AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mantralayam Photos: ಚಿತ್ರಗಳಲ್ಲಿ ಕಣ್ತುಂಬಿಕೊಳ್ಳಿ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಆರಾಧನಾ ವೈಭವ

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಜನಸಾಗರ ಹರಿದು ಬಂದಿದೆ. ಮಠದ ಮೊಗಸಾಲೆಯನ್ನು (ಕಾರಿಡಾರ್) ಅದ್ಧೂರಿಯಾಗಿ ಸಿಂಗರಿಸಲಾಗಿದ್ದು, ಕಣ್ಣಿಗೆ ಹಬ್ಬ ಕೊಡುವ ದೃಶ್ಯಗಳು ಎಲ್ಲೆಲ್ಲಿಯೂ ಕಂಡುಬರುತ್ತಿವೆ. ಈ ಬಾರಿ ರಾಯರ 351ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಮಠದ ಮೊಗಸಾಲೆಯನ್ನು ಹಲವು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. ‘ಮಧ್ವ ಮಾರ್ಗ’ ಹೆಸರಿನ ಈ ಕಾರಿಡಾರ್​ನಲ್ಲಿ ತಮಿಳುನಾಡಿನ ಉಬ್ಬುಶಿಲ್ಪ ಶೈಲಿಯ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

TV9 Web
| Edited By: |

Updated on:Aug 11, 2022 | 12:52 PM

Share
ಮಂತ್ರಾಲಯ ರಾಘವೇಂದ್ರ ಸ್ವಾಮಿಗಳು 351ನೇ ಆರಾಧನಾ ಮಹೋತ್ಸವ

Mantralaya Raghavendra Swamy Aradhane

1 / 8
ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಮಂತ್ರಾಲಯದಲ್ಲಿ ಮಠದ ಮೊಗಸಾಲೆಯನ್ನು ಹಲವು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. ‘ಮಧ್ವ ಮಾರ್ಗ’ ಹೆಸರಿನ ಈ ಕಾರಿಡಾರ್​ನಲ್ಲಿ ತಮಿಳುನಾಡಿನ ಉಬ್ಬುಶಿಲ್ಪ ಶೈಲಿಯ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

Mantralaya Raghavendra Swamy Aradhane Scuptures in Corridor Attracting

2 / 8

Mantralaya Raghavendra Swamy Aradhane Scuptures in Corridor Attracting

ಆರಾಧನೆ ಪ್ರಯುಕ್ತ ಭಕ್ತರು ಶ್ರೀಮಠಕ್ಕೆ ಪಡಿ ಅರ್ಪಿಸಿದರು.

3 / 8

Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಭಕ್ತರು ಅರ್ಪಿಸಿದ ಪಡಿಯನ್ನು ಪೀಠಾಧೀಶ ವಿಬುಧೇಂದ್ರ ಸ್ವಾಮೀಜಿ ಸ್ವೀಕರಿಸಿದರು.

4 / 8
Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಜನಸಾಗರ ಹರಿದು ಬಂದಿದೆ. ರಾಮಾಯಣ, ಮಹಾಭಾರತ, ರಾಘವೇಂದ್ರ ಸ್ವಾಮಿಗಳ ಚರಿತ್ರೆ, ಭಾಗವತ ಕಥೆಗಳನ್ನು ಬಿಂಬಿಸುವ ಶಿಲ್ಪಗಳನ್ನು ಈ ಮಾರ್ಗದಲ್ಲಿ ಅಳವಡಿಸಿರುವ ಮಠದ ಮೊಗಸಾಲೆ ಎಲ್ಲರ ಗಮನ ಸೆಳೆಯುತ್ತಿದೆ.

5 / 8
Mantralaya Raghavendra Swamy Aradhane Scuptures in Corridor Attracting

ತಿರುವನಂತಪುರಂನ ಮೂರು ದ್ವಾರಗಳಂತೆ, ಮಂತ್ರಾಲಯದಲ್ಲೂ ಕಮಾನು ದ್ವಾರಗಳನ್ನು ನಿರ್ಮಿಸಲಾಗಿದೆ. ಮುಖ ಮಂಟಪವನ್ನು ಎರಡು ಅಂತಸ್ತಿನಿಂದ, ಮೂರು ಅಂತಸ್ತಿಗೆ ಮಾರ್ಪಾಡಿಸಲಾಗಿದೆ.

6 / 8
Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಮೊಗಸಾಲೆಯ ಉಬ್ಬುಶಿಲ್ಪಗಳು ಎಲ್ಲರ ಗಮನ ಸೆಳೆಯುತ್ತಿವೆ. ವಿವಿಧ ಬಣ್ಣಗಳ ವಿದ್ಯುತ್ ದೀಪಗಳು, ಹೂವಿನ ಅಲಂಕಾರ, ಬೆಳ್ಳಿ ಮತ್ತು ಬಂಗಾರದ ರಥಗಳು ಎಲ್ಲರ ಗಮನ ಸೆಳೆಯುತ್ತಿವೆ.

7 / 8

Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಆರಾಧನೆ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಯರ ಬೃಂದಾವನಕ್ಕೆ ನಮಿಸಿದರು.

8 / 8

Published On - 12:47 pm, Thu, 11 August 22

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ