ್ರಚಾರ ಆರಂಭಿಸಿದ್ದೇವೆ. ಇಂದು ಅಧಿಕೃತವಾಗಿ ಚಾಲನೆ ಕೊಟ್ಟಿದ್ದೇವೆ ಎಂದರು. ಬಿಜೆಪಿಯವರು ಸುಳ್ಳಿನ ಮೇಲೆ ಪ್ರಚಾರ ಮಾಡ್ತಿದ್ದಾರೆ. ನಾವು ಸತ್ಯದ ಮೇಲೆ ಪ್ರಚಾರ ಮಾಡ್ತಿದ್ದೇವೆ ಅಂತಾ ವಾಗ್ದಾಳಿ ನಡೆಸಿದರು.

ಪ್ರಚಾರಕ್ಕೂ ಮುನ್ನ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈಗಾಗಲೇ ಪ್ರಚಾರ ಆರಂಭಿಸಿದ್ದೇವೆ. ಇಂದು ಅಧಿಕೃತವಾಗಿ ಚಾಲನೆ ಕೊಟ್ಟಿದ್ದೇವೆ ಎಂದರು. ಬಿಜೆಪಿಯವರು ಸುಳ್ಳಿನ ಮೇಲೆ ಪ್ರಚಾರ ಮಾಡ್ತಿದ್ದಾರೆ. ನಾವು ಸತ್ಯದ ಮೇಲೆ ಪ್ರಚಾರ ಮಾಡ್ತಿದ್ದೇವೆ ಅಂತಾ ವಾಗ್ದಾಳಿ ನಡೆಸಿದರು.

4 / 7
ಬಿಜೆಪಿಯವರು ಸುಳ್ಳು ಹೇಳಿ ಪ್ರಚಾರ ಮಾಡ್ತಿದ್ದಾರೆ ಅನ್ನೋದನ್ನೇ ಅಸ್ತ್ರ ಮಾಡಿಕೊಂಡು ಪ್ರಚಾರ ಆರಂಭಿಸಿರೋ ಕಾಂಗ್ರೆಸ್ ನಾಯಕರು, ಕಮಲ ಪಡೆ ವಿರುದ್ದ ಗುಡುಗಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್, ಬಿಜೆಪಿ ಜೆಡಿಎಸ್‌ಗೆ ಸೋಲು ಕಟ್ಟಿಟ್ಟಬುತ್ತಿ ಅಂತಾ ಭವಿಷ್ಯ ನುಡಿದಿದ್ದಾರೆ.

ಬಿಜೆಪಿಯವರು ಸುಳ್ಳು ಹೇಳಿ ಪ್ರಚಾರ ಮಾಡ್ತಿದ್ದಾರೆ ಅನ್ನೋದನ್ನೇ ಅಸ್ತ್ರ ಮಾಡಿಕೊಂಡು ಪ್ರಚಾರ ಆರಂಭಿಸಿರೋ ಕಾಂಗ್ರೆಸ್ ನಾಯಕರು, ಕಮಲ ಪಡೆ ವಿರುದ್ದ ಗುಡುಗಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್, ಬಿಜೆಪಿ ಜೆಡಿಎಸ್‌ಗೆ ಸೋಲು ಕಟ್ಟಿಟ್ಟಬುತ್ತಿ ಅಂತಾ ಭವಿಷ್ಯ ನುಡಿದಿದ್ದಾರೆ.

5 / 7
ಕಾಂಗ್ರೆಸ್ ಹಿಂದಿನಿಂದಲೂ ಕುರುಡುಮಲೆ ದೇವಸ್ಥಾನದಿಂದಲೇ ಚುನಾವಣಾ ಪ್ರಚಾರ ಕಾರ್ಯ ಆರಂಭಿಸುತ್ತಿತ್ತು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಇಲ್ಲಿಂದಲೇ ರಣಕಹಳೆ ಮೊಳಗಿಸಿದ್ದ ಕಾಂಗ್ರೆಸ್ 135 ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿತ್ತು. ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಸಹ ಇಲ್ಲಿಂದಲೇ ಪಾಂಚಜನ್ಯ ಯಾತ್ರೆ ಆರಂಭಿಸಿ ಗದ್ದುಗೆ ಏರಿದ್ದರು. ಹೀಗಾಗಿ ಕುರುಡುಮಲೆಯಿಂದ ಪ್ರಚಾರ ಆರಂಭಿಸಿದರೆ, ಜಯ ಸಾಧಿಸಬಹುದು ಅನ್ನೋದು ಕಾಂಗ್ರೆಸ್‌ ನಾಯಕರ ನಂಬಿಕೆ.

ಕಾಂಗ್ರೆಸ್ ಹಿಂದಿನಿಂದಲೂ ಕುರುಡುಮಲೆ ದೇವಸ್ಥಾನದಿಂದಲೇ ಚುನಾವಣಾ ಪ್ರಚಾರ ಕಾರ್ಯ ಆರಂಭಿಸುತ್ತಿತ್ತು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಇಲ್ಲಿಂದಲೇ ರಣಕಹಳೆ ಮೊಳಗಿಸಿದ್ದ ಕಾಂಗ್ರೆಸ್ 135 ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿತ್ತು. ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಸಹ ಇಲ್ಲಿಂದಲೇ ಪಾಂಚಜನ್ಯ ಯಾತ್ರೆ ಆರಂಭಿಸಿ ಗದ್ದುಗೆ ಏರಿದ್ದರು. ಹೀಗಾಗಿ ಕುರುಡುಮಲೆಯಿಂದ ಪ್ರಚಾರ ಆರಂಭಿಸಿದರೆ, ಜಯ ಸಾಧಿಸಬಹುದು ಅನ್ನೋದು ಕಾಂಗ್ರೆಸ್‌ ನಾಯಕರ ನಂಬಿಕೆ.

6 / 7
ಅಂದಹಾಗೆ ಮಾರ್ಚ್ 29ರಂದೇ ಕುರುಡುಮಲೆಯಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ಕೊಡಬೇಕಿತ್ತು. ಆದ್ರೆ, ಕೋಲಾರ ಟಿಕೆಟ್ ಕಗ್ಗಂಟು ಕಾಂಗ್ರೆಸ್ ಪಡೆಯನ್ನ ಇಕ್ಕಟ್ಟಿಗೆ ಸಿಲುಕಿಸಿತ್ತು. ಹೀಗಾಗಿ ಪ್ರಜಾಧ್ವನಿ 2.O ಪ್ರಚಾರ ಕಾರ್ಯಕ್ರಮವನ್ನ ಮುಂದೂಡಲಾಗಿತ್ತು.

ಅಂದಹಾಗೆ ಮಾರ್ಚ್ 29ರಂದೇ ಕುರುಡುಮಲೆಯಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ಕೊಡಬೇಕಿತ್ತು. ಆದ್ರೆ, ಕೋಲಾರ ಟಿಕೆಟ್ ಕಗ್ಗಂಟು ಕಾಂಗ್ರೆಸ್ ಪಡೆಯನ್ನ ಇಕ್ಕಟ್ಟಿಗೆ ಸಿಲುಕಿಸಿತ್ತು. ಹೀಗಾಗಿ ಪ್ರಜಾಧ್ವನಿ 2.O ಪ್ರಚಾರ ಕಾರ್ಯಕ್ರಮವನ್ನ ಮುಂದೂಡಲಾಗಿತ್ತು.

7 / 7
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​