Hassan News: ತೋಟಕ್ಕೆ ದಾಂಗುಡಿ ಇಟ್ಟ ಆನೆ ಹಿಂಡು, ಕ್ಷಣಾರ್ಧದಲ್ಲಿ ಕಾಫಿ ತೋಟ ಸರ್ವನಾಶ
ಹಾಸನದಲ್ಲಿ ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
Updated on: Jul 05, 2023 | 1:50 PM
Share

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.

ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.

ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.

ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.

ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್ಪಿಜಿ ಸಿಲಿಂಡರ್ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ