AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಧ್ವಜ ಹರಾಜಿನಲ್ಲಿ ಗೆದ್ದವರು ಶಾಸಕರಾಗುತ್ತಾರೆ ಎಂಬ ನಂಬಿಕೆ ಹಿಂದೆ ಬಿದ್ದು ದಾಖಲೆ ಮೊತ್ತದಲ್ಲಿ ರಥದ ನಂದಿಧ್ವಜ ಖರೀದಿಸಿದ ಹಾಲಿ ಶಾಸಕ

ನಂದಿಧ್ವಜ ಹರಾಜಿನಲ್ಲಿ ಗೆದ್ದವರು ಶಾಸಕರಾಗುತ್ತಾರೆಂಬ ನಂಬಿಕೆ ಇರುವ ಹಿನ್ನೆಲೆ 16 ಲಕ್ಷಕ್ಕೆ ರಥದ ನಂದಿಧ್ವಜ ದಾಖಲೆಯ ಮಟ್ಟದಲ್ಲಿ ಶಾಸಕ ರಂಗನಾಥ್ ಖರೀದಿಸಿದ್ದಾರೆ.

ಆಯೇಷಾ ಬಾನು
|

Updated on:Feb 28, 2023 | 3:11 PM

Share
ನಂದಿಧ್ವಜ ಹರಾಜಿನಲ್ಲಿ ಗೆದ್ದವರು ಶಾಸಕರಾಗುತ್ತಾರೆಂಬ ನಂಬಿಕೆ ಇರುವ ಹಿನ್ನೆಲೆ ನಂದಿ ಧ್ವಜಕ್ಕಾಗಿ ಮಾಜಿ ಹಾಗೂ ಹಾಲಿ ಶಾಸಕರ ನಡುವೆ ಪೈಪೋಟಿ ನಡೆದಿದೆ. ಇದರಿಂದಾಗಿ 16 ಲಕ್ಷಕ್ಕೆ ರಥದ ನಂದಿಧ್ವಜ ದಾಖಲೆಯ ಮಟ್ಟದಲ್ಲಿ ಮಾರಾಟವಾದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಗ್ಗೆರೆಯಲ್ಲಿರುವ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ನಂದಿಧ್ವಜ ಹರಾಜಿನಲ್ಲಿ ಗೆದ್ದವರು ಶಾಸಕರಾಗುತ್ತಾರೆಂಬ ನಂಬಿಕೆ ಇರುವ ಹಿನ್ನೆಲೆ ನಂದಿ ಧ್ವಜಕ್ಕಾಗಿ ಮಾಜಿ ಹಾಗೂ ಹಾಲಿ ಶಾಸಕರ ನಡುವೆ ಪೈಪೋಟಿ ನಡೆದಿದೆ. ಇದರಿಂದಾಗಿ 16 ಲಕ್ಷಕ್ಕೆ ರಥದ ನಂದಿಧ್ವಜ ದಾಖಲೆಯ ಮಟ್ಟದಲ್ಲಿ ಮಾರಾಟವಾದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಗ್ಗೆರೆಯಲ್ಲಿರುವ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ.

1 / 6
ಅದು ಪ್ರಸಿದ್ಧವಾದ ದೇವರ ಜಾತ್ರೆ ಮಹೋತ್ಸವ, ಸಾಕಷ್ಟು ನಂಬಿಕೆಗಳು ಅಲ್ಲಿ ನಡೆಯುತ್ತವೆ. ಲಕ್ಷಾಂತರ ಭಕ್ತರು ಅಲ್ಲಿಗೆ ಬಂದು ಪೂಜೆ ಮಾಡುತ್ತಾರೆ. ಅದರಂತೆ ನಿನ್ನೆ(ಫೆ.27) ರಥೋತ್ಸವ ನಡೆದಿದ್ದು, ರಥೋತ್ಸವದ ನಂದಿಧ್ವಜ ಹರಾಜಿನಲ್ಲಿ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ.

ಅದು ಪ್ರಸಿದ್ಧವಾದ ದೇವರ ಜಾತ್ರೆ ಮಹೋತ್ಸವ, ಸಾಕಷ್ಟು ನಂಬಿಕೆಗಳು ಅಲ್ಲಿ ನಡೆಯುತ್ತವೆ. ಲಕ್ಷಾಂತರ ಭಕ್ತರು ಅಲ್ಲಿಗೆ ಬಂದು ಪೂಜೆ ಮಾಡುತ್ತಾರೆ. ಅದರಂತೆ ನಿನ್ನೆ(ಫೆ.27) ರಥೋತ್ಸವ ನಡೆದಿದ್ದು, ರಥೋತ್ಸವದ ನಂದಿಧ್ವಜ ಹರಾಜಿನಲ್ಲಿ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ.

2 / 6
ಸಂಪ್ರದಾಯದಂತೆ ಪ್ರತಿವರ್ಷ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಗ್ಗೆರೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಜಾತ್ರೆ ನಡೆಯುತ್ತದೆ. ಅದರಂತೆ ನಿನ್ನೆ ಸಿದ್ದಲಿಂಗೇಶ್ವರ ಜಾತ್ರೆ ನಡೆದಿದೆ. ಈ ವೇಳೆ ರಥೋತ್ಸವದ ನಂದಿ ಧ್ವಜ ಭಕ್ತರ ಸಮ್ಮುಖದಲ್ಲಿ ಆಡಳಿತ ಮಂಡಳಿ ಹರಾಜು ಮಾಡುತ್ತಾರೆ.

ಸಂಪ್ರದಾಯದಂತೆ ಪ್ರತಿವರ್ಷ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಗ್ಗೆರೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಜಾತ್ರೆ ನಡೆಯುತ್ತದೆ. ಅದರಂತೆ ನಿನ್ನೆ ಸಿದ್ದಲಿಂಗೇಶ್ವರ ಜಾತ್ರೆ ನಡೆದಿದೆ. ಈ ವೇಳೆ ರಥೋತ್ಸವದ ನಂದಿ ಧ್ವಜ ಭಕ್ತರ ಸಮ್ಮುಖದಲ್ಲಿ ಆಡಳಿತ ಮಂಡಳಿ ಹರಾಜು ಮಾಡುತ್ತಾರೆ.

3 / 6
ಹರಾಜಿನಲ್ಲಿ ನಂದಿ ಧ್ವಜ ಯಾರಿಗೆ ಸೇರುತ್ತೋ ಅವರಿಗೆ ಈ ವರ್ಷ ಒಳ್ಳೆಯದು ಆಗುವ ನಂಬಿಕೆ ಇದೆ. ಹೀಗಾಗಿ ಈ ಬಾರಿ ಚುನಾವಣೆ ವರ್ಷವಾದ ಕಾರಣ ರಥೋತ್ಸವದ ನಂದಿ ಧ್ವಜ ಹರಾಜು ಪ್ರಕ್ರಿಯೆ ಜೋರಾಗಿ ನಡೆದಿದೆ.

ಹರಾಜಿನಲ್ಲಿ ನಂದಿ ಧ್ವಜ ಯಾರಿಗೆ ಸೇರುತ್ತೋ ಅವರಿಗೆ ಈ ವರ್ಷ ಒಳ್ಳೆಯದು ಆಗುವ ನಂಬಿಕೆ ಇದೆ. ಹೀಗಾಗಿ ಈ ಬಾರಿ ಚುನಾವಣೆ ವರ್ಷವಾದ ಕಾರಣ ರಥೋತ್ಸವದ ನಂದಿ ಧ್ವಜ ಹರಾಜು ಪ್ರಕ್ರಿಯೆ ಜೋರಾಗಿ ನಡೆದಿದೆ.

4 / 6
ಹಾಲಿ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಹಾಗೂ ಮಾಜಿ ಶಾಸಕ ರಾಮಸ್ವಾಮಿಗೌಡ ನಡುವೆ ತೀವ್ರ ಪೈಪೋಟಿ ನಡೆದಿದ್ದು ಸುಮಾರು 16 ಲಕ್ಷಕ್ಕೆ ರಥದ ನಂದಿಧ್ವಜ ಮಾರಾಟವಾಗಿದೆ. ಅಂತಿಮವಾಗಿ ಶಾಸಕ ಡಾ ರಂಗನಾಥ್ ರಿಗೆ ನಂದಿಧ್ವಜ ಸೇರಿದ್ದು ಹರಾಜಿನಲ್ಲಿ ಗೆದ್ದವರು ಈ ಬಾರಿ ಕ್ಷೇತ್ರದ ಶಾಸಕರಾಗುವ ನಂಬಿಕೆ ಇದೆ.

ಹಾಲಿ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಹಾಗೂ ಮಾಜಿ ಶಾಸಕ ರಾಮಸ್ವಾಮಿಗೌಡ ನಡುವೆ ತೀವ್ರ ಪೈಪೋಟಿ ನಡೆದಿದ್ದು ಸುಮಾರು 16 ಲಕ್ಷಕ್ಕೆ ರಥದ ನಂದಿಧ್ವಜ ಮಾರಾಟವಾಗಿದೆ. ಅಂತಿಮವಾಗಿ ಶಾಸಕ ಡಾ ರಂಗನಾಥ್ ರಿಗೆ ನಂದಿಧ್ವಜ ಸೇರಿದ್ದು ಹರಾಜಿನಲ್ಲಿ ಗೆದ್ದವರು ಈ ಬಾರಿ ಕ್ಷೇತ್ರದ ಶಾಸಕರಾಗುವ ನಂಬಿಕೆ ಇದೆ.

5 / 6
ಪಟ್ಟುಬಿಡದ ಶಾಸಕ ಡಾ ರಂಗನಾಥ್ ಪೈಪೋಟಿ ‌ನೀಡಿ ನಂದಿಧ್ವಜ ಪಡೆದಿದ್ದಾರೆ. ಇನ್ನೂ ಪ್ರತಿವರ್ಷ 5-10 ಲಕ್ಷವರೆಗೂ ಮಾರಾಟ ವಾಗ್ತಿದ್ದ ನಂದಿಧ್ವಜ ಈ ಬಾರಿ 16 ಲಕ್ಷಕ್ಕೆ ಮಾರಾಟವಾಗಿದ್ದು ಶಾಸಕ ರಂಗನಾಥ್ ಮತ್ತೆ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಗೂ ಭಕ್ತರ‌ ಸಮ್ಮುಖದಲ್ಲಿ ಅದ್ದೂರಿಯಾಗಿ ಸಿದ್ದಲಿಂಗೇಶ್ವರ ಜಾತ್ರೆ ನಡೆದಿದೆ. ವರದಿ: ಮಹೇಶ್, ಟಿವಿ9 ತುಮಕೂರು

ಪಟ್ಟುಬಿಡದ ಶಾಸಕ ಡಾ ರಂಗನಾಥ್ ಪೈಪೋಟಿ ‌ನೀಡಿ ನಂದಿಧ್ವಜ ಪಡೆದಿದ್ದಾರೆ. ಇನ್ನೂ ಪ್ರತಿವರ್ಷ 5-10 ಲಕ್ಷವರೆಗೂ ಮಾರಾಟ ವಾಗ್ತಿದ್ದ ನಂದಿಧ್ವಜ ಈ ಬಾರಿ 16 ಲಕ್ಷಕ್ಕೆ ಮಾರಾಟವಾಗಿದ್ದು ಶಾಸಕ ರಂಗನಾಥ್ ಮತ್ತೆ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಗೂ ಭಕ್ತರ‌ ಸಮ್ಮುಖದಲ್ಲಿ ಅದ್ದೂರಿಯಾಗಿ ಸಿದ್ದಲಿಂಗೇಶ್ವರ ಜಾತ್ರೆ ನಡೆದಿದೆ. ವರದಿ: ಮಹೇಶ್, ಟಿವಿ9 ತುಮಕೂರು

6 / 6

Published On - 3:09 pm, Tue, 28 February 23

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್