‘ಪೃಥ್ವಿರಾಜ್​’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆದ ನಟಿ ಮಾನುಷಿ ಚಿಲ್ಲರ್​; ಇಲ್ಲಿವೆ ಫೋಟೋಗಳು  

ಮಾನುಷಿ ಚಿಲ್ಲರ್ ಅವರು ಈಗ ಅಕ್ಷಯ್ ಕುಮಾರ್ ನಟನೆಯ ‘ಪೃಥ್ವಿರಾಜ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಯಶ್ ರಾಜ್ ಫಿಲ್ಮ್ಸ್​ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

| Updated By: ರಾಜೇಶ್ ದುಗ್ಗುಮನೆ

Updated on: May 25, 2022 | 6:51 PM

ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಅನೇಕರು ಮಾಡೆಲಿಂಗ್ ಲೋಕದಲ್ಲಿ ಮಿಂಚಿರುತ್ತಾರೆ. ಅಲ್ಲಿ ಖ್ಯಾತಿ ಸಿಗುತ್ತಿದ್ದಂತೆಯೇ ಚಿತ್ರರಂಗದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಾರೆ. ಇದು ಚಿತ್ರರಂಗದಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಇದಕ್ಕೆ ಮಾನುಷಿ ಚಿಲ್ಲರ್ ಕೂಡ ಹೊರತಾಗಿಲ್ಲ. ಆದರೆ, ಮೊದಲ ಚಿತ್ರವನ್ನು ಒಪ್ಪಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅವರ ನಟನೆಯ ‘ಪೃಥ್ವಿರಾಜ್​’ ಸಿನಿಮಾ ತೆರೆಗೆ ಬರುತ್ತಿದೆ.

ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಅನೇಕರು ಮಾಡೆಲಿಂಗ್ ಲೋಕದಲ್ಲಿ ಮಿಂಚಿರುತ್ತಾರೆ. ಅಲ್ಲಿ ಖ್ಯಾತಿ ಸಿಗುತ್ತಿದ್ದಂತೆಯೇ ಚಿತ್ರರಂಗದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಾರೆ. ಇದು ಚಿತ್ರರಂಗದಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಇದಕ್ಕೆ ಮಾನುಷಿ ಚಿಲ್ಲರ್ ಕೂಡ ಹೊರತಾಗಿಲ್ಲ. ಆದರೆ, ಮೊದಲ ಚಿತ್ರವನ್ನು ಒಪ್ಪಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅವರ ನಟನೆಯ ‘ಪೃಥ್ವಿರಾಜ್​’ ಸಿನಿಮಾ ತೆರೆಗೆ ಬರುತ್ತಿದೆ.

1 / 5
ಮಾನುಷಿ ಚಿಲ್ಲರ್ 2017ರಲ್ಲಿ ಫೆಮಿನಾ ಮಿಸ್ ಇಂಡಿಯಾ ಆದರು. ಇದಾದ ಬಳಿಕ ಅವರು ‘ಮಿಸ್​ ವರ್ಲ್ಡ್​​ 2017’ ಕಿರೀಟವನ್ನು ಮುಡಿಗೇರಿಸಿಕೊಂಡರು. ಆ ಬಳಿಕ ಅವರ ಖ್ಯಾತಿ ಹೆಚ್ಚಿತು. ವಿಶ್ವಮಟ್ಟದಲ್ಲಿ ಮಾನುಷಿ ಗುರುತಿಸಿಕೊಂಡರು. ರಾತ್ರಿ ಬೆಳಗಾಗುವುದರೊಳಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿ ಬಿಟ್ಟರು. ಇನ್​​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಮಂದಿ ಅವರನ್ನು ಹಿಂಬಾಲಿಸೋಕೆ ಆರಂಭಿಸಿದರು.

ಮಾನುಷಿ ಚಿಲ್ಲರ್ 2017ರಲ್ಲಿ ಫೆಮಿನಾ ಮಿಸ್ ಇಂಡಿಯಾ ಆದರು. ಇದಾದ ಬಳಿಕ ಅವರು ‘ಮಿಸ್​ ವರ್ಲ್ಡ್​​ 2017’ ಕಿರೀಟವನ್ನು ಮುಡಿಗೇರಿಸಿಕೊಂಡರು. ಆ ಬಳಿಕ ಅವರ ಖ್ಯಾತಿ ಹೆಚ್ಚಿತು. ವಿಶ್ವಮಟ್ಟದಲ್ಲಿ ಮಾನುಷಿ ಗುರುತಿಸಿಕೊಂಡರು. ರಾತ್ರಿ ಬೆಳಗಾಗುವುದರೊಳಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿ ಬಿಟ್ಟರು. ಇನ್​​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಮಂದಿ ಅವರನ್ನು ಹಿಂಬಾಲಿಸೋಕೆ ಆರಂಭಿಸಿದರು.

2 / 5
ನಿರ್ಮಾಪಕರು ಮಾಡೆಲಿಂಗ್ ಜಗತ್ತಿನ ಮೇಲೆ ಯಾವಾಗಲೂ ಕಣ್ಣು ಇಟ್ಟಿರುತ್ತಾರೆ. ಅದರಲ್ಲೂ ಇಷ್ಟೊಂದು ಖ್ಯಾತಿ ಸಿಕ್ಕರೆ ಚಿತ್ರರಂಗಕ್ಕೆ ಎಂಟ್ರಿ ಸಿಗೋದು ತುಂಬಾನೇ ಸುಲಭ. ಆದರೆ, ಮಾನುಷಿ ಚಿಲ್ಲರ್ ಈ ವಿಚಾರದಲ್ಲಿ ತರಾತುರಿ ಮಾಡಲೇ ಇಲ್ಲ. ‘ಒಳ್ಳೆಯ ಪಾತ್ರ ಸಿಕ್ಕರೆ ಮಾತ್ರ ನಟಿಸುತ್ತೇನೆ’ ಎಂದು ನೇರವಾಗಿಯೇ ಹೇಳಿದರು. ಹೇಳಿದಂತೆ ನಡೆದುಕೊಂಡರು.

ನಿರ್ಮಾಪಕರು ಮಾಡೆಲಿಂಗ್ ಜಗತ್ತಿನ ಮೇಲೆ ಯಾವಾಗಲೂ ಕಣ್ಣು ಇಟ್ಟಿರುತ್ತಾರೆ. ಅದರಲ್ಲೂ ಇಷ್ಟೊಂದು ಖ್ಯಾತಿ ಸಿಕ್ಕರೆ ಚಿತ್ರರಂಗಕ್ಕೆ ಎಂಟ್ರಿ ಸಿಗೋದು ತುಂಬಾನೇ ಸುಲಭ. ಆದರೆ, ಮಾನುಷಿ ಚಿಲ್ಲರ್ ಈ ವಿಚಾರದಲ್ಲಿ ತರಾತುರಿ ಮಾಡಲೇ ಇಲ್ಲ. ‘ಒಳ್ಳೆಯ ಪಾತ್ರ ಸಿಕ್ಕರೆ ಮಾತ್ರ ನಟಿಸುತ್ತೇನೆ’ ಎಂದು ನೇರವಾಗಿಯೇ ಹೇಳಿದರು. ಹೇಳಿದಂತೆ ನಡೆದುಕೊಂಡರು.

3 / 5
ಮಾನುಷಿ ಚಿಲ್ಲರ್ ಅವರು ಈಗ ಅಕ್ಷಯ್ ಕುಮಾರ್ ನಟನೆಯ ‘ಪೃಥ್ವಿರಾಜ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಯಶ್ ರಾಜ್ ಫಿಲ್ಮ್ಸ್​ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಇಷ್ಟು ದೊಡ್ಡ ಪ್ರೊಡಕ್ಷನ್ ಹೌಸ್​ನಿಂದ ಪರಿಚಯಗೊಳ್ಳುತ್ತಿರುವುದಕ್ಕೆ ಅವರಿಗೆ ನಿಜಕ್ಕೂ ಖುಷಿಯಿದೆ. ಮೊದಲ ಸಿನಿಮಾದಲ್ಲೇ ಅಕ್ಷಯ್ ಕುಮಾರ್ ಜತೆ ನಟಿಸುವ ಅವಕಾಶ ಮಾನುಷಿಗೆ ಸಿಕ್ಕಿದೆ.

ಮಾನುಷಿ ಚಿಲ್ಲರ್ ಅವರು ಈಗ ಅಕ್ಷಯ್ ಕುಮಾರ್ ನಟನೆಯ ‘ಪೃಥ್ವಿರಾಜ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಯಶ್ ರಾಜ್ ಫಿಲ್ಮ್ಸ್​ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಇಷ್ಟು ದೊಡ್ಡ ಪ್ರೊಡಕ್ಷನ್ ಹೌಸ್​ನಿಂದ ಪರಿಚಯಗೊಳ್ಳುತ್ತಿರುವುದಕ್ಕೆ ಅವರಿಗೆ ನಿಜಕ್ಕೂ ಖುಷಿಯಿದೆ. ಮೊದಲ ಸಿನಿಮಾದಲ್ಲೇ ಅಕ್ಷಯ್ ಕುಮಾರ್ ಜತೆ ನಟಿಸುವ ಅವಕಾಶ ಮಾನುಷಿಗೆ ಸಿಕ್ಕಿದೆ.

4 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಸಿನಿಮಾ ತೆರೆಗೆ ಬಂದು ಈಗಾಗಲೇ ಸುಮಾರು ಎರಡು ವರ್ಷ ಕಳೆದಿರುತ್ತಿತ್ತು. 2020ರ ದೀಪಾವಳಿಯಲ್ಲೇ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ತೆರೆಗೆ ಬರೋದು ತಡವಾಗಿದೆ. ಜೂನ್​ 3ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ಅಕ್ಷಯ್ ಹಾಗೂ ಮಾನುಷಿ ಬ್ಯುಸಿ ಆಗಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಸಿನಿಮಾ ತೆರೆಗೆ ಬಂದು ಈಗಾಗಲೇ ಸುಮಾರು ಎರಡು ವರ್ಷ ಕಳೆದಿರುತ್ತಿತ್ತು. 2020ರ ದೀಪಾವಳಿಯಲ್ಲೇ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ತೆರೆಗೆ ಬರೋದು ತಡವಾಗಿದೆ. ಜೂನ್​ 3ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ಅಕ್ಷಯ್ ಹಾಗೂ ಮಾನುಷಿ ಬ್ಯುಸಿ ಆಗಿದ್ದಾರೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ