ಮಂತ್ರಿಯಾದಗೊಮ್ಮೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಜಮೀರ್ ಅಹಮದ್, ಈ ಬಾರಿ ಶ್ರೀಗಳಿಗೆ ಮಹತ್ವದ ಭರವಸೆ ನೀಡಿದ ಸಚಿವ
ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಮತ್ತೊಮ್ಮೆ ಸಚಿವರಾಗಿದ್ದು, ಈ ಬಾರಿ ಅವರಿಗೆ ವಸತಿ ಖಾತೆ ನೀಡಲಾಗಿದೆ. ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರದಲ್ಲೂ ಸಚಿವರಾಗಿದ್ದರು. ಬಳಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾದಲ್ಲೂ ಸಹ ಎರಡನೇ ಬಾರಿಗೆ ಸಚಿವರಾಗಿದ್ದರು. ಇದೀಗ ಮತ್ತೆ ಸಿದ್ದರಾಮಯ್ಯನವರ ಸರ್ಕಾರದಲ್ಲೂ ಸಚಿವರಾಗಿದ್ದಾರೆ. ಹೀಗಾಗಿ ಜಮೀರ್ ಅಹಮದ್ ಅವರು ದರ್ಗಾ ಹಾಗೂ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ವಿಶೇಷ ಏನೆಂದರೆ ಮಂತ್ರಿ ಸ್ಥಾನ ಸಿಕ್ಕಿದಾಗೊಮ್ಮೆ ಮಠಕ್ಕೆ ಭೇಟಿ ನೀಡುತ್ತಾ ಬಂದಿದ್ದಾರೆ.

1 / 8

2 / 8

3 / 8

4 / 8

5 / 8

6 / 8

7 / 8

8 / 8
Published On - 2:56 pm, Tue, 30 May 23
Follow Us




