ಸಚಿವ ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಫೋಟೋಗಳು ಇಲ್ಲಿವೆ
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಿಂಬದಿಯಿಂದ ಬಂದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಬಳಿ ಈ ಅಪಘಾತ ಸಂಭವಿಸಿದೆ.
Updated on: Dec 05, 2024 | 3:25 PM

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಿಂಬದಿಯಿಂದ ಬಂದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.

ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಬಳಿ ಹಿಂಬದಿಯಿಂದ ಬಂದ ಇನೋವಾ ಕಾರು ಸಚಿವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಸಚಿವ ಮುನಿಯಪ್ಪ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಅಪಘಾತದ ಹೊಡೆತಕ್ಕೆ ಸಚಿವರ ಕಾರು ಜಖಂಗೊಂಡಿದೆ.

ಅಪಘಾತದ ಹೊಡೆತಕ್ಕೆ ಕಾರು ಜಖಂಗೊಂಡಿರುವ ಈ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಅವರು ಬದಲಿ ವಾಹನದ ಮೂಲಕ ಸಮಾವೇಶಕ್ಕೆ ತೆರಳಿದರು.

ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಮುನಿಯಪ್ಪನವರ ಕಾರಿಗೆ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್ ಮುನಿಯಪ್ಪನವರಿಗೆ ಯಾವುದೇ ಒಂದು ಚೂರು ಗಾಯವಾಗಿಲ್ಲ.

ಹಿಂಬದಿಯಿಂದ ಬಂದ ಇನ್ನೋವಾ ಕಾರು ಸ್ಲೋವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ದೊಡ್ಡ ಅನಾಹುತವಾಗಿಲ್ಲ. ಸಚಿವರ ಇನ್ನೋವಾ ಕಾರು ಹಾಗೂ ಗುದ್ದಿದ ಮತ್ತೊಂದು ಕಾರಿಗೆ ಹಾನಿಯಾಗಿದೆ.

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.
Read More




