AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಸೋರೆ ಹೊಸ ಸಿನಿಮಾ ‘ದೂರ ತೀರ ಯಾನ’; ವಿಜಯ್ ಕೃಷ್ಣ, ಪ್ರಿಯಾಂಕಾ ಕುಮಾರ್ ಮುಖ್ಯ ಪಾತ್ರ

ನಿರ್ದೇಶಕ ಮಂಸೋರೆ ಅವರು ಈಗಾಗಲೇ ಗಮನಾರ್ಹ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಮಂಸೋರೆ ಮತ್ತು ನಿರ್ಮಾಪಕ ದೇವರಾಜ್ ಆರ್. ಅವರ ಕಾಂಬಿನೇಷನ್​ನಲ್ಲಿ ಬಂದ ‘ಆ್ಯಕ್ಟ್ 1978’, ‘19.20.21’ ಸಿನಿಮಾಗಳು ಗಟ್ಟಿ ಕಥಾಹಂದರದ ಕಾರಣಕ್ಕೆ ಸದ್ದು ಮಾಡಿದ್ದವು. ಈಗ ಅವರ ಇನ್ನೊಂದು ಸಿನಿಮಾ ಅನೌನ್ಸ್​ ಆಗಿದೆ.

ಮದನ್​ ಕುಮಾರ್​
|

Updated on: Aug 17, 2024 | 10:43 PM

Share
ನಿರ್ದೇಶಕ ಮಂಸೋರೆ ಮತ್ತು ನಿರ್ಮಾಪಕ ದೇವರಾಜ್ ಆರ್. ಮತ್ತೆ ಜತೆಯಾಗಿ ಹೊಸ ಸಿನಿಮಾ ಘೋಷಿಸಿದ್ದಾರೆ. ಅವರ ಹೊಸ ಸಿನಿಮಾದ ಟೈಟಲ್​ ಲಾಂಚ್​ ಮಾಡಲಾಗಿದೆ. ಈ ಸಿನಿಮಾಗೆ ‘ದೂರ ತೀರ ಯಾನ’ ಎಂದು ಶೀರ್ಷಿಕೆ ಇಡಲಾಗಿದೆ. ಮುಖ್ಯ ಪಾತ್ರದಲ್ಲಿ ವಿಜಯ್ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್ ನಟಿಸಲಿದ್ದಾರೆ.

ನಿರ್ದೇಶಕ ಮಂಸೋರೆ ಮತ್ತು ನಿರ್ಮಾಪಕ ದೇವರಾಜ್ ಆರ್. ಮತ್ತೆ ಜತೆಯಾಗಿ ಹೊಸ ಸಿನಿಮಾ ಘೋಷಿಸಿದ್ದಾರೆ. ಅವರ ಹೊಸ ಸಿನಿಮಾದ ಟೈಟಲ್​ ಲಾಂಚ್​ ಮಾಡಲಾಗಿದೆ. ಈ ಸಿನಿಮಾಗೆ ‘ದೂರ ತೀರ ಯಾನ’ ಎಂದು ಶೀರ್ಷಿಕೆ ಇಡಲಾಗಿದೆ. ಮುಖ್ಯ ಪಾತ್ರದಲ್ಲಿ ವಿಜಯ್ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್ ನಟಿಸಲಿದ್ದಾರೆ.

1 / 5
‘ಡಿ. ಕ್ರಿಯೇಷನ್ಸ್’ ಮೂಲಕ ‘ದೂರ ತೀರ ಯಾನ’ ಸಿನಿಮಾ ಮೂಡಿಬರಲಿದೆ. ಇತ್ತೀಚೆಗೆ ಈ ಸಿನಿಮಾದ ಟೈಟಲ್ ಅನಾವರಣ ಕಾರ್ಯಕ್ರಮ ಹಾಗೂ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಸಿನಿಮಾ ಬಗ್ಗೆ ಚಿತ್ರತಂಡದವರು ಮಾಹಿತಿ ಹಂಚಿಕೊಂಡರು. ‘ಪ್ರೇಕ್ಷಕರ ಅಭಿರುಚಿ ಬದಲಾಗಿದ್ದು, ಅವರ ನಿರೀಕ್ಷೆಗಳು ಬಹಳ ಇದೆ. ಅವರಿಗೆ ಬೇಕಾದ ರೀತಿಯ ನಾನು ಮಾಡಲು ಹೊರಟಿರುವ ಸಿನಿಮಾ ಇದು’ ಎಂದು ಮಂಸೋರೆ ಹೇಳಿದ್ದಾರೆ.

‘ಡಿ. ಕ್ರಿಯೇಷನ್ಸ್’ ಮೂಲಕ ‘ದೂರ ತೀರ ಯಾನ’ ಸಿನಿಮಾ ಮೂಡಿಬರಲಿದೆ. ಇತ್ತೀಚೆಗೆ ಈ ಸಿನಿಮಾದ ಟೈಟಲ್ ಅನಾವರಣ ಕಾರ್ಯಕ್ರಮ ಹಾಗೂ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಸಿನಿಮಾ ಬಗ್ಗೆ ಚಿತ್ರತಂಡದವರು ಮಾಹಿತಿ ಹಂಚಿಕೊಂಡರು. ‘ಪ್ರೇಕ್ಷಕರ ಅಭಿರುಚಿ ಬದಲಾಗಿದ್ದು, ಅವರ ನಿರೀಕ್ಷೆಗಳು ಬಹಳ ಇದೆ. ಅವರಿಗೆ ಬೇಕಾದ ರೀತಿಯ ನಾನು ಮಾಡಲು ಹೊರಟಿರುವ ಸಿನಿಮಾ ಇದು’ ಎಂದು ಮಂಸೋರೆ ಹೇಳಿದ್ದಾರೆ.

2 / 5
‘ದೂರ ತೀರ ಯಾನ’ ಒಂದು ಜರ್ನಿ ಸಿನಿಮಾ. ಸಿನಿಮಾದ ಮೊದಲ 10 ನಿಮಿಷ ಮಾತ್ರ ಬೆಂಗಳೂರಲ್ಲಿ ನಡೆಯುತ್ತದೆ. ಬೆಂಗಳೂರಿನಿಂದ ಗೋವಾಕ್ಕೆ ಹೊರಟ ಹುಡುಗ ಮತ್ತು ಹುಡುಗಿ ಹೊಸ ರೀತಿಯ ಪ್ರೀತಿಯನ್ನು ಕಂಡುಕೊಳ್ಳುವ ಕಥೆ ಇದಾಗಿದೆ. ವೆಬ್ ಸಿರೀಸ್​ಗಳಲ್ಲಿ ನಟಿಸಿ ಅನುಭವ ಪಡೆದ ವಿಜಯ್ ಕೃಷ್ಣ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

‘ದೂರ ತೀರ ಯಾನ’ ಒಂದು ಜರ್ನಿ ಸಿನಿಮಾ. ಸಿನಿಮಾದ ಮೊದಲ 10 ನಿಮಿಷ ಮಾತ್ರ ಬೆಂಗಳೂರಲ್ಲಿ ನಡೆಯುತ್ತದೆ. ಬೆಂಗಳೂರಿನಿಂದ ಗೋವಾಕ್ಕೆ ಹೊರಟ ಹುಡುಗ ಮತ್ತು ಹುಡುಗಿ ಹೊಸ ರೀತಿಯ ಪ್ರೀತಿಯನ್ನು ಕಂಡುಕೊಳ್ಳುವ ಕಥೆ ಇದಾಗಿದೆ. ವೆಬ್ ಸಿರೀಸ್​ಗಳಲ್ಲಿ ನಟಿಸಿ ಅನುಭವ ಪಡೆದ ವಿಜಯ್ ಕೃಷ್ಣ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

3 / 5
‘ರುದ್ರ ಗರುಡ ಪುರಾಣ’ ಸಿನಿಮಾದ ಖ್ಯಾತಿಯ ನಟಿ ಪ್ರಿಯಾಂಕಾ ಕುಮಾರ್ ಅವರು ‘ದೂರ ತೀರ ಯಾನ’ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಬಕೇಶ್ ಮತ್ತು ಕಾರ್ತಿಕ್ ಅವರು ಸಂಗೀತ ನಿರ್ದೇಶನ ಈ ಸಿನಿಮಾಗೆ ಇರಲಿದೆ. ಶೇಖರ್ ಚಂದ್ರ ಅವರು ಛಾಯಾಗ್ರಹಣ ಮಾಡಲಿದ್ದಾರೆ. ನಾಗೇಂದ್ರ ಕೆ. ಉಜ್ಜನಿ ಅವರು ಸಂಕಲನ ಮಾಡಲಿದ್ದಾರೆ.

‘ರುದ್ರ ಗರುಡ ಪುರಾಣ’ ಸಿನಿಮಾದ ಖ್ಯಾತಿಯ ನಟಿ ಪ್ರಿಯಾಂಕಾ ಕುಮಾರ್ ಅವರು ‘ದೂರ ತೀರ ಯಾನ’ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಬಕೇಶ್ ಮತ್ತು ಕಾರ್ತಿಕ್ ಅವರು ಸಂಗೀತ ನಿರ್ದೇಶನ ಈ ಸಿನಿಮಾಗೆ ಇರಲಿದೆ. ಶೇಖರ್ ಚಂದ್ರ ಅವರು ಛಾಯಾಗ್ರಹಣ ಮಾಡಲಿದ್ದಾರೆ. ನಾಗೇಂದ್ರ ಕೆ. ಉಜ್ಜನಿ ಅವರು ಸಂಕಲನ ಮಾಡಲಿದ್ದಾರೆ.

4 / 5
ಚೇತನಾ ತೀರ್ಥಹಳ್ಳಿ ಅವರು ಈ ಸಿನಿಮಾಗೆ ಸಂಭಾಷಣೆ ಬರೆಯುತ್ತಿದ್ದಾರೆ. ಸೆಪ್ಟೆಂಬರ್​ಲ್ಲಿ ಚಿತ್ರೀಕರಣ ಆರಂಭ ಆಗಲಿದೆ. ಟೈಟಲ್ ಟೀಸರ್​ಗೆ ನಟ ಡಾಲಿ ಧನಂಜಯ್​ ಅವರು ಧ್ವನಿ ನೀಡಿದ್ದಾರೆ. ‘ಬಹಳ ದಿನಗಳಿಂದ ಒಳ್ಳೆಯ ಪಾತ್ರಕ್ಕಾಗಿ ಕಾದಿದ್ದೆ. ಈ ಸಿನಿಮಾದಲ್ಲಿ ಅದು ಸಿಕ್ಕಿದೆ’ ಎಂದು ವಿಜಯ್ ಕೃಷ್ಣ ಹೇಳಿದ್ದಾರೆ.

ಚೇತನಾ ತೀರ್ಥಹಳ್ಳಿ ಅವರು ಈ ಸಿನಿಮಾಗೆ ಸಂಭಾಷಣೆ ಬರೆಯುತ್ತಿದ್ದಾರೆ. ಸೆಪ್ಟೆಂಬರ್​ಲ್ಲಿ ಚಿತ್ರೀಕರಣ ಆರಂಭ ಆಗಲಿದೆ. ಟೈಟಲ್ ಟೀಸರ್​ಗೆ ನಟ ಡಾಲಿ ಧನಂಜಯ್​ ಅವರು ಧ್ವನಿ ನೀಡಿದ್ದಾರೆ. ‘ಬಹಳ ದಿನಗಳಿಂದ ಒಳ್ಳೆಯ ಪಾತ್ರಕ್ಕಾಗಿ ಕಾದಿದ್ದೆ. ಈ ಸಿನಿಮಾದಲ್ಲಿ ಅದು ಸಿಕ್ಕಿದೆ’ ಎಂದು ವಿಜಯ್ ಕೃಷ್ಣ ಹೇಳಿದ್ದಾರೆ.

5 / 5
Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ