AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದೇಶ್ವರನ ದರ್ಶನಕ್ಕೆ ಆಗಮಿಸಿದ ಲಕ್ಷಾಂತರ ಭಕ್ತಗಣ! ಭೀಮನ ಅಮವಾಸ್ಯೆಗೆ ಮಾದಪ್ಪನಿಗೆ ನೇರವೇರಿತು ವಿಶೇಷ ಪೂಜಾ ಕೈಂಕರ್ಯ! ಇಲ್ಲಿದೆ ಪೋಟೋಸ್​

ನಿನ್ನೆ ಭೀಮನ ಅಮವಾಸ್ಯೆ ಹಿನ್ನಲೆ ವಿಶೇಷವಾಗಿ ಜಾತ್ರಾ ಮಹೋತ್ಸವವನ್ನ ಚಾಮರಾಜನಗರದಲ್ಲಿ ಆಚರಿಸಲಾಯ್ತು. ಇತ್ತ ಉಚಿತ ಬಸ್ ಇರುವ ಕಾರಣ ಮಹಿಳಾ ಮಣಿಗಳ ದಂಡೆ ದೇವಾಲಯಕ್ಕೆ ಬಂದಿತ್ತು. ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ ಯುವತಿಯರು ಜಾತ್ರೆಯಲ್ಲಿ ಓಡಾಡುತ್ತ ಮೇರುಗು ಮೂಡಿಸಿದ್ರೆ, ಅತ್ತ ಮಾದಪ್ಪನ ದರ್ಶನ ಪಡೆದ ಭಕ್ತಗಣ ಪುನೀತರಾದ್ರು.

ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 18, 2023 | 8:08 AM

Share
ರೇಷ್ಮೆ ಸೀರೆ ಉಟ್ಟು ಲಂಗ ದಾವಣಿ ತೊಟ್ಟು ಮಿರ ಮಿರ ಮಿಂಚುತ್ತಿರುವ ಮಹಿಳೆಯರು. ಇತ್ತ ನಾವೇನು ಕಡಿಮೆ ಇಲ್ಲ ಎಂಬಂತೆ ಸಾಂಪ್ರದಾಯಿಕ ಉಡುಪು ತೊಟ್ಟು ಅತ್ತಿಂದಿತ್ತ ಗುಂಪು ಕಟ್ಟಿಕೊಂಡು ಓಡಾಡುತ್ತಿರುವ ಪಡ್ಡೆ ಹುಡುಗರು. ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತಗಣ. ಸಂಚಾರ ದಟ್ಟಣೆಯಾಗದಂತೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿರುವ ಖಾಕಿ ಪಡೆ. ಈ ಎಲ್ಲಾ ಜಗಮಗಿಸುವ ದೃಶ್ಯ ಕಣ್ಣಿಗೆ ರಾಚಿದ್ದು ಚಾಮರಾಜನಗರ ತಾಲೂಕಿನ ಸಂತೆಮರಳ್ಳಿ ಗ್ರಾಮದಲ್ಲಿ.

ರೇಷ್ಮೆ ಸೀರೆ ಉಟ್ಟು ಲಂಗ ದಾವಣಿ ತೊಟ್ಟು ಮಿರ ಮಿರ ಮಿಂಚುತ್ತಿರುವ ಮಹಿಳೆಯರು. ಇತ್ತ ನಾವೇನು ಕಡಿಮೆ ಇಲ್ಲ ಎಂಬಂತೆ ಸಾಂಪ್ರದಾಯಿಕ ಉಡುಪು ತೊಟ್ಟು ಅತ್ತಿಂದಿತ್ತ ಗುಂಪು ಕಟ್ಟಿಕೊಂಡು ಓಡಾಡುತ್ತಿರುವ ಪಡ್ಡೆ ಹುಡುಗರು. ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತಗಣ. ಸಂಚಾರ ದಟ್ಟಣೆಯಾಗದಂತೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿರುವ ಖಾಕಿ ಪಡೆ. ಈ ಎಲ್ಲಾ ಜಗಮಗಿಸುವ ದೃಶ್ಯ ಕಣ್ಣಿಗೆ ರಾಚಿದ್ದು ಚಾಮರಾಜನಗರ ತಾಲೂಕಿನ ಸಂತೆಮರಳ್ಳಿ ಗ್ರಾಮದಲ್ಲಿ.

1 / 7
ಹೌದು ನಿನ್ನೆ(ಜು.17) ಭೀಮನ ಅಮಾವಾಸ್ಯೆ ಪ್ರಯುಕ್ತ ಮಾದಪ್ಪನ ದರ್ಶನಕ್ಕೆ ಭಕ್ತರ ದಂಡೆ ಹರಿದು ಬಂದಿತ್ತು. ಭೀಮನ ಅಮಾವಾಸ್ಯೆಯಾದ ಕಾರಣ ಮಾದಪ್ಪನ ದರ್ಶನ ಪಡೆದ್ರೆ ಒಳಿತಾಗುತ್ತೆಂಬ ಪ್ರತೀತಿ ಇಲ್ಲಿದೆ.

ಹೌದು ನಿನ್ನೆ(ಜು.17) ಭೀಮನ ಅಮಾವಾಸ್ಯೆ ಪ್ರಯುಕ್ತ ಮಾದಪ್ಪನ ದರ್ಶನಕ್ಕೆ ಭಕ್ತರ ದಂಡೆ ಹರಿದು ಬಂದಿತ್ತು. ಭೀಮನ ಅಮಾವಾಸ್ಯೆಯಾದ ಕಾರಣ ಮಾದಪ್ಪನ ದರ್ಶನ ಪಡೆದ್ರೆ ಒಳಿತಾಗುತ್ತೆಂಬ ಪ್ರತೀತಿ ಇಲ್ಲಿದೆ.

2 / 7
ಹಾಗಾಗಿ ರಾಜ್ಯದ ವಿವಿಧೆಡೆಯಿಂದ ಜನರು ಆಗಮಿಸಿ ಮಾದಪ್ಪನ ದರ್ಶನ ಪಡೆದು ಪುನೀತರಾದ್ರು. ಪ್ರತಿ ವರ್ಷ ಸಂತೆಮರಳ್ಳಿ ಗ್ರಾಮದಲ್ಲಿ ವಿಶೇಷ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಅದೇ ರೀತಿ ಈ ಬಾರಿಯು ಜಾತ್ರೆ ಮಹೋತ್ಸವವನ್ನ ಆಯೋಜಿಸಲಾಗಿತ್ತು. ಈ ಜಾತ್ರೆಗೆ ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ ಯುವತಿಯರು ಜಾತ್ರೆಯಲ್ಲಿ ಭಾಗಿಯಾಗಿ ಸಂತಸ ಪಟ್ಟರು.

ಹಾಗಾಗಿ ರಾಜ್ಯದ ವಿವಿಧೆಡೆಯಿಂದ ಜನರು ಆಗಮಿಸಿ ಮಾದಪ್ಪನ ದರ್ಶನ ಪಡೆದು ಪುನೀತರಾದ್ರು. ಪ್ರತಿ ವರ್ಷ ಸಂತೆಮರಳ್ಳಿ ಗ್ರಾಮದಲ್ಲಿ ವಿಶೇಷ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಅದೇ ರೀತಿ ಈ ಬಾರಿಯು ಜಾತ್ರೆ ಮಹೋತ್ಸವವನ್ನ ಆಯೋಜಿಸಲಾಗಿತ್ತು. ಈ ಜಾತ್ರೆಗೆ ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ ಯುವತಿಯರು ಜಾತ್ರೆಯಲ್ಲಿ ಭಾಗಿಯಾಗಿ ಸಂತಸ ಪಟ್ಟರು.

3 / 7
ಇನ್ನು ಪುರಾಣದ ಪ್ರಕಾರ ಈ ಹಿಂದೆ ಮಾದೇಶ್ವರರು ಬಿಕ್ಷೆ ಬೇಡುತ್ತ ಬಂದು ಇಲ್ಲಿ ಐಕ್ಯರಾಗಿದ್ದಾರಂತೆ ಹಾಗಾಗಿ ಆಗಿನಿಂದಲು ಇಲ್ಲಿ ಭೀಮನ ಅಮವಾಸ್ಯೆಯಂದು ವಿಶೇಷ ಜಾತ್ರಾಮಹೋತ್ಸವ ನಡೆಯುತ್ತಿದೆ.

ಇನ್ನು ಪುರಾಣದ ಪ್ರಕಾರ ಈ ಹಿಂದೆ ಮಾದೇಶ್ವರರು ಬಿಕ್ಷೆ ಬೇಡುತ್ತ ಬಂದು ಇಲ್ಲಿ ಐಕ್ಯರಾಗಿದ್ದಾರಂತೆ ಹಾಗಾಗಿ ಆಗಿನಿಂದಲು ಇಲ್ಲಿ ಭೀಮನ ಅಮವಾಸ್ಯೆಯಂದು ವಿಶೇಷ ಜಾತ್ರಾಮಹೋತ್ಸವ ನಡೆಯುತ್ತಿದೆ.

4 / 7
ಕೇವಲ ಸಂತೆಮರಳ್ಳಿ ಅಷ್ಟೇ ಅಲ್ಲದೆ ಮಲೆ ಮಹದೇಶ್ವರ ಬೆಟ್ಟದಲ್ಲೂ ಸಹ ಭಕ್ತರ ದಂಡು ಆಗಮಿಸಿ ಮಾದಪ್ಪನ ದರ್ಶನ ಪಡೆದ್ರು.

ಕೇವಲ ಸಂತೆಮರಳ್ಳಿ ಅಷ್ಟೇ ಅಲ್ಲದೆ ಮಲೆ ಮಹದೇಶ್ವರ ಬೆಟ್ಟದಲ್ಲೂ ಸಹ ಭಕ್ತರ ದಂಡು ಆಗಮಿಸಿ ಮಾದಪ್ಪನ ದರ್ಶನ ಪಡೆದ್ರು.

5 / 7
ರಾಜ್ಯದಲ್ಲಿ ಶಕ್ತಿಯೋಜನೆ ಜಾರಿಯಾದ ಹಿನ್ನಲೆ ಮಹಿಳಾ ಭಕ್ತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಮಾದಪ್ಪನ ದರ್ಶನಕ್ಕಾಗಿ ಬಂದ ಭಕ್ತರಿಗೆ ವಿಶೇಷವಾಗಿ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿತ್ತು. ಪಾಯಸ, ಹುಳಿ, ಅನ್ನ ಸಾಂಬಾರ್ ಹಾಗೂ ಮಜ್ಜಿಗೆಯನ್ನ ವಿತರಿಸಲಾಯ್ತು.

ರಾಜ್ಯದಲ್ಲಿ ಶಕ್ತಿಯೋಜನೆ ಜಾರಿಯಾದ ಹಿನ್ನಲೆ ಮಹಿಳಾ ಭಕ್ತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಮಾದಪ್ಪನ ದರ್ಶನಕ್ಕಾಗಿ ಬಂದ ಭಕ್ತರಿಗೆ ವಿಶೇಷವಾಗಿ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿತ್ತು. ಪಾಯಸ, ಹುಳಿ, ಅನ್ನ ಸಾಂಬಾರ್ ಹಾಗೂ ಮಜ್ಜಿಗೆಯನ್ನ ವಿತರಿಸಲಾಯ್ತು.

6 / 7
ಅದೇನೆ ಹೇಳಿ ಭೀಮನ ಅಮವಾಸೆಯನ್ನ ಚಾಮರಾಜನಗರದಲ್ಲಿ ವಿಶೇಷ ಹಾಗೂ ವಿಭಿನ್ನವಾಗಿ ಆಚರಿಸಲಾಯ್ತು, ಉಘೇ ಮಾದೇಶ ಎಂಬ ಘೋಷವಾಕ್ಯದಿಂದ ಮಾದಪ್ಪನ ದರ್ಶನ ಪಡೆದ ಲಕ್ಷಾಂತರ ಮಂದಿ ಪುನೀತರಾದರು.

ಅದೇನೆ ಹೇಳಿ ಭೀಮನ ಅಮವಾಸೆಯನ್ನ ಚಾಮರಾಜನಗರದಲ್ಲಿ ವಿಶೇಷ ಹಾಗೂ ವಿಭಿನ್ನವಾಗಿ ಆಚರಿಸಲಾಯ್ತು, ಉಘೇ ಮಾದೇಶ ಎಂಬ ಘೋಷವಾಕ್ಯದಿಂದ ಮಾದಪ್ಪನ ದರ್ಶನ ಪಡೆದ ಲಕ್ಷಾಂತರ ಮಂದಿ ಪುನೀತರಾದರು.

7 / 7
Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ