AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ

ದಾವಣಗೆರೆಯ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ವಿಶೇಷ ಸಂಕ್ರಾಂತಿ ಸಂಭ್ರಮ ಆಯೋಜಿಸಲಾಗಿತ್ತು. ಶಾಲಾ ಆವರಣವನ್ನು ಹಳ್ಳಿಯ ವಾತಾವರಣದಂತೆ ರೂಪಿಸಿ, ಮಕ್ಕಳಿಗೆ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸಲಾಯಿತು. ಗೋ ಪೂಜೆ, ಬೀಸೋಕಲ್ಲು, ಎಳ್ಳು-ಬೆಲ್ಲ ಹಂಚಿಕೆ, ಸಾಂಪ್ರದಾಯಿಕ ಅಡುಗೆ ತಯಾರಿ ಮೂಲಕ ಸಂಕ್ರಾಂತಿ ಹಬ್ಬದ ಮಹತ್ವ ಮತ್ತು ಕೃಷಿ ಸಂಬಂಧವನ್ನು ಮಕ್ಕಳಿಗೆ ತಿಳಿಸಲಾಯಿತು. ಮಕ್ಕಳು ಸಂಭ್ರಮದಿಂದ ಪಾಲ್ಗೊಂಡ ಸಂಕ್ರಾಂತಿಯ ಫೋಟೋಗಳು ಇಲ್ಲಿವೆ, ನೋಡಿ.

ಭಾವನಾ ಹೆಗಡೆ
|

Updated on: Jan 14, 2026 | 2:59 PM

Share
ದಾವಣಗೆರೆಯ ಶಾಮನೂರು ಸಮೀಪ ಇರುವ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಸಂಕ್ರಾಂತಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣವನ್ನೇ ಹಳ್ಳಿಯ ವಾತಾವರಣದಂತೆ ರೂಪಿಸಿ, ಗ್ರಾಮೀಣ ಬದುಕಿನ ಸೊಗಡು ಮತ್ತು ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ನಡೆಸಲಾಯಿತು.

ದಾವಣಗೆರೆಯ ಶಾಮನೂರು ಸಮೀಪ ಇರುವ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಸಂಕ್ರಾಂತಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣವನ್ನೇ ಹಳ್ಳಿಯ ವಾತಾವರಣದಂತೆ ರೂಪಿಸಿ, ಗ್ರಾಮೀಣ ಬದುಕಿನ ಸೊಗಡು ಮತ್ತು ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ನಡೆಸಲಾಯಿತು.

1 / 6
 ಶಾಲೆಯನ್ನು ತಳಿರು ತೋರಣಗಳು, ಬಣ್ಣಬಣ್ಣದ ರಂಗೋಲಿಗಳು ಹಾಗೂ ದವಸ ಧಾನ್ಯಗಳ ರಾಶಿಯಿಂದ ಅಲಂಕರಿಸಲಾಗಿತ್ತು. ಗೋ ಪೂಜೆ ನೆರವೇರಿಸಿ ಸಂಕ್ರಾಂತಿ ಆಚರಣೆ ಆರಂಭಿಸಲಾಯಿತು. ಹಳ್ಳಿಸೊಗಡಿನ ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿಗಳು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಶಾಲೆಯನ್ನು ತಳಿರು ತೋರಣಗಳು, ಬಣ್ಣಬಣ್ಣದ ರಂಗೋಲಿಗಳು ಹಾಗೂ ದವಸ ಧಾನ್ಯಗಳ ರಾಶಿಯಿಂದ ಅಲಂಕರಿಸಲಾಗಿತ್ತು. ಗೋ ಪೂಜೆ ನೆರವೇರಿಸಿ ಸಂಕ್ರಾಂತಿ ಆಚರಣೆ ಆರಂಭಿಸಲಾಯಿತು. ಹಳ್ಳಿಸೊಗಡಿನ ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿಗಳು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

2 / 6
ಬೀಸೋಕಲ್ಲು, ಒನಕೆ ಹಿಡಿದು ದವಸ ಧಾನ್ಯಗಳನ್ನು ಅಸನು ಮಾಡುವಿಕೆ, ಶಾವಿಗೆ ಮಣೆಯಲ್ಲಿ ಶಾವಿಗೆ ಹೊಸೆಯುವುದು, ಬಳೆಗಾರ ಮನೆಗೆ ಬರುವ ದೃಶ್ಯಗಳ ಮೂಲಕ ಮಕ್ಕಳಿಗೆ ಹಳ್ಳಿಯ ದಿನನಿತ್ಯದ ಬದುಕನ್ನು ನೈಜ ಅನುಭವದ ರೂಪದಲ್ಲಿ ಪರಿಚಯಿಸಲಾಯಿತು.

ಬೀಸೋಕಲ್ಲು, ಒನಕೆ ಹಿಡಿದು ದವಸ ಧಾನ್ಯಗಳನ್ನು ಅಸನು ಮಾಡುವಿಕೆ, ಶಾವಿಗೆ ಮಣೆಯಲ್ಲಿ ಶಾವಿಗೆ ಹೊಸೆಯುವುದು, ಬಳೆಗಾರ ಮನೆಗೆ ಬರುವ ದೃಶ್ಯಗಳ ಮೂಲಕ ಮಕ್ಕಳಿಗೆ ಹಳ್ಳಿಯ ದಿನನಿತ್ಯದ ಬದುಕನ್ನು ನೈಜ ಅನುಭವದ ರೂಪದಲ್ಲಿ ಪರಿಚಯಿಸಲಾಯಿತು.

3 / 6
 ಎಳ್ಳು–ಬೆಲ್ಲ ಹಂಚಿಕೆ, ಪೊಂಗಲ್, ರೋಟಿ ಸೇರಿದಂತೆ ಸಾಂಪ್ರದಾಯಿಕ ಅಡುಗೆ ತಯಾರಿ ಹಾಗೂ ದವಸ ಧಾನ್ಯಗಳಿಗೆ ಪೂಜೆ ಸಲ್ಲಿಸುವ ಮೂಲಕ ಸಂಕ್ರಾಂತಿ ಹಬ್ಬದ ಅರ್ಥ, ಮಹತ್ವ ಮತ್ತು ಕೃಷಿಯೊಂದಿಗಿನ ಮಾನವನ ಅವಿನಾಭಾವ ಸಂಬಂಧವನ್ನು ಮಕ್ಕಳಿಗೆ ವಿವರಿಸಲಾಯಿತು.

ಎಳ್ಳು–ಬೆಲ್ಲ ಹಂಚಿಕೆ, ಪೊಂಗಲ್, ರೋಟಿ ಸೇರಿದಂತೆ ಸಾಂಪ್ರದಾಯಿಕ ಅಡುಗೆ ತಯಾರಿ ಹಾಗೂ ದವಸ ಧಾನ್ಯಗಳಿಗೆ ಪೂಜೆ ಸಲ್ಲಿಸುವ ಮೂಲಕ ಸಂಕ್ರಾಂತಿ ಹಬ್ಬದ ಅರ್ಥ, ಮಹತ್ವ ಮತ್ತು ಕೃಷಿಯೊಂದಿಗಿನ ಮಾನವನ ಅವಿನಾಭಾವ ಸಂಬಂಧವನ್ನು ಮಕ್ಕಳಿಗೆ ವಿವರಿಸಲಾಯಿತು.

4 / 6
ಪಠ್ಯಪುಸ್ತಕದ ಪಾಠಗಳಿಗಿಂತ ಬದುಕಿನ ಅನುಭವದ ಮೂಲಕ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಮಕ್ಕಳಿಗೆ ತಿಳಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಸಂಕ್ರಾಂತಿ ಸಂಭ್ರಮ, ಹಳ್ಳಿಯ ಬದುಕಿನ ಸೊಗಡನ್ನು ಮಕ್ಕಳ ಮನಸ್ಸಿನಲ್ಲಿ ತುಂಬಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಪಠ್ಯಪುಸ್ತಕದ ಪಾಠಗಳಿಗಿಂತ ಬದುಕಿನ ಅನುಭವದ ಮೂಲಕ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಮಕ್ಕಳಿಗೆ ತಿಳಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಸಂಕ್ರಾಂತಿ ಸಂಭ್ರಮ, ಹಳ್ಳಿಯ ಬದುಕಿನ ಸೊಗಡನ್ನು ಮಕ್ಕಳ ಮನಸ್ಸಿನಲ್ಲಿ ತುಂಬಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

5 / 6
ಸಂಕ್ರಾಂತಿ ಸಂಭ್ರಮದಲ್ಲಿ ಮಕ್ಕಳ ಮುಖದ ನಗು, ಗ್ರಾಮೀಣ ಬದುಕಿನ ನೈಜ ದೃಶ್ಯಗಳು ಮತ್ತು ಸಂಪ್ರದಾಯಗಳ ಜೀವಂತ ಚಿತ್ರಣ ಕಾಣಸಿಗುತ್ತಿದ್ದು, ನೋಡುಗರ ಮನಸ್ಸಿನಲ್ಲಿ ಹಳ್ಳಿಯ ಸಂಸ್ಕೃತಿ ಹಾಗೂ ಹಬ್ಬದ ಆತ್ಮೀಯತೆಯನ್ನು ಮತ್ತೆ ಮೆಲುಕು ಹಾಕುವಂತೆ ಮಾಡುತ್ತದೆ.

ಸಂಕ್ರಾಂತಿ ಸಂಭ್ರಮದಲ್ಲಿ ಮಕ್ಕಳ ಮುಖದ ನಗು, ಗ್ರಾಮೀಣ ಬದುಕಿನ ನೈಜ ದೃಶ್ಯಗಳು ಮತ್ತು ಸಂಪ್ರದಾಯಗಳ ಜೀವಂತ ಚಿತ್ರಣ ಕಾಣಸಿಗುತ್ತಿದ್ದು, ನೋಡುಗರ ಮನಸ್ಸಿನಲ್ಲಿ ಹಳ್ಳಿಯ ಸಂಸ್ಕೃತಿ ಹಾಗೂ ಹಬ್ಬದ ಆತ್ಮೀಯತೆಯನ್ನು ಮತ್ತೆ ಮೆಲುಕು ಹಾಕುವಂತೆ ಮಾಡುತ್ತದೆ.

6 / 6
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ