- Kannada News Photo gallery Maharashtra CM Eknath Shinde unveils Shivaji Maharaj statue in Jammu Kashmir Kupwada
Shivaji Maharaj Statue: ಭಾರತ-ಪಾಕ್ ಗಡಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ
ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.
Updated on: Nov 07, 2023 | 5:01 PM

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ ಸಮಾರಂಭ ಇಂದು(ನ.07) ನಡೆದಿದೆ.

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಪ್ರತಿಮೆ ಇದಾಗಿದ್ದು, ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದ ಮುಖ್ಯಮಂತ್ರಿ ಏಕನಾಥ್ ಶಿಂಧೆ.

ರಾಷ್ಟ್ರೀಯ ರೈಫಲ್ಸ್-41 ರ ಸೈನಿಕರು ಈ ಕಾರ್ಯಕ್ರಮಕ್ಕಾಗಿ ಕೆಲ ದಿನಗಳಿಂದಲೇ ಬಹಳ ಉತ್ಸುಕರಾಗಿದ್ದು, ಕಳೆದ ವಾರ ಕುಪ್ವಾರಕ್ಕೆ ಶಿವಾಜಿಯ ಪ್ರತಿಮೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿತ್ತು.

ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಕುದುರೆ ಸವಾರಿ ಮಾಡುತ್ತಿರುವ ಮಾದರಿಯ ಕಾಶ್ಮೀರದ ಕುಪ್ವಾರದಲ್ಲಿರುವ ಪ್ರತಿಮೆ ಇದೀಗಾ ಎಲ್ಲರ ಗಮನಸೆಳೆದಿದೆ.

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.
Read More
