ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಆಕರ್ಷಕ​ ಪುಷ್ಪ ಪ್ರದರ್ಶನ

ಮಡಿಕೇರಿಯ ರಾಜಾಸೀಟ್‌ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಅದ್ಭುತವಾದ ಫಲ-ಪುಷ್ಪ ಪ್ರದರ್ಶನ ನಡೆಯುತ್ತಿದೆ. ಒಂದು ಲಕ್ಷಕ್ಕೂ ಹೆಚ್ಚು ಹೂವುಗಳಿಂದ ಇಗ್ಗುಟಪ್ಪ ದೇವಸ್ಥಾನದ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ ಸೇರಿದಂತೆ ದೇಸಿ ಮತ್ತು ವಿದೇಶಿ ಹೂವುಗಳು ಕಣ್ಮನ ಸೆಳೆಯುತ್ತಿವೆ. ಪ್ರವಾಸಿಗರಿಗೆ ಇದು ಅದ್ಭುತ ಅನುಭವವಾಗಿದೆ.

Gopal AS
| Updated By: ವಿವೇಕ ಬಿರಾದಾರ

Updated on:Jan 27, 2025 | 10:42 AM

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಡಿಕೇರಿ ರಾಜಾಸೀಟ್​ನಲ್ಲಿ ಪುಷ್ಪಕಾಶಿಯೇ ಸೃಷ್ಟಿಯಾಗಿದೆ. ದೇಸಿ ಮತ್ತು ವಿದೇಶೀ ತಳಿಯ ಹೂವುಗಳು ಅರಳಿ ನಸು ನಗುತ್ತಿವೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ, ವಾಟರ್​ ಲಿಲ್ಲಿ, ಕ್ಯಾಕ್ಟಸ್​, ಗುಲಾಬಿ, ಗ್ಲಾಡಿಯೋಲಸ್, ಜೀನಿಯಾ ಹೀಗೆ ಹತ್ತು ಹಲವು ಬಗೆಯ ಹೂವುಗಳು ಅರಳಿವೆ.

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಡಿಕೇರಿ ರಾಜಾಸೀಟ್​ನಲ್ಲಿ ಪುಷ್ಪಕಾಶಿಯೇ ಸೃಷ್ಟಿಯಾಗಿದೆ. ದೇಸಿ ಮತ್ತು ವಿದೇಶೀ ತಳಿಯ ಹೂವುಗಳು ಅರಳಿ ನಸು ನಗುತ್ತಿವೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ, ವಾಟರ್​ ಲಿಲ್ಲಿ, ಕ್ಯಾಕ್ಟಸ್​, ಗುಲಾಬಿ, ಗ್ಲಾಡಿಯೋಲಸ್, ಜೀನಿಯಾ ಹೀಗೆ ಹತ್ತು ಹಲವು ಬಗೆಯ ಹೂವುಗಳು ಅರಳಿವೆ.

1 / 5
ಫಲ-ಪುಷ್ಪ ಪ್ರದರ್ಶನದ ಅಂಗವಾಗಿ ರಾಜಾಸೀಟ್​ನಲ್ಲಿ ಇಗ್ಗುತ್ತಪ್ಪ ದೇವಸ್ಥಾನದ ಪ್ರತಿಕೃತಿಯನ್ನು ಹೂವಿನಿಂದ ನಿರ್ಮಿಸಲಾಗಿದೆ. 20ಕ್ಕೂ ಅಧಿಕ ಬಗೆಯ ಸುಮಾರು ಒಂದು ಲಕ್ಷ ಹೂವುಗಳಿಂದ ದೇವಸ್ಥಾನ ನಿರ್ಮಿಸಲಾಗಿದೆ.

ಫಲ-ಪುಷ್ಪ ಪ್ರದರ್ಶನದ ಅಂಗವಾಗಿ ರಾಜಾಸೀಟ್​ನಲ್ಲಿ ಇಗ್ಗುತ್ತಪ್ಪ ದೇವಸ್ಥಾನದ ಪ್ರತಿಕೃತಿಯನ್ನು ಹೂವಿನಿಂದ ನಿರ್ಮಿಸಲಾಗಿದೆ. 20ಕ್ಕೂ ಅಧಿಕ ಬಗೆಯ ಸುಮಾರು ಒಂದು ಲಕ್ಷ ಹೂವುಗಳಿಂದ ದೇವಸ್ಥಾನ ನಿರ್ಮಿಸಲಾಗಿದೆ.

2 / 5
ವಿಶೇಷ ಅಂದರೇ, ದೇವಸ್ಥಾನದಲ್ಲಿನ ಶಿವಲಿಂಗ ಕೂಡ ಹೂವುಗಳಿಂದಲೇ ನಿರ್ಮಿಸಲಾಗಿದ್ದು, ಬಹಳ ಆಕರ್ಷಕವಾಗಿದೆ. ಈ ದೇವಸ್ಥಾನದ ಎದುರು ಫೋಟೋ ತೆಗೆಸಿಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ. ರಾಜಾಸೀಟ್ ಉದ್ಯಾನವದಲ್ಲಿ ಸುಮಾರು 15 ಸಾವಿರ ಹೂವಿನಗಿಡಗಳನ್ನು ಬೆಳೆಸಲಾಗಿದೆ.

ವಿಶೇಷ ಅಂದರೇ, ದೇವಸ್ಥಾನದಲ್ಲಿನ ಶಿವಲಿಂಗ ಕೂಡ ಹೂವುಗಳಿಂದಲೇ ನಿರ್ಮಿಸಲಾಗಿದ್ದು, ಬಹಳ ಆಕರ್ಷಕವಾಗಿದೆ. ಈ ದೇವಸ್ಥಾನದ ಎದುರು ಫೋಟೋ ತೆಗೆಸಿಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ. ರಾಜಾಸೀಟ್ ಉದ್ಯಾನವದಲ್ಲಿ ಸುಮಾರು 15 ಸಾವಿರ ಹೂವಿನಗಿಡಗಳನ್ನು ಬೆಳೆಸಲಾಗಿದೆ.

3 / 5
ಈ ಎಲ್ಲ ಹೂವುಗಳನ್ನು ಕಳೆದ ಎರಡು ತಿಂಗಳಿನಿಂದ ಪೋಷಿಸಿ ಬೆಳೆಸಲಾಗುತ್ತಿದೆ. ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷ ಮುತುವರ್ಜಿ ವಹಿಸಿ ಹೂವುಗಳನ್ನ ಬೆಳೆಸಿದ್ದಾರೆ.

ಈ ಎಲ್ಲ ಹೂವುಗಳನ್ನು ಕಳೆದ ಎರಡು ತಿಂಗಳಿನಿಂದ ಪೋಷಿಸಿ ಬೆಳೆಸಲಾಗುತ್ತಿದೆ. ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷ ಮುತುವರ್ಜಿ ವಹಿಸಿ ಹೂವುಗಳನ್ನ ಬೆಳೆಸಿದ್ದಾರೆ.

4 / 5
ಗಣರಾಜ್ಯೋತ್ಸವ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಈ ಬಾರಿ ಸಾಕಷ್ಟು ಪ್ರವಾಸಿಗರು ಮಡಿಕೇರಿಯತ್ತ ಆಗಮಿಸಿದ್ದಾರೆ. ವಾರಾಂತ್ಯದಲ್ಲಿ ಇದರ ಸಂಖ್ಯೆ ದುಪ್ಪಟ್ಟಾಗಲಿದೆ. ಹೀಗಾಗಿ ರಾಜಾಸೀಟ್​ ಆಗಮಿಸುವ ಪ್ರವಾಸಿಗರ ಕಣ್ಣಿಗೆ ಹಬ್ಬದೂಟದಂತಿದೆ ಫಲಪುಷ್ಪ ಪ್ರದರ್ಶನದ ಸೊಬಗು ಬರ ಸೆಳೆಯುತ್ತಿದೆ.

ಗಣರಾಜ್ಯೋತ್ಸವ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಈ ಬಾರಿ ಸಾಕಷ್ಟು ಪ್ರವಾಸಿಗರು ಮಡಿಕೇರಿಯತ್ತ ಆಗಮಿಸಿದ್ದಾರೆ. ವಾರಾಂತ್ಯದಲ್ಲಿ ಇದರ ಸಂಖ್ಯೆ ದುಪ್ಪಟ್ಟಾಗಲಿದೆ. ಹೀಗಾಗಿ ರಾಜಾಸೀಟ್​ ಆಗಮಿಸುವ ಪ್ರವಾಸಿಗರ ಕಣ್ಣಿಗೆ ಹಬ್ಬದೂಟದಂತಿದೆ ಫಲಪುಷ್ಪ ಪ್ರದರ್ಶನದ ಸೊಬಗು ಬರ ಸೆಳೆಯುತ್ತಿದೆ.

5 / 5

Published On - 10:36 am, Mon, 27 January 25

Follow us
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ
ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ
ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ
ದೇವರ ಗುಡಿ ಕಟ್ಟಿ ಪಾಪ ತೊಳೆದುಕೊಳ್ಳಲು ಮುಂದಾಗಿದ್ದ ಬಾಗಪ್ಪ ಹರಿಜನ!
ದೇವರ ಗುಡಿ ಕಟ್ಟಿ ಪಾಪ ತೊಳೆದುಕೊಳ್ಳಲು ಮುಂದಾಗಿದ್ದ ಬಾಗಪ್ಪ ಹರಿಜನ!