AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದೇಶ್ವರನ ದರ್ಶನಕ್ಕೆ ಆಗಮಿಸಿದ ಲಕ್ಷಾಂತರ ಭಕ್ತಗಣ! ಭೀಮನ ಅಮವಾಸ್ಯೆಗೆ ಮಾದಪ್ಪನಿಗೆ ನೇರವೇರಿತು ವಿಶೇಷ ಪೂಜಾ ಕೈಂಕರ್ಯ! ಇಲ್ಲಿದೆ ಪೋಟೋಸ್​

ನಿನ್ನೆ ಭೀಮನ ಅಮವಾಸ್ಯೆ ಹಿನ್ನಲೆ ವಿಶೇಷವಾಗಿ ಜಾತ್ರಾ ಮಹೋತ್ಸವವನ್ನ ಚಾಮರಾಜನಗರದಲ್ಲಿ ಆಚರಿಸಲಾಯ್ತು. ಇತ್ತ ಉಚಿತ ಬಸ್ ಇರುವ ಕಾರಣ ಮಹಿಳಾ ಮಣಿಗಳ ದಂಡೆ ದೇವಾಲಯಕ್ಕೆ ಬಂದಿತ್ತು. ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ ಯುವತಿಯರು ಜಾತ್ರೆಯಲ್ಲಿ ಓಡಾಡುತ್ತ ಮೇರುಗು ಮೂಡಿಸಿದ್ರೆ, ಅತ್ತ ಮಾದಪ್ಪನ ದರ್ಶನ ಪಡೆದ ಭಕ್ತಗಣ ಪುನೀತರಾದ್ರು.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 18, 2023 | 8:08 AM

Share
ರೇಷ್ಮೆ ಸೀರೆ ಉಟ್ಟು ಲಂಗ ದಾವಣಿ ತೊಟ್ಟು ಮಿರ ಮಿರ ಮಿಂಚುತ್ತಿರುವ ಮಹಿಳೆಯರು. ಇತ್ತ ನಾವೇನು ಕಡಿಮೆ ಇಲ್ಲ ಎಂಬಂತೆ ಸಾಂಪ್ರದಾಯಿಕ ಉಡುಪು ತೊಟ್ಟು ಅತ್ತಿಂದಿತ್ತ ಗುಂಪು ಕಟ್ಟಿಕೊಂಡು ಓಡಾಡುತ್ತಿರುವ ಪಡ್ಡೆ ಹುಡುಗರು. ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತಗಣ. ಸಂಚಾರ ದಟ್ಟಣೆಯಾಗದಂತೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿರುವ ಖಾಕಿ ಪಡೆ. ಈ ಎಲ್ಲಾ ಜಗಮಗಿಸುವ ದೃಶ್ಯ ಕಣ್ಣಿಗೆ ರಾಚಿದ್ದು ಚಾಮರಾಜನಗರ ತಾಲೂಕಿನ ಸಂತೆಮರಳ್ಳಿ ಗ್ರಾಮದಲ್ಲಿ.

ರೇಷ್ಮೆ ಸೀರೆ ಉಟ್ಟು ಲಂಗ ದಾವಣಿ ತೊಟ್ಟು ಮಿರ ಮಿರ ಮಿಂಚುತ್ತಿರುವ ಮಹಿಳೆಯರು. ಇತ್ತ ನಾವೇನು ಕಡಿಮೆ ಇಲ್ಲ ಎಂಬಂತೆ ಸಾಂಪ್ರದಾಯಿಕ ಉಡುಪು ತೊಟ್ಟು ಅತ್ತಿಂದಿತ್ತ ಗುಂಪು ಕಟ್ಟಿಕೊಂಡು ಓಡಾಡುತ್ತಿರುವ ಪಡ್ಡೆ ಹುಡುಗರು. ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತಗಣ. ಸಂಚಾರ ದಟ್ಟಣೆಯಾಗದಂತೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿರುವ ಖಾಕಿ ಪಡೆ. ಈ ಎಲ್ಲಾ ಜಗಮಗಿಸುವ ದೃಶ್ಯ ಕಣ್ಣಿಗೆ ರಾಚಿದ್ದು ಚಾಮರಾಜನಗರ ತಾಲೂಕಿನ ಸಂತೆಮರಳ್ಳಿ ಗ್ರಾಮದಲ್ಲಿ.

1 / 7
ಹೌದು ನಿನ್ನೆ(ಜು.17) ಭೀಮನ ಅಮಾವಾಸ್ಯೆ ಪ್ರಯುಕ್ತ ಮಾದಪ್ಪನ ದರ್ಶನಕ್ಕೆ ಭಕ್ತರ ದಂಡೆ ಹರಿದು ಬಂದಿತ್ತು. ಭೀಮನ ಅಮಾವಾಸ್ಯೆಯಾದ ಕಾರಣ ಮಾದಪ್ಪನ ದರ್ಶನ ಪಡೆದ್ರೆ ಒಳಿತಾಗುತ್ತೆಂಬ ಪ್ರತೀತಿ ಇಲ್ಲಿದೆ.

ಹೌದು ನಿನ್ನೆ(ಜು.17) ಭೀಮನ ಅಮಾವಾಸ್ಯೆ ಪ್ರಯುಕ್ತ ಮಾದಪ್ಪನ ದರ್ಶನಕ್ಕೆ ಭಕ್ತರ ದಂಡೆ ಹರಿದು ಬಂದಿತ್ತು. ಭೀಮನ ಅಮಾವಾಸ್ಯೆಯಾದ ಕಾರಣ ಮಾದಪ್ಪನ ದರ್ಶನ ಪಡೆದ್ರೆ ಒಳಿತಾಗುತ್ತೆಂಬ ಪ್ರತೀತಿ ಇಲ್ಲಿದೆ.

2 / 7
ಹಾಗಾಗಿ ರಾಜ್ಯದ ವಿವಿಧೆಡೆಯಿಂದ ಜನರು ಆಗಮಿಸಿ ಮಾದಪ್ಪನ ದರ್ಶನ ಪಡೆದು ಪುನೀತರಾದ್ರು. ಪ್ರತಿ ವರ್ಷ ಸಂತೆಮರಳ್ಳಿ ಗ್ರಾಮದಲ್ಲಿ ವಿಶೇಷ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಅದೇ ರೀತಿ ಈ ಬಾರಿಯು ಜಾತ್ರೆ ಮಹೋತ್ಸವವನ್ನ ಆಯೋಜಿಸಲಾಗಿತ್ತು. ಈ ಜಾತ್ರೆಗೆ ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ ಯುವತಿಯರು ಜಾತ್ರೆಯಲ್ಲಿ ಭಾಗಿಯಾಗಿ ಸಂತಸ ಪಟ್ಟರು.

ಹಾಗಾಗಿ ರಾಜ್ಯದ ವಿವಿಧೆಡೆಯಿಂದ ಜನರು ಆಗಮಿಸಿ ಮಾದಪ್ಪನ ದರ್ಶನ ಪಡೆದು ಪುನೀತರಾದ್ರು. ಪ್ರತಿ ವರ್ಷ ಸಂತೆಮರಳ್ಳಿ ಗ್ರಾಮದಲ್ಲಿ ವಿಶೇಷ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಅದೇ ರೀತಿ ಈ ಬಾರಿಯು ಜಾತ್ರೆ ಮಹೋತ್ಸವವನ್ನ ಆಯೋಜಿಸಲಾಗಿತ್ತು. ಈ ಜಾತ್ರೆಗೆ ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ ಯುವತಿಯರು ಜಾತ್ರೆಯಲ್ಲಿ ಭಾಗಿಯಾಗಿ ಸಂತಸ ಪಟ್ಟರು.

3 / 7
ಇನ್ನು ಪುರಾಣದ ಪ್ರಕಾರ ಈ ಹಿಂದೆ ಮಾದೇಶ್ವರರು ಬಿಕ್ಷೆ ಬೇಡುತ್ತ ಬಂದು ಇಲ್ಲಿ ಐಕ್ಯರಾಗಿದ್ದಾರಂತೆ ಹಾಗಾಗಿ ಆಗಿನಿಂದಲು ಇಲ್ಲಿ ಭೀಮನ ಅಮವಾಸ್ಯೆಯಂದು ವಿಶೇಷ ಜಾತ್ರಾಮಹೋತ್ಸವ ನಡೆಯುತ್ತಿದೆ.

ಇನ್ನು ಪುರಾಣದ ಪ್ರಕಾರ ಈ ಹಿಂದೆ ಮಾದೇಶ್ವರರು ಬಿಕ್ಷೆ ಬೇಡುತ್ತ ಬಂದು ಇಲ್ಲಿ ಐಕ್ಯರಾಗಿದ್ದಾರಂತೆ ಹಾಗಾಗಿ ಆಗಿನಿಂದಲು ಇಲ್ಲಿ ಭೀಮನ ಅಮವಾಸ್ಯೆಯಂದು ವಿಶೇಷ ಜಾತ್ರಾಮಹೋತ್ಸವ ನಡೆಯುತ್ತಿದೆ.

4 / 7
ಕೇವಲ ಸಂತೆಮರಳ್ಳಿ ಅಷ್ಟೇ ಅಲ್ಲದೆ ಮಲೆ ಮಹದೇಶ್ವರ ಬೆಟ್ಟದಲ್ಲೂ ಸಹ ಭಕ್ತರ ದಂಡು ಆಗಮಿಸಿ ಮಾದಪ್ಪನ ದರ್ಶನ ಪಡೆದ್ರು.

ಕೇವಲ ಸಂತೆಮರಳ್ಳಿ ಅಷ್ಟೇ ಅಲ್ಲದೆ ಮಲೆ ಮಹದೇಶ್ವರ ಬೆಟ್ಟದಲ್ಲೂ ಸಹ ಭಕ್ತರ ದಂಡು ಆಗಮಿಸಿ ಮಾದಪ್ಪನ ದರ್ಶನ ಪಡೆದ್ರು.

5 / 7
ರಾಜ್ಯದಲ್ಲಿ ಶಕ್ತಿಯೋಜನೆ ಜಾರಿಯಾದ ಹಿನ್ನಲೆ ಮಹಿಳಾ ಭಕ್ತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಮಾದಪ್ಪನ ದರ್ಶನಕ್ಕಾಗಿ ಬಂದ ಭಕ್ತರಿಗೆ ವಿಶೇಷವಾಗಿ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿತ್ತು. ಪಾಯಸ, ಹುಳಿ, ಅನ್ನ ಸಾಂಬಾರ್ ಹಾಗೂ ಮಜ್ಜಿಗೆಯನ್ನ ವಿತರಿಸಲಾಯ್ತು.

ರಾಜ್ಯದಲ್ಲಿ ಶಕ್ತಿಯೋಜನೆ ಜಾರಿಯಾದ ಹಿನ್ನಲೆ ಮಹಿಳಾ ಭಕ್ತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಮಾದಪ್ಪನ ದರ್ಶನಕ್ಕಾಗಿ ಬಂದ ಭಕ್ತರಿಗೆ ವಿಶೇಷವಾಗಿ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿತ್ತು. ಪಾಯಸ, ಹುಳಿ, ಅನ್ನ ಸಾಂಬಾರ್ ಹಾಗೂ ಮಜ್ಜಿಗೆಯನ್ನ ವಿತರಿಸಲಾಯ್ತು.

6 / 7
ಅದೇನೆ ಹೇಳಿ ಭೀಮನ ಅಮವಾಸೆಯನ್ನ ಚಾಮರಾಜನಗರದಲ್ಲಿ ವಿಶೇಷ ಹಾಗೂ ವಿಭಿನ್ನವಾಗಿ ಆಚರಿಸಲಾಯ್ತು, ಉಘೇ ಮಾದೇಶ ಎಂಬ ಘೋಷವಾಕ್ಯದಿಂದ ಮಾದಪ್ಪನ ದರ್ಶನ ಪಡೆದ ಲಕ್ಷಾಂತರ ಮಂದಿ ಪುನೀತರಾದರು.

ಅದೇನೆ ಹೇಳಿ ಭೀಮನ ಅಮವಾಸೆಯನ್ನ ಚಾಮರಾಜನಗರದಲ್ಲಿ ವಿಶೇಷ ಹಾಗೂ ವಿಭಿನ್ನವಾಗಿ ಆಚರಿಸಲಾಯ್ತು, ಉಘೇ ಮಾದೇಶ ಎಂಬ ಘೋಷವಾಕ್ಯದಿಂದ ಮಾದಪ್ಪನ ದರ್ಶನ ಪಡೆದ ಲಕ್ಷಾಂತರ ಮಂದಿ ಪುನೀತರಾದರು.

7 / 7
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!