BJP JDS Padayatra: ಮೈಸೂರು ಚಲೋ ಸಮಾವೇಶದ ಪೋಟೋಸ್​ ಇಲ್ಲಿವೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್​ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಆರಂಭಿಸಿವೆ. ಪಾದಯಾತ್ರೆ ಚಾಲನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಮತ್ತು ಜೆಡಿಎಸ್​ ನಾಯಕರ ಫೋಟೋಸ್​ ಇಲ್ಲಿವೆ.

|

Updated on:Aug 03, 2024 | 2:52 PM

MUDA Scam: BJP JDS Padayatra Program photos

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನೀವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೂಡಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್​ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತಿವೆ. ಶನಿವಾರ ಬೆಳಗ್ಗೆ ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಜೆ.ಕೆ. ಗ್ರ್ಯಾಂಡ್ ಅರೆನಾ ಸೆಂಟರ್​ನಲ್ಲಿ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಚಾಲನೆ ನೀಡಿದರು.

1 / 8
MUDA Scam: BJP JDS Padayatra Program photos

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್ ಅಗರ್‌ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಜೆಡಿಎಸ್ ನಾಯಕ ಸಿ.ಬಿ. ಸುರೇಶ್ ಬಾಬು, ಮಾಜಿ ಸಚಿವ ಜಿ.ಟಿ. ದೇವೇಗೌಡ, ಕೇಂದ್ರ ಸಚಿವರು, ಕೋರ್ ಕಮಿಟಿ ಸದಸ್ಯರು, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

2 / 8
MUDA Scam: BJP JDS Padayatra Program photos

ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆ ಮುಗಿಯವಷ್ಟರಲ್ಲಿ ಸಿದ್ದಾರಾಮಯ್ಯ ರಾಜೀನಾಮೆ ನಿಶ್ಚಿತ. ನಮ್ಮ ಪಾದಯಾತ್ರೆ ಮುಗಿಯುವವದರ ಒಳಗಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಮುಂದುವರೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದರು.

3 / 8
MUDA Scam: BJP JDS Padayatra Program photos

ಕೆಟ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದಕ್ಕೆ ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಲಾಗುತ್ತಿದೆ. ಬಿಜೆಪಿ, ಜೆಡಿಎಸ್​ ಕಾರ್ಯಕರ್ತರ ಶ್ರಮದಿಂದ ಲೋಕಸಭೆ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆದ್ದಿದ್ದೇವೆ. ಪಾದಯಾತ್ರೆಯಲ್ಲಿ ಬಿಜೆಪಿ, ಕಾರ್ಯಕರ್ತರು ಮಾತ್ರ ಭಾಗಿಯಾಗುತ್ತಿಲ್ಲ, ಕೆಟ್ಟ ಸರ್ಕಾರ ಕಿತ್ತೊಗೆಯಲು ಜನರು ಸಹಕಾರ ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಂದರು.

4 / 8
MUDA Scam: BJP JDS Padayatra Program photos

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ‌ ಬಳ್ಳಾರಿ ಪಾದಯಾತ್ರೆ ಮಾಡಿದರು. ಅಧಿಕಾರಕ್ಕಾಗಿ ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಮಾಡಿದ್ದರು.ಇವತ್ತು ಸಿಎಂ ಸಿದ್ದರಾಮಯ್ಯ ಕುಟುಂಬವೇ ಹಗರಣದಲ್ಲಿ ಸಿಲುಕಿದೆ. ಕರ್ಮ ರಿಟರ್ನ್ಸ್​ ಆಗಿದೆ, ದೇವರು ಎಲ್ಲವನ್ನೂ ನೋಡುತ್ತಿರುತ್ತಾನೆ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದರು.

5 / 8
MUDA Scam: BJP JDS Padayatra Program photos

ರಾಜ್ಯದ ಅಭಿವೃದ್ಧಿ ಕೆಲಸ ಮಾಡಿ ಎಂದು ಜನರು ಗೆಲ್ಲಿಸಿದ್ದಾರೆ. ಮುಡಾ ಹಗರಣ ಬಗ್ಗೆ ಚರ್ಚಿಸಲು ಸದನದಲ್ಲಿ ಅವಕಾಶ ಕೊಡಲಿಲ್ಲ. ಅದಕ್ಕಾಗಿ ಹಗರಣ ಬಗ್ಗೆ ಜನರಿಗೆ ತಿಳಿಸಲು ಪಾದಯಾತ್ರೆ ಮಾಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ದಲಿತರ ಜಮೀನನ್ನು ಲೂಟಿ ಮಾಡಿದ್ದಾರೆ. ಕಾಂಗ್ರೆಸ್​ ಒಡೆದ ಮನೆ. ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮಾಡುತ್ತಿರುವ ಪಾದಯಾತ್ರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಈ ಹೋರಾಟ ಎಂದು ವಿಪಕ್ಷ ನಾಯಕ ಆರ್​ ಅಶೋಕ್​ ವಾಗ್ದಾಳಿ ಮಾಡಿದರು.

6 / 8
MUDA Scam: BJP JDS Padayatra Program photos

ಭ್ರಷ್ಟಾಚಾರ ಕಾಂಗ್ರೆಸ್​ ಪಕ್ಷದ ಡಿಎನ್​ಎಯಲ್ಲೇ ಇದೆ. ಕಾಂಗ್ರೆಸ್​ ಸರ್ಕಾರದಲ್ಲಿ ಹಗರಣ ಮೇಲೆ ಹಗರಣಗಳು ನಡೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಂತ್ರಿಗಳು ಪೂರ್ತಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ವಾಲ್ಮೀಕಿ ನಿಗಮದ ಕೋಟ್ಯಾಂತರ ಹಣ ಕಾಂಗ್ರೆಸ್​ನ ಚೇಲಾಗಳಿಗೆ ವರ್ಗಾವಣೆಯಾಗಿದೆ. ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಕಾಂಗ್ರೆಸ್​ ನಾಯಕರು ರಾಜ್ಯಪಾಲರಿಗೆ ಬೆದರಿಕೆ ಹಾಕುತ್ತಾರೆ. ರಾಜ್ಯದ ಕಾಂಗ್ರೆಸ್​ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್​ ಪಾಲುದಾರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೀವು ರಾಜಿನಾಮೆ ಕೊಡುವುದು ಸನಿಹ ಬಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಭವಿಷ್ಯ ನುಡಿದರು.

7 / 8
MUDA Scam: BJP JDS Padayatra Program photos

ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್ ಪಕ್ಷ. ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಕೊಡಲು ಕಾಂಗ್ರೆಸ್​ ಹವಣಿಸುತ್ತಿದೆ. ಆಗ ಎಲ್ಲಿದೆ ದಾಖಲೆ ಎಂದು ಕಾಂಗ್ರೆಸ್ ನಾಯಕರು ಕೇಳಿದ್ದರು. ಸದನದಲ್ಲಿ ವಾಲ್ಮೀಕಿ ನಿಗಮದ ಬಗ್ಗೆ ನಿಲುವಳಿ ಮಂಡನೆ ಮಾಡಿದ್ದೇವು. ನಿಲುವಳಿ ಮಂಡನೆ ಮಾಡಿದಾಗ ಕಾಂಗ್ರೆಸ್ಸಿಗರಿಗೆ ಆತಂಕ ಶುರುವಾಯ್ತು. ಮುಡಾ ವಿಚಾರ ಪ್ರಸ್ತಾಪ ಮಾಡಲ್ವಾ ಅಂತಾ ಕಾಂಗ್ರೆಸ್ಸಿಗರು ಕೇಳುತ್ತಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿ​ಗೆ ಸವಾಲು ಹಾಕುವೆ ಗೊಡ್ಡು ಬೆದರಿಕೆಯಿಂದ ನಮ್ಮ ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಬಿ.ವೈ.ವಿಜಯೇಂದ್ರ ಗುಡುಗಿದರು.

8 / 8

Published On - 2:49 pm, Sat, 3 August 24

Follow us
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?