Hassan News: ತೋಟಕ್ಕೆ ದಾಂಗುಡಿ ಇಟ್ಟ ಆನೆ ಹಿಂಡು, ಕ್ಷಣಾರ್ಧದಲ್ಲಿ ಕಾಫಿ ತೋಟ ಸರ್ವನಾಶ
ಹಾಸನದಲ್ಲಿ ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
Updated on: Jul 05, 2023 | 1:50 PM
Share

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.

ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.

ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.

ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.

ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
Related Photo Gallery
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ದಳಪತಿ ವಿಜಯ್ ಸಾಧನೆಗೆ ದೊಡ್ಡಗೌಡರ ಸಲಾಂ!



