AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಗಿ ಪುಟ್ಟ ಮಕ್ಕಳಿಗೆ ಶಾಸ್ತ್ರೋಕ್ತವಾಗಿ ಮದ್ವೆ ಮಾಡಿದ ಗ್ರಾಮಸ್ಥರು, ದೊಡ್ಡಬಳ್ಳಾಪುರದಲ್ಲಿ ವಿಭಿನ್ನ ಆಚರಣೆ

ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಹುಡುಗನಿಗೆ ಹುಡುಗಿ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ. ಹೀಗಾಗಿ ಗ್ರಾಮಸ್ಥರೆಲ್ಲಾ ಸೇರಿ ಮದುವೆ ಮಾಡಿಸಿದ್ದಾರೆ.

ನವೀನ್ ಕುಮಾರ್ ಟಿ
| Edited By: |

Updated on: Aug 31, 2023 | 3:33 PM

Share
ವರ್ಷಧಾರೆ ಕರುಣೆ ತೋರಿಸಿದೆ ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಆವರಿಸಿದೆ. ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ದೇವನಹಳ್ಳಿಯ ಈ ಗ್ರಾಮದ ರೈತರು ಮಳೆಗಾಗಿ ಮಳೆರಾಯನಿಗೆ ಮೊರೆ ಇಟ್ಟಿದ್ದು ವಿಭಿನ್ನ ಆಚರಣೆಯನ್ನು ಮಾಡಿದ್ದಾರೆ.

ವರ್ಷಧಾರೆ ಕರುಣೆ ತೋರಿಸಿದೆ ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಆವರಿಸಿದೆ. ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ದೇವನಹಳ್ಳಿಯ ಈ ಗ್ರಾಮದ ರೈತರು ಮಳೆಗಾಗಿ ಮಳೆರಾಯನಿಗೆ ಮೊರೆ ಇಟ್ಟಿದ್ದು ವಿಭಿನ್ನ ಆಚರಣೆಯನ್ನು ಮಾಡಿದ್ದಾರೆ.

1 / 7
ನಮ್ಮಲ್ಲಿ ಮಳೆಗಾಗಿ ಕತ್ತೆ ಮದುವೆ, ಕಪ್ಪೆ ಮದುವೆಗಳನ್ನು ಮಾಡುವುದು ಸಾಮಾನ್ಯ, ಇನ್ನೂ ಕೆಲ ಕಡೆ ವಿಭಿನ್ನ ಮಾದರಿಯ ಆಚರಣೆಗಳು ರೂಢಿಯಲ್ಲಿವೆ. ಆದ್ರೆ ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಗಂಡು ಮಗುವಿಗೆ ಹೆಣ್ಣಿನ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ.

ನಮ್ಮಲ್ಲಿ ಮಳೆಗಾಗಿ ಕತ್ತೆ ಮದುವೆ, ಕಪ್ಪೆ ಮದುವೆಗಳನ್ನು ಮಾಡುವುದು ಸಾಮಾನ್ಯ, ಇನ್ನೂ ಕೆಲ ಕಡೆ ವಿಭಿನ್ನ ಮಾದರಿಯ ಆಚರಣೆಗಳು ರೂಢಿಯಲ್ಲಿವೆ. ಆದ್ರೆ ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಗಂಡು ಮಗುವಿಗೆ ಹೆಣ್ಣಿನ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ.

2 / 7
ಒಬ್ಬ ಬಾಲಕನಿಗೆ ಹುಡುಗಿ ವೇಷ ಹಾಕಿ ದಂಪತಿಗಳಂತೆ ಮದುವೆ ಮಾಡಿಸಿದ್ದಾರೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ.

ಒಬ್ಬ ಬಾಲಕನಿಗೆ ಹುಡುಗಿ ವೇಷ ಹಾಕಿ ದಂಪತಿಗಳಂತೆ ಮದುವೆ ಮಾಡಿಸಿದ್ದಾರೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ.

3 / 7
ರಿಯಾಲಿಟಿಯಲ್ಲಿ ಒಂದು ಗಂಡು-ಹೆಣ್ಣಿಗೆ ಯಾವ ರೀತಿ ಮದುವೆ ಮಾಡುತ್ತರೋ ಅದೇ ರೀತಿ ಶಾಸ್ತ್ರೋಕ್ತವಾಗಿ ಗ್ರಾಮದ ಜನರೆಲ್ಲಾ ಸೇರಿ ವಿಜೃಂಭಣೆಯಿಂದ ಮದುವೆ ಮಾಡಿ ಹಾಡುಗಳನ್ನಾಡಿ ಸಂಭ್ರಮಿಸಿದ್ದಾರೆ. ಊರಿನ ಜನರ ಈ ನಂಬಿಗೆ ಸುಳ್ಳಾಗದಿದ್ದರೆ ರಾಜ್ಯವೇ ವರ್ಷಧಾರೆಯ ಕೃಪೆಗೆ ತಣ್ಣಗಾಗಲಿದೆ.

ರಿಯಾಲಿಟಿಯಲ್ಲಿ ಒಂದು ಗಂಡು-ಹೆಣ್ಣಿಗೆ ಯಾವ ರೀತಿ ಮದುವೆ ಮಾಡುತ್ತರೋ ಅದೇ ರೀತಿ ಶಾಸ್ತ್ರೋಕ್ತವಾಗಿ ಗ್ರಾಮದ ಜನರೆಲ್ಲಾ ಸೇರಿ ವಿಜೃಂಭಣೆಯಿಂದ ಮದುವೆ ಮಾಡಿ ಹಾಡುಗಳನ್ನಾಡಿ ಸಂಭ್ರಮಿಸಿದ್ದಾರೆ. ಊರಿನ ಜನರ ಈ ನಂಬಿಗೆ ಸುಳ್ಳಾಗದಿದ್ದರೆ ರಾಜ್ಯವೇ ವರ್ಷಧಾರೆಯ ಕೃಪೆಗೆ ತಣ್ಣಗಾಗಲಿದೆ.

4 / 7
ಚಿಕ್ಕಬಳ್ಳಾಪುರ ತಾಲೂಕಿನ ಮಗಳಕೊಪ್ಪೆ ಗ್ರಾಮದಲ್ಲಿ ಕೂಡ ಇತ್ತೀಚೆಗೆ ಮಕ್ಕಳಿಗೆ ಮದುವೆ ಮಾಡಿ ವರುಣ ದೇವನಿಗೆ ಪ್ರಾರ್ಥಿಸಲಾಗಿತ್ತು. ಮಳೆ ಇಲ್ಲದೆ ಬೆಳೆ‌ ಇಲ್ಲದೆ‌ ಕಂಗಾಲಾಗಿದ್ದ ಗ್ರಾಮಸ್ಥರು ಮಕ್ಕಳಿಗೆ ಮದುವೆ ಮಾಡಿ ಮಳೆಗಾಗಿ ಬೇಡಿದ್ದರು. ಗ್ರಾಮದ ಬೀದಿಯಲ್ಲೇ ಗಂಡು-ಹೆಣ್ಣನ್ನು ಕೂರಿಸಿ ಮದುವೆಯ ಎಲ್ಲ ಸಂಪ್ರಾಯಗಳನ್ನು ಪಾಲಿಸಿ ಮದುವೆ ಮಾಡಲಾಗಿತ್ತು.

ಚಿಕ್ಕಬಳ್ಳಾಪುರ ತಾಲೂಕಿನ ಮಗಳಕೊಪ್ಪೆ ಗ್ರಾಮದಲ್ಲಿ ಕೂಡ ಇತ್ತೀಚೆಗೆ ಮಕ್ಕಳಿಗೆ ಮದುವೆ ಮಾಡಿ ವರುಣ ದೇವನಿಗೆ ಪ್ರಾರ್ಥಿಸಲಾಗಿತ್ತು. ಮಳೆ ಇಲ್ಲದೆ ಬೆಳೆ‌ ಇಲ್ಲದೆ‌ ಕಂಗಾಲಾಗಿದ್ದ ಗ್ರಾಮಸ್ಥರು ಮಕ್ಕಳಿಗೆ ಮದುವೆ ಮಾಡಿ ಮಳೆಗಾಗಿ ಬೇಡಿದ್ದರು. ಗ್ರಾಮದ ಬೀದಿಯಲ್ಲೇ ಗಂಡು-ಹೆಣ್ಣನ್ನು ಕೂರಿಸಿ ಮದುವೆಯ ಎಲ್ಲ ಸಂಪ್ರಾಯಗಳನ್ನು ಪಾಲಿಸಿ ಮದುವೆ ಮಾಡಲಾಗಿತ್ತು.

5 / 7
ಇನ್ನು ಹುಡುಗ ಹುಡುಗಿಗೆ ಶಾಸ್ತ್ರೋಕ್ತವಾಗಿ ತಾಳಿ ಕೂಡ ಕಟ್ಟಿದ್ದ. ಪುರೋಹಿತರು ಮಾಂಗಲ್ಯಂ ತಂತುನಾನೇನ ಅಂತ ಮಂತ್ರ ಕೂಡ ಪಠಿಸಿದ್ದರು. ನವ ದಂಪತಿ ಸಪ್ತಪದಿಯನ್ನೂ ತುಳಿದರು. ಬಳಿಕ ಗ್ರಾಮದ ಜನರಿಗೆ ಮದುವೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಇನ್ನು ಹುಡುಗ ಹುಡುಗಿಗೆ ಶಾಸ್ತ್ರೋಕ್ತವಾಗಿ ತಾಳಿ ಕೂಡ ಕಟ್ಟಿದ್ದ. ಪುರೋಹಿತರು ಮಾಂಗಲ್ಯಂ ತಂತುನಾನೇನ ಅಂತ ಮಂತ್ರ ಕೂಡ ಪಠಿಸಿದ್ದರು. ನವ ದಂಪತಿ ಸಪ್ತಪದಿಯನ್ನೂ ತುಳಿದರು. ಬಳಿಕ ಗ್ರಾಮದ ಜನರಿಗೆ ಮದುವೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

6 / 7
ಈ ಆಚರಣೆಯಲ್ಲಿ ಬಾಲಕನಿಗೆ ಬಾಲಕಿಯ ವೇಷ ಹಾಕಲಾಗಿದೆ. ಇಬ್ಬರು ಬಾಲಕರನ್ನು ಮದುವೆ ಗಂಡು-ಹೆಣ್ಣಿನಂತೆ ಅಲಂಕಾರ ಮಾಡಿ ಮದುವೆ ಮಾಡಿ ಮಳೆಗಾಗಿ ದೇವರನ್ನು ಬೇಡಲಾಗಿದೆ.

ಈ ಆಚರಣೆಯಲ್ಲಿ ಬಾಲಕನಿಗೆ ಬಾಲಕಿಯ ವೇಷ ಹಾಕಲಾಗಿದೆ. ಇಬ್ಬರು ಬಾಲಕರನ್ನು ಮದುವೆ ಗಂಡು-ಹೆಣ್ಣಿನಂತೆ ಅಲಂಕಾರ ಮಾಡಿ ಮದುವೆ ಮಾಡಿ ಮಳೆಗಾಗಿ ದೇವರನ್ನು ಬೇಡಲಾಗಿದೆ.

7 / 7
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ