Malaysia Masters 2024: ಫೈನಲ್‌ಗೇರಿದ ಪಿವಿ ಸಿಂಧು..! ಪ್ರಶಸ್ತಿ ಸುತ್ತಿನ ಎದುರಾಳಿ ಯಾರು ಗೊತ್ತಾ?

Malaysia Masters 2024: ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ 500ಟೂರ್ನಿಯಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಸೆಮಿಫೈನಲ್ ಪಂದ್ಯದಲ್ಲಿ ಥಾಯ್ಲೆಂಡ್‌ನ ಆಟಗಾರ್ತಿ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನು ಮನಿಸುವ ಮೂಲಕ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

|

Updated on: May 25, 2024 | 5:11 PM

ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ 500ಟೂರ್ನಿಯಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಸೆಮಿಫೈನಲ್ ಪಂದ್ಯದಲ್ಲಿ ಥಾಯ್ಲೆಂಡ್‌ನ ಆಟಗಾರ್ತಿ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನು ಮನಿಸುವ ಮೂಲಕ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ 500ಟೂರ್ನಿಯಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಸೆಮಿಫೈನಲ್ ಪಂದ್ಯದಲ್ಲಿ ಥಾಯ್ಲೆಂಡ್‌ನ ಆಟಗಾರ್ತಿ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನು ಮನಿಸುವ ಮೂಲಕ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

1 / 7
ಸಿಂಧು ಮತ್ತು ಬುಸಾನನ್ ನಡುವಿನ ಈ ಪಂದ್ಯ 88 ನಿಮಿಷಗಳ ಕಾಲ ನಡೆಯಿತು. ಈ ಪಂದ್ಯದ ಮೊದಲ ಸೆಟ್‌ನಲ್ಲಿ ಸಿಂಧು ಸೋಲನ್ನು ಎದುರಿಸಬೇಕಾಯಿತು. ಆದರೆ ಆ ನಂತರ ಅಮೋಘ ಪುನರಾಗಮನ ಮಾಡಿದ ಸಿಂಧು ಮುಂದಿನ ಎರಡು ಸೆಟ್‌ಗಳನ್ನು ಏಕಪಕ್ಷೀಯವಾಗಿ ಗೆದ್ದು ಫೈನಲ್‌ಗೆ ಪ್ರವೇಶಿಸುವಲ್ಲಿ ಯಶಸ್ವಿಯಾದರು.

ಸಿಂಧು ಮತ್ತು ಬುಸಾನನ್ ನಡುವಿನ ಈ ಪಂದ್ಯ 88 ನಿಮಿಷಗಳ ಕಾಲ ನಡೆಯಿತು. ಈ ಪಂದ್ಯದ ಮೊದಲ ಸೆಟ್‌ನಲ್ಲಿ ಸಿಂಧು ಸೋಲನ್ನು ಎದುರಿಸಬೇಕಾಯಿತು. ಆದರೆ ಆ ನಂತರ ಅಮೋಘ ಪುನರಾಗಮನ ಮಾಡಿದ ಸಿಂಧು ಮುಂದಿನ ಎರಡು ಸೆಟ್‌ಗಳನ್ನು ಏಕಪಕ್ಷೀಯವಾಗಿ ಗೆದ್ದು ಫೈನಲ್‌ಗೆ ಪ್ರವೇಶಿಸುವಲ್ಲಿ ಯಶಸ್ವಿಯಾದರು.

2 / 7
ಕಳೆದ ಒಂದು ವರ್ಷದಲ್ಲಿ ಸಿಂಧು ಪ್ರಮುಖ ಟೂರ್ನಿಯೊಂದರ ಫೈನಲ್‌ನಲ್ಲಿ ಆಡುತ್ತಿರುವುದು ಇದೇ ಮೊದಲು. ಈ ಟೂರ್ನಿಗೂ ಮುನ್ನ ನಡೆದ ಅನೇಕ ಪಂದ್ಯಾವಳಿಗಳಲ್ಲಿ ಸಿಂಧು ಆಟ ಹೇಳಿಕೊಳ್ಳುವಂತಿರಲಿಲ್ಲ. ಹೀಗಾಗಿ ಮಲೇಷ್ಯಾ ಮಾಸ್ಟರ್ಸ್ 500ಟೂರ್ನಿಗೆ ಸಾಕಷ್ಟು ತಯಾರಿ ಮಾಡಿಕೊಂಡದ್ದ ಸಿಂಧು ಇದೀಗ ಫೈನಲ್​ಗೆ ಲಗ್ಗೆ ಇಟ್ಟಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಸಿಂಧು ಪ್ರಮುಖ ಟೂರ್ನಿಯೊಂದರ ಫೈನಲ್‌ನಲ್ಲಿ ಆಡುತ್ತಿರುವುದು ಇದೇ ಮೊದಲು. ಈ ಟೂರ್ನಿಗೂ ಮುನ್ನ ನಡೆದ ಅನೇಕ ಪಂದ್ಯಾವಳಿಗಳಲ್ಲಿ ಸಿಂಧು ಆಟ ಹೇಳಿಕೊಳ್ಳುವಂತಿರಲಿಲ್ಲ. ಹೀಗಾಗಿ ಮಲೇಷ್ಯಾ ಮಾಸ್ಟರ್ಸ್ 500ಟೂರ್ನಿಗೆ ಸಾಕಷ್ಟು ತಯಾರಿ ಮಾಡಿಕೊಂಡದ್ದ ಸಿಂಧು ಇದೀಗ ಫೈನಲ್​ಗೆ ಲಗ್ಗೆ ಇಟ್ಟಿದ್ದಾರೆ.

3 / 7
ಸೆಮಿಫೈನಲ್ ಪಂದ್ಯವನ್ನು ಗೆಲ್ಲುವುದು ಪಿವಿ ಸಿಂಧು ಅವರಿಗೆ ಅಷ್ಟೊಂದು ಸುಲಭವಾಗಿರಲಿಲ್ಲ. ಮೊದಲ ಸೆಟ್‌ನಲ್ಲಿ ಥಾಯ್ಲೆಂಡ್‌ನ ಬುಸಾನಾನ್‌ ವಿರುದ್ಧ 13-21ರಿಂದ ಸೋಲನುಭವಿಸಬೇಕಾಯಿತು. ಆದರೆ ಎರಡನೇ ಸೆಟ್‌ನ ಆರಂಭದೊಂದಿಗೆ ಸಿಂಧು ತನ್ನ ಆಟದ ತಂತ್ರವನ್ನು ಬದಲಾಯಿಸಿದರು ಮತ್ತು ಆಕ್ರಮಣಕಾರಿ ನಿಲುವನ್ನು ಅಳವಡಿಸಿಕೊಂಡರು. ಪರಿಣಾಮವಾಗಿ ಸಿಂಧು 21-16ರಲ್ಲಿ ಎರಡನೇ ಸೆಟ್ ಗೆದ್ದು ಸಮಬಲ ಸಾಧಿಸಿದರು.

ಸೆಮಿಫೈನಲ್ ಪಂದ್ಯವನ್ನು ಗೆಲ್ಲುವುದು ಪಿವಿ ಸಿಂಧು ಅವರಿಗೆ ಅಷ್ಟೊಂದು ಸುಲಭವಾಗಿರಲಿಲ್ಲ. ಮೊದಲ ಸೆಟ್‌ನಲ್ಲಿ ಥಾಯ್ಲೆಂಡ್‌ನ ಬುಸಾನಾನ್‌ ವಿರುದ್ಧ 13-21ರಿಂದ ಸೋಲನುಭವಿಸಬೇಕಾಯಿತು. ಆದರೆ ಎರಡನೇ ಸೆಟ್‌ನ ಆರಂಭದೊಂದಿಗೆ ಸಿಂಧು ತನ್ನ ಆಟದ ತಂತ್ರವನ್ನು ಬದಲಾಯಿಸಿದರು ಮತ್ತು ಆಕ್ರಮಣಕಾರಿ ನಿಲುವನ್ನು ಅಳವಡಿಸಿಕೊಂಡರು. ಪರಿಣಾಮವಾಗಿ ಸಿಂಧು 21-16ರಲ್ಲಿ ಎರಡನೇ ಸೆಟ್ ಗೆದ್ದು ಸಮಬಲ ಸಾಧಿಸಿದರು.

4 / 7
ಮೂರನೇ ಸೆಟ್‌ನಲ್ಲಿ ತನ್ನ ಪ್ರಾಬಲ್ಯವನ್ನು ಸಂಪೂರ್ಣವಾಗಿ ಮುಂದುವರೆಸಿದ ಸಿಂಧು ಮೂರನೇ ಸೆಟ್​ ಅನ್ನು 21-12 ರಿಂದ ಜಯಿಸುವ ಮೂಲಕ ಪಂದ್ಯ ಗೆದ್ದರು. ಇದು ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್ 500 ಟೂರ್ನಿಯಲ್ಲಿ ಸಿಂಧು ಅವರ ವೃತ್ತಿಜೀವನದ ನಾಲ್ಕನೇ ಫೈನಲ್ ಆಗಿದೆ.

ಮೂರನೇ ಸೆಟ್‌ನಲ್ಲಿ ತನ್ನ ಪ್ರಾಬಲ್ಯವನ್ನು ಸಂಪೂರ್ಣವಾಗಿ ಮುಂದುವರೆಸಿದ ಸಿಂಧು ಮೂರನೇ ಸೆಟ್​ ಅನ್ನು 21-12 ರಿಂದ ಜಯಿಸುವ ಮೂಲಕ ಪಂದ್ಯ ಗೆದ್ದರು. ಇದು ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್ 500 ಟೂರ್ನಿಯಲ್ಲಿ ಸಿಂಧು ಅವರ ವೃತ್ತಿಜೀವನದ ನಾಲ್ಕನೇ ಫೈನಲ್ ಆಗಿದೆ.

5 / 7
ಇದೀಗ ಸಿಂಧು ಫೈನಲ್ ಪಂದ್ಯದಲ್ಲಿ ಚೀನಾದ ಆಟಗಾರ್ತಿ ವಾಂಗ್ ಕ್ಸಿ ಯಿ ಅವರನ್ನು ಎದುರಿಸಬೇಕಾಗಿದೆ. 15ನೇ ಶ್ರೇಯಾಂಕದ ಆಟಗಾರ್ತಿ ಪಿವಿ ಸಿಂಧುಗೆ ಈ ಗೆಲುವು ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ಗೂ ಮುನ್ನ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಇದೀಗ ಸಿಂಧು ಫೈನಲ್ ಪಂದ್ಯದಲ್ಲಿ ಚೀನಾದ ಆಟಗಾರ್ತಿ ವಾಂಗ್ ಕ್ಸಿ ಯಿ ಅವರನ್ನು ಎದುರಿಸಬೇಕಾಗಿದೆ. 15ನೇ ಶ್ರೇಯಾಂಕದ ಆಟಗಾರ್ತಿ ಪಿವಿ ಸಿಂಧುಗೆ ಈ ಗೆಲುವು ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ಗೂ ಮುನ್ನ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

6 / 7
ಜುಲೈ 26 ರಿಂದ ಆಗಸ್ಟ್ 11 ರವರೆಗೆ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಜರ್ಮನಿಯಲ್ಲಿ ತಯಾರಿ ನಡೆಸಲು ಭಾರತೀಯ ಕ್ರೀಡಾ ಸಚಿವಾಲಯ ಇತ್ತೀಚೆಗೆ ಸಿಂಧುಗೆ ಅನುಮೋದನೆ ನೀಡಿತ್ತು.

ಜುಲೈ 26 ರಿಂದ ಆಗಸ್ಟ್ 11 ರವರೆಗೆ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಜರ್ಮನಿಯಲ್ಲಿ ತಯಾರಿ ನಡೆಸಲು ಭಾರತೀಯ ಕ್ರೀಡಾ ಸಚಿವಾಲಯ ಇತ್ತೀಚೆಗೆ ಸಿಂಧುಗೆ ಅನುಮೋದನೆ ನೀಡಿತ್ತು.

7 / 7
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ