AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಗಿ ಪುಟ್ಟ ಮಕ್ಕಳಿಗೆ ಶಾಸ್ತ್ರೋಕ್ತವಾಗಿ ಮದ್ವೆ ಮಾಡಿದ ಗ್ರಾಮಸ್ಥರು, ದೊಡ್ಡಬಳ್ಳಾಪುರದಲ್ಲಿ ವಿಭಿನ್ನ ಆಚರಣೆ

ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಹುಡುಗನಿಗೆ ಹುಡುಗಿ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ. ಹೀಗಾಗಿ ಗ್ರಾಮಸ್ಥರೆಲ್ಲಾ ಸೇರಿ ಮದುವೆ ಮಾಡಿಸಿದ್ದಾರೆ.

ನವೀನ್ ಕುಮಾರ್ ಟಿ
| Edited By: ಆಯೇಷಾ ಬಾನು|

Updated on: Aug 31, 2023 | 3:33 PM

Share
ವರ್ಷಧಾರೆ ಕರುಣೆ ತೋರಿಸಿದೆ ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಆವರಿಸಿದೆ. ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ದೇವನಹಳ್ಳಿಯ ಈ ಗ್ರಾಮದ ರೈತರು ಮಳೆಗಾಗಿ ಮಳೆರಾಯನಿಗೆ ಮೊರೆ ಇಟ್ಟಿದ್ದು ವಿಭಿನ್ನ ಆಚರಣೆಯನ್ನು ಮಾಡಿದ್ದಾರೆ.

ವರ್ಷಧಾರೆ ಕರುಣೆ ತೋರಿಸಿದೆ ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಆವರಿಸಿದೆ. ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ದೇವನಹಳ್ಳಿಯ ಈ ಗ್ರಾಮದ ರೈತರು ಮಳೆಗಾಗಿ ಮಳೆರಾಯನಿಗೆ ಮೊರೆ ಇಟ್ಟಿದ್ದು ವಿಭಿನ್ನ ಆಚರಣೆಯನ್ನು ಮಾಡಿದ್ದಾರೆ.

1 / 7
ನಮ್ಮಲ್ಲಿ ಮಳೆಗಾಗಿ ಕತ್ತೆ ಮದುವೆ, ಕಪ್ಪೆ ಮದುವೆಗಳನ್ನು ಮಾಡುವುದು ಸಾಮಾನ್ಯ, ಇನ್ನೂ ಕೆಲ ಕಡೆ ವಿಭಿನ್ನ ಮಾದರಿಯ ಆಚರಣೆಗಳು ರೂಢಿಯಲ್ಲಿವೆ. ಆದ್ರೆ ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಗಂಡು ಮಗುವಿಗೆ ಹೆಣ್ಣಿನ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ.

ನಮ್ಮಲ್ಲಿ ಮಳೆಗಾಗಿ ಕತ್ತೆ ಮದುವೆ, ಕಪ್ಪೆ ಮದುವೆಗಳನ್ನು ಮಾಡುವುದು ಸಾಮಾನ್ಯ, ಇನ್ನೂ ಕೆಲ ಕಡೆ ವಿಭಿನ್ನ ಮಾದರಿಯ ಆಚರಣೆಗಳು ರೂಢಿಯಲ್ಲಿವೆ. ಆದ್ರೆ ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಗಂಡು ಮಗುವಿಗೆ ಹೆಣ್ಣಿನ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ.

2 / 7
ಒಬ್ಬ ಬಾಲಕನಿಗೆ ಹುಡುಗಿ ವೇಷ ಹಾಕಿ ದಂಪತಿಗಳಂತೆ ಮದುವೆ ಮಾಡಿಸಿದ್ದಾರೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ.

ಒಬ್ಬ ಬಾಲಕನಿಗೆ ಹುಡುಗಿ ವೇಷ ಹಾಕಿ ದಂಪತಿಗಳಂತೆ ಮದುವೆ ಮಾಡಿಸಿದ್ದಾರೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ.

3 / 7
ರಿಯಾಲಿಟಿಯಲ್ಲಿ ಒಂದು ಗಂಡು-ಹೆಣ್ಣಿಗೆ ಯಾವ ರೀತಿ ಮದುವೆ ಮಾಡುತ್ತರೋ ಅದೇ ರೀತಿ ಶಾಸ್ತ್ರೋಕ್ತವಾಗಿ ಗ್ರಾಮದ ಜನರೆಲ್ಲಾ ಸೇರಿ ವಿಜೃಂಭಣೆಯಿಂದ ಮದುವೆ ಮಾಡಿ ಹಾಡುಗಳನ್ನಾಡಿ ಸಂಭ್ರಮಿಸಿದ್ದಾರೆ. ಊರಿನ ಜನರ ಈ ನಂಬಿಗೆ ಸುಳ್ಳಾಗದಿದ್ದರೆ ರಾಜ್ಯವೇ ವರ್ಷಧಾರೆಯ ಕೃಪೆಗೆ ತಣ್ಣಗಾಗಲಿದೆ.

ರಿಯಾಲಿಟಿಯಲ್ಲಿ ಒಂದು ಗಂಡು-ಹೆಣ್ಣಿಗೆ ಯಾವ ರೀತಿ ಮದುವೆ ಮಾಡುತ್ತರೋ ಅದೇ ರೀತಿ ಶಾಸ್ತ್ರೋಕ್ತವಾಗಿ ಗ್ರಾಮದ ಜನರೆಲ್ಲಾ ಸೇರಿ ವಿಜೃಂಭಣೆಯಿಂದ ಮದುವೆ ಮಾಡಿ ಹಾಡುಗಳನ್ನಾಡಿ ಸಂಭ್ರಮಿಸಿದ್ದಾರೆ. ಊರಿನ ಜನರ ಈ ನಂಬಿಗೆ ಸುಳ್ಳಾಗದಿದ್ದರೆ ರಾಜ್ಯವೇ ವರ್ಷಧಾರೆಯ ಕೃಪೆಗೆ ತಣ್ಣಗಾಗಲಿದೆ.

4 / 7
ಚಿಕ್ಕಬಳ್ಳಾಪುರ ತಾಲೂಕಿನ ಮಗಳಕೊಪ್ಪೆ ಗ್ರಾಮದಲ್ಲಿ ಕೂಡ ಇತ್ತೀಚೆಗೆ ಮಕ್ಕಳಿಗೆ ಮದುವೆ ಮಾಡಿ ವರುಣ ದೇವನಿಗೆ ಪ್ರಾರ್ಥಿಸಲಾಗಿತ್ತು. ಮಳೆ ಇಲ್ಲದೆ ಬೆಳೆ‌ ಇಲ್ಲದೆ‌ ಕಂಗಾಲಾಗಿದ್ದ ಗ್ರಾಮಸ್ಥರು ಮಕ್ಕಳಿಗೆ ಮದುವೆ ಮಾಡಿ ಮಳೆಗಾಗಿ ಬೇಡಿದ್ದರು. ಗ್ರಾಮದ ಬೀದಿಯಲ್ಲೇ ಗಂಡು-ಹೆಣ್ಣನ್ನು ಕೂರಿಸಿ ಮದುವೆಯ ಎಲ್ಲ ಸಂಪ್ರಾಯಗಳನ್ನು ಪಾಲಿಸಿ ಮದುವೆ ಮಾಡಲಾಗಿತ್ತು.

ಚಿಕ್ಕಬಳ್ಳಾಪುರ ತಾಲೂಕಿನ ಮಗಳಕೊಪ್ಪೆ ಗ್ರಾಮದಲ್ಲಿ ಕೂಡ ಇತ್ತೀಚೆಗೆ ಮಕ್ಕಳಿಗೆ ಮದುವೆ ಮಾಡಿ ವರುಣ ದೇವನಿಗೆ ಪ್ರಾರ್ಥಿಸಲಾಗಿತ್ತು. ಮಳೆ ಇಲ್ಲದೆ ಬೆಳೆ‌ ಇಲ್ಲದೆ‌ ಕಂಗಾಲಾಗಿದ್ದ ಗ್ರಾಮಸ್ಥರು ಮಕ್ಕಳಿಗೆ ಮದುವೆ ಮಾಡಿ ಮಳೆಗಾಗಿ ಬೇಡಿದ್ದರು. ಗ್ರಾಮದ ಬೀದಿಯಲ್ಲೇ ಗಂಡು-ಹೆಣ್ಣನ್ನು ಕೂರಿಸಿ ಮದುವೆಯ ಎಲ್ಲ ಸಂಪ್ರಾಯಗಳನ್ನು ಪಾಲಿಸಿ ಮದುವೆ ಮಾಡಲಾಗಿತ್ತು.

5 / 7
ಇನ್ನು ಹುಡುಗ ಹುಡುಗಿಗೆ ಶಾಸ್ತ್ರೋಕ್ತವಾಗಿ ತಾಳಿ ಕೂಡ ಕಟ್ಟಿದ್ದ. ಪುರೋಹಿತರು ಮಾಂಗಲ್ಯಂ ತಂತುನಾನೇನ ಅಂತ ಮಂತ್ರ ಕೂಡ ಪಠಿಸಿದ್ದರು. ನವ ದಂಪತಿ ಸಪ್ತಪದಿಯನ್ನೂ ತುಳಿದರು. ಬಳಿಕ ಗ್ರಾಮದ ಜನರಿಗೆ ಮದುವೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಇನ್ನು ಹುಡುಗ ಹುಡುಗಿಗೆ ಶಾಸ್ತ್ರೋಕ್ತವಾಗಿ ತಾಳಿ ಕೂಡ ಕಟ್ಟಿದ್ದ. ಪುರೋಹಿತರು ಮಾಂಗಲ್ಯಂ ತಂತುನಾನೇನ ಅಂತ ಮಂತ್ರ ಕೂಡ ಪಠಿಸಿದ್ದರು. ನವ ದಂಪತಿ ಸಪ್ತಪದಿಯನ್ನೂ ತುಳಿದರು. ಬಳಿಕ ಗ್ರಾಮದ ಜನರಿಗೆ ಮದುವೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

6 / 7
ಈ ಆಚರಣೆಯಲ್ಲಿ ಬಾಲಕನಿಗೆ ಬಾಲಕಿಯ ವೇಷ ಹಾಕಲಾಗಿದೆ. ಇಬ್ಬರು ಬಾಲಕರನ್ನು ಮದುವೆ ಗಂಡು-ಹೆಣ್ಣಿನಂತೆ ಅಲಂಕಾರ ಮಾಡಿ ಮದುವೆ ಮಾಡಿ ಮಳೆಗಾಗಿ ದೇವರನ್ನು ಬೇಡಲಾಗಿದೆ.

ಈ ಆಚರಣೆಯಲ್ಲಿ ಬಾಲಕನಿಗೆ ಬಾಲಕಿಯ ವೇಷ ಹಾಕಲಾಗಿದೆ. ಇಬ್ಬರು ಬಾಲಕರನ್ನು ಮದುವೆ ಗಂಡು-ಹೆಣ್ಣಿನಂತೆ ಅಲಂಕಾರ ಮಾಡಿ ಮದುವೆ ಮಾಡಿ ಮಳೆಗಾಗಿ ದೇವರನ್ನು ಬೇಡಲಾಗಿದೆ.

7 / 7
Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ