AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಶುಕ್ರವಾರ ಚಿತ್ರಮಂದಿರಗಳಲ್ಲಿ ಹಬ್ಬ, ಯಾವೆಲ್ಲ ಸಿನಿಮಾ ಬಿಡುಗಡೆ?

Movie release: ಮತ್ತೊಂದು ಶುಕ್ರವಾರ ಬಂದಿದೆ. ಮತ್ತೆ ಚಿತ್ರಮಂದಿರಗಳಿಗೆ ಹೊಸ ಸಿನಿಮಾಗಳು ಬಂದಿವೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕಲೆದ ಕೆಲ ವಾರಗಳಿಂದಲೂ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದ್ದ ಕಾರಣಕ್ಕೆ ಕನ್ನಡ ಸೇರಿದಂತೆ ಪರಭಾಷೆಯ ಕೆಲ ಸಿನಿಮಾಗಳು ಸಹ ಬಿಡುಗಡೆಯಿಂದ ದೂರ ಸರಿದಿದ್ದವು, ಈ ವಾರ ಕೆಲವು ಒಳ್ಳೆಯ ಚಿತ್ರಮಂದಿರಗಳು ಬರುತ್ತಿವೆ. ಇಲ್ಲಿದೆ ನೋಡಿ ಪಟ್ಟಿ...

ಮಂಜುನಾಥ ಸಿ.
|

Updated on: Oct 30, 2025 | 6:35 PM

Share
ಡಾರ್ಲಿಂಗ್ ಕೃಷ್ಣ ನಟನೆಯ ‘ಬ್ರ್ಯಾಟ್’ ಸಿನಿಮಾ ಈ ವಾರ ಚಿತ್ರಮಂದಿರಗಳಿಗೆ ಬಂದಿದೆ. ಕ್ರಿಕೆಟ್ ಬೆಟ್ಟಿಂಗ್ ಕುರಿತ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಟ್ರೈಲರ್, ಹಾಡುಗಳು ಈಗಾಗಲೇ ಗಮನ ಸೆಳೆದಿವೆ. ಡಾರ್ಲಿಂಗ್ ಕೃಷ್ಣ ಮತ್ತು ತಂಡ ಸಹ ಒಳ್ಳೆಯ ಪ್ರಚಾರ ಮಾಡಿದೆ.

ಡಾರ್ಲಿಂಗ್ ಕೃಷ್ಣ ನಟನೆಯ ‘ಬ್ರ್ಯಾಟ್’ ಸಿನಿಮಾ ಈ ವಾರ ಚಿತ್ರಮಂದಿರಗಳಿಗೆ ಬಂದಿದೆ. ಕ್ರಿಕೆಟ್ ಬೆಟ್ಟಿಂಗ್ ಕುರಿತ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಟ್ರೈಲರ್, ಹಾಡುಗಳು ಈಗಾಗಲೇ ಗಮನ ಸೆಳೆದಿವೆ. ಡಾರ್ಲಿಂಗ್ ಕೃಷ್ಣ ಮತ್ತು ತಂಡ ಸಹ ಒಳ್ಳೆಯ ಪ್ರಚಾರ ಮಾಡಿದೆ.

1 / 8
ಕೋಮಲ್ ಮತ್ತು ಬಿಗ್​​ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ನಟಿಸಿರುವ ‘ಕೋಣ’ ಸಿನಿಮಾ ಈ ವಾರ ತೆರೆಗೆ ಬಂದಿದೆ. ತನಿಷಾ ಕುಪ್ಪಂದ ನಾಯಕಿಯಾಗಿ ನಟಿಸಿರುವ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಬಹಳ ಗಮನ ಸೆಳೆದಿದೆ.

ಕೋಮಲ್ ಮತ್ತು ಬಿಗ್​​ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ನಟಿಸಿರುವ ‘ಕೋಣ’ ಸಿನಿಮಾ ಈ ವಾರ ತೆರೆಗೆ ಬಂದಿದೆ. ತನಿಷಾ ಕುಪ್ಪಂದ ನಾಯಕಿಯಾಗಿ ನಟಿಸಿರುವ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಬಹಳ ಗಮನ ಸೆಳೆದಿದೆ.

2 / 8
‘ಒಮೆನ್’ ಹೆಸರಿನ ಥ್ರಿಲ್ಲರ್ ಕನ್ನಡ ಸಿನಿಮಾ ಒಂದು ನಾಳೆಯೇ ಬಿಡುಗಡೆ ಆಗುತ್ತಿದೆ. ಕೊಲೆಯ ಜಾಡು ಹಿಡಿದು ಹೋಗುವ ನಾಯಕನ ಕತೆಯನ್ನು ಸಿನಿಮಾ ಒಳಗೊಂಡಿದೆ. ಅಜಯ್ ಕುಮಾರ್ ನಾಯಕ, ನಿಶ್ಮಾ ಶೆಟ್ಟಿ ನಾಯಕಿ. ಸಿನಿಮಾದ ಟ್ರೈಲರ್ ಕುತೂಹಲ ಮೂಡಿಸುತ್ತಿದೆ.

‘ಒಮೆನ್’ ಹೆಸರಿನ ಥ್ರಿಲ್ಲರ್ ಕನ್ನಡ ಸಿನಿಮಾ ಒಂದು ನಾಳೆಯೇ ಬಿಡುಗಡೆ ಆಗುತ್ತಿದೆ. ಕೊಲೆಯ ಜಾಡು ಹಿಡಿದು ಹೋಗುವ ನಾಯಕನ ಕತೆಯನ್ನು ಸಿನಿಮಾ ಒಳಗೊಂಡಿದೆ. ಅಜಯ್ ಕುಮಾರ್ ನಾಯಕ, ನಿಶ್ಮಾ ಶೆಟ್ಟಿ ನಾಯಕಿ. ಸಿನಿಮಾದ ಟ್ರೈಲರ್ ಕುತೂಹಲ ಮೂಡಿಸುತ್ತಿದೆ.

3 / 8
‘ಬಾಹುಬಲಿ: ದಿ ಬಿಗಿನಿಂಗ್’, ‘ಬಾಹುಬಲಿ: ದಿ ಕನ್​​ಕ್ಲೂಷನ್’ ಎರಡನ್ನೂ ಸೇರಿಸಿ ‘ಬಾಹುಬಲಿ: ದಿ ಎಪಿಕ್’ ಹೆಸರಿನಲ್ಲಿ ಮರು ಬಿಡುಗಡೆ ಮಾಡಲಾಗುತ್ತಿದ್ದು, ನಾಳೆ (ಶುಕ್ರವಾರ) ಸಿನಿಮಾ ಭಾರತ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ.

‘ಬಾಹುಬಲಿ: ದಿ ಬಿಗಿನಿಂಗ್’, ‘ಬಾಹುಬಲಿ: ದಿ ಕನ್​​ಕ್ಲೂಷನ್’ ಎರಡನ್ನೂ ಸೇರಿಸಿ ‘ಬಾಹುಬಲಿ: ದಿ ಎಪಿಕ್’ ಹೆಸರಿನಲ್ಲಿ ಮರು ಬಿಡುಗಡೆ ಮಾಡಲಾಗುತ್ತಿದ್ದು, ನಾಳೆ (ಶುಕ್ರವಾರ) ಸಿನಿಮಾ ಭಾರತ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ.

4 / 8
ತೆಲುಗಿನ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ರವಿತೇಜ ಮತ್ತು ಕನ್ನಡತಿ ಶ್ರೀಲೀಲಾ ಒಟ್ಟಿಗೆ ನಟಿಸಿರುವ ‘ಮಾಸ್ ಜಾತರ’ ಸಿನಿಮಾ ನಾಳೆ (ಅಕ್ಟೋಬರ್ 31) ಬಿಡುಗಡೆ ಆಗುತ್ತಿದೆ. ಪಕ್ಕಾ ಮಾಸ್-ಮಸಾಲಾ ಸಿನಿಮಾ ಇದಾಗಿದೆ. ಸಿನಿಮಾನಲ್ಲಿ ಶ್ರೀಲೀಲಾ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ತೆಲುಗಿನ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ರವಿತೇಜ ಮತ್ತು ಕನ್ನಡತಿ ಶ್ರೀಲೀಲಾ ಒಟ್ಟಿಗೆ ನಟಿಸಿರುವ ‘ಮಾಸ್ ಜಾತರ’ ಸಿನಿಮಾ ನಾಳೆ (ಅಕ್ಟೋಬರ್ 31) ಬಿಡುಗಡೆ ಆಗುತ್ತಿದೆ. ಪಕ್ಕಾ ಮಾಸ್-ಮಸಾಲಾ ಸಿನಿಮಾ ಇದಾಗಿದೆ. ಸಿನಿಮಾನಲ್ಲಿ ಶ್ರೀಲೀಲಾ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

5 / 8
ಮೋಹನ್​​ಲಾಲ್ ಪುತ್ರ ಪ್ರಣವ್ ಮೋಹನ್​​ಲಾಳ್ ನಟನೆಯ ಕುತೂಹಲಕಾರಿ ಹಾರರ್ ಥ್ರಿಲ್ಲರ್ ಕತೆಯನ್ನು ಒಳಗೊಂಡಿರುವ ವಿಚಿತ್ರ ಹೆಸರಿನ ‘ಡೈಸ್ ಇರಾಯ್’ ಮಲಯಾಳಂ ಸಿನಿಮಾ ನಾಳೆ (ಶುಕ್ರವಾರ) ಬಿಡುಗಡೆ ಆಗಲಿದೆ. ಈ ಸಿನಿಮಾನಲ್ಲಿ ಮೋಹನ್​​ಲಾಲ್ ಸಹ ಅತಿಥಿ ಪಾತ್ರದಲ್ಲಿ ನಟಿಸಿದ್ದಾರಂತೆ.

ಮೋಹನ್​​ಲಾಲ್ ಪುತ್ರ ಪ್ರಣವ್ ಮೋಹನ್​​ಲಾಳ್ ನಟನೆಯ ಕುತೂಹಲಕಾರಿ ಹಾರರ್ ಥ್ರಿಲ್ಲರ್ ಕತೆಯನ್ನು ಒಳಗೊಂಡಿರುವ ವಿಚಿತ್ರ ಹೆಸರಿನ ‘ಡೈಸ್ ಇರಾಯ್’ ಮಲಯಾಳಂ ಸಿನಿಮಾ ನಾಳೆ (ಶುಕ್ರವಾರ) ಬಿಡುಗಡೆ ಆಗಲಿದೆ. ಈ ಸಿನಿಮಾನಲ್ಲಿ ಮೋಹನ್​​ಲಾಲ್ ಸಹ ಅತಿಥಿ ಪಾತ್ರದಲ್ಲಿ ನಟಿಸಿದ್ದಾರಂತೆ.

6 / 8
ತಮಿಳಿನ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಆರ್ಯನ್’ ಸಹ ನಾಳೆ (ಅಕ್ಟೋಬರ್ 31) ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾನಲ್ಲಿ ವಿಷ್ಣು ವಿಜಯನ್ ನಾಯಕ, ಕನ್ನಡತಿ ಶ್ರದ್ಧಾ ಶ್ರೀನಾಥ್ ನಾಯಕಿ. ಸಿನಿಮಾದ ಟ್ರೈಲರ್ ಕುತೂಹಲ ಮೂಡಿಸುವಂತಿದೆ.

ತಮಿಳಿನ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಆರ್ಯನ್’ ಸಹ ನಾಳೆ (ಅಕ್ಟೋಬರ್ 31) ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾನಲ್ಲಿ ವಿಷ್ಣು ವಿಜಯನ್ ನಾಯಕ, ಕನ್ನಡತಿ ಶ್ರದ್ಧಾ ಶ್ರೀನಾಥ್ ನಾಯಕಿ. ಸಿನಿಮಾದ ಟ್ರೈಲರ್ ಕುತೂಹಲ ಮೂಡಿಸುವಂತಿದೆ.

7 / 8
ಪರೇಶ್ ರಾವಲ್ ನಟನೆಯ ‘ದಿ ತಾಜ್ ಸ್ಟೋರಿ’ ಸಿನಿಮಾ ಸಹ ನಾಳೆ (ಶುಕ್ರವಾರ) ಬಿಡುಗಡೆ ಆಗಲಿದೆ. ತಾಜ್ ಮಹಲ್​ನ ಮೂಲದ ಕುರಿತಾದ ಚರ್ಚೆಯನ್ನು ಈ ಸಿನಿಮಾನಲ್ಲಿ ಮಾಡಲಾಗಿದೆ. ಸಿನಿಮಾ ವಿವಾದವನ್ನೂ ಸೃಷ್ಟಿ ಮಾಡಿದೆ.

ಪರೇಶ್ ರಾವಲ್ ನಟನೆಯ ‘ದಿ ತಾಜ್ ಸ್ಟೋರಿ’ ಸಿನಿಮಾ ಸಹ ನಾಳೆ (ಶುಕ್ರವಾರ) ಬಿಡುಗಡೆ ಆಗಲಿದೆ. ತಾಜ್ ಮಹಲ್​ನ ಮೂಲದ ಕುರಿತಾದ ಚರ್ಚೆಯನ್ನು ಈ ಸಿನಿಮಾನಲ್ಲಿ ಮಾಡಲಾಗಿದೆ. ಸಿನಿಮಾ ವಿವಾದವನ್ನೂ ಸೃಷ್ಟಿ ಮಾಡಿದೆ.

8 / 8
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ