AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ ನಗರದ ಸರ್ಕಾರಿ ಶಾಲೆ ಬಿಸಿಯೂಟ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಿಶ್ರಿತ ಅಕ್ಕಿ ಪತ್ತೆ; ಪೋಷಕರಲ್ಲಿ ಆತಂಕ

ಮಡಿಕೇರಿ ನಗರದ ಸರ್ಕಾರಿ ಪ್ರೌಢಶಾಲೆಯ ಬಿಸಿಯೂಟ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಿಶ್ರಿತ ಅಕ್ಕಿ ಪತ್ತೆಯಾಗಿದ್ದು, ಪೋಷಕರಲ್ಲಿ ಆತಂಕ ಉಂಟುಮಾಡಿದೆ.

TV9 Web
| Edited By: |

Updated on: Jan 12, 2023 | 11:28 AM

Share
Madikeri City Plastic mixed rice found in government high school mid-day meal rice Anxiety among parents kodagu news in kannada

ಬಿಸಿ ಊಟದ ಅಕ್ಕಿಯಲ್ಲೂ ದಂಧೆ ನಡೆಯುತ್ತಿದೆ. ಇದೀಗ ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ಲಾಸ್ಟಿಕ್ ಮಿಶ್ರಿತ ಅಕ್ಕಿ ಪತ್ತೆಯಾಗಿದ್ದು, ಪೋಷಕರಲ್ಲಿ ಆತಂಕ ಉಂಟು ಮಾಡಿದೆ. ಬಿಸಿಯೂಟಕ್ಕೆ ಕಲಬೆರಕೆ ಅಕ್ಕಿ ಪೂರೈಕೆ ಮಾಡುತ್ತಿರುವ ಬಗ್ಗೆ ಕೊಡಗು ಜಿಲ್ಲಾಧಿಕಾರಿಗೆ ಪೋಷಕರೂ ಆಗಿರುವ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಅಧ್ಯಕ್ಷ ಚಂದ್ರಶೇಖರ ಆರ್.ಪಿ ದೂರು ನೀಡಿದ್ದಾರೆ.

1 / 5
Madikeri City Plastic mixed rice found in government high school mid-day meal rice Anxiety among parents kodagu news in kannada

ಶಾಲೆಯ ಬಿಸಿ ಊಟ ತಯಾರಿಕಾ ಘಟಕಕ್ಕೆ ಭೇಟಿಕೊಟ್ಟಾಗ ನೀರಿನಲ್ಲಿ ಅಕ್ಕಿ ತೊಳೆಯುತ್ತಿರುವುದನ್ನು ಗಮನಿಸಿದ್ದೇನೆ. ಈ ವೇಳೆ ಅಕ್ಕಿ ತೇಲುತ್ತಿರುವುದು ಕಂಡುಬಂದಿದೆ. ಕೂಡಲೇ ಅಕ್ಕಿ ಗೋಣಿಗಳನ್ನು ಪರಿಶೀಲಿಸಿದಾಗ ಪ್ಲಾಸ್ಟಿಕ್ ಮಿಶ್ರಿತ ಅಕ್ಕಿ ಪತ್ತೆಯಾಗಿದೆ. ಇದರ ವಿಡಿಯೋವನ್ನು ಮಾಡಿರುವುದಾಗಿ ಚಂದ್ರಶೇಖರ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

2 / 5
Madikeri City Plastic mixed rice found in government high school mid-day meal rice Anxiety among parents kodagu news in kannada

ಬಡ ಜನರ ಮಕ್ಕಳು ಓದುತ್ತಿರುವ ಸರ್ಕಾರಿ ಶಾಲೆಯಲ್ಲಿ ಸರ್ಕಾರದಿಂದ ಬರುವ ಅಕ್ಷರ ದಾಸೋದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವುದು ಖಂಡನೀಯ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿ ಬೇರೆ ದಾಸ್ತಾನನ್ನು ತರಿಸಿದ ಮೇಲೂ ಹಲವಾರು ಅಕ್ಕಿ ಚೀಲಗಳಲ್ಲಿ ಪ್ಲಾಸ್ಟಿಕ್ ಅಕ್ಕಿಗಳು ಯಥೇಚ್ಚವಾಗಿ ಕಂಡುಬಂದಿದೆ. ಈ ಅಕ್ಕಿಯ ಊಟ ಸೇವಿಸಿದ್ದಲ್ಲಿ ಮಕ್ಕಳ ಮೇಲೆ ಆಗುವ ದುಷ್ಪರಿಣಾಮಕ್ಕೆ ಅಥವಾ ಮಕ್ಕಳ ಜೀವಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

3 / 5
Madikeri City Plastic mixed rice found in government high school mid-day meal rice Anxiety among parents kodagu news in kannada

ಇಂತಹ ಕೃತ್ಯ ಎಸಗಿದ ಸರಬರಾಜುದಾರರು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆ ಆಗಬೇಕು, ಇದು ಸ್ಥಳೀಯವಾಗಿ ನಡೆಯುವ ಕೃತ್ಯ ಅಲ್ಲ, ಅಕ್ಕಿಯ ಮೂಲ ಪ್ಯಾಕ್ ಮಾಡುವ ಸ್ಥಳದಲ್ಲಿ ಆಗಿರುವ ಸಂಭವ ಹೆಚ್ಚಿದೆ. ಇಂತಹ ಸರಬರಾಜುದಾರರ ಲೈಸನ್ಸ್ ತಡೆಹಿಡಿದು ಇವರ ವಿರುದ್ಧ ಕೂಡಲೇ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

4 / 5
Madikeri City Plastic mixed rice found in government high school mid-day meal rice Anxiety among parents kodagu news in kannada

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಎಲ್ಲಾ ಕೊಡಗಿನ ಸರ್ಕಾರಿ ಅನುದಾನಿತ ಶಾಲೆಗಳ ಪೋಷಕರನ್ನು ಒಗ್ಗೂಡಿಸಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಚಂದ್ರಶೇಖರ್ ಅವರು ಎಚ್ಚರಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ