- Kannada News Photo gallery Many snakes found in Snake catcher Naresh house chikmagalur who died by snake bite
Snake Naresh: ಹಾವು ಕಚ್ಚಿ ಮೃತಪಟ್ಟ ಸ್ನೇಕ್ ನರೇಶ್ ಮನೆಯಲ್ಲಿ ರಾಶಿ ರಾಶಿ ನಾಗರಹಾವು ಪತ್ತೆ
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
Updated on: May 31, 2023 | 10:31 AM

ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ ಮೃತಪಟ್ಟ ಹಿನ್ನೆಲೆ ಪರಿಶೀಲನೆಗೆ ಮನೆಗೆ ತೆರಳಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಸ್ನೇಕ್ ನರೇಶ್ ಮನೆಯಲ್ಲಿ ನೂರಾರು ನಾಗರಹಾವುಗಳು ಪತ್ತೆಯಾಗಿವೆ. ನಾಗರಹಾವು ಸೇರಿದಂತೆ ನೂರಾರು ಹಾವಿನ ಮರಿಗಳು ಸಿಕ್ಕಿವೆ.

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳ ರಕ್ಷಣೆ ಮಾಡಿದ್ದಾರೆ. ಮನೆ ಸೇರಿದಂತೆ ಕಾರು, ಸ್ಕೂಟಿಗಳಲ್ಲೂ ನಾಗರಹಾವುಗಳು ಪತ್ತೆಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ನಾಗರಹಾವುಗಳನ್ನ ರಕ್ಷಿಸಿ ಮನೆಯಿಂದ ಕೊಂಡೊಯ್ದಿದ್ದಾರೆ.

ಸೆರೆ ಹಿಡಿದ ನಾಗರಹಾವು ಕಚ್ಚಿ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ನೂರಾರು ನಾಗರಹಾವುಗಳು ಮನೆಯಲ್ಲಿ ಪತ್ತೆ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.

ಈ ಹಿಂದೆ ಕೊಳಕುಮಂಡಲ ಹಾವು ಕಚ್ಚಿದ್ದ ಕಾರಣ ಬೆರಳನ್ನೇ ಕತ್ತರಿಸಿಕೊಂಡಿದ್ದ ಸ್ನೇಕ್ ನರೇಶ್, ಟೈಲರ್ ವೃತ್ತಿ ಬಿಟ್ಟು ಹಾವು ಹಿಡಿಯುವುದನ್ನೇ ಕಾಯಕ ಮಾಡಿಕೊಂಡಿದ್ದರು.



















