
ಕಳೆದ ಕೆಲವು ದಿನಗಳಿಂದ ದೊಡ್ಡ ಕಗ್ಗಂಟಾಗಿದ್ದ ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ವಿಚಾರ ಕೊನೆಗೂ ಬಗೆಹರಿದಿದೆ.


ಖರ್ಗೆ ಜೊತೆ ಸಿದ್ದು-ಡಿಕೆಶಿ


ಈ ಮೂಲಕ ಕರ್ನಾಟಕದಲ್ಲಿ ಕೆಲ ಚರ್ಚೆಗಳಿಗೆ ಬ್ರೇಕ್ ಹಾಕಿದ್ದು, ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ದೆಹಲಿಯಿಂದಲೇ ಸಂದೇಶ ರವಾನಿಸಿದರು.

ಕಳೆದ ನಾಲ್ಕೈದು ದಿನಗಳ ನಿರಂತರ ಪ್ರತ್ಯೇಕ ಸರಣಿ ಸಭೆ ಬಳಿಕ ಸಂಧಾನ ಮಾಡಲಾಗಿದ್ದು, ಅಂತಿಮವಾಗಿ ಎಲ್ಲವೂ ಓಕೆ ಆದ ಬಳಿಕ ಕೆಸಿ ವೇಣುಗೋಪಾಲ್ ಅವರು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಉಪಹಾರಕೂಟ ಏರ್ಪಡಿಸುವ ಮೂಲಕ ಒಂದಾಗಿ ಸರ್ಕಾರ ನಡೆಸುವಂತೆ ಸಂದೇಶ ನೀಡಿದರು.

ರಾಹುಲ್ ಗಾಂಧಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಜೊತೆ ಪ್ರತ್ಯೇಕ ಸಭೆ ಮಾಡಿದ್ದರು. ಆದರೂ ಡಿಕೆ ಶಿವಕುಮಾರ್ ಸಿಎಂ ಸ್ಥಾನದ ಪಟ್ಟು ಸಡಿಸಿರಲಿಲ್ಲ.


ಅಂತಿಮವಾಗಿ ಈ ಬಗ್ಗೆ ಡಿಕೆ ಶಿವಕುಮಾರ್ ಹೈಕಮಾಂಡ್ ತೀರ್ಮಾನಕ್ಕೆ ಓಕೆ ಅಂದಿದ್ದರೆ, ಡಿಕೆ ಸುರೇಶ್ ನಮಗೆ ಸಂಪೂರ್ಣ ಸಂತೋಷವಾಗಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.