AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಭಾಗದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ: ಜೋಡಿ ಮಣ್ಣೆತ್ತಿಗೆ ಸಖತ್​ ಬೆಲೆ

ರೈತರಿಗೆ ಎತ್ತುಗಳು ಕಣ್ಣುಗಳಿದ್ದಂತೆ. ಮತ್ತೊಂದಡೆ ಮಣ್ಣು ಕೂಡ ದೇವ ಸ್ವರೂಪಿ. ಹೀಗಾಗಿ ಎತ್ತು ಮತ್ತು ಮಣ್ಣನ್ನು ರೈತರು ಪೂಜೆ ಮಾಡ್ತಾರೆ. ಮತ್ತೊಂದಡೆ ಭೂತಾಯಿ ರೈತನಿಗೆ ಅನ್ನ ನೀಡುತ್ತಾಳೆ. ಹೀಗಾಗಿ ಮಣ್ಣು ಮತ್ತು ಎತ್ತುಗಳನ್ನು ರೈತರು ಪೂಜನೀಯ ಭಾವದಿಂದ ಕಾಣುತ್ತಾರೆ. ಹೀಗಾಗಿ ಇಂದು ರಾಜ್ಯದೆಲ್ಲೆಡೆ ಮಣ್ಣೆತ್ತಿನ ಅಮವಾಸ್ಯೆ ಆಚರಿಸಲಾಗುತ್ತಿದೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 05, 2024 | 3:00 PM

Share
ಭಾರತ ಕೃಷಿ ಪ್ರಧಾನ ದೇಶ. ಇಲ್ಲಿ ಅನ್ನ ಬೆಳೆಯುವ ರೈತನಿಗೂ, ಅನ್ನ ನೀಡುವ ಭೂಮಿಗೂ, ತಾಯಿ-ಮಗನ, ದೇವರು ಭಕ್ತನ ಸಂಬಂಧವಿದೆ. ರೈತ ಸಮುದಾಯ ಮಣ್ಣು ಮತ್ತು ತಮ್ಮ ಜಾನುವಾರುಗಳನ್ನು ಪ್ರೀತಿ, ಭಕ್ತಿಯಿಂದ ಕಾಣುತ್ತಾರೆ. ಹೀಗಾಗಿ ನಮ್ಮ ದೇಶದಲ್ಲಿ ಭೂಮಿ,ಜಾನುವಾರುಗಳ ಸುತ್ತಲೇ ಅನೇಕ ಹಬ್ಬಗಳು ಬೆಸೆದುಕೊಂಡಿವೆ. ಇಂದು ಉತ್ತರ ಕರ್ನಾಟಕ ಭಾಗದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ ಜೋರಾಗಿದೆ.

ಭಾರತ ಕೃಷಿ ಪ್ರಧಾನ ದೇಶ. ಇಲ್ಲಿ ಅನ್ನ ಬೆಳೆಯುವ ರೈತನಿಗೂ, ಅನ್ನ ನೀಡುವ ಭೂಮಿಗೂ, ತಾಯಿ-ಮಗನ, ದೇವರು ಭಕ್ತನ ಸಂಬಂಧವಿದೆ. ರೈತ ಸಮುದಾಯ ಮಣ್ಣು ಮತ್ತು ತಮ್ಮ ಜಾನುವಾರುಗಳನ್ನು ಪ್ರೀತಿ, ಭಕ್ತಿಯಿಂದ ಕಾಣುತ್ತಾರೆ. ಹೀಗಾಗಿ ನಮ್ಮ ದೇಶದಲ್ಲಿ ಭೂಮಿ,ಜಾನುವಾರುಗಳ ಸುತ್ತಲೇ ಅನೇಕ ಹಬ್ಬಗಳು ಬೆಸೆದುಕೊಂಡಿವೆ. ಇಂದು ಉತ್ತರ ಕರ್ನಾಟಕ ಭಾಗದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ ಜೋರಾಗಿದೆ.

1 / 6
ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ರೈತರಿಗೆ ಎತ್ತುಗಳು ಎರಡು ಕಣ್ಣುಗಳಿದ್ದಂತೆ. ಹೀಗಾಗಿ ಕಾರ ಹುಣ್ಣಿಮೆಯೆಂದು ಎತ್ತುಗಳಿಗೆ ಸಿಂಗರಿಸಿ ಪೂಜೆ ಮಾಡುವ ರೈತರು, ಮಣ್ಣೆತ್ತಿನ ಅಮವಾಸ್ಯೆಯಂದು ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜೆ ಮಾಡುವ ಸಂಪ್ರದಾಯ ಅನಾದಿ ಕಾಲದಿಂದಲೂ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಮಣ್ಣೆತ್ತಿನ ಅಮವಾಸ್ಯೆ ದಿನ, ಮಣ್ಣಿನಿಂದ ಎತ್ತುಗಳನ್ನು ಮಾಡಿ ಅವುಗಳಿಗೆ ಪೂಜೆ ಮಾಡಿ, ತಮ್ಮ ಭಕ್ತಿಯನ್ನು ಮೆರೆದಿದ್ದಾರೆ.

ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ರೈತರಿಗೆ ಎತ್ತುಗಳು ಎರಡು ಕಣ್ಣುಗಳಿದ್ದಂತೆ. ಹೀಗಾಗಿ ಕಾರ ಹುಣ್ಣಿಮೆಯೆಂದು ಎತ್ತುಗಳಿಗೆ ಸಿಂಗರಿಸಿ ಪೂಜೆ ಮಾಡುವ ರೈತರು, ಮಣ್ಣೆತ್ತಿನ ಅಮವಾಸ್ಯೆಯಂದು ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜೆ ಮಾಡುವ ಸಂಪ್ರದಾಯ ಅನಾದಿ ಕಾಲದಿಂದಲೂ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಮಣ್ಣೆತ್ತಿನ ಅಮವಾಸ್ಯೆ ದಿನ, ಮಣ್ಣಿನಿಂದ ಎತ್ತುಗಳನ್ನು ಮಾಡಿ ಅವುಗಳಿಗೆ ಪೂಜೆ ಮಾಡಿ, ತಮ್ಮ ಭಕ್ತಿಯನ್ನು ಮೆರೆದಿದ್ದಾರೆ.

2 / 6
ಏನಿದು ಮಣ್ಣೆತ್ತಿನ ಅಮವಾಸ್ಯ: ಕಾರ ಹುಣ್ಣಿಮೆಯ ನಂತರ ಬರುವುದೇ ಮಣ್ಣೆತ್ತಿನ ಅಮವಾಸ್ಯೆ. ಈ ಅಮವಾಸ್ಯೆಯೆಂದು ರೈತರು ಹೊಲಕ್ಕೆ ಹೋಗಿ ಜಿಗುಟಾಗಿರುವ ಮಣ್ಣನ್ನು ಮನೆಗೆ ತಂದು, ಅದರಿಂದ ಜೋಡಿ ಎತ್ತುಗಳನ್ನು ಮಾಡುತ್ತಾರೆ. ಮಣ್ಣಿನ ಎತ್ತುಗಳಿಗೆ ಸಿಂಗಾರ ಮಾಡುತ್ತಾರೆ. ಬಳಿಕ ದೇವರ ಕೋಣೆಯಲ್ಲಿಟ್ಟು ಪೂಜಿಸುತ್ತಾರೆ.

ಏನಿದು ಮಣ್ಣೆತ್ತಿನ ಅಮವಾಸ್ಯ: ಕಾರ ಹುಣ್ಣಿಮೆಯ ನಂತರ ಬರುವುದೇ ಮಣ್ಣೆತ್ತಿನ ಅಮವಾಸ್ಯೆ. ಈ ಅಮವಾಸ್ಯೆಯೆಂದು ರೈತರು ಹೊಲಕ್ಕೆ ಹೋಗಿ ಜಿಗುಟಾಗಿರುವ ಮಣ್ಣನ್ನು ಮನೆಗೆ ತಂದು, ಅದರಿಂದ ಜೋಡಿ ಎತ್ತುಗಳನ್ನು ಮಾಡುತ್ತಾರೆ. ಮಣ್ಣಿನ ಎತ್ತುಗಳಿಗೆ ಸಿಂಗಾರ ಮಾಡುತ್ತಾರೆ. ಬಳಿಕ ದೇವರ ಕೋಣೆಯಲ್ಲಿಟ್ಟು ಪೂಜಿಸುತ್ತಾರೆ.

3 / 6
ಪೂಜೆ ಮಾಡಿದ ನಂತರ ಮಣ್ಣಿನ ಎತ್ತುಗಳಿಗೆ ಹೂಳಿಗೆ, ಕಡಬಿನಿಂದ ಮಾಡಿದ ಆಹಾರವನ್ನು ಎಡೆ ಹಿಡಿಯುತ್ತಾರೆ. ನಂತರ ತಮ್ಮ ಮನೆಯ ಹಿತ್ತಲಲ್ಲಿ ಮತ್ತು ಜಮೀನಿನಲ್ಲಿ ತೆಗೆದುಕೊಂಡು ಹೋಗಿ ಮಣ್ಣಿನ ಎತ್ತುಗಳನ್ನು ಇಡುತ್ತಾರೆ. ಆ ಮೂಲಕ ಭೂ ತಾಯಿ ಮತ್ತು ಎತ್ತುಗಳು ನಮ್ಮನ್ನು ಕಾಪಾಡಿ ಅಂತ ಪ್ರಾರ್ಥಿಸುತ್ತಾರೆ.

ಪೂಜೆ ಮಾಡಿದ ನಂತರ ಮಣ್ಣಿನ ಎತ್ತುಗಳಿಗೆ ಹೂಳಿಗೆ, ಕಡಬಿನಿಂದ ಮಾಡಿದ ಆಹಾರವನ್ನು ಎಡೆ ಹಿಡಿಯುತ್ತಾರೆ. ನಂತರ ತಮ್ಮ ಮನೆಯ ಹಿತ್ತಲಲ್ಲಿ ಮತ್ತು ಜಮೀನಿನಲ್ಲಿ ತೆಗೆದುಕೊಂಡು ಹೋಗಿ ಮಣ್ಣಿನ ಎತ್ತುಗಳನ್ನು ಇಡುತ್ತಾರೆ. ಆ ಮೂಲಕ ಭೂ ತಾಯಿ ಮತ್ತು ಎತ್ತುಗಳು ನಮ್ಮನ್ನು ಕಾಪಾಡಿ ಅಂತ ಪ್ರಾರ್ಥಿಸುತ್ತಾರೆ.

4 / 6
ಮುಂಗಾರು ಮಳೆ ಪ್ರಾರಂಭದ ನಂತರ ಬರುವ ಕಾರ ಹುಣ್ಣಿಮೆ ಮತ್ತು ಮಣ್ಣೆತ್ತಿನ ಅಮವಾಸ್ಯೆಯನ್ನು ರೈತರು ಸಂಭ್ರಮದಿಂದ ಆಚರಿಸುತ್ತಾರೆ. ತಮ್ಮ ನೋವು, ಕಷ್ಟ ಬದಿಗಿಟ್ಟು, ಎತ್ತುಗಳನ್ನು ಪೂಜಿಸುತ್ತಾರೆ. ಕಾರ ಹುಣ್ಣಿಮೆಯ ಸಮಯದಲ್ಲಿ ಎತ್ತುಗಳನ್ನು ಪೂಜಿಸಿದರೆ ಮಣ್ಣೆತ್ತಿನ ಅಮವಾಸ್ಯೆಯಂದು ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜಿಸುತ್ತಾರೆ.

ಮುಂಗಾರು ಮಳೆ ಪ್ರಾರಂಭದ ನಂತರ ಬರುವ ಕಾರ ಹುಣ್ಣಿಮೆ ಮತ್ತು ಮಣ್ಣೆತ್ತಿನ ಅಮವಾಸ್ಯೆಯನ್ನು ರೈತರು ಸಂಭ್ರಮದಿಂದ ಆಚರಿಸುತ್ತಾರೆ. ತಮ್ಮ ನೋವು, ಕಷ್ಟ ಬದಿಗಿಟ್ಟು, ಎತ್ತುಗಳನ್ನು ಪೂಜಿಸುತ್ತಾರೆ. ಕಾರ ಹುಣ್ಣಿಮೆಯ ಸಮಯದಲ್ಲಿ ಎತ್ತುಗಳನ್ನು ಪೂಜಿಸಿದರೆ ಮಣ್ಣೆತ್ತಿನ ಅಮವಾಸ್ಯೆಯಂದು ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜಿಸುತ್ತಾರೆ.

5 / 6
ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಇಂದು ಕೊಪ್ಪಳ ಜಿಲ್ಲೆಯಲ್ಲಿ ಮಣ್ಣು ಮತ್ತು ಪಿಓಪಿಯಿಂದ ಮಾಡಿರುವ ಎತ್ತುಗಳ ಮಾರಾಟ ಜೋರಾಗಿ ನಡೆಯಿತು. ಮೊದಲು 10ರಿಂದ 20 ರೂ. ಜೋಡಿ ಮಣ್ಣಿನ ಎತ್ತುಗಳು ಮಾರುಕಟೆಯಲ್ಲಿ ಸಿಗುತ್ತಿದ್ದವು. ಆದರೆ ಇದೀಗ 100 ರಿಂದ 150 ರೂ.ಗೆ ಎರಡು ಜೋಡಿ ಪಿಓಪಿ ಎತ್ತುಗಳನ್ನು ಮಾರಾಟ ಮಾಡಲಾಗುತ್ತಿದೆ.

ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಇಂದು ಕೊಪ್ಪಳ ಜಿಲ್ಲೆಯಲ್ಲಿ ಮಣ್ಣು ಮತ್ತು ಪಿಓಪಿಯಿಂದ ಮಾಡಿರುವ ಎತ್ತುಗಳ ಮಾರಾಟ ಜೋರಾಗಿ ನಡೆಯಿತು. ಮೊದಲು 10ರಿಂದ 20 ರೂ. ಜೋಡಿ ಮಣ್ಣಿನ ಎತ್ತುಗಳು ಮಾರುಕಟೆಯಲ್ಲಿ ಸಿಗುತ್ತಿದ್ದವು. ಆದರೆ ಇದೀಗ 100 ರಿಂದ 150 ರೂ.ಗೆ ಎರಡು ಜೋಡಿ ಪಿಓಪಿ ಎತ್ತುಗಳನ್ನು ಮಾರಾಟ ಮಾಡಲಾಗುತ್ತಿದೆ.

6 / 6
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ