AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರಿನಲ್ಲಿ ಹಿಂದೂ ಸಂಘಟನೆಗಳ ಅಬ್ಬರ: 28 ಗಣೇಶ ವಿಸರ್ಜನಾ ಮೆರವಣಿಗೆ, ಕೇಸರಿ ರಣಕಹಳೆ

ಮಂಡ್ಯ, ಸೆಪ್ಟೆಂಬರ್ 10: ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯದ ಮದ್ದೂರಿನಲ್ಲಿವತ್ತು ಕೇಸರಿ ಪಡೆ ಗರ್ಜಿಸಿದೆ. ಮೊನ್ನೆ ಒಂದು ಗಣೇಶ ಮೆರವಣಿಗೆಯನ್ನು ಅಡ್ಡಿಪಡಿಸಿದ್ದಕ್ಕೆ, ಕಲ್ಲು ತೂರಾಟ ಮಾಡಿದ್ದಕ್ಕೆ ಇಂದು ಬರೋಬ್ಬರಿ 28 ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ನಡೆದಿದೆ. ಮದ್ದೂರಿಗೆ ಮದ್ದೂರೇ ಕೇಸರಿಮಯ ಆಗಿದ್ದು, ಹಿಂದೂ ಕಾರ್ಯಕರ್ತರು, ಶಾಲು ಬೀಸಿ, ಕುಣಿದು ಕುಪ್ಪಳಿಸಿದ್ದಾರೆ.

ದಿಲೀಪ್​, ಚೌಡಹಳ್ಳಿ
| Edited By: |

Updated on: Sep 10, 2025 | 2:10 PM

Share
ಭಾನುವಾರ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ಬಳಿಕ ಮದ್ದೂರು ಬೂದಿ ಮುಚ್ಚಿದ ಕೆಂಡದಂತೆ ಇದೆ. ಮಂಗಳವಾರ ಮದ್ದೂರು ಪಟ್ಟ ಬಂದ್ ನಡೆಸಲಾಗಿದೆ. ಈ ಮಧ್ಯೆ ಇವತ್ತು ಬಿಜೆಪಿ ನಿಯೋಗ ಮದ್ದೂರಿಗೆ ಭೇಟಿ ನೀಡಿದ್ದು, ಮದ್ದೂರಿನಲ್ಲಿ 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ನಡೆಯುತ್ತಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ನಿಯೋಗ ಮದ್ದೂರಿನಲ್ಲಿ ಅಬ್ಬರಿಸಿದೆ.

ಭಾನುವಾರ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ಬಳಿಕ ಮದ್ದೂರು ಬೂದಿ ಮುಚ್ಚಿದ ಕೆಂಡದಂತೆ ಇದೆ. ಮಂಗಳವಾರ ಮದ್ದೂರು ಪಟ್ಟ ಬಂದ್ ನಡೆಸಲಾಗಿದೆ. ಈ ಮಧ್ಯೆ ಇವತ್ತು ಬಿಜೆಪಿ ನಿಯೋಗ ಮದ್ದೂರಿಗೆ ಭೇಟಿ ನೀಡಿದ್ದು, ಮದ್ದೂರಿನಲ್ಲಿ 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ನಡೆಯುತ್ತಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ನಿಯೋಗ ಮದ್ದೂರಿನಲ್ಲಿ ಅಬ್ಬರಿಸಿದೆ.

1 / 7
ಮದ್ದೂರಿನ ಐಬಿ ಸರ್ಕಲ್​, ಪೇಟೆಬೀದಿ, ಕೊಲ್ಲಿ ಸರ್ಕಲ್​ನಲ್ಲಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಲಾಯಿತು. ಕೇಸರಿ ಧ್ವಜವನ್ನು ಹಿಡಿದು ಹಿಂದೂ ಕಾರ್ಯಕರ್ತರು ಭರ್ಜರಿ ಡ್ಯಾನ್ಸ್ ಮಾಡಿದರು. ಜೈಶ್ರೀರಾಮ್, ಜೈಹನುಮಾನ್ ಘೋಷಣೆ ಕೂಗಿದರು.

ಮದ್ದೂರಿನ ಐಬಿ ಸರ್ಕಲ್​, ಪೇಟೆಬೀದಿ, ಕೊಲ್ಲಿ ಸರ್ಕಲ್​ನಲ್ಲಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಲಾಯಿತು. ಕೇಸರಿ ಧ್ವಜವನ್ನು ಹಿಡಿದು ಹಿಂದೂ ಕಾರ್ಯಕರ್ತರು ಭರ್ಜರಿ ಡ್ಯಾನ್ಸ್ ಮಾಡಿದರು. ಜೈಶ್ರೀರಾಮ್, ಜೈಹನುಮಾನ್ ಘೋಷಣೆ ಕೂಗಿದರು.

2 / 7
ಮಂಡ್ಯದ ಮದ್ದೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗವೂ ಭೇಟಿ ಕೊಟ್ಟಿದೆ. ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿ ಆಗಿದೆ. ವಿಜಯೇಂದ್ರ, ಅಶೋಕ್, ಸಿ.ಟಿ.ರವಿ, ಸಂಸದ ಯದುವೀರ್ ಒಡೆಯರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರೇ ಮೆರವಣಿಗೆಯಲ್ಲಿ  ಭಾಗಿಯಾದರು. ಗಣೇಶನಿಗೆ ಪೂಜೆ ಸಲ್ಲಿಸಿದರು. ಮೆರವಣಿಗೆ ವೇಳೆ ಬಿಜೆಪಿ ನಾಯಕರು ಕುಣಿದು ಕುಪ್ಪಳಿಸಿದರು. ಕೇಸರಿ ಶಾಲು ಹಿಡಿದು ಮದ್ದೂರಿನಲ್ಲಿ ಅಬ್ಬರಿಸಿರುವುದು ಎಲ್ಲರ ಗಮನ ಸೆಳೆಯಿತು.

ಮಂಡ್ಯದ ಮದ್ದೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗವೂ ಭೇಟಿ ಕೊಟ್ಟಿದೆ. ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿ ಆಗಿದೆ. ವಿಜಯೇಂದ್ರ, ಅಶೋಕ್, ಸಿ.ಟಿ.ರವಿ, ಸಂಸದ ಯದುವೀರ್ ಒಡೆಯರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರೇ ಮೆರವಣಿಗೆಯಲ್ಲಿ ಭಾಗಿಯಾದರು. ಗಣೇಶನಿಗೆ ಪೂಜೆ ಸಲ್ಲಿಸಿದರು. ಮೆರವಣಿಗೆ ವೇಳೆ ಬಿಜೆಪಿ ನಾಯಕರು ಕುಣಿದು ಕುಪ್ಪಳಿಸಿದರು. ಕೇಸರಿ ಶಾಲು ಹಿಡಿದು ಮದ್ದೂರಿನಲ್ಲಿ ಅಬ್ಬರಿಸಿರುವುದು ಎಲ್ಲರ ಗಮನ ಸೆಳೆಯಿತು.

3 / 7
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಪೊಲೀಸ್ ಕಟ್ಟೆಚ್ಚರವಹಿಸಲಾಗಿತ್ತು. ಮದ್ದೂರು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ. ಭದ್ರತೆಗಾಗಿ ಬರೋಬ್ಬರಿ 1500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು.

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಪೊಲೀಸ್ ಕಟ್ಟೆಚ್ಚರವಹಿಸಲಾಗಿತ್ತು. ಮದ್ದೂರು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ. ಭದ್ರತೆಗಾಗಿ ಬರೋಬ್ಬರಿ 1500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು.

4 / 7
ಮದ್ದೂರು ಗಲಾಟೆ ವಿಚಾರದಲ್ಲಿ ಸರ್ಕಾರದ ನಡೆಯನ್ನೇ ಖಂಡಿಸಿದ ಶಾಸಕ ಅಶ್ವತ್ಥ್​ ನಾರಾಯಣ್​, ಈ ಸರ್ಕಾರ ಬದುಕಿದ್ಯಾ? ಸತ್ತಿದ್ಯಾ ಅಂತಾ ಆಕ್ರೋಶ ಹೊರಹಾಕಿದರು. ಬಿಜೆಪಿ, ಜೆಡಿಎಸ್​ನಿಂದಲೇ ಕುಮ್ಮಕ್ಕು ಎಂದು ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು. ಇದಕ್ಕೆ ತಿರುಗೇಟು ಕೊಟ್ಟ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್​ನಿಂದ್ಲೇ ಓಲೈಕೆ ರಾಜಕೀಯ ಎಂದರು.

ಮದ್ದೂರು ಗಲಾಟೆ ವಿಚಾರದಲ್ಲಿ ಸರ್ಕಾರದ ನಡೆಯನ್ನೇ ಖಂಡಿಸಿದ ಶಾಸಕ ಅಶ್ವತ್ಥ್​ ನಾರಾಯಣ್​, ಈ ಸರ್ಕಾರ ಬದುಕಿದ್ಯಾ? ಸತ್ತಿದ್ಯಾ ಅಂತಾ ಆಕ್ರೋಶ ಹೊರಹಾಕಿದರು. ಬಿಜೆಪಿ, ಜೆಡಿಎಸ್​ನಿಂದಲೇ ಕುಮ್ಮಕ್ಕು ಎಂದು ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು. ಇದಕ್ಕೆ ತಿರುಗೇಟು ಕೊಟ್ಟ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್​ನಿಂದ್ಲೇ ಓಲೈಕೆ ರಾಜಕೀಯ ಎಂದರು.

5 / 7
ಬಿಜೆಪಿಗೆ ಬೆಂಕಿ ಇಡೋದೇ ಕೆಲಸ ಎಂದು ಡಿಸಿಎಂ ಡಿಕೆಶಿ ಕೆಂಡಕಾರಿದರು. ಇದಕ್ಕೆ ಗರಂ ಆದ ಆರ್​.ಅಶೋಕ್​, ಇಷ್ಟು ದಿನ ನೀವ್ ಕೆಲಸ ಇಲ್ಲದೇ ರೆಸ್ಟ್​ನಲ್ಲಿ ಇದ್ದಿರಿ, ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.

ಬಿಜೆಪಿಗೆ ಬೆಂಕಿ ಇಡೋದೇ ಕೆಲಸ ಎಂದು ಡಿಸಿಎಂ ಡಿಕೆಶಿ ಕೆಂಡಕಾರಿದರು. ಇದಕ್ಕೆ ಗರಂ ಆದ ಆರ್​.ಅಶೋಕ್​, ಇಷ್ಟು ದಿನ ನೀವ್ ಕೆಲಸ ಇಲ್ಲದೇ ರೆಸ್ಟ್​ನಲ್ಲಿ ಇದ್ದಿರಿ, ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.

6 / 7
ಒಟ್ಟಿನಲ್ಲಿ ಮಂಡ್ಯದ ಮದ್ದೂರು ಬುಧವಾರ ಸಂಪೂರ್ಣ ಕೇಸರಿಮಯ ಆಗಿತ್ತು. ಹಿಂದೂ ಸಂಘಟನೆಗಳು ಅಬ್ಬರಿಸಿದವು. 28 ಸಾಮೂಹಿಕ ಗಣೇಶ ವಿಸರ್ಜನೆ ಮೂಲಕ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನ ಮಾಡಿದರು.

ಒಟ್ಟಿನಲ್ಲಿ ಮಂಡ್ಯದ ಮದ್ದೂರು ಬುಧವಾರ ಸಂಪೂರ್ಣ ಕೇಸರಿಮಯ ಆಗಿತ್ತು. ಹಿಂದೂ ಸಂಘಟನೆಗಳು ಅಬ್ಬರಿಸಿದವು. 28 ಸಾಮೂಹಿಕ ಗಣೇಶ ವಿಸರ್ಜನೆ ಮೂಲಕ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನ ಮಾಡಿದರು.

7 / 7
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ