AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mantralayam Photos: ಚಿತ್ರಗಳಲ್ಲಿ ಕಣ್ತುಂಬಿಕೊಳ್ಳಿ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಆರಾಧನಾ ವೈಭವ

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಜನಸಾಗರ ಹರಿದು ಬಂದಿದೆ. ಮಠದ ಮೊಗಸಾಲೆಯನ್ನು (ಕಾರಿಡಾರ್) ಅದ್ಧೂರಿಯಾಗಿ ಸಿಂಗರಿಸಲಾಗಿದ್ದು, ಕಣ್ಣಿಗೆ ಹಬ್ಬ ಕೊಡುವ ದೃಶ್ಯಗಳು ಎಲ್ಲೆಲ್ಲಿಯೂ ಕಂಡುಬರುತ್ತಿವೆ. ಈ ಬಾರಿ ರಾಯರ 351ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಮಠದ ಮೊಗಸಾಲೆಯನ್ನು ಹಲವು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. ‘ಮಧ್ವ ಮಾರ್ಗ’ ಹೆಸರಿನ ಈ ಕಾರಿಡಾರ್​ನಲ್ಲಿ ತಮಿಳುನಾಡಿನ ಉಬ್ಬುಶಿಲ್ಪ ಶೈಲಿಯ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

TV9 Web
| Edited By: |

Updated on:Aug 11, 2022 | 12:52 PM

Share
ಮಂತ್ರಾಲಯ ರಾಘವೇಂದ್ರ ಸ್ವಾಮಿಗಳು 351ನೇ ಆರಾಧನಾ ಮಹೋತ್ಸವ

Mantralaya Raghavendra Swamy Aradhane

1 / 8
ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಮಂತ್ರಾಲಯದಲ್ಲಿ ಮಠದ ಮೊಗಸಾಲೆಯನ್ನು ಹಲವು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. ‘ಮಧ್ವ ಮಾರ್ಗ’ ಹೆಸರಿನ ಈ ಕಾರಿಡಾರ್​ನಲ್ಲಿ ತಮಿಳುನಾಡಿನ ಉಬ್ಬುಶಿಲ್ಪ ಶೈಲಿಯ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

Mantralaya Raghavendra Swamy Aradhane Scuptures in Corridor Attracting

2 / 8

Mantralaya Raghavendra Swamy Aradhane Scuptures in Corridor Attracting

ಆರಾಧನೆ ಪ್ರಯುಕ್ತ ಭಕ್ತರು ಶ್ರೀಮಠಕ್ಕೆ ಪಡಿ ಅರ್ಪಿಸಿದರು.

3 / 8

Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಭಕ್ತರು ಅರ್ಪಿಸಿದ ಪಡಿಯನ್ನು ಪೀಠಾಧೀಶ ವಿಬುಧೇಂದ್ರ ಸ್ವಾಮೀಜಿ ಸ್ವೀಕರಿಸಿದರು.

4 / 8
Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಜನಸಾಗರ ಹರಿದು ಬಂದಿದೆ. ರಾಮಾಯಣ, ಮಹಾಭಾರತ, ರಾಘವೇಂದ್ರ ಸ್ವಾಮಿಗಳ ಚರಿತ್ರೆ, ಭಾಗವತ ಕಥೆಗಳನ್ನು ಬಿಂಬಿಸುವ ಶಿಲ್ಪಗಳನ್ನು ಈ ಮಾರ್ಗದಲ್ಲಿ ಅಳವಡಿಸಿರುವ ಮಠದ ಮೊಗಸಾಲೆ ಎಲ್ಲರ ಗಮನ ಸೆಳೆಯುತ್ತಿದೆ.

5 / 8
Mantralaya Raghavendra Swamy Aradhane Scuptures in Corridor Attracting

ತಿರುವನಂತಪುರಂನ ಮೂರು ದ್ವಾರಗಳಂತೆ, ಮಂತ್ರಾಲಯದಲ್ಲೂ ಕಮಾನು ದ್ವಾರಗಳನ್ನು ನಿರ್ಮಿಸಲಾಗಿದೆ. ಮುಖ ಮಂಟಪವನ್ನು ಎರಡು ಅಂತಸ್ತಿನಿಂದ, ಮೂರು ಅಂತಸ್ತಿಗೆ ಮಾರ್ಪಾಡಿಸಲಾಗಿದೆ.

6 / 8
Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಮೊಗಸಾಲೆಯ ಉಬ್ಬುಶಿಲ್ಪಗಳು ಎಲ್ಲರ ಗಮನ ಸೆಳೆಯುತ್ತಿವೆ. ವಿವಿಧ ಬಣ್ಣಗಳ ವಿದ್ಯುತ್ ದೀಪಗಳು, ಹೂವಿನ ಅಲಂಕಾರ, ಬೆಳ್ಳಿ ಮತ್ತು ಬಂಗಾರದ ರಥಗಳು ಎಲ್ಲರ ಗಮನ ಸೆಳೆಯುತ್ತಿವೆ.

7 / 8

Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಆರಾಧನೆ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಯರ ಬೃಂದಾವನಕ್ಕೆ ನಮಿಸಿದರು.

8 / 8

Published On - 12:47 pm, Thu, 11 August 22

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!