AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೃಥ್ವಿರಾಜ್​’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆದ ನಟಿ ಮಾನುಷಿ ಚಿಲ್ಲರ್​; ಇಲ್ಲಿವೆ ಫೋಟೋಗಳು  

ಮಾನುಷಿ ಚಿಲ್ಲರ್ ಅವರು ಈಗ ಅಕ್ಷಯ್ ಕುಮಾರ್ ನಟನೆಯ ‘ಪೃಥ್ವಿರಾಜ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಯಶ್ ರಾಜ್ ಫಿಲ್ಮ್ಸ್​ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 25, 2022 | 6:51 PM

Share
ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಅನೇಕರು ಮಾಡೆಲಿಂಗ್ ಲೋಕದಲ್ಲಿ ಮಿಂಚಿರುತ್ತಾರೆ. ಅಲ್ಲಿ ಖ್ಯಾತಿ ಸಿಗುತ್ತಿದ್ದಂತೆಯೇ ಚಿತ್ರರಂಗದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಾರೆ. ಇದು ಚಿತ್ರರಂಗದಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಇದಕ್ಕೆ ಮಾನುಷಿ ಚಿಲ್ಲರ್ ಕೂಡ ಹೊರತಾಗಿಲ್ಲ. ಆದರೆ, ಮೊದಲ ಚಿತ್ರವನ್ನು ಒಪ್ಪಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅವರ ನಟನೆಯ ‘ಪೃಥ್ವಿರಾಜ್​’ ಸಿನಿಮಾ ತೆರೆಗೆ ಬರುತ್ತಿದೆ.

ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಅನೇಕರು ಮಾಡೆಲಿಂಗ್ ಲೋಕದಲ್ಲಿ ಮಿಂಚಿರುತ್ತಾರೆ. ಅಲ್ಲಿ ಖ್ಯಾತಿ ಸಿಗುತ್ತಿದ್ದಂತೆಯೇ ಚಿತ್ರರಂಗದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಾರೆ. ಇದು ಚಿತ್ರರಂಗದಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಇದಕ್ಕೆ ಮಾನುಷಿ ಚಿಲ್ಲರ್ ಕೂಡ ಹೊರತಾಗಿಲ್ಲ. ಆದರೆ, ಮೊದಲ ಚಿತ್ರವನ್ನು ಒಪ್ಪಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅವರ ನಟನೆಯ ‘ಪೃಥ್ವಿರಾಜ್​’ ಸಿನಿಮಾ ತೆರೆಗೆ ಬರುತ್ತಿದೆ.

1 / 5
ಮಾನುಷಿ ಚಿಲ್ಲರ್ 2017ರಲ್ಲಿ ಫೆಮಿನಾ ಮಿಸ್ ಇಂಡಿಯಾ ಆದರು. ಇದಾದ ಬಳಿಕ ಅವರು ‘ಮಿಸ್​ ವರ್ಲ್ಡ್​​ 2017’ ಕಿರೀಟವನ್ನು ಮುಡಿಗೇರಿಸಿಕೊಂಡರು. ಆ ಬಳಿಕ ಅವರ ಖ್ಯಾತಿ ಹೆಚ್ಚಿತು. ವಿಶ್ವಮಟ್ಟದಲ್ಲಿ ಮಾನುಷಿ ಗುರುತಿಸಿಕೊಂಡರು. ರಾತ್ರಿ ಬೆಳಗಾಗುವುದರೊಳಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿ ಬಿಟ್ಟರು. ಇನ್​​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಮಂದಿ ಅವರನ್ನು ಹಿಂಬಾಲಿಸೋಕೆ ಆರಂಭಿಸಿದರು.

ಮಾನುಷಿ ಚಿಲ್ಲರ್ 2017ರಲ್ಲಿ ಫೆಮಿನಾ ಮಿಸ್ ಇಂಡಿಯಾ ಆದರು. ಇದಾದ ಬಳಿಕ ಅವರು ‘ಮಿಸ್​ ವರ್ಲ್ಡ್​​ 2017’ ಕಿರೀಟವನ್ನು ಮುಡಿಗೇರಿಸಿಕೊಂಡರು. ಆ ಬಳಿಕ ಅವರ ಖ್ಯಾತಿ ಹೆಚ್ಚಿತು. ವಿಶ್ವಮಟ್ಟದಲ್ಲಿ ಮಾನುಷಿ ಗುರುತಿಸಿಕೊಂಡರು. ರಾತ್ರಿ ಬೆಳಗಾಗುವುದರೊಳಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿ ಬಿಟ್ಟರು. ಇನ್​​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಮಂದಿ ಅವರನ್ನು ಹಿಂಬಾಲಿಸೋಕೆ ಆರಂಭಿಸಿದರು.

2 / 5
ನಿರ್ಮಾಪಕರು ಮಾಡೆಲಿಂಗ್ ಜಗತ್ತಿನ ಮೇಲೆ ಯಾವಾಗಲೂ ಕಣ್ಣು ಇಟ್ಟಿರುತ್ತಾರೆ. ಅದರಲ್ಲೂ ಇಷ್ಟೊಂದು ಖ್ಯಾತಿ ಸಿಕ್ಕರೆ ಚಿತ್ರರಂಗಕ್ಕೆ ಎಂಟ್ರಿ ಸಿಗೋದು ತುಂಬಾನೇ ಸುಲಭ. ಆದರೆ, ಮಾನುಷಿ ಚಿಲ್ಲರ್ ಈ ವಿಚಾರದಲ್ಲಿ ತರಾತುರಿ ಮಾಡಲೇ ಇಲ್ಲ. ‘ಒಳ್ಳೆಯ ಪಾತ್ರ ಸಿಕ್ಕರೆ ಮಾತ್ರ ನಟಿಸುತ್ತೇನೆ’ ಎಂದು ನೇರವಾಗಿಯೇ ಹೇಳಿದರು. ಹೇಳಿದಂತೆ ನಡೆದುಕೊಂಡರು.

ನಿರ್ಮಾಪಕರು ಮಾಡೆಲಿಂಗ್ ಜಗತ್ತಿನ ಮೇಲೆ ಯಾವಾಗಲೂ ಕಣ್ಣು ಇಟ್ಟಿರುತ್ತಾರೆ. ಅದರಲ್ಲೂ ಇಷ್ಟೊಂದು ಖ್ಯಾತಿ ಸಿಕ್ಕರೆ ಚಿತ್ರರಂಗಕ್ಕೆ ಎಂಟ್ರಿ ಸಿಗೋದು ತುಂಬಾನೇ ಸುಲಭ. ಆದರೆ, ಮಾನುಷಿ ಚಿಲ್ಲರ್ ಈ ವಿಚಾರದಲ್ಲಿ ತರಾತುರಿ ಮಾಡಲೇ ಇಲ್ಲ. ‘ಒಳ್ಳೆಯ ಪಾತ್ರ ಸಿಕ್ಕರೆ ಮಾತ್ರ ನಟಿಸುತ್ತೇನೆ’ ಎಂದು ನೇರವಾಗಿಯೇ ಹೇಳಿದರು. ಹೇಳಿದಂತೆ ನಡೆದುಕೊಂಡರು.

3 / 5
ಮಾನುಷಿ ಚಿಲ್ಲರ್ ಅವರು ಈಗ ಅಕ್ಷಯ್ ಕುಮಾರ್ ನಟನೆಯ ‘ಪೃಥ್ವಿರಾಜ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಯಶ್ ರಾಜ್ ಫಿಲ್ಮ್ಸ್​ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಇಷ್ಟು ದೊಡ್ಡ ಪ್ರೊಡಕ್ಷನ್ ಹೌಸ್​ನಿಂದ ಪರಿಚಯಗೊಳ್ಳುತ್ತಿರುವುದಕ್ಕೆ ಅವರಿಗೆ ನಿಜಕ್ಕೂ ಖುಷಿಯಿದೆ. ಮೊದಲ ಸಿನಿಮಾದಲ್ಲೇ ಅಕ್ಷಯ್ ಕುಮಾರ್ ಜತೆ ನಟಿಸುವ ಅವಕಾಶ ಮಾನುಷಿಗೆ ಸಿಕ್ಕಿದೆ.

ಮಾನುಷಿ ಚಿಲ್ಲರ್ ಅವರು ಈಗ ಅಕ್ಷಯ್ ಕುಮಾರ್ ನಟನೆಯ ‘ಪೃಥ್ವಿರಾಜ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಯಶ್ ರಾಜ್ ಫಿಲ್ಮ್ಸ್​ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಇಷ್ಟು ದೊಡ್ಡ ಪ್ರೊಡಕ್ಷನ್ ಹೌಸ್​ನಿಂದ ಪರಿಚಯಗೊಳ್ಳುತ್ತಿರುವುದಕ್ಕೆ ಅವರಿಗೆ ನಿಜಕ್ಕೂ ಖುಷಿಯಿದೆ. ಮೊದಲ ಸಿನಿಮಾದಲ್ಲೇ ಅಕ್ಷಯ್ ಕುಮಾರ್ ಜತೆ ನಟಿಸುವ ಅವಕಾಶ ಮಾನುಷಿಗೆ ಸಿಕ್ಕಿದೆ.

4 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಸಿನಿಮಾ ತೆರೆಗೆ ಬಂದು ಈಗಾಗಲೇ ಸುಮಾರು ಎರಡು ವರ್ಷ ಕಳೆದಿರುತ್ತಿತ್ತು. 2020ರ ದೀಪಾವಳಿಯಲ್ಲೇ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ತೆರೆಗೆ ಬರೋದು ತಡವಾಗಿದೆ. ಜೂನ್​ 3ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ಅಕ್ಷಯ್ ಹಾಗೂ ಮಾನುಷಿ ಬ್ಯುಸಿ ಆಗಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಸಿನಿಮಾ ತೆರೆಗೆ ಬಂದು ಈಗಾಗಲೇ ಸುಮಾರು ಎರಡು ವರ್ಷ ಕಳೆದಿರುತ್ತಿತ್ತು. 2020ರ ದೀಪಾವಳಿಯಲ್ಲೇ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ತೆರೆಗೆ ಬರೋದು ತಡವಾಗಿದೆ. ಜೂನ್​ 3ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ಅಕ್ಷಯ್ ಹಾಗೂ ಮಾನುಷಿ ಬ್ಯುಸಿ ಆಗಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!