Hassan News: ತೋಟಕ್ಕೆ ದಾಂಗುಡಿ ಇಟ್ಟ ಆನೆ ಹಿಂಡು, ಕ್ಷಣಾರ್ಧದಲ್ಲಿ ಕಾಫಿ ತೋಟ ಸರ್ವನಾಶ
ಹಾಸನದಲ್ಲಿ ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
Updated on: Jul 05, 2023 | 1:50 PM
Share

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.

ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.

ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.

ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.

ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
Related Photo Gallery
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳು




