AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಭಾಗದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ: ಜೋಡಿ ಮಣ್ಣೆತ್ತಿಗೆ ಸಖತ್​ ಬೆಲೆ

ರೈತರಿಗೆ ಎತ್ತುಗಳು ಕಣ್ಣುಗಳಿದ್ದಂತೆ. ಮತ್ತೊಂದಡೆ ಮಣ್ಣು ಕೂಡ ದೇವ ಸ್ವರೂಪಿ. ಹೀಗಾಗಿ ಎತ್ತು ಮತ್ತು ಮಣ್ಣನ್ನು ರೈತರು ಪೂಜೆ ಮಾಡ್ತಾರೆ. ಮತ್ತೊಂದಡೆ ಭೂತಾಯಿ ರೈತನಿಗೆ ಅನ್ನ ನೀಡುತ್ತಾಳೆ. ಹೀಗಾಗಿ ಮಣ್ಣು ಮತ್ತು ಎತ್ತುಗಳನ್ನು ರೈತರು ಪೂಜನೀಯ ಭಾವದಿಂದ ಕಾಣುತ್ತಾರೆ. ಹೀಗಾಗಿ ಇಂದು ರಾಜ್ಯದೆಲ್ಲೆಡೆ ಮಣ್ಣೆತ್ತಿನ ಅಮವಾಸ್ಯೆ ಆಚರಿಸಲಾಗುತ್ತಿದೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 05, 2024 | 3:00 PM

Share
ಭಾರತ ಕೃಷಿ ಪ್ರಧಾನ ದೇಶ. ಇಲ್ಲಿ ಅನ್ನ ಬೆಳೆಯುವ ರೈತನಿಗೂ, ಅನ್ನ ನೀಡುವ ಭೂಮಿಗೂ, ತಾಯಿ-ಮಗನ, ದೇವರು ಭಕ್ತನ ಸಂಬಂಧವಿದೆ. ರೈತ ಸಮುದಾಯ ಮಣ್ಣು ಮತ್ತು ತಮ್ಮ ಜಾನುವಾರುಗಳನ್ನು ಪ್ರೀತಿ, ಭಕ್ತಿಯಿಂದ ಕಾಣುತ್ತಾರೆ. ಹೀಗಾಗಿ ನಮ್ಮ ದೇಶದಲ್ಲಿ ಭೂಮಿ,ಜಾನುವಾರುಗಳ ಸುತ್ತಲೇ ಅನೇಕ ಹಬ್ಬಗಳು ಬೆಸೆದುಕೊಂಡಿವೆ. ಇಂದು ಉತ್ತರ ಕರ್ನಾಟಕ ಭಾಗದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ ಜೋರಾಗಿದೆ.

ಭಾರತ ಕೃಷಿ ಪ್ರಧಾನ ದೇಶ. ಇಲ್ಲಿ ಅನ್ನ ಬೆಳೆಯುವ ರೈತನಿಗೂ, ಅನ್ನ ನೀಡುವ ಭೂಮಿಗೂ, ತಾಯಿ-ಮಗನ, ದೇವರು ಭಕ್ತನ ಸಂಬಂಧವಿದೆ. ರೈತ ಸಮುದಾಯ ಮಣ್ಣು ಮತ್ತು ತಮ್ಮ ಜಾನುವಾರುಗಳನ್ನು ಪ್ರೀತಿ, ಭಕ್ತಿಯಿಂದ ಕಾಣುತ್ತಾರೆ. ಹೀಗಾಗಿ ನಮ್ಮ ದೇಶದಲ್ಲಿ ಭೂಮಿ,ಜಾನುವಾರುಗಳ ಸುತ್ತಲೇ ಅನೇಕ ಹಬ್ಬಗಳು ಬೆಸೆದುಕೊಂಡಿವೆ. ಇಂದು ಉತ್ತರ ಕರ್ನಾಟಕ ಭಾಗದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ ಜೋರಾಗಿದೆ.

1 / 6
ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ರೈತರಿಗೆ ಎತ್ತುಗಳು ಎರಡು ಕಣ್ಣುಗಳಿದ್ದಂತೆ. ಹೀಗಾಗಿ ಕಾರ ಹುಣ್ಣಿಮೆಯೆಂದು ಎತ್ತುಗಳಿಗೆ ಸಿಂಗರಿಸಿ ಪೂಜೆ ಮಾಡುವ ರೈತರು, ಮಣ್ಣೆತ್ತಿನ ಅಮವಾಸ್ಯೆಯಂದು ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜೆ ಮಾಡುವ ಸಂಪ್ರದಾಯ ಅನಾದಿ ಕಾಲದಿಂದಲೂ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಮಣ್ಣೆತ್ತಿನ ಅಮವಾಸ್ಯೆ ದಿನ, ಮಣ್ಣಿನಿಂದ ಎತ್ತುಗಳನ್ನು ಮಾಡಿ ಅವುಗಳಿಗೆ ಪೂಜೆ ಮಾಡಿ, ತಮ್ಮ ಭಕ್ತಿಯನ್ನು ಮೆರೆದಿದ್ದಾರೆ.

ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ರೈತರಿಗೆ ಎತ್ತುಗಳು ಎರಡು ಕಣ್ಣುಗಳಿದ್ದಂತೆ. ಹೀಗಾಗಿ ಕಾರ ಹುಣ್ಣಿಮೆಯೆಂದು ಎತ್ತುಗಳಿಗೆ ಸಿಂಗರಿಸಿ ಪೂಜೆ ಮಾಡುವ ರೈತರು, ಮಣ್ಣೆತ್ತಿನ ಅಮವಾಸ್ಯೆಯಂದು ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜೆ ಮಾಡುವ ಸಂಪ್ರದಾಯ ಅನಾದಿ ಕಾಲದಿಂದಲೂ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಮಣ್ಣೆತ್ತಿನ ಅಮವಾಸ್ಯೆ ದಿನ, ಮಣ್ಣಿನಿಂದ ಎತ್ತುಗಳನ್ನು ಮಾಡಿ ಅವುಗಳಿಗೆ ಪೂಜೆ ಮಾಡಿ, ತಮ್ಮ ಭಕ್ತಿಯನ್ನು ಮೆರೆದಿದ್ದಾರೆ.

2 / 6
ಏನಿದು ಮಣ್ಣೆತ್ತಿನ ಅಮವಾಸ್ಯ: ಕಾರ ಹುಣ್ಣಿಮೆಯ ನಂತರ ಬರುವುದೇ ಮಣ್ಣೆತ್ತಿನ ಅಮವಾಸ್ಯೆ. ಈ ಅಮವಾಸ್ಯೆಯೆಂದು ರೈತರು ಹೊಲಕ್ಕೆ ಹೋಗಿ ಜಿಗುಟಾಗಿರುವ ಮಣ್ಣನ್ನು ಮನೆಗೆ ತಂದು, ಅದರಿಂದ ಜೋಡಿ ಎತ್ತುಗಳನ್ನು ಮಾಡುತ್ತಾರೆ. ಮಣ್ಣಿನ ಎತ್ತುಗಳಿಗೆ ಸಿಂಗಾರ ಮಾಡುತ್ತಾರೆ. ಬಳಿಕ ದೇವರ ಕೋಣೆಯಲ್ಲಿಟ್ಟು ಪೂಜಿಸುತ್ತಾರೆ.

ಏನಿದು ಮಣ್ಣೆತ್ತಿನ ಅಮವಾಸ್ಯ: ಕಾರ ಹುಣ್ಣಿಮೆಯ ನಂತರ ಬರುವುದೇ ಮಣ್ಣೆತ್ತಿನ ಅಮವಾಸ್ಯೆ. ಈ ಅಮವಾಸ್ಯೆಯೆಂದು ರೈತರು ಹೊಲಕ್ಕೆ ಹೋಗಿ ಜಿಗುಟಾಗಿರುವ ಮಣ್ಣನ್ನು ಮನೆಗೆ ತಂದು, ಅದರಿಂದ ಜೋಡಿ ಎತ್ತುಗಳನ್ನು ಮಾಡುತ್ತಾರೆ. ಮಣ್ಣಿನ ಎತ್ತುಗಳಿಗೆ ಸಿಂಗಾರ ಮಾಡುತ್ತಾರೆ. ಬಳಿಕ ದೇವರ ಕೋಣೆಯಲ್ಲಿಟ್ಟು ಪೂಜಿಸುತ್ತಾರೆ.

3 / 6
ಪೂಜೆ ಮಾಡಿದ ನಂತರ ಮಣ್ಣಿನ ಎತ್ತುಗಳಿಗೆ ಹೂಳಿಗೆ, ಕಡಬಿನಿಂದ ಮಾಡಿದ ಆಹಾರವನ್ನು ಎಡೆ ಹಿಡಿಯುತ್ತಾರೆ. ನಂತರ ತಮ್ಮ ಮನೆಯ ಹಿತ್ತಲಲ್ಲಿ ಮತ್ತು ಜಮೀನಿನಲ್ಲಿ ತೆಗೆದುಕೊಂಡು ಹೋಗಿ ಮಣ್ಣಿನ ಎತ್ತುಗಳನ್ನು ಇಡುತ್ತಾರೆ. ಆ ಮೂಲಕ ಭೂ ತಾಯಿ ಮತ್ತು ಎತ್ತುಗಳು ನಮ್ಮನ್ನು ಕಾಪಾಡಿ ಅಂತ ಪ್ರಾರ್ಥಿಸುತ್ತಾರೆ.

ಪೂಜೆ ಮಾಡಿದ ನಂತರ ಮಣ್ಣಿನ ಎತ್ತುಗಳಿಗೆ ಹೂಳಿಗೆ, ಕಡಬಿನಿಂದ ಮಾಡಿದ ಆಹಾರವನ್ನು ಎಡೆ ಹಿಡಿಯುತ್ತಾರೆ. ನಂತರ ತಮ್ಮ ಮನೆಯ ಹಿತ್ತಲಲ್ಲಿ ಮತ್ತು ಜಮೀನಿನಲ್ಲಿ ತೆಗೆದುಕೊಂಡು ಹೋಗಿ ಮಣ್ಣಿನ ಎತ್ತುಗಳನ್ನು ಇಡುತ್ತಾರೆ. ಆ ಮೂಲಕ ಭೂ ತಾಯಿ ಮತ್ತು ಎತ್ತುಗಳು ನಮ್ಮನ್ನು ಕಾಪಾಡಿ ಅಂತ ಪ್ರಾರ್ಥಿಸುತ್ತಾರೆ.

4 / 6
ಮುಂಗಾರು ಮಳೆ ಪ್ರಾರಂಭದ ನಂತರ ಬರುವ ಕಾರ ಹುಣ್ಣಿಮೆ ಮತ್ತು ಮಣ್ಣೆತ್ತಿನ ಅಮವಾಸ್ಯೆಯನ್ನು ರೈತರು ಸಂಭ್ರಮದಿಂದ ಆಚರಿಸುತ್ತಾರೆ. ತಮ್ಮ ನೋವು, ಕಷ್ಟ ಬದಿಗಿಟ್ಟು, ಎತ್ತುಗಳನ್ನು ಪೂಜಿಸುತ್ತಾರೆ. ಕಾರ ಹುಣ್ಣಿಮೆಯ ಸಮಯದಲ್ಲಿ ಎತ್ತುಗಳನ್ನು ಪೂಜಿಸಿದರೆ ಮಣ್ಣೆತ್ತಿನ ಅಮವಾಸ್ಯೆಯಂದು ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜಿಸುತ್ತಾರೆ.

ಮುಂಗಾರು ಮಳೆ ಪ್ರಾರಂಭದ ನಂತರ ಬರುವ ಕಾರ ಹುಣ್ಣಿಮೆ ಮತ್ತು ಮಣ್ಣೆತ್ತಿನ ಅಮವಾಸ್ಯೆಯನ್ನು ರೈತರು ಸಂಭ್ರಮದಿಂದ ಆಚರಿಸುತ್ತಾರೆ. ತಮ್ಮ ನೋವು, ಕಷ್ಟ ಬದಿಗಿಟ್ಟು, ಎತ್ತುಗಳನ್ನು ಪೂಜಿಸುತ್ತಾರೆ. ಕಾರ ಹುಣ್ಣಿಮೆಯ ಸಮಯದಲ್ಲಿ ಎತ್ತುಗಳನ್ನು ಪೂಜಿಸಿದರೆ ಮಣ್ಣೆತ್ತಿನ ಅಮವಾಸ್ಯೆಯಂದು ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜಿಸುತ್ತಾರೆ.

5 / 6
ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಇಂದು ಕೊಪ್ಪಳ ಜಿಲ್ಲೆಯಲ್ಲಿ ಮಣ್ಣು ಮತ್ತು ಪಿಓಪಿಯಿಂದ ಮಾಡಿರುವ ಎತ್ತುಗಳ ಮಾರಾಟ ಜೋರಾಗಿ ನಡೆಯಿತು. ಮೊದಲು 10ರಿಂದ 20 ರೂ. ಜೋಡಿ ಮಣ್ಣಿನ ಎತ್ತುಗಳು ಮಾರುಕಟೆಯಲ್ಲಿ ಸಿಗುತ್ತಿದ್ದವು. ಆದರೆ ಇದೀಗ 100 ರಿಂದ 150 ರೂ.ಗೆ ಎರಡು ಜೋಡಿ ಪಿಓಪಿ ಎತ್ತುಗಳನ್ನು ಮಾರಾಟ ಮಾಡಲಾಗುತ್ತಿದೆ.

ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಇಂದು ಕೊಪ್ಪಳ ಜಿಲ್ಲೆಯಲ್ಲಿ ಮಣ್ಣು ಮತ್ತು ಪಿಓಪಿಯಿಂದ ಮಾಡಿರುವ ಎತ್ತುಗಳ ಮಾರಾಟ ಜೋರಾಗಿ ನಡೆಯಿತು. ಮೊದಲು 10ರಿಂದ 20 ರೂ. ಜೋಡಿ ಮಣ್ಣಿನ ಎತ್ತುಗಳು ಮಾರುಕಟೆಯಲ್ಲಿ ಸಿಗುತ್ತಿದ್ದವು. ಆದರೆ ಇದೀಗ 100 ರಿಂದ 150 ರೂ.ಗೆ ಎರಡು ಜೋಡಿ ಪಿಓಪಿ ಎತ್ತುಗಳನ್ನು ಮಾರಾಟ ಮಾಡಲಾಗುತ್ತಿದೆ.

6 / 6
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು