AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಸೋರೆ ಹೊಸ ಸಿನಿಮಾ ‘ದೂರ ತೀರ ಯಾನ’; ವಿಜಯ್ ಕೃಷ್ಣ, ಪ್ರಿಯಾಂಕಾ ಕುಮಾರ್ ಮುಖ್ಯ ಪಾತ್ರ

ನಿರ್ದೇಶಕ ಮಂಸೋರೆ ಅವರು ಈಗಾಗಲೇ ಗಮನಾರ್ಹ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಮಂಸೋರೆ ಮತ್ತು ನಿರ್ಮಾಪಕ ದೇವರಾಜ್ ಆರ್. ಅವರ ಕಾಂಬಿನೇಷನ್​ನಲ್ಲಿ ಬಂದ ‘ಆ್ಯಕ್ಟ್ 1978’, ‘19.20.21’ ಸಿನಿಮಾಗಳು ಗಟ್ಟಿ ಕಥಾಹಂದರದ ಕಾರಣಕ್ಕೆ ಸದ್ದು ಮಾಡಿದ್ದವು. ಈಗ ಅವರ ಇನ್ನೊಂದು ಸಿನಿಮಾ ಅನೌನ್ಸ್​ ಆಗಿದೆ.

ಮದನ್​ ಕುಮಾರ್​
|

Updated on: Aug 17, 2024 | 10:43 PM

Share
ನಿರ್ದೇಶಕ ಮಂಸೋರೆ ಮತ್ತು ನಿರ್ಮಾಪಕ ದೇವರಾಜ್ ಆರ್. ಮತ್ತೆ ಜತೆಯಾಗಿ ಹೊಸ ಸಿನಿಮಾ ಘೋಷಿಸಿದ್ದಾರೆ. ಅವರ ಹೊಸ ಸಿನಿಮಾದ ಟೈಟಲ್​ ಲಾಂಚ್​ ಮಾಡಲಾಗಿದೆ. ಈ ಸಿನಿಮಾಗೆ ‘ದೂರ ತೀರ ಯಾನ’ ಎಂದು ಶೀರ್ಷಿಕೆ ಇಡಲಾಗಿದೆ. ಮುಖ್ಯ ಪಾತ್ರದಲ್ಲಿ ವಿಜಯ್ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್ ನಟಿಸಲಿದ್ದಾರೆ.

ನಿರ್ದೇಶಕ ಮಂಸೋರೆ ಮತ್ತು ನಿರ್ಮಾಪಕ ದೇವರಾಜ್ ಆರ್. ಮತ್ತೆ ಜತೆಯಾಗಿ ಹೊಸ ಸಿನಿಮಾ ಘೋಷಿಸಿದ್ದಾರೆ. ಅವರ ಹೊಸ ಸಿನಿಮಾದ ಟೈಟಲ್​ ಲಾಂಚ್​ ಮಾಡಲಾಗಿದೆ. ಈ ಸಿನಿಮಾಗೆ ‘ದೂರ ತೀರ ಯಾನ’ ಎಂದು ಶೀರ್ಷಿಕೆ ಇಡಲಾಗಿದೆ. ಮುಖ್ಯ ಪಾತ್ರದಲ್ಲಿ ವಿಜಯ್ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್ ನಟಿಸಲಿದ್ದಾರೆ.

1 / 5
‘ಡಿ. ಕ್ರಿಯೇಷನ್ಸ್’ ಮೂಲಕ ‘ದೂರ ತೀರ ಯಾನ’ ಸಿನಿಮಾ ಮೂಡಿಬರಲಿದೆ. ಇತ್ತೀಚೆಗೆ ಈ ಸಿನಿಮಾದ ಟೈಟಲ್ ಅನಾವರಣ ಕಾರ್ಯಕ್ರಮ ಹಾಗೂ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಸಿನಿಮಾ ಬಗ್ಗೆ ಚಿತ್ರತಂಡದವರು ಮಾಹಿತಿ ಹಂಚಿಕೊಂಡರು. ‘ಪ್ರೇಕ್ಷಕರ ಅಭಿರುಚಿ ಬದಲಾಗಿದ್ದು, ಅವರ ನಿರೀಕ್ಷೆಗಳು ಬಹಳ ಇದೆ. ಅವರಿಗೆ ಬೇಕಾದ ರೀತಿಯ ನಾನು ಮಾಡಲು ಹೊರಟಿರುವ ಸಿನಿಮಾ ಇದು’ ಎಂದು ಮಂಸೋರೆ ಹೇಳಿದ್ದಾರೆ.

‘ಡಿ. ಕ್ರಿಯೇಷನ್ಸ್’ ಮೂಲಕ ‘ದೂರ ತೀರ ಯಾನ’ ಸಿನಿಮಾ ಮೂಡಿಬರಲಿದೆ. ಇತ್ತೀಚೆಗೆ ಈ ಸಿನಿಮಾದ ಟೈಟಲ್ ಅನಾವರಣ ಕಾರ್ಯಕ್ರಮ ಹಾಗೂ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಸಿನಿಮಾ ಬಗ್ಗೆ ಚಿತ್ರತಂಡದವರು ಮಾಹಿತಿ ಹಂಚಿಕೊಂಡರು. ‘ಪ್ರೇಕ್ಷಕರ ಅಭಿರುಚಿ ಬದಲಾಗಿದ್ದು, ಅವರ ನಿರೀಕ್ಷೆಗಳು ಬಹಳ ಇದೆ. ಅವರಿಗೆ ಬೇಕಾದ ರೀತಿಯ ನಾನು ಮಾಡಲು ಹೊರಟಿರುವ ಸಿನಿಮಾ ಇದು’ ಎಂದು ಮಂಸೋರೆ ಹೇಳಿದ್ದಾರೆ.

2 / 5
‘ದೂರ ತೀರ ಯಾನ’ ಒಂದು ಜರ್ನಿ ಸಿನಿಮಾ. ಸಿನಿಮಾದ ಮೊದಲ 10 ನಿಮಿಷ ಮಾತ್ರ ಬೆಂಗಳೂರಲ್ಲಿ ನಡೆಯುತ್ತದೆ. ಬೆಂಗಳೂರಿನಿಂದ ಗೋವಾಕ್ಕೆ ಹೊರಟ ಹುಡುಗ ಮತ್ತು ಹುಡುಗಿ ಹೊಸ ರೀತಿಯ ಪ್ರೀತಿಯನ್ನು ಕಂಡುಕೊಳ್ಳುವ ಕಥೆ ಇದಾಗಿದೆ. ವೆಬ್ ಸಿರೀಸ್​ಗಳಲ್ಲಿ ನಟಿಸಿ ಅನುಭವ ಪಡೆದ ವಿಜಯ್ ಕೃಷ್ಣ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

‘ದೂರ ತೀರ ಯಾನ’ ಒಂದು ಜರ್ನಿ ಸಿನಿಮಾ. ಸಿನಿಮಾದ ಮೊದಲ 10 ನಿಮಿಷ ಮಾತ್ರ ಬೆಂಗಳೂರಲ್ಲಿ ನಡೆಯುತ್ತದೆ. ಬೆಂಗಳೂರಿನಿಂದ ಗೋವಾಕ್ಕೆ ಹೊರಟ ಹುಡುಗ ಮತ್ತು ಹುಡುಗಿ ಹೊಸ ರೀತಿಯ ಪ್ರೀತಿಯನ್ನು ಕಂಡುಕೊಳ್ಳುವ ಕಥೆ ಇದಾಗಿದೆ. ವೆಬ್ ಸಿರೀಸ್​ಗಳಲ್ಲಿ ನಟಿಸಿ ಅನುಭವ ಪಡೆದ ವಿಜಯ್ ಕೃಷ್ಣ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

3 / 5
‘ರುದ್ರ ಗರುಡ ಪುರಾಣ’ ಸಿನಿಮಾದ ಖ್ಯಾತಿಯ ನಟಿ ಪ್ರಿಯಾಂಕಾ ಕುಮಾರ್ ಅವರು ‘ದೂರ ತೀರ ಯಾನ’ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಬಕೇಶ್ ಮತ್ತು ಕಾರ್ತಿಕ್ ಅವರು ಸಂಗೀತ ನಿರ್ದೇಶನ ಈ ಸಿನಿಮಾಗೆ ಇರಲಿದೆ. ಶೇಖರ್ ಚಂದ್ರ ಅವರು ಛಾಯಾಗ್ರಹಣ ಮಾಡಲಿದ್ದಾರೆ. ನಾಗೇಂದ್ರ ಕೆ. ಉಜ್ಜನಿ ಅವರು ಸಂಕಲನ ಮಾಡಲಿದ್ದಾರೆ.

‘ರುದ್ರ ಗರುಡ ಪುರಾಣ’ ಸಿನಿಮಾದ ಖ್ಯಾತಿಯ ನಟಿ ಪ್ರಿಯಾಂಕಾ ಕುಮಾರ್ ಅವರು ‘ದೂರ ತೀರ ಯಾನ’ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಬಕೇಶ್ ಮತ್ತು ಕಾರ್ತಿಕ್ ಅವರು ಸಂಗೀತ ನಿರ್ದೇಶನ ಈ ಸಿನಿಮಾಗೆ ಇರಲಿದೆ. ಶೇಖರ್ ಚಂದ್ರ ಅವರು ಛಾಯಾಗ್ರಹಣ ಮಾಡಲಿದ್ದಾರೆ. ನಾಗೇಂದ್ರ ಕೆ. ಉಜ್ಜನಿ ಅವರು ಸಂಕಲನ ಮಾಡಲಿದ್ದಾರೆ.

4 / 5
ಚೇತನಾ ತೀರ್ಥಹಳ್ಳಿ ಅವರು ಈ ಸಿನಿಮಾಗೆ ಸಂಭಾಷಣೆ ಬರೆಯುತ್ತಿದ್ದಾರೆ. ಸೆಪ್ಟೆಂಬರ್​ಲ್ಲಿ ಚಿತ್ರೀಕರಣ ಆರಂಭ ಆಗಲಿದೆ. ಟೈಟಲ್ ಟೀಸರ್​ಗೆ ನಟ ಡಾಲಿ ಧನಂಜಯ್​ ಅವರು ಧ್ವನಿ ನೀಡಿದ್ದಾರೆ. ‘ಬಹಳ ದಿನಗಳಿಂದ ಒಳ್ಳೆಯ ಪಾತ್ರಕ್ಕಾಗಿ ಕಾದಿದ್ದೆ. ಈ ಸಿನಿಮಾದಲ್ಲಿ ಅದು ಸಿಕ್ಕಿದೆ’ ಎಂದು ವಿಜಯ್ ಕೃಷ್ಣ ಹೇಳಿದ್ದಾರೆ.

ಚೇತನಾ ತೀರ್ಥಹಳ್ಳಿ ಅವರು ಈ ಸಿನಿಮಾಗೆ ಸಂಭಾಷಣೆ ಬರೆಯುತ್ತಿದ್ದಾರೆ. ಸೆಪ್ಟೆಂಬರ್​ಲ್ಲಿ ಚಿತ್ರೀಕರಣ ಆರಂಭ ಆಗಲಿದೆ. ಟೈಟಲ್ ಟೀಸರ್​ಗೆ ನಟ ಡಾಲಿ ಧನಂಜಯ್​ ಅವರು ಧ್ವನಿ ನೀಡಿದ್ದಾರೆ. ‘ಬಹಳ ದಿನಗಳಿಂದ ಒಳ್ಳೆಯ ಪಾತ್ರಕ್ಕಾಗಿ ಕಾದಿದ್ದೆ. ಈ ಸಿನಿಮಾದಲ್ಲಿ ಅದು ಸಿಕ್ಕಿದೆ’ ಎಂದು ವಿಜಯ್ ಕೃಷ್ಣ ಹೇಳಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!