AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Money Plant Vastu Tips: ಮನಿ ಪ್ಲಾಂಟ್ ಬೆಳೆಸಿದರೆ ಸಾಕಾಗುವುದಿಲ್ಲ: ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಮಾತ್ರ ಅದೃಷ್ಟ ಖುಲಾಯಿಸೋದು

ವಾಸ್ತುದಲ್ಲಿ ಸಂಪತ್ತಿಗೆ ಪ್ರಮುಖವಾದ ಸಸ್ಯವೆಂದರೆ ಮನಿ ಪ್ಲಾಂಟ್ ಎಂದು ಹಲವರು ಭಾವಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ಮನೆಗಳಲ್ಲಿ ಮನಿ ಪ್ಲಾಂಟ್​ ನೆಡಲಾಗುತ್ತದೆ. ಈ ಸಸ್ಯವನ್ನು ಹಣದ ಅದೃಷ್ಟದ ಸಂಕೇತವಾಗಿದೆ ಎನ್ನುತ್ತಾರೆ. ಆದರೆ, ಮನಿ ಪ್ಲಾಂಟ್​ನ್ನೂ ಮನೆಯ ಯಾವ ಮೂಲೆಯಲ್ಲಿ ಇಟ್ಟರೇ ಪ್ರಯೋಜನಕಾರಿ ಎಂದು ಅನೇಕರಿಗೆ ತಿಳಿದಿಲ್ಲ.

ಗಂಗಾಧರ​ ಬ. ಸಾಬೋಜಿ
|

Updated on: Jun 23, 2023 | 7:00 AM

Share
ವಾಸ್ತು ಶಾಸ್ತ್ರದಲ್ಲಿ ಎಲ್ಲದಕ್ಕೂ ಒಂದು ನಿರ್ದೇಶನವಿದೆ. ಅಂತೆಯೇ, 
ಮನಿ ಪ್ಲಾಂಟ್ ಅನ್ನು ಸರಿಯಾದ ಮತ್ತು ನಿರ್ದಿಷ್ಟವಾದ ಸ್ಥಳದಲ್ಲಿ ಇರಿಸುವಂತೆ ಹೇಳಲಾಗುತ್ತದೆ.
ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ  ಇಡಬೇಕು.

ವಾಸ್ತು ಶಾಸ್ತ್ರದಲ್ಲಿ ಎಲ್ಲದಕ್ಕೂ ಒಂದು ನಿರ್ದೇಶನವಿದೆ. ಅಂತೆಯೇ, ಮನಿ ಪ್ಲಾಂಟ್ ಅನ್ನು ಸರಿಯಾದ ಮತ್ತು ನಿರ್ದಿಷ್ಟವಾದ ಸ್ಥಳದಲ್ಲಿ ಇರಿಸುವಂತೆ ಹೇಳಲಾಗುತ್ತದೆ. ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ ಇಡಬೇಕು.

1 / 5
ಉತ್ತರ ದಿಕ್ಕಿನಲ್ಲಿ ಇಟ್ಟರೆ ಮನೆಯ ಸದಸ್ಯರು ಆರ್ಥಿಕ ತೊಂದರೆಗೊಳಗಾಗಬಹುದು. ಬದಲಿಗೆ, 
ಮನಿ ಪ್ಲಾಂಟ್ ಅನ್ನು ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಇಡಬೇಕು. ಈ ದಿಕ್ಕನ್ನು ಗಣೇಶನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. 
ಈ ಮಂಗಳಕರ ಭಾಗದಲ್ಲಿ ಮನಿ ಪ್ಲಾಂಟ್ ಅನ್ನು ಇರಿಸುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

ಉತ್ತರ ದಿಕ್ಕಿನಲ್ಲಿ ಇಟ್ಟರೆ ಮನೆಯ ಸದಸ್ಯರು ಆರ್ಥಿಕ ತೊಂದರೆಗೊಳಗಾಗಬಹುದು. ಬದಲಿಗೆ, ಮನಿ ಪ್ಲಾಂಟ್ ಅನ್ನು ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಇಡಬೇಕು. ಈ ದಿಕ್ಕನ್ನು ಗಣೇಶನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಈ ಮಂಗಳಕರ ಭಾಗದಲ್ಲಿ ಮನಿ ಪ್ಲಾಂಟ್ ಅನ್ನು ಇರಿಸುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

2 / 5
ಆಗ್ನೇಯ ಮೂಲೆಯನ್ನು ಅಗ್ನಿಕೋಣ ಎಂದು ಕರೆಯಲಾಗುತ್ತದೆ. ಶುಕ್ರನು ಇಲ್ಲಿ ನೆಲೆಸಿರುತ್ತಾರೆ. ಜೊತೆಗೆ ಲಕ್ಷ್ಮಿ ದೇವಿಯೂ ಇಲ್ಲಿ ನೆಲೆಸಿದ್ದಾಳೆ. 
ವಾಸ್ತು ಶಾಸ್ತ್ರದ ಪ್ರಕಾರ, ಆಗ್ನೇಯ ಮೂಲೆಯಲ್ಲಿ ಅಡುಗೆ ಕೋಣೆಯನ್ನು ಹೊಂದುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

ಆಗ್ನೇಯ ಮೂಲೆಯನ್ನು ಅಗ್ನಿಕೋಣ ಎಂದು ಕರೆಯಲಾಗುತ್ತದೆ. ಶುಕ್ರನು ಇಲ್ಲಿ ನೆಲೆಸಿರುತ್ತಾರೆ. ಜೊತೆಗೆ ಲಕ್ಷ್ಮಿ ದೇವಿಯೂ ಇಲ್ಲಿ ನೆಲೆಸಿದ್ದಾಳೆ. ವಾಸ್ತು ಶಾಸ್ತ್ರದ ಪ್ರಕಾರ, ಆಗ್ನೇಯ ಮೂಲೆಯಲ್ಲಿ ಅಡುಗೆ ಕೋಣೆಯನ್ನು ಹೊಂದುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

3 / 5
ಮನಿ ಪ್ಲಾಂಟ್ ಬೆಳೆದ ತಕ್ಷಣ ಆರ್ಥಿಕವಾಗಿ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ಮರವನ್ನು ನೆಡುವಾಗ ಅದರ ಬಳ್ಳಿಯು ನೆಲವನ್ನು ಮುಟ್ಟಬಾರದು 
ಎಂಬುದನ್ನು ನೆನಪಿಡಿ. ಮನಿ ಪ್ಲಾಂಟ್ ಬಳ್ಳಿ ಯಾವಾಗಲೂ ಮೇಲಕ್ಕೆ ಬೆಳೆಯಬೇಕು.

ಮನಿ ಪ್ಲಾಂಟ್ ಬೆಳೆದ ತಕ್ಷಣ ಆರ್ಥಿಕವಾಗಿ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ಮರವನ್ನು ನೆಡುವಾಗ ಅದರ ಬಳ್ಳಿಯು ನೆಲವನ್ನು ಮುಟ್ಟಬಾರದು ಎಂಬುದನ್ನು ನೆನಪಿಡಿ. ಮನಿ ಪ್ಲಾಂಟ್ ಬಳ್ಳಿ ಯಾವಾಗಲೂ ಮೇಲಕ್ಕೆ ಬೆಳೆಯಬೇಕು.

4 / 5
ಮನಿ ಪ್ಲಾಂಟ್ ಎಂದಿಗೂ ಒಣಗಲು ಬಿಡಬಾರದು. ಅದರ ಎಲೆಗಳು ಒಣಗಿದರೆ ಅಥವಾ ಹಳದಿ ಬಣ್ಣಕ್ಕೆ ತಿರುಗಿದರೆ, ಅವುಗಳನ್ನು ತಕ್ಷಣವೇ ತೆಗೆದುಹಾಕಬೇಕು. 
ಏಕೆಂದರೆ ಒಣಗಿದ ಮನಿ ಪ್ಲಾಂಟ್ ದುರದೃಷ್ಟದ ಸಂಕೇತವಾಗಿದೆ.

ಮನಿ ಪ್ಲಾಂಟ್ ಎಂದಿಗೂ ಒಣಗಲು ಬಿಡಬಾರದು. ಅದರ ಎಲೆಗಳು ಒಣಗಿದರೆ ಅಥವಾ ಹಳದಿ ಬಣ್ಣಕ್ಕೆ ತಿರುಗಿದರೆ, ಅವುಗಳನ್ನು ತಕ್ಷಣವೇ ತೆಗೆದುಹಾಕಬೇಕು. ಏಕೆಂದರೆ ಒಣಗಿದ ಮನಿ ಪ್ಲಾಂಟ್ ದುರದೃಷ್ಟದ ಸಂಕೇತವಾಗಿದೆ.

5 / 5
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!