AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya Violence: ನಾಗಮಂಗಲ ಗಲಭೆ ಸಂತ್ರಸ್ತರಿಗೆ 2 ಲಕ್ಷ ರೂ.ವರೆಗೆ ಪರಿಹಾರ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಮಂಡ್ಯ, ಸೆಪ್ಟೆಂಬರ್ 13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದ ಪ್ರದೇಶಕ್ಕೆ ಕೇಂದ್ರ ಸಚಿವ, ಮಂಡ್ಯ ಸಂಸದರೂ ಆಗಿರುವ ಹೆಚ್​ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅವರು, ಘಟನೆಯಿಂದ ಆಸ್ತಿಪಾಸ್ತಿ ಕಳೆದುಕೊಂಡು ಸಂತ್ರಸ್ತರಾದವರಿಗೆ ವೈಯಕ್ತಿಕ ನೆಲೆಯಿಂದ ಪರಿಹಾರ ವಿತರಣೆ ಮಾಡಿದರು.

ಪ್ರಶಾಂತ್​ ಬಿ.
| Edited By: |

Updated on: Sep 13, 2024 | 12:08 PM

Share
ಗಲಭೆ ನಡೆದಿದ್ದ ಜಾಗಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ಸುಟ್ಟುಹೋಗಿರುವ ಅಂಗಡಿಗಳ ಬಳಿ ಪರಿಶೀಲಿಸಿದರು. ನಂತರ ಅಂಗಡಿ ಮಾಲೀಕರ ಜೊತೆ ಚರ್ಚಿಸಿ ಮಾಹಿತಿ ಪಡೆದರು. ವಿವಿಧ ಕಡೆ ಹಾನಿಯಾಗಿರುವುದನ್ನು, ವಾಹನಗಳನ್ನು ಸುಟ್ಟುಹೋಗಿರುವುದನ್ನು ಪರಿಶೀಲಿಸಿದರು. ಬಳಿಕ ಪರಿಹಾರದ ಮೊತ್ತವನ್ನು ವಿತರಣೆ ಮಾಡಿದರು.

ಗಲಭೆ ನಡೆದಿದ್ದ ಜಾಗಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ಸುಟ್ಟುಹೋಗಿರುವ ಅಂಗಡಿಗಳ ಬಳಿ ಪರಿಶೀಲಿಸಿದರು. ನಂತರ ಅಂಗಡಿ ಮಾಲೀಕರ ಜೊತೆ ಚರ್ಚಿಸಿ ಮಾಹಿತಿ ಪಡೆದರು. ವಿವಿಧ ಕಡೆ ಹಾನಿಯಾಗಿರುವುದನ್ನು, ವಾಹನಗಳನ್ನು ಸುಟ್ಟುಹೋಗಿರುವುದನ್ನು ಪರಿಶೀಲಿಸಿದರು. ಬಳಿಕ ಪರಿಹಾರದ ಮೊತ್ತವನ್ನು ವಿತರಣೆ ಮಾಡಿದರು.

1 / 5
ಆಸ್ತಿಪಾಸ್ತಿ ಕಳೆದುಕೊಂಡವರಿಗೆ ತಲಾ 25 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿ ವರೆಗೂ ಪರಿಹಾರ ವಿತರಣೆ ಮಾಡಿದರು. ನಷ್ಟ ಆಧರಿಸಿ ಪರಿಹಾರ ವಿತರಣೆ ಮಾಡಿದರು. ಮಾಜಿ ಶಾಸಕ ಸುರೇಶ್ ಗೌಡರ ಮನೆಗೆ ಕರೆಸಿ ಪರಿಹಾರ ವಿತರಣೆ ಮಾಡಿದರು. ಇದೇ ವೇಳೆ ಕಷ್ಟ ಹೇಳಿಕೊಂಡು ಬಂದವರಿಗೂ ಹೆಚ್​ಡಿಕೆ ಆರ್ಥಿಕ ನೆರವು ನೀಡಿದರು.

ಆಸ್ತಿಪಾಸ್ತಿ ಕಳೆದುಕೊಂಡವರಿಗೆ ತಲಾ 25 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿ ವರೆಗೂ ಪರಿಹಾರ ವಿತರಣೆ ಮಾಡಿದರು. ನಷ್ಟ ಆಧರಿಸಿ ಪರಿಹಾರ ವಿತರಣೆ ಮಾಡಿದರು. ಮಾಜಿ ಶಾಸಕ ಸುರೇಶ್ ಗೌಡರ ಮನೆಗೆ ಕರೆಸಿ ಪರಿಹಾರ ವಿತರಣೆ ಮಾಡಿದರು. ಇದೇ ವೇಳೆ ಕಷ್ಟ ಹೇಳಿಕೊಂಡು ಬಂದವರಿಗೂ ಹೆಚ್​ಡಿಕೆ ಆರ್ಥಿಕ ನೆರವು ನೀಡಿದರು.

2 / 5
ನಾಗಮಂಗಲ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಗಲಾಟೆಯಲ್ಲಿ ಹಾನಿಯಾದ ಅಂಗಡಿ ಮಾಲೀಕರಿಗೆ ಪರಿಹಾರ ನೀಡುತ್ತಿದ್ದೇನೆ. ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ ಎಂದಿದ್ದಾರೆ. ಅಲ್ಲದೇ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾಗಮಂಗಲ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಗಲಾಟೆಯಲ್ಲಿ ಹಾನಿಯಾದ ಅಂಗಡಿ ಮಾಲೀಕರಿಗೆ ಪರಿಹಾರ ನೀಡುತ್ತಿದ್ದೇನೆ. ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ ಎಂದಿದ್ದಾರೆ. ಅಲ್ಲದೇ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

3 / 5
ಈ ಮಧ್ಯೆ, ಬಂಧನಕೊಳಗಾದವರ ಕುಟುಂಬಸ್ಥರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಪೊಲೀಸರು ಅಮಾಯಕರನ್ನು ಬಂಧಿಸಿ‌ ಜೈಲಿಗೆ ಕಳುಹಿಸಿದ್ದಾರೆ. ವಿಡಿಯೋದಲ್ಲಿ ಇಲ್ಲ ಅಂದರೆ ವಾಪಸ್ ಕಳುಹುಸುತ್ತೇವೆ ಎಂದಿದ್ದರು. ಈಗ ಜೈಲಿಗೆ ಕಳುಹಿಸಿ ಸಮಸ್ಯೆಗೆ ಸಿಲುಕಿಸಿದ್ದಾರೆ ಎಂದು ಮಹಿಳೆಯರು ಅಹವಾಲು ಸಲ್ಲಿಸಿದರು.

ಈ ಮಧ್ಯೆ, ಬಂಧನಕೊಳಗಾದವರ ಕುಟುಂಬಸ್ಥರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಪೊಲೀಸರು ಅಮಾಯಕರನ್ನು ಬಂಧಿಸಿ‌ ಜೈಲಿಗೆ ಕಳುಹಿಸಿದ್ದಾರೆ. ವಿಡಿಯೋದಲ್ಲಿ ಇಲ್ಲ ಅಂದರೆ ವಾಪಸ್ ಕಳುಹುಸುತ್ತೇವೆ ಎಂದಿದ್ದರು. ಈಗ ಜೈಲಿಗೆ ಕಳುಹಿಸಿ ಸಮಸ್ಯೆಗೆ ಸಿಲುಕಿಸಿದ್ದಾರೆ ಎಂದು ಮಹಿಳೆಯರು ಅಹವಾಲು ಸಲ್ಲಿಸಿದರು.

4 / 5
ಘಟನಾ ಸ್ಥಣದಲ್ಲಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ್ದ ಕುಮಾರಸ್ವಾಮಿ, ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ. ಎರಡು‌ ಧರ್ಮದವರಿಗೂ ಸಮಾನವಾಗಿ ಪರಿಹಾರ ಕೊಡುತ್ತೇನೆ ಎಂದಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಪರಿಹಾರದ ಮೊತ್ತ ವಿತರಣೆ ಮಾಡಿದ್ದಾರೆ.

ಘಟನಾ ಸ್ಥಣದಲ್ಲಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ್ದ ಕುಮಾರಸ್ವಾಮಿ, ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ. ಎರಡು‌ ಧರ್ಮದವರಿಗೂ ಸಮಾನವಾಗಿ ಪರಿಹಾರ ಕೊಡುತ್ತೇನೆ ಎಂದಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಪರಿಹಾರದ ಮೊತ್ತ ವಿತರಣೆ ಮಾಡಿದ್ದಾರೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ