AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಕನ್ನಡ ಶಾಲಾ ಮಕ್ಕಳ ಹಬ್ಬ: ಕನ್ನಡ ಶಾಲೆ ಉಳಿಸಿ ಬೆಳೆಸುವ ವಿಶೇಷ ಕಾರ್ಯಕ್ರಮದಲ್ಲಿ ಮಕ್ಕಳ ಮಸ್ತ್ ಮಜಾ

ಕನ್ನಡ ಶಾಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕಡಲನಗರಿಯಲ್ಲಿ ವಿಶೇಷ ಮಕ್ಕಳ ಹಬ್ಬ ನಡೆದಿದ್ದು, ಸಂಭ್ರಮದಲ್ಲಿ ಭಾಗಿಯಾದ ಕನ್ನಡ ಶಾಲೆಯ ಮಕ್ಕಳು ಜ್ಞಾನ ಸಂಪಾದನೆಯ ಜೊತೆಗೆ ಕಾರ್ಯಕ್ರಮವನ್ನು ಸಖತ್ ಎಂಜಾಯ್ ಮಾಡಿದ್ದಾರೆ.

TV9 Web
| Edited By: |

Updated on:Nov 21, 2022 | 11:01 AM

Share
ಇತ್ತೀಚೆಗೆ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಪರಿಣಾಮ ಹಲವು ಸರ್ಕಾರಿ ಶಾಲೆಗಳು ಬೀಗ ಹಾಕಬೇಕಾದ ಪರಿಸ್ಥಿತಿ ಬಂದಿದೆ. ಹೀಗಾಗಿ ಕನ್ನಡ ಶಾಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕಡಲನಗರಿಯಲ್ಲಿ ವಿಶೇಷ ಕಾರ್ಯಕ್ರಮವೊಂದನ್ನು ನಡೆಸಲಾಯಿತು. ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಕನ್ನಡ ಶಾಲೆಯ ಮಕ್ಕಳು ಜ್ಞಾನ ಸಂಪಾದನೆಯ ಜೊತೆ ಕಾರ್ಯಕ್ರಮವನ್ನು ಎಂಜಾಯ್ ಮಾಡಿದ್ದಾರೆ.

Mangaluru Kannada School Children's Festival Childrens enjoyed the special programme Dakshina kannada news in kannada

1 / 5
ಮಂಗಳೂರಿನ ಸಂಘನಿಕೇತನದಲ್ಲಿ ಎರಡು ದಿನಗಳ ಕಾಲ ಕನ್ನಡ ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮ ನಡೆಯಿತು. ಕನ್ನಡ ಶಾಲೆಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಕೇಶವ ಸ್ಮೃತಿ ಸಂವರ್ಧನ ಸಮಿತಿ ನಡೆಸಿತು. ಮೊದಲ ದಿನದ ಹಬ್ಬದಲ್ಲಿ ದಕ್ಷಿಣಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಐದರಿಂದ ಹತ್ತನೇ ತರಗತಿವರೆಗಿನ ಸುಮಾರು 8 ಸಾವಿರ ವಿದ್ಯಾರ್ಥಿಗಳು‌ ಭಾಗಿಯಾಗಿದ್ದಾರೆ. ಗೋಕರ್ಣನಾಥೇಶ್ವರ ಕಾಲೇಜು ಮೈದಾನದಿಂದ ಸಂಘನಿಕೇತನ ತನಕ ಮೆರವಣಿಗೆ ನಡೆಯಿತು. ಬಳಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕಾರ್ಯಕ್ರಮವನ್ನು ಉದ್ಘಾಸಿದರು.

Mangaluru Kannada School Children's Festival Childrens enjoyed the special programme Dakshina kannada news in kannada

2 / 5
Mangaluru Kannada School Children's Festival Childrens enjoyed the special programme Dakshina kannada news in kannada

ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯದ ಮಹತ್ವ, ಮಹನೀಯರ ಚಿಂತನೆಗಳನ್ನು ಒಳಗೊಂಡ ಸಾಕ್ಷ್ಯಚಿತ್ರ ಪ್ರದರ್ಶನ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದರ ಜೊತೆಗೆ ಕುದ್ರೋಳಿ ಗಣೇಶ್ ಅವರ ಜಾದೂ ಪ್ರದರ್ಶನವು ಮಕ್ಕಳ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿತು. ವಿದ್ಯಾರ್ಥಿನಿಯರಿಂದ ನಡೆದ ವಿವಿಧ ಕಸರತ್ತುಗಳು ಎಲ್ಲರ ಗಮನ ಸೆಳೆದು ಕನ್ನಡ ಶಾಲೆಯ ಮಕ್ಕಳು ಕೂಡಾ ಯಾವುದಕ್ಕೂ ಕಡಿಮೆಯಿಲ್ಲ ಎಂದು ನಿರೂಪಿಸಿದರು.

3 / 5
Mangaluru Kannada School Children's Festival Childrens enjoyed the special programme Dakshina kannada news in kannada

ಮಕ್ಕಳ ನೆಚ್ಚಿನ ಹುಲಿವೇಷವೂ ಹಬ್ಬದಲ್ಲಿ ಕಣ್ಮನ ಸೆಳೆಯಿತು. ಒಂದಷ್ಟು ವಿದ್ಯಾರ್ಥಿಗಳು ತಾಸೆಯ ಪೆಟ್ಟಿಗೆ ಹೆಜ್ಜೆ ಹಾಕಿದರು. ಸಮಾವೇಶದಲ್ಲಿ ಆಟದ ಜೊತೆ ಪಾಠಕ್ಕೂ ಮಹತ್ವ ನೀಡಲಾಗಿತ್ತು. ಸಚಿವ ಬಿ.ಸಿ ನಾಗೇಶ್ ಶಿಕ್ಷಕರ ಜೊತೆ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಸಂವಾದ ನಡೆಸಿದರು. ಬಳಿಕ ಪೋಷಕರ ಜೊತೆ ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸಂವಾದ ನಡೆಸಿದರು. ಕನ್ನಡ ಶಾಲೆಯಲ್ಲಿ ಓದಿದವರು ಸ್ಮರ್ಧಾತ್ಮಕ ಪರೀಕ್ಷೆ ಎದುರಿಸುವ ಕುರಿತು ಐಎಎಸ್ ಅಧಿಕಾರಿ ನಂದಿನಿ ಮಕ್ಕಳಲ್ಲಿ ಸ್ಪೂರ್ತಿ ತುಂಬಿದರು.

4 / 5
Mangaluru Kannada School Children's Festival Childrens enjoyed the special programme Dakshina kannada news in kannada

ಹಬ್ಬದಲ್ಲಿ ಕಲ್ಲಡ್ಕದ ಜೋಕರ್ ಸೇರಿದಂತೆ ಅನೇಕ ರೀತಿಯ ಗೊಂಬೆಗಳು ವಿದ್ಯಾರ್ಥಿಗಳನ್ನು ನಕ್ಕುನಲಿಸಿವೆ. ಎರಡನೇ ದಿನ, ಕನ್ನಡ ಎಂದರೆ ನುಡಿ ಅಲ್ಲ ವಿಚಾರದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದು, ಬಳಿಕ ಕನ್ನಡ ಶಾಲಾ ಯಶೋಗಾಥೆ ವಿಚಾರದ ಬಗ್ಗೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ವಿದ್ಯಾರ್ಥಿಗಳು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು. ಸಂಜೆ 3 ಗಂಟೆಗೆ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಒಟ್ಟಿನಲ್ಲಿ ಕನ್ನಡ ಮಕ್ಕಳ ಶಾಲಾ ಹಬ್ಬ ಮಕ್ಕಳಲ್ಲಿ ಇನ್ನಷ್ಟು ಸ್ಪೂರ್ತಿಯನ್ನು ತುಂಬಿರುವುದರಲ್ಲಿ ಸಂಶಯವಿಲ್ಲ. (ವರದಿ: ಅಶೋಕ್, ಟಿವಿ 9 ಮಂಗಳೂರು)

5 / 5

Published On - 11:00 am, Mon, 21 November 22

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್